Friday 15 June 2018

ಬದುಕ ಬಂಡಿಯಲಿ 22 ನಾನು‌ ಮತ್ತು ಮಗ ಬಚಾವಾಗಿದ್ದೆವು!

ನಾನು‌ ಮತ್ತು ಮಗ ಬಚಾವಾಗಿದ್ದೆವು!

ಇದನ್ನು ಓದುತ್ತಿದ್ದಂತೆ ಸುಮಾರು ವರ್ಷಗಳ ಹಿಮದಿನ ಘಟನೆ ನೆನಪಾಯಿತು!
.ಸುಮಾರು ಹದಿನೇಳು ವರ್ಷಗಳ ಹಿಂದಿನ‌ಕಥೆಯಿದು.ಮಗ ಅರವಿಂದ್ ಇನ್ನೂ ಎರಡು ಮೂರು ವರ್ಷದ ಮಗು.
ನಾವಾಗ ಮಂಗಳೂರಿನಲ್ಲಿ ಇದ್ದೆವು.ಒಂದು ದಿನ ತಾಯಿ ಮನೆಗೆ ಮಗನ ಜೊತೆ ಹೊರಟಿದ್ದೆ.ಹಾಗಾಗಿ ಮಂಗಳೂರಿನಿಂದ ಕಾಸರಗೋಡಿಗೆ ಹೋಗುವ ಖಾಸಗಿ ವೇಗದೂತ ಬಸ್ಸನ್ನು ಹತ್ತಿದ್ದೆ.
ಬಸ್ ಪಂಪ್ ವೆಲ್ ತಲುಪಿದಾಗ ಬಸ್ ಹತ್ತಿದ ಒಬ್ಬ ವ್ಯಕ್ತಿ ಮತ್ತು ಡ್ರೈವರ್ ನಡುವೆ ಜಗಳ ಶುರುವಾಯಿತು‌.ಒಬ್ಬರಿಗೊಬ್ಬರು ಬೈದಾಡುತ್ತಿದ್ದರು‌.ಜಗಳವಾಡುತ್ತಲೇ ಡ್ರೈವರ್ ಬಸ್ಸನ್ನು ಯದ್ವಾ ತದ್ವಾ ಚಾಲನೆ ಮಾಡುತ್ತಿದ್ದರು‌.ಬಸ್ ನ ಕಂಡಕ್ಟರ್ ಅನ್ನು ಕರೆದು " ಅವರ ಜಗಳವನ್ನು ನಿಲ್ಲಿಸಿ,ಜಗಳ ನಿಂತ ನಂತರ ಬಸ್ಸು ಚಾಲನೆ ಮಾಡಲು ಹೇಳಿ" ಎಂದು ವಿನಂತಿಸಿದೆ‌.ಆತ ಒಮ್ಮೆ ಅವರಿಗೆ ತಿಳಿ ಹೇಳಲು ಯತ್ನ ಮಾಡಿದನಾದರೂ ಪ್ರಯೋಜನವಾಗದೆ ಕೊನೆಗೆ ಹಿಂದೆ ಹೋಗಿ ನಿಂತರು
ಆಗ ಅಲ್ಲಿದ್ದ ಸ್ವಲ್ಪ ವಿದ್ಯಾವಂತರಂತೆ ಕಾಣುತ್ತಿದ್ದ ಪ್ರಯಾಣಿಕರಾದ ಒಬ್ಬರಲ್ಲಿ " ನೋಡಿ ಇವರು ಹೀಗೆ ಡ್ರೈವ್ ಮಾಡಿದರೆ ನಾವು‌ಮನೆ ತಲುಪಲಾರೆವು .ಅವರಿಗೆ ಬಸ್ ಸೈಡಿಗೆ ಹಾಕಲು ಹೇಳಿ ಎಂದು ತಿಳಿಸಿದರ ಆಗ ಅವರು ಒಮ್ಮೆ ಎದ್ದು ನಿಂತರಾದರೂ‌ ಮತ್ತೆ ಅಳುಕಿ ಪೇಪರ್ ಓದತೊಡಗಿದರು.ಅಷ್ಟರಲ್ಲಿ ತೊಕ್ಕೋಟು ಬಂತು.ಅಲ್ಲಿ ಬಸ್ ಸ್ಟಾಪ್ ಇದೆ‌ಬಸ್ ನಿಂತ ತಕ್ಷಣ ನಾನು‌ಮಗನನ್ನು ಎತ್ತಿಕೊಂಡು ಇಳಿದೆ .
ನಾನು ಹೊಸಂಗಡಿ ತನಕ ಟಿಕೆಟ್ ತೆಗೆದುಕೊಂಡಿದ್ದೆ‌.ಆದರೆ ಆ ಬಸ್ ನಲ್ಲಿ ಮುಂದುವರಿಯುವುದು ಅಪಾಯ ಎನಿಸಿ ಅರ್ಧದಲ್ಲಿಯೇ ಇಳಿದೆ‌ನಂತರ ಬಂದ ಬಸ್ ಹತ್ತಿ ಮತ್ತೆ ಹೊಸಂಗಡಿಗೆ ಟಿಕೆಟ್ ತೆಗೆದೆ.ನಾನಿದ್ದ ಬಸ್ ತಲಪಾಡಿ ಸಮೀಪಿಸುವಷ್ಟರಲ್ಲಿ ರಸ್ತೆ ಇಡೀ ಜಾಮ್ ಅಗಿತ್ತು‌ .ಜನರೆಲ್ಲ ಗಾಭರಿಯಿಂದ ಅತ್ತ ಇತ್ತ‌ಓಡಾಡುತ್ತಿದ್ದರು.
ಹೌದು‌ ಮೊದಲು ನಾನಿದ್ದ ಬಸ್ ಭೀಕರ ಅಫಘಾತಕ್ಕೆ ಈಡಾಗಿತ್ತು .ರಸ್ತೆಯಿಂದ ಉರುಳಿ ಗದ್ದೆಗೆ ಬಿದ್ದಿತ್ತು‌.ಅ ಬಸ್ ನಲ್ಲಿ ಇದ್ದಿದ್ದೇ ಹತ್ತು ಹದಿನೈದು ಜನರು‌.ಅವರಲ್ಲಿ ಏಳೆಂಟು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.ಎಲ್ಲರಿಗೂ ಗಾಯವಾಗಿತ್ತು‌
ಸದ್ಯ ನನ್ನನ್ನು ‌ಮತ್ತು ಮಗನನ್ನು ದೇವರೇ ಕಾಪಾಡಿರಬೇಕು ನಾವು ತೊಕ್ಕೋಟಿನಲ್ಲಿ ಇಳಿಯದೆ ಅದೇ ಬಸ್ಸಿನಲ್ಲಿ ಮುಂದುವರಿದಿದ್ದರೆ ನಮಗೂ ಇದೇ ಗತಿ ಆಗಿರುತ್ತಿತ್ತು‌.ನನಗೆ ಇಳಿಯುವಂತೆ ಪ್ರೇರಣೆ ಎಲ್ಲಿಂದ ಬಂತೋ ತಿಳಿಯದು‌.ಇದು ಸಮಯ ಪ್ರಜ್ಞೆಯೇ ಆಯುರ್ಬಲವೋ ನನಗೆ ತಿಳಿಯದು .ಅದೇನೇ ಇದ್ದರೂ ನಾವು ಆ ದಿನ ಅಪಾಯದಿಂದ ಬಚಾವಾಗಿದ್ದೆವು.

Tuesday 12 June 2018

ಬದುಕ ಬಂಡಿಯಲಿ 21- ನಾನು ತುಳುನಾಡಿನವಳು © ಡಾನಾನು ತುಳುನಾಡಿನವಳು © ಡಾ ಲಕ್ಷ್ಮೀ ಜಿ ಪ್ರಸಾದ

ನಾನು ತುಳುನಾಡಿನವಳು © ಡಾನಾನು ತುಳುನಾಡಿನವಳು © ಡಾ ಲಕ್ಷ್ಮೀ ಜಿ ಪ್ರಸಾದ

ನಾನ್ಯಾವ ನಾಡಿನವಳು ?
ಹೀಗೊಂದು ಜಿಜ್ಞಾಸೆ ಸದಾ ನನ್ನನ್ನು ಕಾಡುತ್ತಾ ಇರುತ್ತದೆ .ನನ್ನ ಊರು ಯಾವುದು ಎಂದು ಕೇಳಿದಾಗ ನಾನು ಹೇಳುವುದು

" ನನ್ನ ತಂದೆ ಮನೆ ಕಾಸರಗೋಡು ಜಿಲ್ಲೆಯ  ಕೋಳ್ಯೂರು ಎಂಬ ಪುಟ್ಟ ಗ್ರಾಮದ ವಾರಣಾಸಿ ಮನೆ ಬಗ್ಗೆ "

