Monday 1 May 2017

ನಾನು ತುಳುನಾಡಿನವಳು © ಡಾ ಲಕ್ಷ್ಮೀ ಜಿ ಪ್ರಸಾದ



ನಾನ್ಯಾವ ನಾಡಿನವಳು ?
ಹೀಗೊಂದು ಜಿಜ್ಞಾಸೆ ಸದಾ ನನ್ನನ್ನು ಕಾಡುತ್ತಾ ಇರುತ್ತದೆ .ನನ್ನ ಊರು ಯಾವುದು ಎಂದು ಕೇಳಿದಾಗ ನಾನು ಕೊಡುವುದು ನನ್ನ ತಂದೆ ಮನೆ ಕಾಸರಗೋಡು ಜಿಲ್ಲೆಯ  ಕೋಳ್ಯೂರು ಎಂಬ ಪುಟ್ಟ ಗ್ರಾಮದ ವಾರಣಾಸಿ ಮನೆ ಬಗ್ಗೆ
ಕೇಳುವವರಲ್ಲಿ ನನ್ನ ಗಂಡನ ಮನೆ ಯಾವುದು ಎಂಬ ಕುತೂಹಲ ಕಂಡರೆ ನಾನು ಅದನ್ನು ನೇರವಾಗಿ ಹೇಳುತ್ತೇನೆ ನನ್ನ ಗಂಡ ಪ್ರಸಾದ್ ಮನೆ ಬಂಟ್ವಾಳ ತಾಲೂಕಿನ  ಕೋಡಪದವಿನ ಸರವು ಎಂಬ ಮನೆ ಇದು ನಮ್ಮ ಕುಟುಂಬದ ಮನೆಯ ಹೆಸರಲ್ಲ ನನ್ನ ಪತಿಯ ಅಜ್ಜ ಎಲ್ಲಿಂದಲೋ ಬಂದು ಕೋಡಪದವು ಸಮೀಪದ ಪಂಜಿಗದ್ದೆ ಎಂಬ ಪರಿಸರದ ಒಂದಷ್ಟು ಜಾಗ ಖರೀದಿಸಿ ನೆಲೆಯಾದವರು ಅವರು ತೀರ ಸಣ್ಣ ವಯಸ್ಸಿನಲ್ಲಿ ತೀರಿ ಹೋದ ಕಾರಣ ಅವರ ಮಕ್ಕಳಿಗೆ ಅವರ ಮೂಲ ಯಾವುದು ಎಂದು ತಿಳಿದಿಲ್ಲ ಮನೆದೇವರು ಕೂಡ ಯಾರೆಂದು ತಿಳಿದಿಲ್ಲ ಅಲ್ಲಿಂದ ಆಸ್ತಿ ಭಾಗವಾಗಿ ಅಲ್ಲಿಂದ ಎರಡು ಕಿಮೀ ದೂರದ ಸರವು ಎಂಬ ಪ್ರದೇಶದಲ್ಲಿ ಸ್ವಲ್ಪ ಜಾಗ ಪಡೆದು ನೆಲೆಯಾದವರು ನನ್ನ ಪ್ರಸಾದ ತಂದೆಯವರು ನಾನು ಮದುವೆಯಾಗಿ ಬಂದದ್ದು ಇದೇ ಮನೆಗೆ ಬಂದದ್ದು ಮಾತ್ರ ಅಲ್ಲಿ ಬದುಕಿದ್ದು ಬೆರಳೆಣಿಕೆಯಷ್ಟು ದಿನಗಳು
ಇಪ್ಪತ್ತೈದು ವರ್ಷಗಳ ಹಿಂದೆ ಮದುವೆಯಾದ ಮೇಲೆ ಓದಿಸುವ ಮನಸ್ಥಿತಿ ನಮ್ಮ ಸಮಾಜದಲ್ಲಿ ಇರಲಿಲ್ಲ ನಮ್ಮ ಕುಟುಂಬದ ಮಂದಿಯೂ ಅದಕ್ಕೆ ಹೊರತಾಗಿ ಇರಲಿಲ್ಲ ಇದೇ ಕಾರಣಕ್ಕೆ ನಾನು ಪ್ರಸಾದ ಒಂದಿಗೆ ಮನೆ ಬಿಟ್ಟು ಹೊರ ನಡೆದು ನಾನು ಓದುವ ಕಟೀಲು ಕಾಲೇಜು ಬಳಿ ಮನೆ ಮಾಡಿ ಸಂಸಾರ ಪ್ರಾರಂಭಿಸಿದೆವು ಅನೇಕ ಏಳು ಬೀಳುಗಳನ್ನೂ ಕಂಡೆವು ಅಲ್ಲಿದ್ದದ್ದು ಒಂದೇ ವರುಷ ಅಲ್ಲಿಂದ ಮತ್ತೆ ಮಂಗಳೂರಿನಲ್ಲಿ ಹತ್ತು ವರ್ಷ ಬದುಕಿದೆವು ಹೊಟ್ಟೆಪಾಡಿಗಾಗಿ ಉದ್ಯೋಗ ಅರಸುತ್ತಾ ಪ್ರಸಾದ ಬೆಂಗಳೂರಿಗೆ ಸಪ್ಟೆಂಬರ್ 2004 ರಲ್ಲಿ ಬಂದಾಗ ನಾನು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸಂಸ್ಕೃತ ಉಪನ್ಯಾಸಕಿಯಾಗಿದ್ದೆ
ಶೈಕ್ಷಣಿಕ ವರ್ಷದ ಮಡುವೆ ಕೆಲಸ ಬಿಡುವುದು ಸರಿಯಲ್ಲ ವೆಂದು ಮಾರ್ಚ್ 2005 ರ ತನಕ ಕೆಲಸದಲ್ಲಿ ಮುಂದುವರಿದು ಪ್ರಥಮ ಪಿಯುಸಿ ಮೌಲ್ಯ ಮಾಪನ ಮಾಡಿ‌ಕೊಟ್ಟು ಕಾಲೇಜು  ಮ್ಯಾಗಜೀನ್ ಕೆಲಸವನ್ನು ಮುಗಿಸಿಕೊಟ್ಟು ಗೌರವದಿಂದ ಅಲ್ಲಿಂದ ರಿಲೀವ್ ಆಗಿ ಬೆಂಗಳೂರಿಗೆ ಬಂದೆ ಬಂದ ಮರುದಿನವೇ ಎಪಿಎಸ್ ಕಾಲೇಜಿನ ಕನ್ನಡ ಉಪನ್ಯಾಸಕ ಹುದ್ದೆಗೆ walk in interview ಇದ್ದದ್ದು ಗೊತ್ತಾಗಿ ಮಗನನ್ನು ಗಾಡಿಯಲ್ಲಿ ಕೂರಿಸಕೊಂಡು ವಿಳಾಸ ಹುಡುಕುತ್ತಾ ಎನ್ ಆರ್ ಕಾಲೋನಿಗೆ ತಡವಾಗಿ ಬಂದು ಕೊನೆಯ ಅಭ್ಯರ್ಥಿಯಾಗಿ ಸಂದರ್ಶನ ಎದುರಿಸಿ ಆಯ್ಕೆಯಾದೆ
ಬನಶಂಕರಿ ತೃತೀಯ ಬಡಾವಣೆಯಲ್ಲಿ ಬಾಡಿಗೆ ಮನೆ ಹಿಡಿದಿದ್ದೆವು
ಅಲ್ಲಿಂದ 2008 ರಲ್ಲಿ ಈಗಿನ  ಅಂಗೈ ಅಗಲದ ನಮ್ಮ ಪುಟ್ಟದಾದ ಸ್ವಂತ ಮನೆಗೆ ಬಂದೆವು ಮತ್ತೆ 2009 ರಲ್ಲಿ ಬೆಳ್ಳಾರೆಗೆ ಉಪನ್ಯಾಸಕಿಯಾಗಿ ಹೋದೆ 2015 ರಲ್ಲಿ ಮತ್ತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಕಾಲೇಜಿಗೆ ವರ್ಗಾವಣೆ ಪಡೆದು ಬಂದೆ
ಹಾಗಾಗಿ ನಮಗೆ ನಾವೆಲ್ಲಿಯವರುಎಂದು ಕೇಳಿದರೆ ಒಂದಿನಿತು ತಬ್ಬಿಬ್ಬಾಗುತ್ತೇನೆ ಕೊನೆಯಲ್ಲಿ ನಾನು "ತುಳುನಾಡಿನ ವರು "  ಎನ್ನುತ್ತೇನೆ
