Tuesday 31 May 2016

ದೊಡ್ಡವರ ಹಾದಿ -8 ಅಪಾರ ಒಲುಮೆಯ ಡಾ.ಅಮೃತ ಸೋಮೇಶ್ವರ

ಅಜಾತ ಶತ್ರು ತುಳು ಜಾನಪದ ಬ್ರಹ್ಮ ಅಮೃತ ಸೋಮೇಶ್ವರ ರ ಬಗ್ಗೆ ತಿಳಿಯದ ತುಳು ಸಂಶೋಧಕರಿಲ್ಲ ,ಅವರ ಸಹಾಯವನ್ನು ಪಡೆದೇ,ಅವರ ಮಾರ್ಗ ದರ್ಶನ ಪಡೆಯದೇ ಇರುವವರು ತುಂಬಾ ಅಪರೂಪ .
ಆಲದ ಮರ ವಿಸ್ತ್ರವಾಗಿ ಬೆಳೆದು ನಿಂತು ನೂರಾರು ಪ್ರಾಣಿ ಪಕ್ಷಿಗಳಿಗೆ ಆಶ್ರಯ ನೀಡುತ್ತದೆ ,ನೆರಳನ್ನೂ ನೀಡುತ್ತದೆ ಆದರೆ ಬೇರೆ ಗಿಡ ಮರಗಳನ್ನು ಮೊಳೆಯಲು ಕೂಡ ಬಿಡುವುದಿಲ್ಲ ,ವಿದ್ವಾಂಸರು ಆಲದ ಮರದಂತೆ ಎಂಬ ಮಾತಿದೆ ಆದರೆ ಡಾ.ಅಮೃತ ಸೋಮೆಶ್ವರರು ಇದಕ್ಕೆ ಭಿನ್ನ್ನವಾದವರು .ತಾವು ದೊಡ್ಡ ವಿದ್ವಾಂಸರಾಗಿದ್ದರೂ ಇತರರಿಗೆ ಸಂಪೂರ್ಣ ಬೆಂಬಲ ಇತ್ತು ಎಳೆಯರನ್ನು ಬೆಳೆಸಿದವರು .ಅವರಿಂದ ಮಾರ್ಗ ದರ್ಶನ ಪಡೆದು ಮುಂದುವರಿದವರಲ್ಲಿ ನಾನು ಕೂಡ ಒಬ್ಬಳು .

ಸುಮಾರು 8 -9 ವರ್ಷಗಳ ಹಿಂದೆ ನನ್ನ ಮೊದಲ ಪಿಎಚ್ ಡಿ ಪ್ರಬಂಧ "ತುಳು ನಾಡಿನ ನಾಗ ಬ್ರಹ್ಮ ಮತ್ತು ಕಂಬಳ -ಒಂದು ವಿಶ್ಲೇಷಣಾತ್ಮಕ ಅಧ್ಯಯನ "ಎಂಬ ಸಂಶೋಧನಾ ಮಹಾ ಪ್ರಬಂಧದವನ್ನು ಸಿದ್ಧ ಪಡಿಸುವ ಬಗ್ಗೆ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದಿದ್ದೆ .ಆದಾಗಲೇ ನಾನು ಬರೆದಿದ್ದನ್ನು ಓದಿ ತಮ್ಮ ಅಭಿಪ್ರಾಯ ನೀಡಿದ್ದರು .ಕೆಲವು ಸಲಹೆಗಳನ್ನು ನೀಡಿದ್ದರು .
ಆನಂತರ ಕೂಡ ಅವರನ್ನು ಎರಡು ಬಾರಿ ಭೇಟಿ ಮಾಡಿದ್ದೆ
ಆಗ ನಾನು ನನ್ನ ಆಸಕ್ತಿಯ ಈ ತನಕ ಹೆಸರು ಕೂಡ ದಾಖಲಾಗದ ಅಕ್ಕಚ್ಚ್ಚು ,ಅಚ್ಚು ಬಂಗೆತಿ ,ಕುಕ್ಕೆತ್ತಿ ಬಳ್ಳು ,ಕುಂಡ ಮಲ್ಲು ಮೊದಲಾದ ದೈವಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಬಗ್ಗೆ ಚರ್ಚಿಸಿದ್ದೆ .ಆಗ ಅವರು ಅದನ್ನು ಮೆಚ್ಚ್ಚಿ ಈ ರೀತಿಯ ಸಂಶೋಧನೆಯ ಅಗತ್ಯವಿದೆ ಈ ನಿಟ್ಟಿನಲ್ಲಿ ಬೇರೆ ಯಾರೂ ಯತ್ನಿಸಿಲ್ಲ ನಿಮ್ಮದು ಒಳ್ಳೆಯ ಪ್ರಯತ್ನ ಎಂದಿದ್ದರು .ಹಾಗೆಯೇ ಮಾತನಾಡುತ್ತಾ "ಡಾ..ವೆಂಕಟ ರಾಜ ಪುಣಿಚಿತ್ತಾಯರಿಗೆ ಎಲ್ಲೇ ಹೋದರು ತುಳು ಪ್ರಾಚೀನ ಹಸ್ತಪ್ರತಿಗಳು ಕಣ್ಣಿಗೆ ಬೀಳುತ್ತವೆ ಹಾಗೆ ನಿಮಗೆ ಎಲ್ಲೇ ಹೋದರೂ ಹೊಸ ಹೊಸ ಭೂತಗಳು ಸಿಗುತ್ತವೆ ಎಂದು ಹೇಳಿ ಪ್ರೋತ್ಸಾಹ ನೀಡಿದ್ದರು