ಕೇಳುವವರಲ್ಲಿ ನನ್ನ ಗಂಡನ ಮನೆ ಯಾವುದು ಎಂಬ ಕುತೂಹಲ ಕಂಡರೆ ನಾನು ಅದನ್ನು ನೇರವಾಗಿ ಹೇಳುತ್ತೇನೆ ನನ್ನ ಗಂಡ ಪ್ರಸಾದ್ ಮನೆ ಬಂಟ್ವಾಳ ತಾಲೂಕಿನ  ಕೋಡಪದವಿನ ಸರವು ಎಂಬ ಮನೆ ಇದು ನಮ್ಮ ಕುಟುಂಬದ ಮನೆಯ ಹೆಸರಲ್ಲ ನನ್ನ ಪತಿಯ ಅಜ್ಜ ಎಲ್ಲಿಂದಲೋ ಬಂದು ಕೋಡಪದವು ಸಮೀಪದ ಪಂಜಿಗದ್ದೆ ಎಂಬ ಪರಿಸರದ ಒಂದಷ್ಟು ಜಾಗ ಖರೀದಿಸಿ ನೆಲೆಯಾದವರು ಅವರು ತೀರ ಸಣ್ಣ ವಯಸ್ಸಿನಲ್ಲಿ ತೀರಿ ಹೋದ ಕಾರಣ ಅವರ ಮಕ್ಕಳಿಗೆ ಅವರ ಮೂಲ ಯಾವುದು ಎಂದು ತಿಳಿದಿಲ್ಲ ಮನೆದೇವರು ಕೂಡ ಯಾರೆಂದು ತಿಳಿದಿಲ್ಲ ಅಲ್ಲಿಂದ ಆಸ್ತಿ ಭಾಗವಾಗಿ ಅಲ್ಲಿಂದ ಎರಡು ಕಿಮೀ ದೂರದ ಸರವು ಎಂಬ ಪ್ರದೇಶದಲ್ಲಿ ಸ್ವಲ್ಪ ಜಾಗ ಪಡೆದು ನೆಲೆಯಾದವರು ನನ್ನ ಪ್ರಸಾದ ತಂದೆಯವರು ನಾನು ಮದುವೆಯಾಗಿ ಬಂದದ್ದು ಇದೇ ಮನೆಗೆ ಬಂದದ್ದು ಮಾತ್ರ ಅಲ್ಲಿ ಬದುಕಿದ್ದು ಬೆರಳೆಣಿಕೆಯಷ್ಟು ದಿನಗಳು
ಇಪ್ಪತ್ತೈದು ವರ್ಷಗಳ ಹಿಂದೆ ಮದುವೆಯಾದ ಮೇಲೆ ಓದಿಸುವ ಮನಸ್ಥಿತಿ ನಮ್ಮ ಸಮಾಜದಲ್ಲಿ ಇರಲಿಲ್ಲ ನಮ್ಮ ಕುಟುಂಬದ ಮಂದಿಯೂ ಅದಕ್ಕೆ ಹೊರತಾಗಿ ಇರಲಿಲ್ಲ ಇದೇ ಕಾರಣಕ್ಕೆ ನಾನು ಪ್ರಸಾದ ಒಂದಿಗೆ ಮನೆ ಬಿಟ್ಟು ಹೊರ ನಡೆದು ನಾನು ಓದುವ ಕಟೀಲು ಕಾಲೇಜು ಬಳಿ ಮನೆ ಮಾಡಿ ಸಂಸಾರ ಪ್ರಾರಂಭಿಸಿದೆವು ಅನೇಕ ಏಳು ಬೀಳುಗಳನ್ನೂ ಕಂಡೆವು ಅಲ್ಲಿದ್ದದ್ದು ಒಂದೇ ವರುಷ ಅಲ್ಲಿಂದ ಮತ್ತೆ ಮಂಗಳೂರಿನಲ್ಲಿ ಹತ್ತು ವರ್ಷ ಬದುಕಿದೆವು ಹೊಟ್ಟೆಪಾಡಿಗಾಗಿ ಉದ್ಯೋಗ ಅರಸುತ್ತಾ ಪ್ರಸಾದ ಬೆಂಗಳೂರಿಗೆ ಸಪ್ಟೆಂಬರ್ 2004 ರಲ್ಲಿ ಬಂದಾಗ ನಾನು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸಂಸ್ಕೃತ ಉಪನ್ಯಾಸಕಿಯಾಗಿದ್ದೆ
ಶೈಕ್ಷಣಿಕ ವರ್ಷದ ಮಡುವೆ ಕೆಲಸ ಬಿಡುವುದು ಸರಿಯಲ್ಲ ವೆಂದು ಮಾರ್ಚ್ 2005 ರ ತನಕ ಕೆಲಸದಲ್ಲಿ ಮುಂದುವರಿದು ಪ್ರಥಮ ಪಿಯುಸಿ ಮೌಲ್ಯ ಮಾಪನ ಮಾಡಿ‌ಕೊಟ್ಟು ಕಾಲೇಜು  ಮ್ಯಾಗಜೀನ್ ಕೆಲಸವನ್ನು ಮುಗಿಸಿಕೊಟ್ಟು ಗೌರವದಿಂದ ಅಲ್ಲಿಂದ ರಿಲೀವ್ ಆಗಿ ಬೆಂಗಳೂರಿಗೆ ಬಂದೆ ಬಂದ ಮರುದಿನವೇ ಎಪಿಎಸ್ ಕಾಲೇಜಿನ ಕನ್ನಡ ಉಪನ್ಯಾಸಕ ಹುದ್ದೆಗೆ walk in interview ಇದ್ದದ್ದು ಗೊತ್ತಾಗಿ ಮಗನನ್ನು ಗಾಡಿಯಲ್ಲಿ ಕೂರಿಸಕೊಂಡು ವಿಳಾಸ ಹುಡುಕುತ್ತಾ ಎನ್ ಆರ್ ಕಾಲೋನಿಗೆ ತಡವಾಗಿ ಬಂದು ಕೊನೆಯ ಅಭ್ಯರ್ಥಿಯಾಗಿ ಸಂದರ್ಶನ ಎದುರಿಸಿ ಆಯ್ಕೆಯಾದೆ
ಬನಶಂಕರಿ ತೃತೀಯ ಬಡಾವಣೆಯಲ್ಲಿ ಬಾಡಿಗೆ ಮನೆ ಹಿಡಿದಿದ್ದೆವು
ಅಲ್ಲಿಂದ 2008 ರಲ್ಲಿ ಈಗಿನ  ಅಂಗೈ ಅಗಲದ ನಮ್ಮ ಪುಟ್ಟದಾದ ಸ್ವಂತ ಮನೆಗೆ ಬಂದೆವು ಮತ್ತೆ 2009 ರಲ್ಲಿ ಬೆಳ್ಳಾರೆಗೆ ಉಪನ್ಯಾಸಕಿಯಾಗಿ ಹೋದೆ 2015 ರಲ್ಲಿ ಮತ್ತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಕಾಲೇಜಿಗೆ ವರ್ಗಾವಣೆ ಪಡೆದು ಬಂದೆ
ಹಾಗಾಗಿ ನಮಗೆ ನಾವೆಲ್ಲಿಯವರುಎಂದು ಕೇಳಿದರೆ ಒಂದಿನಿತು ತಬ್ಬಿಬ್ಬಾಗುತ್ತೇನೆ ಕೊನೆಯಲ್ಲಿ ನಾನು "ತುಳುನಾಡಿನ ವರು "  ಎನ್ನುತ್ತೇನೆ
ಯಾಕೆಂದರೆ ನನ್ನ ಮಾತೃಭಾಷೆ ಹವ್ಯಕ ಕನ್ನಡ ವೃತ್ತಿ ಕನ್ನಡ ಉಪನ್ಯಾಸಕಿಯಾಗಿ, ಆದರೂ ನನ್ನನ್ನು ಸೆಳೆದದ್ದು ತುಳು ಸಂಸ್ಕೃತಿ ಕೈ ಹಿಡಿದು ಸಲಹಿದವಳು ತುಳುವಪ್ಪೆ
ಇಷ್ಟಾಗಿಯೂ ಇತ್ತೀಚೆಗೆ ಕನ್ನಡ ಜಾನಪದ ಪರಿಷತ್ ಮೈಸೂರು ವಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ನನ್ನನ್ನು ಜಾನಪದ ಪ್ರಪಂಚ ಪ್ರಶಸ್ತಿ ಗೆ ಆಯ್ಕೆಮಾಡಿದಾಗ ಅವರು ಕಾಸರಗೋಡಿನವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಅವರನ್ನು ಆಯ್ಕೆ ಮಾಡಿದ್ದು ಸರಿಯಲ್ಲ ಎಂದು ಆಕ್ಷೇಪ ಮಾಡಿದ್ದು ತಿಳಿಯಿತು ತಕ್ಷಣವೇ ನಾನು ದಕ್ಷಿಣ ಕನ್ನಡ ಜಿಲ್ಲೆಯ  ಬಂಟ್ವಾಳ ತಾಲೂಕಿನ  ಮದುವೆಯಾಗಿ ಬಂದ ಮನೆಯ ನನ್ನ ಪತಿ ಪ್ರಸಾದ ಮನೆ ವಿಳಾಸ ಮತ್ತು ಇನ್ನೂ ಅಲ್ಲಿಯೇ ಓಟಿನ ಹಕ್ಕು ಇರುವ ಬಗ್ಗೆ ವೋಟರ್ಸ ಕಾರ್ಡಿನ ದಾಖಲೆ ಒದಗಿಸಿ ದಾಖಲೆ ಪ್ರಕಾರ ನಾನು ದಕ್ಷಿಣ ಕನ್ನಡ ಜಿಲ್ಲೆಯ ವಳು ಆದರೆ ಮಾನಸಿಕವಾಗಿ ನಾನು ಅಲ್ಲಿಯವಳಲ್ಲ ಅವರೆಂದೂ ನನ್ನನ್ನು ಸೊಸೆಯಾಗಿ ಸ್ವೀಕರಿಸಲಿಲ್ಲ ಅದನ್ನು ತಪ್ಪು ಎಂದು ದೂಷಿಸಲಾರೆ .ಸೆರಗು ತಲೆಗೆ ಹೊದ್ದು ಬೆಳಗ್ಗೆ ಎದ್ದು ಹೊಸಿಲಿ ಬರೆದು ಮನೆಯೊಳಗೆ ಗೃಹಿಣಿಯಾಗಿರುವ ಸೊಸೆಯನ್ನು ನಿರೀಕ್ಷಿಸಿದ ಸಂಪ್ರದಾಯ ವಾದಿ ಬ್ರಾಹ್ಮಣ ಕುಟುಂಬದ ಜನ ನಡು ರಾತ್ರಿ ನಢಯುವ ಭೂತಕೋಲವನ್ನು ರೆಕಾರ್ಡ್  ಕ್ಯಾಮರಾ ಹಿಡಿದುಕೊಂಡು ಜಾತಿ ನೀತಿ ಧರ್ಮದ ಗಡಿ ದಾಟಿ ಸಾಗುವ ನನ್ನಂಥ ಟಪೋರಿಯನ್ನು ಸೊಸೆಯಾಗಿ ಹೇಗೆ ತಾನೆ ಸ್ವೀಕರಿಸಿಯಾರು ಅಲ್ಲವೇ ?
ಬೆಂಗಳೂರು ಅನ್ನವನ್ನು ಕೊಟ್ಟ ಊರು ಎಂಬ ಕೃತಜ್ಞತೆ ಇರುವುದಾದರೂ ನಾನು ಬೆಂಗಳೂರಿನವಳು ಎಂಬ ಭಾವ ನನಗಿನ್ನೂ ಬಂದಿಲ್ಲ ಬಾರದೆ ಇರುವುದನ್ನು ಹೇಗೆ ಒಪ್ಪಲಿ ?
ಹಾಗಾಗಿ ನಾನು ಎಲ್ಲಿಯವಳು ಕೇಳಿದರೆ ಇಂದಿಗೂ ಹೇಳುವುದು ನಾನು ತುಳುನಾಡಿನವಳು ಗಡಿನಾಡಿನವಳು ಎಂದು .ಬೆಳ್ಳಾರೆಯಲ್ಲಿ ನಾಲ್ಕು ವರ್ಷಗಳ ಕಾಲ ಇದ್ದ ಕಾರಣ ನಾನು ಅಲ್ಲಿಯವಳೆಂದು ಅನೇಕರು ಭಾವಿಸಿದ್ದಾರೆ ಅದು ಕೂಡ ನನಗೆ ಅನ್ನ ಕೊಟ್ಟ ಊರು ಸಂಶೋಧನೆ ಗೆ ಇಂಬು ಕೊಟ್ಟ ಊರು ನನಗೊಂದು ಅಸ್ತಿತ್ವ ತಂದು ಕೊಟ್ಟ ಬೀಡು ಎಂಬ ಕೃತಜ್ಞತೆ ನಮಗಿದೆಯಾದರೂ ನಾನು ಅಲ್ಲಿಯವಳಲ್ಲ  ಕೆಲವರು ಡೆಲ್ಲಿ,ಮುಂಬೈ ಮಧುರೆ ಚೆನೈ ಯಲ್ಲಿ ಓದಿದ ಕೆಲಸ ಮಾಡಿ ಕಾರಣಕ್ಕೆ ಹೊರನಾಡಿವರು ಎಂದು ಕರೆಯಲ್ಪಡುತ್ತಾರೆ ಹಾಗೆ ನೋಡಿದರೆ   ನಾನು ಅಂದ್ರ ಪ್ರದೇಶದ ಕುಮಪ್ಪಂನಲ್ಲಿರುವ ದ್ರಾವಿಡ ವಿಶ್ವ ವಿದ್ಯಾಲಯದ ತುಳು ವಿಭಾಗದ ಮೊದಲ ವಿದ್ಯಾರ್ಥಿನಿ ನಾನು ಎರಡನೇಯ ಡಾಕ್ಟರೇಟ್ ಪಡೆದದ್ದು ಅಲ್ಲಿಂದಲೇ ಆ ಬಗ್ಗೆ ಯೂ ನನಗೆ ಕೃತಜ್ಞತೆ ಇದೆಯೇ ಹೊರತು ನಾನು ಹೊರನಾಡಿನವಳು ಎಂದು ಕರೆಸಿಕೊಳ್ಳಲಾರೆ  ಹಾಗಾಗಿಯೇ ನಾನು ತುಳುನಾಡಿನವಳು ಎಂದು ಹೆಮ್ಮೆಯಿಂದ ಹೇಳುವೆ
ಇದೆಲ್ಲಾ ಯಾಕೆ ನೆನಪಾಯಿತೆಂದರೆ ನಿನ್ನೆವೇದಿಕೆಯಲ್ಲಿ  ವಸಂತಕುಮಾರ್ ಪೆರ್ಲ ಅವರು ಗಡಿನಾಡಿನ ಆರುನೂರು ಬರಹಗಾರರ ಒಂದು ಪಟ್ಟಿಯನ್ನು ಮಾಡಿದ್ದು ಪ್ರಕಟವಾಗಿರುವ ಬಗ್ಗೆ ತಿಳಿಸಿದರು ಈ ಪಟ್ಟಿಯಲ್ಲಿ ನಾನು ಸೇರದೆ ಇದ್ದ ಬಗ್ಗೆ ನನಗೆ ಈ ಹಿಂದೆಯೇ ಮಾಹಿತಿ ಇತ್ತು(ಇದು ಅವರು ಮಾಡಿದ ಪಟ್ಟಿಯಲ್ಲ, ವಿವರಗಳು ನನಗೆ ಮರೆತು ಹೋಗಿವೆ)ಜೊತೆಗೆ ತುಳುನಾಡ ಬರಹಗಾರರ ಒಂದು ಪಟ್ಟಿ ಕೂಡ ಪ್ರಕಟವಾಗಿದ್ದು ಅದರಲ್ಲೂ ನಾನು ಸೇರಿಲ್ಲವಂತೆ
ಹಾಗಾಗಿ ನಾನೆಲ್ಲಿಯವಳು ಎಂದು ಕಾಡುತ್ತಿದ್ದ ಜಿಜ್ಞಾಸೆ ಇಂದು ಮತ್ತೆ ಕಾಡುತ್ತಿದೆ  ಹೆಚ್ಚಿನ  ಓದಿಗಾಗಿ http://shikshanaloka.blogspot.in/2017/05/blog-post.html?m=1
(ಚಿತ್ರ -ತುಳುನಾಡಿನಲ್ಲಿ ದೈವವಾಗಿ ಆರಾಧಿಸಲ್ಪಡುವ ಕೆಳದಿ ಅರಸಿ ಚನ್ನಮ್ಮ ನ ಮಹಾ ಮಾಂಡಳಿಕನಾಗಿದ್ದ  ಕಾಸರಗೋಡು ತಿಮ್ಮಣ್ಣ ನಾಯಕನ ಕುರಿತಾದ ಕ್ಷೇತ್ರ ಕಾರ್ಯದ ಅಧ್ಯಯನ ದಲ್ಲಿ ಕುಂಬಳೆ ಕೋಟೆ ಗೆ ಬಂದಾಗಿನದು ) ಲಕ್ಷ್ಮೀ ಜಿ ಪ್ರಸಾದ