ಯಾಕೆಂದರೆ ನನ್ನ ಮಾತೃಭಾಷೆ ಹವ್ಯಕ ಕನ್ನಡ ವೃತ್ತಿ ಕನ್ನಡ ಉಪನ್ಯಾಸಕಿಯಾಗಿ, ಆದರೂ ನನ್ನನ್ನು ಸೆಳೆದದ್ದು ತುಳು ಸಂಸ್ಕೃತಿ ಕೈ ಹಿಡಿದು ಸಲಹಿದವಳು ತುಳುವಪ್ಪೆ
ಇಷ್ಟಾಗಿಯೂ ಇತ್ತೀಚೆಗೆ ಕನ್ನಡ ಜಾನಪದ ಪರಿಷತ್ ಮೈಸೂರು ವಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ನನ್ನನ್ನು ಜಾನಪದ ಪ್ರಪಂಚ ಪ್ರಶಸ್ತಿ ಗೆ ಆಯ್ಕೆಮಾಡಿದಾಗ ಅವರು ಕಾಸರಗೋಡಿನವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಅವರನ್ನು ಆಯ್ಕೆ ಮಾಡಿದ್ದು ಸರಿಯಲ್ಲ ಎಂದು ಆಕ್ಷೇಪ ಮಾಡಿದ್ದು ತಿಳಿಯಿತು ತಕ್ಷಣವೇ ನಾನು ದಕ್ಷಿಣ ಕನ್ನಡ ಜಿಲ್ಲೆಯ  ಬಂಟ್ವಾಳ ತಾಲೂಕಿನ  ಮದುವೆಯಾಗಿ ಬಂದ ಮನೆಯ ನನ್ನ ಪತಿ ಪ್ರಸಾದ ಮನೆ ವಿಳಾಸ ಮತ್ತು ಇನ್ನೂ ಅಲ್ಲಿಯೇ ಓಟಿನ ಹಕ್ಕು ಇರುವ ಬಗ್ಗೆ ವೋಟರ್ಸ ಕಾರ್ಡಿನ ದಾಖಲೆ ಒದಗಿಸಿ ದಾಖಲೆ ಪ್ರಕಾರ ನಾನು ದಕ್ಷಿಣ ಕನ್ನಡ ಜಿಲ್ಲೆಯ ವಳು ಆದರೆ ಮಾನಸಿಕವಾಗಿ ನಾನು ಅಲ್ಲಿಯವಳಲ್ಲ ಅವರೆಂದೂ ನನ್ನನ್ನು ಸೊಸೆಯಾಗಿ ಸ್ವೀಕರಿಸಲಿಲ್ಲ ಅದನ್ನು ತಪ್ಪು ಎಂದು ದೂಷಿಸಲಾರೆ .ಸೆರಗು ತಲೆಗೆ ಹೊದ್ದು ಬೆಳಗ್ಗೆ ಎದ್ದು ಹೊಸಿಲಿ ಬರೆದು ಮನೆಯೊಳಗೆ ಗೃಹಿಣಿಯಾಗಿರುವ ಸೊಸೆಯನ್ನು ನಿರೀಕ್ಷಿಸಿದ ಸಂಪ್ರದಾಯ ವಾದಿ ಬ್ರಾಹ್ಮಣ ಕುಟುಂಬದ ಜನ ನಡು ರಾತ್ರಿ ನಢಯುವ ಭೂತಕೋಲವನ್ನು ರೆಕಾರ್ಡ್  ಕ್ಯಾಮರಾ ಹಿಡಿದುಕೊಂಡು ಜಾತಿ ನೀತಿ ಧರ್ಮದ ಗಡಿ ದಾಟಿ ಸಾಗುವ ನನ್ನಂಥ ಟಪೋರಿಯನ್ನು ಸೊಸೆಯಾಗಿ ಹೇಗೆ ತಾನೆ ಸ್ವೀಕರಿಸಿಯಾರು ಅಲ್ಲವೇ ?