2010 ರಲ್ಲಿ ನನ್ನ ಐದು ಪುಸ್ತಕಗಳನ್ನು  ಪ್ರಕಟಿಸುವ ಸಂದರ್ಭದಲ್ಲಿ ನಾನು ನನ್ನ ಒಂದು ಪುಸ್ತಕಕ್ಕೆ ಮುನ್ನುಡಿ ಬರೆದು ಕೊಡುತ್ತೀರಾ ಎಂದು ಫೋನ್ ಮಾಡಿ ಕೇಳಿದೆ ಆಗ ಅವರು ತಕ್ಷಣವೇ ನಿಮ್ಮ ಅಪರೂಪದ ಭೂತಗಳ ಶೋಧನೆ ಉಂಟಲ್ಲ ಅದಕ್ಕೆ ನಾನು ಮುನ್ನುಡಿ ಬರೆಯುತ್ತೇನೆ ಅದರ ಪ್ರತಿಯನ್ನು ಕಳುಹಿಸಿ ಎಂದು ಹೇಳಿದರು ,ಅಂತೆಯೇ ಅದಕ್ಕ್ಕೆ ಒಂದು ಅಪೂರ್ವವಾದ ಮುನ್ನುಡಿ ಬರೆದು ಕೊಟ್ಟು ನನ್ನ ಸಂಶೋಧನೆಯ ಉತ್ಸಾಹವನ್ನು ಹೆಚ್ಚಿಸಿದರು
ಅನಂತರನನ್ನ ಸಂಶೋಧನಾ ಅಧ್ಯಯನದಲ್ಲಿ ಸಂದೇಹ ಉಂಟಾದಾಗೆಲ್ಲ  ಆಗಾಗ ಅವರಿಗೆ ಫೋನ್ ಮಾಡಿ ಅವರಿಂದ ಸಲಹೆ ಸೂಚನೆಗಳನ್ನು ಪಡೆಯುತ್ತಿದ್ದೆ
ಕಾಲ ಕ್ರಮೇಣ ನಾನು ಸ್ವಂತ ಅಧ್ಯಯನದ ಹಾದಿಯಲ್ಲಿ ನಡೆದೆ.
ನಿನ್ನೆ ಡಾ..ಅಮೃತ ಸೋಮೇಶ್ವರರನ್ನು ಭೇಟಿ ಮಾಡಿ ನನ್ನ  ಪುಸ್ತಕಗಳನ್ನು ನೀಡಿದೆ .ಅವರು ತುಂಬಾ ಖುಷಿ ಪಟ್ಟು ಹೀಗೆ ಅಧ್ಯಯನ ಮುಂದುವರಿಸಿ ಎಂದು ಹೇಳಿದರು ಅವರ ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆಈ ಇಳಿ ವಯಸಿನಲ್ಲೂ ಅವರ ಅಪಾರ ನೆನಪಿನ ಶಕ್ತಿ ಕುಂದದ ಗ್ರಹಣ ಶಕ್ತಿ ,ಬತ್ತದ ಉತ್ಸಾಹ,ಅಪಾರ ಒಲುಮೆ  ನಮಗೆ ನಿಜಕ್ಕೂ ಮಾದರಿ