ನಾನ್ಯಾವ ನಾಡಿನವಳು ?
ಹೀಗೊಂದು ಜಿಜ್ಞಾಸೆ ಸದಾ ನನ್ನನ್ನು ಕಾಡುತ್ತಾ ಇರುತ್ತದೆ .ನನ್ನ ಊರು ಯಾವುದು ಎಂದು ಕೇಳಿದಾಗ ನಾನು ಹೇಳುವುದು

" ನನ್ನ ತಂದೆ ಮನೆ ಕಾಸರಗೋಡು ಜಿಲ್ಲೆಯ  ಕೋಳ್ಯೂರು ಎಂಬ ಪುಟ್ಟ ಗ್ರಾಮದ ವಾರಣಾಸಿ ಮನೆ ಬಗ್ಗೆ "

ಕೇಳುವವರಲ್ಲಿ ನನ್ನ ಗಂಡನ ಮನೆ ಯಾವುದು ಎಂಬ ಕುತೂಹಲ ಕಂಡರೆ ನಾನು ಅದನ್ನು ನೇರವಾಗಿ ಹೇಳುತ್ತೇನೆ ನನ್ನ ಗಂಡ ಪ್ರಸಾದ್ ಮನೆ ಬಂಟ್ವಾಳ ತಾಲೂಕಿನ  ಕೋಡಪದವಿನ ಸರವು ಎಂಬ ಮನೆ ಇದು ನಮ್ಮ ಕುಟುಂಬದ ಮನೆಯ ಹೆಸರಲ್ಲ ನನ್ನ ಪತಿಯ ಅಜ್ಜ ಎಲ್ಲಿಂದಲೋ ಬಂದು ಕೋಡಪದವು ಸಮೀಪದ ಪಂಜಿಗದ್ದೆ ಎಂಬ ಪರಿಸರದ ಒಂದಷ್ಟು ಜಾಗ ಖರೀದಿಸಿ ನೆಲೆಯಾದವರು ಅವರು ತೀರ ಸಣ್ಣ ವಯಸ್ಸಿನಲ್ಲಿ ತೀರಿ ಹೋದ ಕಾರಣ ಅವರ ಮಕ್ಕಳಿಗೆ ಅವರ ಮೂಲ ಯಾವುದು ಎಂದು ತಿಳಿದಿಲ್ಲ ಮನೆದೇವರು ಕೂಡ ಯಾರೆಂದು ತಿಳಿದಿಲ್ಲ ಅಲ್ಲಿಂದ ಆಸ್ತಿ ಭಾಗವಾಗಿ ಅಲ್ಲಿಂದ ಎರಡು ಕಿಮೀ ದೂರದ ಸರವು ಎಂಬ ಪ್ರದೇಶದಲ್ಲಿ ಸ್ವಲ್ಪ ಜಾಗ ಪಡೆದು ನೆಲೆಯಾದವರು ನನ್ನ ಪ್ರಸಾದ ತಂದೆಯವರು ನಾನು ಮದುವೆಯಾಗಿ ಬಂದದ್ದು ಇದೇ ಮನೆಗೆ ಬಂದದ್ದು ಮಾತ್ರ ಅಲ್ಲಿ ಬದುಕಿದ್ದು ಬೆರಳೆಣಿಕೆಯಷ್ಟು ದಿನಗಳು
ಇಪ್ಪತ್ತೈದು ವರ್ಷಗಳ ಹಿಂದೆ ಮದುವೆಯಾದ ಮೇಲೆ ಓದಿಸುವ ಮನಸ್ಥಿತಿ ನಮ್ಮ ಸಮಾಜದಲ್ಲಿ ಇರಲಿಲ್ಲ ನಮ್ಮ ಕುಟುಂಬದ ಮಂದಿಯೂ ಅದಕ್ಕೆ ಹೊರತಾಗಿ ಇರಲಿಲ್ಲ ಇದೇ ಕಾರಣಕ್ಕೆ ನಾನು ಪ್ರಸಾದ ಒಂದಿಗೆ ಮನೆ ಬಿಟ್ಟು ಹೊರ ನಡೆದು ನಾನು ಓದುವ ಕಟೀಲು ಕಾಲೇಜು ಬಳಿ ಮನೆ ಮಾಡಿ ಸಂಸಾರ ಪ್ರಾರಂಭಿಸಿದೆವು ಅನೇಕ ಏಳು ಬೀಳುಗಳನ್ನೂ ಕಂಡೆವು ಅಲ್ಲಿದ್ದದ್ದು ಒಂದೇ ವರುಷ ಅಲ್ಲಿಂದ ಮತ್ತೆ ಮಂಗಳೂರಿನಲ್ಲಿ ಹತ್ತು ವರ್ಷ ಬದುಕಿದೆವು ಹೊಟ್ಟೆಪಾಡಿಗಾಗಿ ಉದ್ಯೋಗ ಅರಸುತ್ತಾ ಪ್ರಸಾದ ಬೆಂಗಳೂರಿಗೆ ಸಪ್ಟೆಂಬರ್ 2004 ರಲ್ಲಿ ಬಂದಾಗ ನಾನು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸಂಸ್ಕೃತ ಉಪನ್ಯಾಸಕಿಯಾಗಿದ್ದೆ
ಶೈಕ್ಷಣಿಕ ವರ್ಷದ ಮಡುವೆ ಕೆಲಸ ಬಿಡುವುದು ಸರಿಯಲ್ಲ ವೆಂದು ಮಾರ್ಚ್ 2005 ರ ತನಕ ಕೆಲಸದಲ್ಲಿ ಮುಂದುವರಿದು ಪ್ರಥಮ ಪಿಯುಸಿ ಮೌಲ್ಯ ಮಾಪನ ಮಾಡಿ‌ಕೊಟ್ಟು ಕಾಲೇಜು  ಮ್ಯಾಗಜೀನ್ ಕೆಲಸವನ್ನು ಮುಗಿಸಿಕೊಟ್ಟು ಗೌರವದಿಂದ ಅಲ್ಲಿಂದ ರಿಲೀವ್ ಆಗಿ ಬೆಂಗಳೂರಿಗೆ ಬಂದೆ ಬಂದ ಮರುದಿನವೇ ಎಪಿಎಸ್ ಕಾಲೇಜಿನ ಕನ್ನಡ ಉಪನ್ಯಾಸಕ ಹುದ್ದೆಗೆ walk in interview ಇದ್ದದ್ದು ಗೊತ್ತಾಗಿ ಮಗನನ್ನು ಗಾಡಿಯಲ್ಲಿ ಕೂರಿಸಕೊಂಡು ವಿಳಾಸ ಹುಡುಕುತ್ತಾ ಎನ್ ಆರ್ ಕಾಲೋನಿಗೆ ತಡವಾಗಿ ಬಂದು ಕೊನೆಯ ಅಭ್ಯರ್ಥಿಯಾಗಿ ಸಂದರ್ಶನ ಎದುರಿಸಿ ಆಯ್ಕೆಯಾದೆ
ಬನಶಂಕರಿ ತೃತೀಯ ಬಡಾವಣೆಯಲ್ಲಿ ಬಾಡಿಗೆ ಮನೆ ಹಿಡಿದಿದ್ದೆವು
ಅಲ್ಲಿಂದ 2008 ರಲ್ಲಿ ಈಗಿನ  ಅಂಗೈ ಅಗಲದ ನಮ್ಮ ಪುಟ್ಟದಾದ ಸ್ವಂತ ಮನೆಗೆ ಬಂದೆವು ಮತ್ತೆ 2009 ರಲ್ಲಿ ಬೆಳ್ಳಾರೆಗೆ ಉಪನ್ಯಾಸಕಿಯಾಗಿ ಹೋದೆ 2015 ರಲ್ಲಿ ಮತ್ತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಕಾಲೇಜಿಗೆ ವರ್ಗಾವಣೆ ಪಡೆದು ಬಂದೆ
ಹಾಗಾಗಿ ನಮಗೆ ನಾವೆಲ್ಲಿಯವರುಎಂದು ಕೇಳಿದರೆ ಒಂದಿನಿತು ತಬ್ಬಿಬ್ಬಾಗುತ್ತೇನೆ ಕೊನೆಯಲ್ಲಿ ನಾನು "ತುಳುನಾಡಿನ ವರು "  ಎನ್ನುತ್ತೇನೆ
ಯಾಕೆಂದರೆ ನನ್ನ ಮಾತೃಭಾಷೆ ಹವ್ಯಕ ಕನ್ನಡ ವೃತ್ತಿ ಕನ್ನಡ ಉಪನ್ಯಾಸಕಿಯಾಗಿ, ಆದರೂ ನನ್ನನ್ನು ಸೆಳೆದದ್ದು ತುಳು ಸಂಸ್ಕೃತಿ ಕೈ ಹಿಡಿದು ಸಲಹಿದವಳು ತುಳುವಪ್ಪೆ