ಬೆಂಗಳೂರು ಅನ್ನವನ್ನು ಕೊಟ್ಟ ಊರು ಎಂಬ ಕೃತಜ್ಞತೆ ಇರುವುದಾದರೂ ನಾನು ಬೆಂಗಳೂರಿನವಳು ಎಂಬ ಭಾವ ನನಗಿನ್ನೂ ಬಂದಿಲ್ಲ ಬಾರದೆ ಇರುವುದನ್ನು ಹೇಗೆ ಒಪ್ಪಲಿ ?
ಹಾಗಾಗಿ ನಾನು ಎಲ್ಲಿಯವಳು ಕೇಳಿದರೆ ಇಂದಿಗೂ ಹೇಳುವುದು ನಾನು ತುಳುನಾಡಿನವಳು ಗಡಿನಾಡಿನವಳು ಎಂದು .ಬೆಳ್ಳಾರೆಯಲ್ಲಿ ನಾಲ್ಕು ವರ್ಷಗಳ ಕಾಲ ಇದ್ದ ಕಾರಣ ನಾನು ಅಲ್ಲಿಯವಳೆಂದು ಅನೇಕರು ಭಾವಿಸಿದ್ದಾರೆ ಅದು ಕೂಡ ನನಗೆ ಅನ್ನ ಕೊಟ್ಟ ಊರು ಸಂಶೋಧನೆ ಗೆ ಇಂಬು ಕೊಟ್ಟ ಊರು ನನಗೊಂದು ಅಸ್ತಿತ್ವ ತಂದು ಕೊಟ್ಟ ಬೀಡು ಎಂಬ ಕೃತಜ್ಞತೆ ನಮಗಿದೆಯಾದರೂ ನಾನು ಅಲ್ಲಿಯವಳಲ್ಲ  ಕೆಲವರು ಡೆಲ್ಲಿ,ಮುಂಬೈ ಮಧುರೆ ಚೆನೈ ಯಲ್ಲಿ ಓದಿದ ಕೆಲಸ ಮಾಡಿ ಕಾರಣಕ್ಕೆ ಹೊರನಾಡಿವರು ಎಂದು ಕರೆಯಲ್ಪಡುತ್ತಾರೆ ಹಾಗೆ ನೋಡಿದರೆ   ನಾನು ಅಂದ್ರ ಪ್ರದೇಶದ ಕುಮಪ್ಪಂನಲ್ಲಿರುವ ದ್ರಾವಿಡ ವಿಶ್ವ ವಿದ್ಯಾಲಯದ ತುಳು ವಿಭಾಗದ ಮೊದಲ ವಿದ್ಯಾರ್ಥಿನಿ ನಾನು ಎರಡನೇಯ ಡಾಕ್ಟರೇಟ್ ಪಡೆದದ್ದು ಅಲ್ಲಿಂದಲೇ ಆ ಬಗ್ಗೆ ಯೂ ನನಗೆ ಕೃತಜ್ಞತೆ ಇದೆಯೇ ಹೊರತು ನಾನು ಹೊರನಾಡಿನವಳು ಎಂದು ಕರೆಸಿಕೊಳ್ಳಲಾರೆ  ಹಾಗಾಗಿಯೇ ನಾನು ತುಳುನಾಡಿನವಳು ಎಂದು ಹೆಮ್ಮೆಯಿಂದ ಹೇಳುವೆ
ಇದೆಲ್ಲಾ ಯಾಕೆ ನೆನಪಾಯಿತೆಂದರೆ ನಿನ್ನೆವೇದಿಕೆಯಲ್ಲಿ  ವಸಂತಕುಮಾರ್ ಪೆರ್ಲ ಅವರು ಗಡಿನಾಡಿನ ಆರುನೂರು ಬರಹಗಾರರ ಒಂದು ಪಟ್ಟಿಯನ್ನು ಮಾಡಿದ್ದು ಪ್ರಕಟವಾಗಿರುವ ಬಗ್ಗೆ ತಿಳಿಸಿದರು (ಈ ಪಟ್ಟಿ ಯನ್ನು ಅವರು ಮಾಡಿಲ್ಲ ಯಾರು ಎಲ್ಲಿ ಪ್ರಕಟಿಸಿದ್ದು ಎಂಬ ಮಾಹಿತಿ ಅವರು ಹೇಳಿದ್ದು ನನಗೆ ಮರೆತು ಹೋಗಿದೆ)  ಪಟ್ಟಿಯಲ್ಲಿ ನಾನು ಸೇರದೆ ಇದ್ದ ಬಗ್ಗೆ ನನಗೆ ಈ ಹಿಂದೆಯೇ ಮಾಹಿತಿ ಇತ್ತು ಜೊತೆಗೆ ತುಳುನಾಡ ಬರಹಗಾರರ ಒಂದು ಪಟ್ಟಿ ಕೂಡ ಪ್ರಕಟವಾಗಿದ್ದು ಅದರಲ್ಲೂ ನಾನು ಸೇರಿಲ್ಲವಂತೆ
ಹಾಗಾಗಿ ನಾನೆಲ್ಲಿಯವಳು ಎಂದು ಕಾಡುತ್ತಿದ್ದ ಜಿಜ್ಞಾಸೆ ಇಂದು ಮತ್ತೆ ಕಾಡುತ್ತಿದೆ
(ಚಿತ್ರ -ತುಳುನಾಡಿನಲ್ಲಿ ದೈವವಾಗಿ ಆರಾಧಿಸಲ್ಪಡುವ ಕೆಳದಿ ಅರಸಿ ಚನ್ನಮ್ಮ ನ ಮಹಾ ಮಾಂಡಳಿಕನಾಗಿದ್ದ  ಕಾಸರಗೋಡು ತಿಮ್ಮಣ್ಣ ನಾಯಕನ ಕುರಿತಾದ ಕ್ಷೇತ್ರ ಕಾರ್ಯದ ಅಧ್ಯಯನ ದಲ್ಲಿ ಕುಂಬಳೆ ಕೋಟೆ ಗೆ ಬಂದಾಗಿನದು )
ಡಾ ಲಕ್ಷ್ಮೀ ಜಿ ಪ್ರಸಾದ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ ಪೂರ್ವ ಕಾಲೇಜು ನೆಲಮಂಗಲ ಬೆಂಗಳೂರು ಗ್ರಾಮಾಂತರ ಜಿಲ್ಲೆ

2 comments:

  1. ಅಕ್ಕ ನಿಮ್ಮ ಮಾತುಗಳನ್ನು ಕೇಳಿದಾಗ ನನ್ನಲ್ಲಿ ಅದೇನೊ ನಿಮ್ಮ ಬಗ್ಗೆ ಭಕ್ತಿಯ ಇಲ್ಲ ಆತ್ಮೀಯತೆಯ ಬಾವನೆ ಹುಟ್ಟಿತು,ಅಕ್ಕ ನಿಮ್ಮ ದೃಢ ನಿರ್ಧಾರಗಳು ನನಗ ಒಂದು ರೀತಿಯ ಹುಮ್ಮಸು ಹುಟ್ಟಿಸುತ್ತಿದೆ . . ತುಳುನಾಡಿನ ಬಗ್ಗೆ ಕಲಿಯಲು ತಡವಾಗಿ ಬಂದರು ನಿಮ್ಮಂತಹ ಹಿರಿಯರು ಹಾದು ಬಂದ ದಾರಿಯನ್ನು ಕಂಡಾಗ ಕಲಿಯಲು ವಯಸ್ಸಿಲ್ಲ ಅನ್ನುವ ಮಾತು ನೀಜ ಅನಿಸುತ್ತಿದೆ ಇದು ನನಗೆ ಕಲಿಯಲು ಇನ್ನಷ್ಟು ಉತ್ಸಾಹವನ್ನು ಮೂಡಿಸಿತು ಸೊಲ್ಮೇಲು ಅಕ್ಕ ದೈವದ ದೇವರ್ನ ಇಂಬು ನುಡಿ ಆಶಿರ್ವಾದ ಎಪೋಗ್ಲ ಇರೆಗ್ ಇಪ್ಪುಂಡು ಜೈ ತುಳುನಾಡ್

    ReplyDelete