ದೊಡ್ಡವರ ಹಾದಿ -8 ಅಪಾರ ಒಲುಮೆಯ ಡಾ.ಅಮೃತ ಸೋಮೇಶ್ವರ
ನಾಡೋಜ ಡಾ.ಅಮೃತ ಸೋಮೇಶ್ವರರ ರಚನೆಗಳು

ಕಥಾ ಸಂಕಲನ
1 ಎಲೆಗಿಳಿ(1957)
2 ರುದ್ರ ಶಿಲೆ ಸಾಕ್ಷಿ (1970)
3 ಕೆಂಪು ನೆನಪು(1988)
4ಮಾನವತೆ ಗೆದ್ದಾಗ ಮತ್ತು ಇತರ ಕಥೆಗಳು (1995)
ಕವನ ಸಂಕಲನಗಳು
5 ವನಮಾಲೆ (1975)
6 ಭ್ರಮಣ (1974)
7 ಜ್ಯೋತಿ ದರ್ಶನವಾಯಿತು (1989)
8 ಉಪ್ಪು ಗಾಳಿ (1992)ಕರೆ ಗಾಳಿ
ಕಾದಂಬರಿ
9 ತೀರದ ತೆರೆ
ರೇಡಿಯೋ ರೂಪಕಗಳು
10 ವಿಶ್ವ ರೂಪ
11 ಮದನಗ
12 ಪೆರಿಂಜ ಗುತ್ತು ದೇವ ಪೂಂಜೆ
13 ಕೋಟಿ ಚೆನ್ನಯ
ನಾಟಕಗಳು
14 ಕೋಟಿ ಚೆನ್ನಯ
15 ವೀರ ರಾಣಿ ಅಬ್ಬಕ್ಕ ದೇವಿ
16 ಗೊಂದೊಳು
ತುಳು ನಾಟಕಗಳು
17 ತುಳು ನಾಟಕ ಸಂಪುಟ
18 ಪುತ್ತೋರ್ದ ಪುತ್ತೊಲಿ(1984)
19 ತುಳುನಾಡ ಕಲ್ಕುಡೆ
20 ಆಟೋ ಮುಗಿಂಡ್
21 ಪ್ರೇಮ ಸಂವಾದ
22 ಕೊಡಿ ಮರ
24 ರಾಯ ರಾವುತೆ ((1982)
25 ಉಳ್ಳಾಲೊದ ರಾಣಿ ಅಬ್ಬಕ್ಕಾ ದೇವಿ
26 ಜೋಕುಮಾರ ಸ್ವಾಮಿ (ಅನುವಾದ)
27 ಬಡವನ ಮಡದಿ ಸುಂದರಿಯಾದರೆ ..
ತುಳು ಕವನ ಸಂಕಲನಗಳು
28 ತಂಬಿಲ
29 ರಂಗ ಗೀತ
ತುಳು ಭಾವ ಗೀತೆಗಳು
30 ಪನ್ನೀರ್
31 ಹಿಂಗಾರ
32 ಆಟಿ ಕಳೆಂಜ
ತುಳು ಭಕ್ತಿ ಗೀತೆಗಳು
33 ಮಾಯೊದ ಪುರಲ್
34 ಮಲೆತ ತುಡರ್
35ಕ್ಷೇತ್ರ ದರ್ಶನ
36 ಸುಗಿಪು ಮದಿಪು
37 ರಂಗನ್ ತೂಯನದೇ
38 ಪೂ ಪೂಜನ
39 ಪೂ ಪರುಂದ್
ಪಾಡ್ದನ ಸಂಗ್ರಹ - ತುಳು ಜಾನಪದ
40 ಬೀರು ಲೆಮಿಂಕಯ (ಫಿನ್ ಲ್ಯಾಂಡ್ ಜಾನಪದ ಮಹಾ ಕಾವ್ಯ –ಕಲೇವಲದ ತುಳು ಅನುವಾದ )
41 ಬಾಮ ಕುಮಾರ ಸಂಧಿ
42 ತುಳು ಪಾಡ್ದನ ಸಂಪುಟ
43 ತುಳು ಸಂಸ್ಕೃತಿಯ ಮುಂದಿನ ಶೋಧನೆ
44 ತುಳು ಜಾನಪದ ಕೆಲವು ನೋಟಗಳು
45 ತುಳು ಪಾಡ್ದನದ ಕಥೆಗಳು
46 ಅವಿಲು
46 ಬಾಮ ಕುಮಾರ ಸಂಧಿ ಕಥೆ
47 ಕೊರಗರು
48 ತುಳು ಬದುಕು
49 ಪೊಸ ಗಾದೆಲು(ಸ್ವತಂತ್ರ ಗಾದೆಗಳು )
50 ತೆರಿನಾಯನ ಪಾತೆರ (ಸರ್ವಜ್ಞನ ವಚನಗಳು ತುಳು ಅನುವಾದ )
ಯಕ್ಷಗಾನ ವಿಮರ್ಶೆ –ಕೃತಿಗಳು
51 ಯಕ್ಷಗಾನ ಹೆಜ್ಜೆ ಗುರುತುಗಳು
52 ಯಕ್ಷಾಂದೋಳ
54 ಯಕ್ಷತರು
ಜನಾಂಗ ಅಧ್ಯಯನ
55 ಕೊರಗರು
ವ್ಯಕ್ತಿ ಚಿತ್ರ
56 ಬಡೆಕ್ಕಿಲ ವೆಂಕಟರಮಣ ಭಟ್ಟರ ಜೀವನ ಮತ್ತು ಕೃತಿಗಳು
57 ಮಹಾ ಚೇತನಗಳು
ಸಂಪಾದನಾ ಗ್ರಂಥಗಳು
58 ಸುಂದರ ಕಾಂಡ
59 ಅಬ್ಬಕ್ಕ ಸಂಕಥನ
60 ವಜ್ರ ಕುಸುಮ
61 ಯಕ್ಷ ಗಂಗೋತ್ರಿ
ಸಹ ಸಂಪಾದನೆ
62 ನಾಟ್ಯ ಮೋಹನ
63 ಅಮ್ಮೆಂಬಳ ಅರುವತ್ತು
64 ಉಲ್ಲಾಳ ಇತಿ ಆದಿ
ಶಬ್ದ ಕೋಶ
65 ಮೋಯಮಲಯಾಳ ಶಬ್ದ ಕೋಶ
66 ಅಪಾರ್ಥಿನೀ (ಕುಚೋದ್ಯ ಕೋಶ )
ನವ ಸಾಕ್ಷರರಿಗಾಗಿ ರಚಿಸಿದ ಕೃತಿಗಳು
67 ಕಲ್ಲುರ್ಟಿ ಕಲ್ಕುಡ
68 ಉತ್ಸವಗಳು
69 ಯಕ್ಷಗಾನ
ಸಂಸ್ಕೃತಿ ಚಿಂತನ
70 ಭಗವತಿ ಆರಾಧನೆ
71 ಜಿಜ್ಞಾಸೆಯ ತುಣುಕುಗಳು (ವೈಚಾರಿಕ)
72 ದೀಪದ ಕೆಳಗೆ (ಅಂಕಣ ಬರಹ ಸಂಕಲನ )
73 ಹೃದಯದ ವಚನಗಳು (ವಚನ ಸಾಹಿತ್ಯ )
ಯಕ್ಷಗಾನ ಪ್ರಸಂಗಗಳು ಮತ್ತು ಕೃತಿಗಳು
74 ಯಕ್ಷಗಾನ ಕೃತಿ ಸಂಪುಟ
75 ಸಹಸ್ರ ಕವಚ ಮೋಕ್ಷ
76 ಕಾಯ ಕಲ್ಪ
77 ಅಮರ ವಾಹಿನಿ
78 ತ್ರಿಪುರ ಮಥನ
77 ಮಹಾ ಕಲಿ ಮಗಧೇಂದ್ರ
78 ವಂಶ ವಾಹಿನಿ
79 ಮಹಾ ಶೂರ ಭೌಮಾಸುರ
80 ಚಾಲುಕ್ಯ ಚಕ್ರೇಶ್ವರ
81 ಅಂಧಕ ಮೋಕ್ಷ
82 ಪುತ್ತೂರ್ದ ಮುತ್ತು
83 ಚಕ್ರವರ್ತಿ ದಶರಥ
84 ಆದಿ ಕವಿ ವಾಲ್ಮೀಕಿ
85 ಚಂದ್ರ ಮತೀ ಸ್ವಯಂವರ
86 ಭುವನ ಭಾಗ್ಯ
87 ಘೋರ ಮಾರಕ
88 ಅರುಣ ಸಾರಥ್ಯ ಮತ್ತು ಇತರ ಯಕ್ಷಗಾನಗಳು
89 ಛಾಯಾವತರಣ ಮತ್ತು ಪ್ರಸಂಗಗಳು
90 ನಿಸರ್ಗ ವಿಜಯ
91 ಸಹನಾ ಸಂದೇಶ
92 ಸತ್ಯನಾಪುರದ ಸಿರಿ
93 ರುಧಿರ ಮೋಹಿನಿ
94 ಏಕ ಶೃಂಗಿ
95 ಅಂಗುಲಿ ಮಾಲಾ
96 ಮದಿರಾಸುರ ದರ್ಶನ
97 ಮಹಾ ದಾನಿ ಬಲಿಯೇಂದ್ರ
98 ಸಪ್ತ ಮಾತೃಕೆಯರು
99 ಶ್ರೀ ಭಗವತಿ ಚರಿತ
100 ಸಂಗ್ಯಾ ಬಾಳ್ಯಾ
101 ಅಮರ ಶಿಲ್ಪಿ ಕಲ್ಕುಡ
ಯಕ್ಷಗಾನ ಧ್ವನಿ ಸುರುಳಿಗಳು
102 ಪೌಂಡ್ರಕ ವಾಸುದೇವ
103 ಶಬ್ದ ವೇದಿ
104 ಆಚಾರ್ಯ ವಿಶ್ವ ರೂಪ
105 ತ್ರಿಪುರ ಮಥನ
106 ಮಹಾ ಶೂರ ಭೌಮಾಸುರ
107 ದಂಭ ದಮನ
108 ಗುರು ತೇಜ
109 ಅಂಧಕ ಮೋಕ್ಷ
110 ಘೋರ ಮಾರಕ
111 ಆದಿ ಕವಿ ವಾಲ್ಮೀಕಿ
112 ವೀರ ಕಲ್ಕುಡ
113ಕಾಯ ಕಲ್ಪ
114 ಗಂಗಾವತರಣ
115 ಭುವನದ ಭಾಗ್ಯ
116 ವಾತಾಪಿ ಜೀರ್ಣೋಭವ
117 ವಂಶ ವಾಹಿನಿ
118 ಚಂದ್ರಮತೀ ಸ್ವಯಂವರ
119 ಪಾದುಕಾ ಪ್ರದಾನ –ತುಳು ಯಕ್ಷಗಾನ
ಧ್ವನಿ ಸುರುಳಿಗಳು –ಭಕ್ತಿ ಗೀತೆಗಳು
120 ಶ್ರೀ ಭಗವತಿ ಭಕ್ತಿ ಗೀತೆಗಳು
121 ಧರ್ಮ ಜ್ಯೋತಿ
122 ಶರಣು ಶಬರೀಶ
123 ಕದಳೀವನ
124 ಗೀತ ಜ್ಯೋತಿ
125 ಪ್ರಮೋದ ಪ್ರಸಾದ
126 ಶ್ರೀ ನಾರಾಯಣ ಗುರು ಸ್ತಪನಾಂಜಲಿ
127 ಶ್ರೀ ಭಗವತಿ ಭಕ್ತಿ ಕುಸುಮಾಂಜಲಿ
128 ಶ್ರೀ ವೈಷ್ಣೋ ದೇವಿ ದಿವ್ಯಾಂಜಲಿ