ಇಷ್ಟಾಗಿಯೂ ಇತ್ತೀಚೆಗೆ ಕನ್ನಡ ಜಾನಪದ ಪರಿಷತ್ ಮೈಸೂರು ವಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ನನ್ನನ್ನು ಜಾನಪದ ಪ್ರಪಂಚ ಪ್ರಶಸ್ತಿ ಗೆ ಆಯ್ಕೆಮಾಡಿದಾಗ ಅವರು ಕಾಸರಗೋಡಿನವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಅವರನ್ನು ಆಯ್ಕೆ ಮಾಡಿದ್ದು ಸರಿಯಲ್ಲ ಎಂದು ಆಕ್ಷೇಪ ಮಾಡಿದ್ದು ತಿಳಿಯಿತು ತಕ್ಷಣವೇ ನಾನು ದಕ್ಷಿಣ ಕನ್ನಡ ಜಿಲ್ಲೆಯ  ಬಂಟ್ವಾಳ ತಾಲೂಕಿನ  ಮದುವೆಯಾಗಿ ಬಂದ ಮನೆಯ ನನ್ನ ಪತಿ ಪ್ರಸಾದ ಮನೆ ವಿಳಾಸ ಮತ್ತು ಇನ್ನೂ ಅಲ್ಲಿಯೇ ಓಟಿನ ಹಕ್ಕು ಇರುವ ಬಗ್ಗೆ ವೋಟರ್ಸ ಕಾರ್ಡಿನ ದಾಖಲೆ ಒದಗಿಸಿ ದಾಖಲೆ ಪ್ರಕಾರ ನಾನು ದಕ್ಷಿಣ ಕನ್ನಡ ಜಿಲ್ಲೆಯ ವಳು ಆದರೆ ಮಾನಸಿಕವಾಗಿ ನಾನು ಅಲ್ಲಿಯವಳಲ್ಲ ಅವರೆಂದೂ ನನ್ನನ್ನು ಸೊಸೆಯಾಗಿ ಸ್ವೀಕರಿಸಲಿಲ್ಲ ಅದನ್ನು ತಪ್ಪು ಎಂದು ದೂಷಿಸಲಾರೆ .ಸೆರಗು ತಲೆಗೆ ಹೊದ್ದು ಬೆಳಗ್ಗೆ ಎದ್ದು ಹೊಸಿಲಿ ಬರೆದು ಮನೆಯೊಳಗೆ ಗೃಹಿಣಿಯಾಗಿರುವ ಸೊಸೆಯನ್ನು ನಿರೀಕ್ಷಿಸಿದ ಸಂಪ್ರದಾಯ ವಾದಿ ಬ್ರಾಹ್ಮಣ ಕುಟುಂಬದ ಜನ ನಡು ರಾತ್ರಿ ನಢಯುವ ಭೂತಕೋಲವನ್ನು ರೆಕಾರ್ಡ್  ಕ್ಯಾಮರಾ ಹಿಡಿದುಕೊಂಡು ಜಾತಿ ನೀತಿ ಧರ್ಮದ ಗಡಿ ದಾಟಿ ಸಾಗುವ ನನ್ನಂಥ ಟಪೋರಿಯನ್ನು ಸೊಸೆಯಾಗಿ ಹೇಗೆ ತಾನೆ ಸ್ವೀಕರಿಸಿಯಾರು ಅಲ್ಲವೇ ?
ಬೆಂಗಳೂರು ಅನ್ನವನ್ನು ಕೊಟ್ಟ ಊರು ಎಂಬ ಕೃತಜ್ಞತೆ ಇರುವುದಾದರೂ ನಾನು ಬೆಂಗಳೂರಿನವಳು ಎಂಬ ಭಾವ ನನಗಿನ್ನೂ ಬಂದಿಲ್ಲ ಬಾರದೆ ಇರುವುದನ್ನು ಹೇಗೆ ಒಪ್ಪಲಿ ?
ಹಾಗಾಗಿ ನಾನು ಎಲ್ಲಿಯವಳು ಕೇಳಿದರೆ ಇಂದಿಗೂ ಹೇಳುವುದು ನಾನು ತುಳುನಾಡಿನವಳು ಗಡಿನಾಡಿನವಳು ಎಂದು .ಬೆಳ್ಳಾರೆಯಲ್ಲಿ ನಾಲ್ಕು ವರ್ಷಗಳ ಕಾಲ ಇದ್ದ ಕಾರಣ ನಾನು ಅಲ್ಲಿಯವಳೆಂದು ಅನೇಕರು ಭಾವಿಸಿದ್ದಾರೆ ಅದು ಕೂಡ ನನಗೆ ಅನ್ನ ಕೊಟ್ಟ ಊರು ಸಂಶೋಧನೆ ಗೆ ಇಂಬು ಕೊಟ್ಟ ಊರು ನನಗೊಂದು ಅಸ್ತಿತ್ವ ತಂದು ಕೊಟ್ಟ ಬೀಡು ಎಂಬ ಕೃತಜ್ಞತೆ ನಮಗಿದೆಯಾದರೂ ನಾನು ಅಲ್ಲಿಯವಳಲ್ಲ  ಕೆಲವರು ಡೆಲ್ಲಿ,ಮುಂಬೈ ಮಧುರೆ ಚೆನೈ ಯಲ್ಲಿ ಓದಿದ ಕೆಲಸ ಮಾಡಿ ಕಾರಣಕ್ಕೆ ಹೊರನಾಡಿವರು ಎಂದು ಕರೆಯಲ್ಪಡುತ್ತಾರೆ ಹಾಗೆ ನೋಡಿದರೆ   ನಾನು ಅಂದ್ರ ಪ್ರದೇಶದ ಕುಮಪ್ಪಂನಲ್ಲಿರುವ ದ್ರಾವಿಡ ವಿಶ್ವ ವಿದ್ಯಾಲಯದ ತುಳು ವಿಭಾಗದ ಮೊದಲ ವಿದ್ಯಾರ್ಥಿನಿ ನಾನು ಎರಡನೇಯ ಡಾಕ್ಟರೇಟ್ ಪಡೆದದ್ದು ಅಲ್ಲಿಂದಲೇ ಆ ಬಗ್ಗೆ ಯೂ ನನಗೆ ಕೃತಜ್ಞತೆ ಇದೆಯೇ ಹೊರತು ನಾನು ಹೊರನಾಡಿನವಳು ಎಂದು ಕರೆಸಿಕೊಳ್ಳಲಾರೆ  ಹಾಗಾಗಿಯೇ ನಾನು ತುಳುನಾಡಿನವಳು ಎಂದು ಹೆಮ್ಮೆಯಿಂದ ಹೇಳುವೆ
ಇದೆಲ್ಲಾ ಯಾಕೆ ನೆನಪಾಯಿತೆಂದರೆ ನಿನ್ನೆವೇದಿಕೆಯಲ್ಲಿ  ವಸಂತಕುಮಾರ್ ಪೆರ್ಲ ಅವರು ಗಡಿನಾಡಿನ ಆರುನೂರು ಬರಹಗಾರರ ಒಂದು ಪಟ್ಟಿಯನ್ನು ಮಾಡಿದ್ದು ಪ್ರಕಟವಾಗಿರುವ ಬಗ್ಗೆ ತಿಳಿಸಿದರು ಈ ಪಟ್ಟಿಯಲ್ಲಿ ನಾನು ಸೇರದೆ ಇದ್ದ ಬಗ್ಗೆ ನನಗೆ ಈ ಹಿಂದೆಯೇ ಮಾಹಿತಿ ಇತ್ತು(ಇದು ಅವರು ಮಾಡಿದ ಪಟ್ಟಿಯಲ್ಲ, ವಿವರಗಳು ನನಗೆ ಮರೆತು ಹೋಗಿವೆ)ಜೊತೆಗೆ ತುಳುನಾಡ ಬರಹಗಾರರ ಒಂದು ಪಟ್ಟಿ ಕೂಡ ಪ್ರಕಟವಾಗಿದ್ದು ಅದರಲ್ಲೂ ನಾನು ಸೇರಿಲ್ಲವಂತೆ
ಹಾಗಾಗಿ ನಾನೆಲ್ಲಿಯವಳು ಎಂದು ಕಾಡುತ್ತಿದ್ದ ಜಿಜ್ಞಾಸೆ ಇಂದು ಮತ್ತೆ ಕಾಡುತ್ತಿದೆ  ಹೆಚ್ಚಿನ  ಓದಿಗಾಗಿ http://shikshanaloka.blogspot.in/2017/05/blog-post.html?m=1
(ಚಿತ್ರ -ತುಳುನಾಡಿನಲ್ಲಿ ದೈವವಾಗಿ ಆರಾಧಿಸಲ್ಪಡುವ ಕೆಳದಿ ಅರಸಿ ಚನ್ನಮ್ಮ ನ ಮಹಾ ಮಾಂಡಳಿಕನಾಗಿದ್ದ  ಕಾಸರಗೋಡು ತಿಮ್ಮಣ್ಣ ನಾಯಕನ ಕುರಿತಾದ ಕ್ಷೇತ್ರ ಕಾರ್ಯದ ಅಧ್ಯಯನ ದಲ್ಲಿ ಕುಂಬಳೆ ಕೋಟೆ ಗೆ ಬಂದಾಗಿನದು )

Friday 8 June 2018

ಬದುಕ ಬಂಡಿಯಲಿ 20 - ಇವರಲ್ಲೊಬ್ಬಳು ಐಎಎಸ್ ಮಾಡಿ ನನ್ನ ಮೇಲಧಿಕಾರಿಯಾಗಿ ಬಂದರೇ..



ಇವರಲ್ಲೊಬ್ಬಳು ಐಎಎಸ್ ಮಾಡಿ ನನ್ನ ಮೇಲಧಿಕಾರಿಯಾಗಿ ಬಂದರೇ..© ಡಾ.ಲಕ್ಷ್ಮೀ ಜಿ ಪ್ರಸಾದ

ಹೌದು ಒಂದೊಮ್ಮೆ ನನ್ನ ಆಶಯ ಈಡೇರಿದರೆ ಆ ಕ್ಷಣದ ನನ್ನ ಸಂತಸವನ್ನು ಅಳೆಯಲು ಯಾವ ಮಾಪಕವೂ ಇರಲಾರದು..
ನಮ್ಮ ಕಾಲೇಜಿನಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಾ ಇದೆ.ನಮಗೆ ಮೇ ಎರಡರಿಂದ ಕಾಲೇಜು ಶುರುವಾಗಿದ್ದು ಕಾಲೇಜಿಗೆ ಬಂದಾಗ ಚುರುಕಾದ ಈ ಮಕ್ಕಳನ್ನು ನಮ್ಮ ಕಾಲೇಜು ವಠಾರದಲ್ಲಿ ನೋಡಿದೆ.
ಕಟ್ಟಡದ ಗಾರೆ ಕೆಲಸಕ್ಕೆ ಬಂದ ಕಾರ್ಮಿಕರ ಮಕ್ಖಳು ಇವರು.ದೊಡ್ಡ ಮಕ್ಕಳು ಚಿಕ್ಕ ಮಕ್ಕಳನ್ನು ನೋಡಿಕೊಳ್ಳುತ್ತಾ ಇದ್ದರು.ಶಾಲೆ ಶುರುವಾದಾಗ ಇವರು ಶಾಲೆಗೆ ಹೋಗಬಹುದು ಎಂದು ಭಾವಿಸಿದ್ದೆ.ನಾವು ಉಪನ್ಯಾಸಕರು ಮುದ್ದಾದ ಈ ಮಕ್ಕಳಿಗೆ ನಾವು ತಂದಿದ್ದ ತಿಂಡಿ ತಿನಸು ಹಣ್ಣು ಬಿಸ್ಕೆಟ್ ಸ್ವಲ್ಪ ಭಾಗ ಕೊಡುತ್ತಾ ಇದ್ದೆವು.ದೊಡ್ಡ ಹುಡುಗಿಯರು ಸಣ್ಣವರಿಗೆ ತಿನ್ನಿಸಿ ತಾವೂ ತಿಂದು ಖುಷಿ ಪಡುವುದನ್ನು ನೋಡುವುದೇ ನಮಗೆ ಸಂಭ್ರಮ.ದೊಡ್ಡ ಮಕ್ಕಳೆಂದರೆ ಅಲ್ಲಿರುವವರಲ್ಲಿ ದೊಡ್ಡವರು ಅಷ್ಟೇ, ಇನ್ನೂ ಹತ್ತು ಹನ್ನೆರಡು ವರ್ಷದ ಪೋರಿಯರು ಇವರು.
ಮೇ ಇಪ್ಪತ್ತನಾಲ್ಕರಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭಗೊಂಡವು.
ಈ ಮಕ್ಕಳು ಶಾಲೆಗೆ ಹೋಗದೆ ಅಲ್ಲಿಯೇ ಚಿಕ್ಕವರನ್ನು ನೋಡಿಕೊಂಡು ಆಟವಾಡಿಕೊಂಡು ಇದ್ದರು.ಆಗ ನಾನು ಮಕ್ಕಳಲ್ಲಿ ನೀವು ಶಾಲೆಗೆ ಹೋಗುವುದಿಲ್ಲವೇ ಎಂದು ವಿಚಾರಿಸಿದೆ.ತಂಗಿಯ ರನ್ನು ( ಚಿಕ್ಕ ಮಕ್ಕಳು) ನೋಡಿಕೊಳ್ಳಲು ಯಾರೂ ಇಲ್ಲ ಹಾಗಾಗಿ ಶಾಲೆಗೆ ಹೋಗುತ್ತಾ ಇಲ್ಲ ಎಂದು ತಿಳಿಸಿದರು.ಇವರು ಕಳೆದ ವರ್ಷದ ತನಕ ದೂರದ ಕೊಪ್ಪಳದ ಸರ್ಕಾರಿ ಶಾಲೆಯಲ್ಲಿ ಓದಿದ್ದು ದೊಡ್ಡ ಹುಡುಗಿಯರು ಆರನೇ ತರಗತಿ ಪಾಸ್ ಆಗಿದ್ದರು. ಚಿಕ್ಕವಳು ಒಂದನೇ ತರಗತಿ ಓದಿದ್ದಳು.ಇನ್ನಿಬ್ಬರು ಒಂದೆರಡು ವರ್ಷದ ಕೈಗೂಸುಗಳು.
ಚಿಕ್ಕವರನ್ನು ನೋಡಿಕೊಳ್ಳುವುದಕ್ಕಾಗಿ ಇವರ ಓದು ನಿಂತರೆ ಹೇಗೆ ? ಏನು ಮಾಡುವುದೆಂದು ಯೋಚಿಸಿದೆ‌.ನಮ್ಮ ಕಾಲೆಜಿಗೆ ಸೇರಿದಂತೆ ಹೈಸ್ಕೂಲ್ ಮತ್ತು ಬಿ ಆರ್ ಸಿ ಕಛೇರಿ ಇದೆ. ನಾನು ಮತ್ತು ನಮ್ಮ ಕಾಲೇಜು ಉಪನ್ಯಾಸಕರಾದ ಶ್ರೀಶ ಮೇಡಂ ಮತ್ತು ಅನಿತಾ ಮೇಡಂ   ಅಲ್ಲಿ ಹೋಗಿ ಬಿಆರ್ ಸಿ ಅಧಿಕಾರಿಗಳಾದ ನರಸಿಂಹಯ್ಯ ಅವರಿಗೆ ಈ ಬಗ್ಗೆ ತಿಳಿಸಿ ಈ ಮಕ್ಕಳ ಓದಿಗೆ ಏನಾದರೂ ವ್ಯವಸ್ಥೆ ಮಾಡುವಂತೆ ಕೋರಿದೆವು.ಅವರು ತಕ್ಷಣವೇ ಅಲ್ಲಿನ ಶಿಕ್ಷಕರಾದ ಲೋಕೇಶ್ ಅವರನ್ನು ಕಳುಹಿಸಿಕೊಟ್ಟರು ‌.ಅವರು  ಬಂದು ಮಕ್ಕಳಲ್ಲಿ ಮಾತನಾಡಿ ಅಲ್ಲಿಯೇ ಕೆಲಸ ಮಾಡುತ್ತಿದ್ದ ಅವರ ಹೆತ್ತವರಿಗೆ ತಿಳುವಳಿಕೆ ನೀಡಿದರು‌.ಈ ಮಕ್ಕಳ ಹೆತ್ತವರು ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಲು ಒಪ್ಪಿದ್ದಾರೆ.ಚಿಕ್ಕ ಮಕ್ಕಳನ್ನು ಅಂಗನವಾಡಿಗೆ ಸೇರಿಸುವಂತೆ ಲೋಕೇಶ್ ಅವರು ತಿಳಿಸಿದರು.
ಈ ಮಕ್ಕಳಲ್ಲಿ ಎಲ್ಲರೂ ಅಥವಾ ಕೊನೆ ಪಕ್ಷ ಒಬ್ಬರು ಓದಿ ಮುಂದೆ  ಐಎಎಸ್ ಮಾಡಿ ನಮ್ಮ ಮೇಲಧಿಕಾರಿಯಾಗಿ ಬಂದರೆ ಹೇಗಾಗಬಹುದು ಎಂದು ಊಹಿಸಿ ಸಂಭ್ರಮಿಸಿದೆ‌.ಈ ಮಕ್ಕಳು ನಮ್ಮ ಆಶಯದಂತೆ ಓದಿ ಮುಂದೆ ಐಎಎಸ್ ಐಪಿಎಸ್ ಅಧಿಕಾರಿ ಗಳಾಗಲಿ ಎಂದು ಹಾರೈಸುವೆ

Wednesday 6 June 2018

ಬದುಕ ಬಂಡಿಯಲಿ 19- ಹೀಗೊಂದು ಮೋಸ ಪುರಾಣ © ಡಾ.ಲಕ್ಷ್ಮೀ ಜಿ ಪ್ರಸಾದ

ಹೀಗೊಂದು ಮೋಸ ಪುರಾಣ (c)ಡಾ.ಲಕ್ಷ್ಮೀ ಜಿ ಪ್ರಸಾದ


ವಿಷ್ಣು ಪುರಾಣ ಶಿವ ಪುರಾಣ ಗರುಡ ಪುರಾಣ ಹೆಸರು ಕೇಳಿದ್ದೀರಿ ಇದ್ಯಾವುದು ಮೋಸ ಪುರಾಣ ಅಂತ ತಿಳಿಯಬೇಕೆ ?ಹಾಗಾದರೆ ಸಾವಕಾಶ ಓದಿ ಇದನ್ನು