ಸಾಹಿತ್ಯ ವಿಮರ್ಶೆ
129 ಶ್ರೀ ಜೆಪಿ ರಾಜ ರತ್ನಂ ಅವರ ಕವಿತೆಗಳು
130 ನಂದಳಿಕೆಯ ನಂದಾದೀಪ
131 ಅರಿವಿನ ಹರಿಕಾರರು
132 ಸಿಂಗಾರ ಗಾದೆಗಳು (ಸ್ವತಂತ್ರ ಗಾದೆಗಳು )
ನೃತ್ಯ ರೂಪಕಗಳು
133 ಸಪ್ತ ಮಾತೃಕೆಯರು
134 ಬಲಿ ಚಕ್ರವರ್ತಿ
135ನಿಸರ್ಗ ವಿಜಯ
136 ಸಂಭವಾಮಿ ಯುಗೇ ಯುಗೇ
137 ಸಹನಾ ಸಂದೇಶ
138 ನಾಟ್ಯ ವೇದ
139 ಕರ್ಣ ಗಾಥಾ
140 ಚಲದಂಕೆ ಅಂಬೆ
141 ಭರತ ಗಾಥಾ
142 ಸತ್ಯನಾಪುರದ ಸಿರಿ
143 ಏಳುವೆರ್ ದೆಯ್ಯಾರ್
144 ತುಳುವಾಲ ಬಲಿಯೇಂದ್ರ
ಸಾಗರಂ ಸಾಗರೋಪಮಂ ಅಂತೆಯೇ ಅಮೃತಂ ಅಮೃತೋಪಮಂ ,ದೈತ್ಯ ಪ್ರತಿಭೆಗೆ ನಮೋ ನಮಃ

ಇನ್ನೂ ಅನೇಕ ಕೃತಿಗಳಿವೆ ಎಲ್ಲದರ ಹೆಸರನ್ನು ಸಂಗ್ರಹಿಸಲು ಸಾಧ್ಯವಾಗಿಲ್ಲ –ಡಾ.ಲಕ್ಷ್ಮೀ ಜಿ ಪ್ರಸಾದ
http://shikshanaloka.blogspot.in/2016/05/8.html


No comments:

Post a Comment