ಸಾಮಾನ್ಯವಾಗಿ ನಾನು ಯಾವುದೇ ಪ್ರಶಸ್ತಿ ಗಾಗಲಿ, ಪುಸ್ತಕ ಬಹುಮಾನಕ್ಕಾಗಲಿ ಫೆಲೋ ಶಿಪ್ ಗಾಗಲೀ ಅರ್ಜಿ ಸಲ್ಲಿಸುವುದಿಲ್ಲ .ಎರಡು ದಿನ ಮೊದಲು ಕನ್ನಡ ಜಾನಪದ ಅಕಾಡೆಮಿ ಕೆಲವು ವಿಷಯಗಳ ಮೇಲೆ  ಅಧ್ಯಯನ ಮಾಡಲು ಫೆಲೋ ಶಿಪ್ ಗೆ ಅರ್ಜಿ ಆಹ್ವಾನಿಸಿತ್ತು .ಅದರಲ್ಲಿ ನನ್ನ ಆಸಕ್ತಿಯ ಒಂದೆರಡು ವಿಷಯಗಳೂ ಇದ್ದವು .ಆ ದಿನ ಅದನ್ನು ಓದಿದಾಗ ಅರ್ಜಿ ಸಲ್ಲಿಸಬೇಕು ಎಂದು ಕೊಂಡೆ .ಹಾಗೆ ಮಗನಲ್ಲಿ ಈ ಬಾರಿ ನಾನು ಫೆಲೋಶಿಪ್ ಗೆ ಅರ್ಜಿ ಸಲ್ಲಿಸುತ್ತೇನೆ ಎಂದು ಹೇಳಿದ್ದೆ
ದಿನ ಪಂಡು ಕಳೆದಾಗ .ಮತ್ಯಾಕೋ ಬೇಡ ಅನಿಸಿತ್ತು ಇಷ್ಟರ ತನಕ ನಾನು ಯಾವುದೇ ಸಂಘ ಸಂಸ್ಥೆ  ಅಕಾಡೆಮಿಗಳ  ಅನುದಾನ ಪಡೆಯದೇ ಸ್ವಂತ ಅಧ್ಯಯನ ಮಾಡಿದ್ದೇನೆ ಈಗ ಇನ್ನು ಇವೆಲ್ಲ ಕಿರಿ ಕಿರಿ ಬೇಡ ಎನ್ನಿಸಿತು ..ಹಾಗಾಗಿ ಅರ್ಜಿ ಸಲ್ಲಿಸುವ ವಿಚಾರ ಬಿಟ್ಟು ಬಿಟ್ಟಿದ್ದೆ ..
ನಿನ್ನೆ ಏನೋ ಮಾತಾಡುವಾಗ ಮಗ ಹೇಳಿದ "ಅಮ್ಮ ಈಗಾಗಲೇ ಅಲ್ಲಿ ಕೊಟ್ಟ ವಿಷಯಗಳ ಬಗ್ಗೆ ಸ್ಟಡಿ ಮಾಡಿದ್ದೀಯಲ್ಲ .ಇನ್ನು ಒಂದಷ್ಟು ಮಾಡಿ ಎಲ್ಲ ಒಟ್ಟಿಗೆ ಸೇರಿಸಿ ಬರೆದು ಸಲ್ಲಿಸಿದರೆ ಆಯಿತು ಅಲ್ವ ?ನೀನು ಯಾಕೆ ಫೆಲೋ ಶಿಪ್ ಸಿಗುತ್ತಾ ಅಂತ ಯತ್ನಿಸಬಾರದು ,ಒಂದು ಸಲ ಅರ್ಜಿ ಸಲ್ಲಿಸಿ ನೋಡು ಸಿಗುತ್ತಾ ಅಂತ ಹೇಳಿದ ..
ಹೌದಲ್ಲ ?ಅನಿಸಿತು ನನಗೆ .
ದಿನ ದಿನ ಕಳೆದ ಹಾಗೆ ನಾನು ಚಿಕ್ಕವಳಾಗುದಿಲ್ಲ ,ಮುಂದೆ ವಯಸ್ಸಾದಂತೆ  ಮೊದಲಿನಂತೆ ಅಧ್ಯಯನ ಮಾಡಲು ಸಾಧ್ಯವಾಗುತ್ತೋ ಇಲ್ಲವೋ ? ಈಗ ಒಂದು ಗುರಿ ಇದ್ದರೆ ಹೇಗೋ ಸಂಶೋಧನೆ ಮಾಡಿ ಬಿಡಬಹುದು ಜೊತೆಗೆ ಫೆಲೋ ಶಿಪ್ ಇರುವ ಕಾರಣ ಅಧ್ಯಯನಕ್ಕೆ ಆರ್ಥಿಕ ಹೊರೆ ಅಂತು ಬೀಳುದಿಲ್ಲ ..
ಹಾಗೆ ಆಲೋಚಿಸಿ ಇಂದು ಕನ್ನಡ ಜಾನಪದ ಅಕಾಡಮಿ ಗೆ ಹೋಗಿ ಅರ್ಜಿ ಸಲ್ಲಿಸಿ ಬಂದೆ .ಅಲ್ಲಿಗೆ ಹೋಗುವಾಗ ತುಸು ಅಳುಕಿತ್ತು ಅಲ್ಲಿನ ರಿಜಿಸ್ತ್ರರ್ ಹೇಗೋ ಏನೋ ಎಂದು ,
ಆದರೆ ಅಲ್ಲಿನ ರಿಜಿಸ್ಟ್ರಾರ್ ಅವರನ್ನು ಭೇಟಿ ಮಾಡಿ ಮಾತಾಡಿದ ಮೇಲೆ ನನಗೆ ಮನಸು ನಿರಾಳ  ಆಯಿತು ,ಬಹಳ ಸಜ್ಜನಿಕೆಯಿಂದ ಮಾತಾಡಿದರು .ನನ್ನ ಆರ್ಜಿ ಆಯ್ಕೆಯಾಗಿ ಫೆಲೋ ಶಿಪ್ ಸಿಗುತ್ತೋ ಇಲ್ಲವೋ ಅದು ಬೇರೆ ವಿಚಾರ ಆದರೆ ಅವರ ಸರಳತೆ ಸಹೃದಯ ಮಾತು ಇಷ್ಟವಾಯಿತು

ಅಲ್ಲಿ ಅರ್ಜಿ ಸಲ್ಲಿಸಿ ಬರುವಾಗ ನನಗೆ ತುಳು ಅಕಾಡೆಮಿ ಫೆಲೋಶಿಪ್  ಪುರಾಣ ನೆನಪಾಯಿತು

ಸುಮಾರು 5- 6 ವರ್ಷಗಳ ಹಿಂದೆ ತುಳು ಅಕಾಡೆಮಿ ತುಳು ಅಧ್ಯಯನ ಆಸಕ್ತರಿಂದ ಫೆಲೋ ಶಿಪ್ ಗಾಗಿ ಅರ್ಜಿ ಆಹ್ವಾನಿಸಿತ್ತು ,ಪತ್ರಿಕೆಯಲ್ಲಿ ಈ ಬಗ್ಗೆ ಓದಿ ನಾನು ತುಳು ಅಕಾಡೆಮಿ   ರಿಜಿಸ್ಟ್ರಾರ್ ಗೆ ಫೋನ್ ಮಾಡಿದೆ ,ಈ ಬಗ್ಗೆ ಮಾಹಿತಿ ಕೇಳಿದೆ .ಸರಕಾರಿ ಉದ್ಯೋಗಿಗಳೂ ಅರ್ಜಿ ಸಲ್ಲಿಸಬಹುದೇ? ಎಂದು ಕೇಳಿದೆ .ಆಗ ಅವರು ಅಕಾಡೆಮಿ ಅಧ್ಯಕ್ಷರಾದ .... ಅವರಿಗೆ ಫೋನ್ ಕೊಟ್ಟರು ,ಅವರು ಸರಕಾರಿ ಉದ್ಯೋಗಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ತಿಳಿಸಿದರು .ಇರ ಬಹುದು ಎಂದು ಕೊಂದು ನಾನು ಸುಮ್ಮನಾದೆ .
ಸುಮಾರು ಎರಡು ಮೂರು ತಿಂಗಳ ನಂತರ ತುಳು ಅಕಾಡೆಮಿ ಫೆಲೋ ಶಿಪ್ ಗೆ ಆಯ್ಕೆ ಆದವರ ಹೆಸರುಗಳು ಪತ್ರಿಕೆಗಳಲ್ಲಿ ಬಂತು .ಅದರಲ್ಲಿ  ಬೆಳ್ಳಾರೆಸರ್ಕಾರೀ ಪ್ರಥಮ ದರ್ಜೆ ( ಶಿವರಾಮ ಕಾರಂತ) ಕಾಲೇಜ್ ನ ಹಿರಿಯ ಉಪನ್ಯಾಸಕರಾದ ಡಾ.ನರೇಂದ್ರ ರೈ ದೇರ್ಲ ಅವರ ಹೆಸರೂ ಇತ್ತು .ಅವರು ಫೆಲೋ ಶಿಪ್ ಗೆ ಅರ್ಹರೇ!ಆ ಬಗ್ಗೆ ಎರಡು ಮಾತಿಲ್ಲ ಆದರೆ ಸರ್ಕಾರೀ ಉದ್ಯೋಗಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲವೆಂದಾದ ಮೇಲೆ ಅವರಿಗೆ ಹೇಗೆ ಸಿಕ್ತು ?
ನಾನು ಎಲ್ಲೋ ಮೋಸ ಹೋದ ಬಗ್ಗೆ ತುಸು ವಾಸನೆ ಬಡಿಯಿತು .
ಮತ್ತೆ ರಿಜಿಸ್ಟ್ರಾರ್ ಚಂದ್ರ ಹಾಸ ರೈಗಳಿಗೆ ಫೋನ್ ಮಾಡಿದೆ .ಮತ್ತೆ ಯಥಾ ಪ್ರಕಾರ ಅವರು ಅಧ್ಯಕ್ಷರಾದ ...ಯವರ ಕೈಗೆ ಫೋನ್ ಹಸ್ತಾಂತರಿಸಿದರು !
ಆಗ ಅವರು ಹೇಳಿದರು ಮತ್ತೆ ನಿಯಮದಲ್ಲಿ ಬದಲಾವಣೆ ಮಾಡಿದರಂತೆ !ನಾನು ಫೋನ್ ಮಾಡಿದಾಗ ಅರ್ಜಿ ಸಲ್ಲಿಸಲು ಎರಡು ದಿನ ಮಾತ್ರ ಬಾಕಿ ಇತ್ತು ಅಲ್ಲಿ ತನಕ ನಿಯಮ ಬದಲಾವಣೆ ಆಗಿರಲಿಲ್ಲ (ಮಾಡಿರಲಿಲ್ಲ !!!!!) ನಂತರ ಎರಡು ದಿನದಲ್ಲಿ ಬದಲಾವಣೆ ಆಯಿತು ಹಾಗಾದರೆ !
ಕೊಡಲು ಮನಸು ಇಲ್ಲದೇ ಇದ್ದರೆ ನಾನಾ ನೆಪಗಳು ಸಿದ್ಧವಾಗಿರುತ್ತದೆ ಇದನ್ನು ಪ್ರಶ್ನಿಸಿದರೆ ಅದು ಘೋರ ಅಪರಾದ !ಅದು ಜಗಳ ಕಂಟ ತನ ಎಂಬ ಬಿರುದು ಬೇರೆ ಸಿಗುತ್ತದೆ ಅದಕ್ಕೆ ನಾನು ಎಲ್ಲಿ ಯಾವುದೇ ಫೆಲೋಶಿಪ್ ಗೆ ಅರ್ಜಿ ಸಲ್ಲಿಸುವ ಗೋಜಿಗೆ ಹೋಗುದಿಲ್ಲ
ನನ್ನ ಮಿತಿಯಲ್ಲಿ ನನಗೆಷ್ಟು ಸಾಧ್ಯವೋ ಅಷ್ಟು ಮಾಡುತ್ತೇನೆ ..
ಆದರೆ ಜನ ಹೇಗೆಲ್ಲ ಕಾಲು ಎಳೆಯುತ್ತಾರೆ ನಮಗೆ ಗೊತ್ತಿಲ್ಲದೇ ಎಷ್ಟು ಮೋಸ ಹೋಗುತ್ತ್ತೇವೆ ಅಲ್ಲವೆ ಅಂತ ಆಶ್ಚರ್ಯ ಆಗುತ್ತದೆ .
ಇದೆ ರೀತಿ ಇನ್ನೊಂದು ವಿಷಯದಲ್ಲಿ ಮೋಸ ಹೋದದ್ದು ನನಗೆ ನೆನಪಾಗುತ್ತಿದೆ .
ಕೆಲವು ವರ್ಷಗಳ ಹಿಂದೆ ನಾನಾ ಕೆಲವು ಪುಸ್ತಕಗಳನ್ನು ನಾನೇ ಸ್ವಂತ ಪ್ರಕಟಿಸಿದ್ದೆ ,ನಂತರ 2010 ರಲ್ಲಿ ನನಗೆ ಪಿಎಚ್ ಡಿ ಪದವಿ ದೊರೆಯಿತು .
ನನ್ನ ಪಿಎಚ್ ಡಿ ಸಂಶೋಧನಾ ಪ್ರಬಂಧವನ್ನು ಯಾರಾದರೂ ಪ್ರಕಾಶಕರು ಪ್ರಕಟಿಸಿದರೆ ಒಳ್ಳೆಯದಿತ್ತು ಎಂದು ಆಲೋಚಿಸುತ್ತಿದ್ದೆ
ನನಗೆ ಈ ಕ್ಷೇತ್ರದಲ್ಲಿ ಯಾರೂ ಪರಿಚಯ ಇರಲಿಲ್ಲ ,ನನ್ನ ಪರಿಚಿತ ಸಂಶೋಧಕಿ ಒಬ್ಬರ  ಸಂಶೋಧನಾ ಮಹಾ ಪ್ರಬಂಧವನ್ನು ನವ ಕರ್ನಾಟಕ ಪಬ್ಲಿಕೇಶನ್ಸ್ ಪ್ರಕಟಿಸಿದ್ದು ನನಗೆ ತಿಳಿದಿತ್ತು
ಹಾಗೆ ಯಾವಾಗಲೋ ಅವರು ಸಿಕ್ಕಾಗ ನವಕರ್ನಾಟಕ ಪುಸ್ತಕ ಪ್ರಕಾಶಕರು ಯಾರು? ಅವರ ನಂಬರ್ ಕೊಡಲು ಸಾಧ್ಯವೇ? ಎಂದು ಕೇಳಿದೆ
ಆಗ ಅವರು ತಕ್ಷಣವೇ "ಅವರಿಗೆ ನನ್ನ ಥಿಸಿಸ್ ಪ್ರಕಟಿಸಿಯೇ ತುಂಬಾ ನಷ್ಟ ಆಯಿತಂತೆ ಅವರು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸುವುದೇ ಇಲ್ಲ ನನ್ನದನ್ನು ಏನೋ ಪ್ರಕಟಿಸಿದರು ಈಗ ನಷ್ಟ ಆಯಿತು ಇನ್ನು ಯಾರ ಸಂಶೋಧನಾ ಪ್ರಬಂಧ ವನ್ನು ಪ್ರಕಟಿಸುವುದೇ ಇಲ್ಲ ಎಂದು ಹೇಳಿದ್ದಾರೆ "ಎಂದು ಹೇಳಿದರು !ನಾನು ಸತ್ಯ ನಂಬಿದೆ ಇರಬಹುದು ಎಂದು !

ನಂತರ ನನ್ನ ಸಂಪ್ರಬಂಧವನ್ನು ಪ್ರಚೇತ ಬುಕ್ ಪಬ್ಲಿಷರ್ಸ್ ಪ್ರಕಟ ಮಾಡಿದರು ,ಅದು ಸಾಕಷ್ಟು ಯಶಸ್ವಿ ಅಯ್ತಿ ಕೂಡ .ನಷ್ಟ ಆಗಲಿಲ್ಲ ಬದಲಿಗೆ ಲಾಭ ತಂದು ಕೊಟ್ಟಿತ್ ತುಕೂಡ

ಈ ಪುಸ್ತಕವನ್ನು ಅವರು ನವಕರ್ನಾಟಕ ಮಳಿಗೆಗಳಲ್ಲೂ ಮಾರಾಟಕ್ಕೆ ಹಾಕಿದ್ದರು ಅಲ್ಲಿ ಕೂಡ ಸಾಕಷ್ಟು ಪುಸ್ತಕಗಳು ಮಾರಾಟವಾಗಿವೆ .


ಒಂದಿನ ನಾನು ಮಂಗಳೂರಿನ ನವಕರ್ನಾಟಕ ಮಳಿಗೆಗೆ ಹೋದೆ ಆಗ ನನ್ನ ಎದುರಿನಲ್ಲಿಯೇ ಇಬ್ಬರು ನನ್ನ ಪುಸ್ತಕವನ್ನು ಕೇಳಿದರು.ಅಲ್ಲಿ ಪುಸ್ತಕಪ್ರತಿ ಮುಗುದಿತ್ತು .ಆಗ ಅಲ್ಲಿನ ಮ್ಯಾನೇಜರ್ ಅವರು ಮೇಡಂ ನೀವು ಈ ಪುಸ್ತಕವನ್ನು ನಮ್ಮ          ನವ ಕರ್ನಾಟಕ ಪಬ್ಲಿಕೇಶನ್ ನಲ್ಲಿ ಪ್ರಕಟ ಮಾಡಬೇಕಿತ್ತು .ಇದಕ್ಕೆ ಇನ್ನೂ ಹೆಚ್ಚು ವ್ಯಾಲ್ಯೂ ಇರುತ್ತಿತ್ತು ನಿಮ್ಮ ಈ ಪುಸ್ತಕಕ್ಕೆತುಂಬಾ ಬೇಡಿಕೆ ಇದೆ ಎಂದು" ಹೇಳಿದರು ಆಗ ನಾನು ನವ ಕರ್ನಾಟಕ ದವರು ಪಿ ಎಚ್ ಡಿ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸುವುದಿಲ್ಲವಂತೆ !ಎಂದು ಹೇಳಿದೆ .ಹಾಗೆ ಹೇಳಿದ್ದು ಯಾರು ?ನಿಮಗೆ ಯಾರೋ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸಿದ್ದಾರೆ,ನವಕರ್ನಾಟಕ ಪ್ರಕಾಶಕರು ಸಂಶೋಧನಾ ಕೃತಿಗಳಿಗೆ ಮೊದಲ ಆದ್ಯತೆ ನೀಡುತ್ತಾರೆ ಎಂದು ಹೇಳಿದರು !

ನಾನು ಮತ್ತೆ ಮೋಸ ಹೋಗಿದ್ದೆ !ಏನು ಮಾಡುದು ಹೀಗೆ ಕಾಲೆಳೆಯುವ ಮಂದಿ ಇರುತ್ತಾರೆ..ಏನುಮಾಡುವುದು !ಆದರೂ ತಕ್ಷಣಕ್ಕೆ ತೀರಾ ಸತ್ಯ ಅನಿಸುವ ಹಾಗೆ ಹೇಳಿದಾರಿ ತಪ್ಪಿಸುವ ಉಪಾಯಗಳು ಇವರಿಗೆ ಹೇಗೆ ನೆನಪಾಗುತ್ತವೆ ಅಂತ ಅಚ್ಹ್ಕಾರಿ ಆಗುತ್ತದೆ ಬಹುಶ ಇಂಥವರು ಸದಾ ಇದೆ ಮಾಡುತ್ತಿರುತ್ತಾರೆ ಹಾಗಾಗಿ ಅವರಿಗೆ ಅನಾಯಾಸವಾಗಿ ಇಂಥ ಟ್ರಿಕ್ ಗಳು ಹೊಳೆಯುತ್ತವೆ ಇರಬೇಕು
ಆಲದ ಮರ ಸೊಂಪಾಗಿ ಬೆಳೆದು ಮೃಗ ಪಕ್ಷಿಗಳಿಗೆ ಆಶ್ರಯ ನೀಡುತ್ತದೆ ನೆರಳನ್ನೂ ನೀಡುತ್ತದೆ ಆದರೆ ಬೇರೆ ಗಿಡ ಮರಗಳನ್ನು ಬೆಳೆಯಲು ಬಿಡುವುದಿಲ್ಲ ಅಂತೆಯೇ ಅನೇಕರು ಇರುತ್ತಾರೆ .ಇಂಥವರ ನಡುವೆಯೂ ಡಾ.ಅಮೃತ ಸೋಮೇಶ್ವರ ,ಡಾ,ವಾಮನ ನಂದಾವರ ,ಡಾ.ಸುಬ್ಬಣ್ಣ ರೈ ಮೊದಲಾದ ಕೆಲವು ವಿದ್ವಾಂಸರು ತಾವು ಬೆಳೆಯುವುದರೊಂದಿಗೆ ಬೇರೆಯವರನ್ನೂ ಬೆಳೆಸುತ್ತಾರೆ ಅನ್ನುವುದು ಸಂತೋಷದ ವಿಚಾರ
ಡಾ.ಲಕ್ಷ್ಮೀ ಜಿ ಪ್ರಸಾದ

ಬದುಕ ಬಂಡಿಯಲಿ 18- ನಾಲ್ಕು ತೆಂಗಿನ ಸಸಿ ನೆಡಬೇಕಿತ್ತು © ಡಾ ಲಕ್ಷ್ಮೀ ಜಿ ಪ್ರಸಾದ

ಬದುಕ ಬಂಡಿಯಲಿ 18- ನಾಲ್ಕು ತೆಂಗಿನ ಸಸಿ ನೆಡಬೇಕಿತ್ತು © ಡಾ ಲಕ್ಷ್ಮೀ ಜಿ ಪ್ರಸಾದ

ನಾಲ್ಕು ತೆಂಗಿನ‌ಸಸಿ ನೆಡಬೇಕಿತ್ತು.
©ಡಾ ಲಕ್ಷ್ಮೀ ಜಿ ಪ್ರಸಾದ
ಅಂದು2009  ಸೆಪ್ಟೆಂಬರ್ 24 ನೆಯ ತಾರೀಖು, ನನಗೆ ತೀರದ ಸಂಭ್ರಮ. ಹಿಂದಿನ ದಿನವಷ್ಟೇ ಬೆಳ್ಳಾರೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಕನ್ನಡ ಉಪನ್ಯಾಸಕಿಯಾಗಿ ಪಿಯು ಇಲಾಖೆ ನಿರ್ದೇಶಕರ ಆದೇಶ ಪತ್ರ ದೊರೆತಿತ್ತು .ತುಳು ಸಂಸ್ಕೃತಿ ಯ ಅಧ್ಯಯನ ಕ್ಕಾಗಿ ಬೆಂಗಳೂರು ಸುತ್ತ ಮುತ್ತ ಅವಕಾಶ ಇದ್ದರೂ ಕೂಡ ಬೆಳ್ಳಾರೆಯನ್ನೆ ಅಧ್ಯಯನ ದ ದೃಷ್ಟಿಯಿಂದ ಆಯ್ಕೆ ಮಾಡಿದ್ದೆ .ನನಗೆ ಬೇಕಾದ ಸ್ಥಳದಲ್ಲಿ ಯೇ ಉದ್ಯೋಗ ಅವಕಾಶ ಸಿಕ್ಕಿದ್ದು ತುಂಬಾ ಸಂತಸ ತಂದಿತ್ತು .24 ರ ರಾತ್ರಿ ಎಂಟು ಗಂಟೆಯ ರೈಲಿಗೆ ಟಿಕೆಟ್ ಬುಕ್ ಮಾಡಿಸಿದ್ದೆ ಹಾಗಾಗಿ ಆರು ಗಂಟೆ ವೇಳೆಗೆ ಗಂಟು ಮೂಟೆ ಕಟ್ಟಿಕೊಂಡು ಮೆಜೆಸ್ಟಿಕ್ ಗೆ ಹೊರಟಿದ್ದೆ .ಮೈಸೂರು ಸೆಟಲೈಟ್ ತನಕ ಬಸ್ ಸಿಕ್ಕಿತು ಅಲ್ಲಿಗೆ ತಲುಪುವಷ್ಟರಲ್ಲಿ ಜೋರಾದ ಮಳೆ ರಸ್ತೆ ಇಡೀ ನೀರು ತುಂಬಿ ಹರಿಯತ್ತಿತ್ತು .ಅಟೋಗಳೇ ಇರಲಿಲ್ಲ ಒಂದೆರಡು ಬಂದರೂ ನಿಲ್ಲಿಸಲಿಲ್ಲ ಕೊನೆಗೂ ಒಂದು ಅಟೋ ನಿಂತಿತು ರೈಲ್ವೆ ನಿಲ್ದಾಣ ಬಿಡಲು ಹೇಳಿದೆ ಅರುವತ್ತು ರುಪಾಯಿ ಕೊಡಬೇಕು ಎಂದರು ಅರುವತ್ತೇನು ಆರುನೂರು ಹೇಳಿದ್ದರೂ ಕೊಟ್ಡು ಹೋಗುವ ಅನಿವಾರ್ಯತೆ ನನಗಿತ್ತು ಸುಮಾರು ನಲವತ್ತು ಐವತ್ತು ಮೀಟರ್ ಹಾಕಿದರೂ ಬೀಳುತ್ತಾ ಇತ್ತು ಹಾಗಾಗಿ ಒಪ್ಪಿ ಅಟೋ ಹತ್ತಿದೆ .ಅಟೋ ತುಂಬಾ ಹಳೆಯದಾಗಿತ್ತು ನೀರಿನ ಸೆಳವಿಗೆ ಅಲ್ಲಲ್ಲಿ ಆಫ್ ಆಗುತ್ತಾ ಇತ್ತು ಒಂದೆರಡು ಕಡೆ ಅಟೋವಾಲಾ ಇಳಿದು ಅಟೋ ದೂಡಿ ಸ್ಟಾರ್ಟ್ ಮಾಡಿದ್ದರು .ಆಗಲೇ ನಾನು ಅವರನ್ನು ಗಮನಿಸಿದ್ದು .ಬಿಳಿ ಗಡ್ಡದ ಸುಮಾರು ಎಪ್ಪತ ವಯಸ್ಸಿನ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರು.ಅಟೋ ಮುಂದೆ ಸಾಗುತ್ತಿದ್ದಂತೆ ಅಟೋ ಹಳತಾಗಿದೆ ಅಮ್ಮ ಹಾಗಾಗಿ ಆಗಾಗ್ಗೆ ಕೈ ಕೊಡುತ್ತಿದೆ ಎಂದು ತಮ್ಮ ಕಷ್ಟ ವನ್ನು ಹೇಳಿಕೊಂಡರು .ಆಗ ನಾನು ನೀವೇಕೆ ಈ ವಯಸ್ಸಿನಲ್ಲಿ ದುಡಿಯುತ್ತೀರಿ ಮಕ್ಕಳಿಗೆ ಕೆಲಸ ಸಿಕ್ಕಿಲ್ಲವೇ ಎಂದು ಕೇಳಿದೆ. ಆಗ ಅವರು ಒಂದು ದೊಡ್ಡ ನಿಟ್ಟುಸಿರು ಬಿಟ್ಟು " ನನಗೆ ನಾಲ್ಕು ಜನ ಗಂಡುಮಕ್ಕಳು ಎಲ್ಲರನ್ನೂ ದುಡಿದು ಅಟೋ ಓಡಿಸುತ್ತಾ ಸಾಲ ಸೋಲ ಮಾಡಿ ಓದಿಸಿದೆ ಎಲ್ಲರೂ ಒಳ್ಳೆಯ ಕೆಲಸದಲ್ಲಿ ಇದ್ದಾರೆ ಆದರೆ ನಾನು‌ಮಾಡಿದ ಸಾಲವನ್ನು ತೀರಿಸಲು ನಾನು ದುಡಿಯುತ್ತಿರುವೆ ಅವರೆಲ್ಲರೂ ಅವರವರ ಹೆಂಡತಿ ಮಕ್ಕಳೊಂದಿಗೆ ಸುಖವಾಗಿದ್ದಾರೆ ನನಗೆ ದುಡಿಯದೆ ಬೇರೆ ವಿಧಿಯಿಲ್ಲ ನಾನು ನಾಲ್ಕು ಜನ ಮಕ್ಕಳನ್ನು ಸಾಕುವ ಬದಲು ನಾಲ್ಕು ತೆಂಗಿನ ಸಸಿ ನೆಡುತ್ತಿದ್ದರೆ ಈಗ ದುಡಿದು ಮನೆಗೆ ಹೋದಾಗ ಕುಡಿಯಲು ಎಳನೀರು ಕೊಡುತ್ತಾ ಇದ್ದವು ಎಂದು ಹೇಳಿ ಕಣ್ಣೀರು ಒರಸಿಕೊಂಡರು.ನನ್ನ ಕಣ್ಣಂಚೂ ತೇವವಾಯಿತು ಅಷ್ಟರಲ್ಲಿ ರೈಲ್ವೆ ಸ್ಟೇಷನ್ ತಲುಪಿದೆವು ಇಳಿದು ದುಡ್ಡು ಕೊಟ್ಟು ನನ್ನ ಜಗತ್ತಿಗೆ ಪ್ರವೇಶ ಮಾಡಿದೆ ಇಂದು ಮತ್ತೆ ಇದು ನೆನಪಾಯಿತು ಇದು ಕಲ್ಪನೆಯಲ್ಲ ನಿಜವಾದ ಕಥೆ/ ವ್ಯತೆ ಇದು ©ಡಾ ಲಕ್ಷ್ಮೀ ಜಿ ಪ್ರಸಾದ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ ಪೂರ್ವ ಕಾಲೇಜು ನೆಲಮಂಗಲ ಬೆಂಗಳೂರು ಗ್ರಾಮಾಂತರ ಜಿಲ್ಲೆ

Monday 4 June 2018

ಬದುಕ ಬಂಡಿಯಲಿ 16 ಕಾಲವನ್ನು ಕಂಡವರಿಲ್ಲ © ಡಾ.ಲಕ್ಷ್ಮೀ ಜಿ ಪ್ರಸಾದ

ಕಾಲವನ್ನು ಕಂಡವರಿಲ್ಲ..ಸಂಪತ್ತು ಅಧಿಕಾರ ಇದ್ದಾಗ ಕೈಲಾದ ಸಹಾಯ ಮಾಡಬೇಕು..ಏನಂತೀರಿ?
- ಡಾ.ಲಕ್ಷ್ಮೀ ಜಿ ಪ್ರಸಾದ

ಇಂದು ಉತ್ತರ ಪತ್ರಿಕೆ ತಿದ್ದುತ್ತಾ ಬಿಗ್ ಬಾಸ್  ಅಂತಿಮ ಕಾರ್ಯಕ್ರಮ ನೋಡುತ್ತಾ ಇದ್ದೆ.ಅದರಲ್ಲಿ ಗೆದ್ದವರಿಗೆ 50 ಲಕ್ಷ ರು ಬಹುಮಾನ ಅಂತ ಗೊತ್ತಾಯಿತು. ಅಲ್ಲಿ ಅಂತಿಮವಾಗಿ ಆಯ್ಕೆಯಾದ ಇಬ್ಬರಲ್ಲಿ ಒಬ್ಬರಾದ ದಿವಾಕರ್ ಅವರಿಗೆ ಇದು ದೊಡ್ಡ ಕೊಡುಗೆಯೇ ಅಗಬಲ್ಲದು. ಆದರೆ ಬಿಗ್ ಬಾಸ್ ಎಂಬುದು ಒಂದು ವ್ಯಕ್ತಿತ್ವದ ಸ್ಪರ್ಧೆ.ಅದರಲ್ಲಿ ಯಾರು ಉತ್ತಮವಾಗಿ ನಿರ್ವಹಣೆ ಮಾಡಿರುತ್ತಾರೋ ಅವರೇ ಗೆಲ್ಲಬೇಕು.ಸ್ಪರ್ಧೆಯಲ್ಲಿ ಸ್ಪರ್ಧಿಯ ಹಿನ್ನೆಲೆ ಮುಖ್ಯವಾಗಬಾರದು.
ಬಹುಶಃ ಚಂದನ್ ಶೆಟ್ಟಿ ನಿರ್ವಹಣೆ ಚೆನ್ನಾಗಿದ್ದಿರ ಬೇಕು( ನಾನು ಒಂದೇ ಒಂದು ಎಪಿಸೋಡ್ ಕೂಡ ನೋಡಿಲ್ಲ, ಈವತ್ತು ಮಾತ್ರ ನೋಡಿದ್ದು ) ಹಾಗಾಗಿ ಚಂದನ್ ಶೆಟ್ಟಿ ಗೆದ್ದಿದ್ದಾರೆ.
ವಿನ್ನರ್ ಗೆ 50 ಲಕ್ಷ ರುಪಾಯಿ ಬಹುಮಾನ ಇದ್ದಾಗ ರನ್ನರ್ ಗೆ ಕನಿಷ್ಠ ಪಕ್ಷ 25 ಲಕ್ಷ ರುಪಾಯಿ ನಗದು ಬಹುಮಾನ ಇಡಬೇಕಿತ್ತು ಎಂದೆನಿಸಿತು ನನಗೆ.ಮತ್ತು ದಿವಾಕರ್ ಗೆ ಅದು ಆರ್ಥಿಕ ಬಲವಾಗಿ ಬಿಗ್ ಬಾಸ್ ಗೆ ಬಂದದ್ದಕ್ಕೆ ಒಂದು ಕೊಡುಗೆಯಾಗಿರುತ್ತಿತ್ತು.
ಅದಿರಲಿ
ನಾನು ಹೇಳ ಹೊರಟಿದ್ದು ಅದಲ್ಲ .ಸುಮಾರು ಹದಿನೈದು ವರ್ಷಗಳ ಹಿಂದೆ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ ವನ್ನು ಅಮಿತಾ ಬಚ್ಚನ್ ನಡೆಸಿಕೊಡುತ್ತಾ ಇದ್ದರು.ಅದರಲ್ಲಿ ಒಬ್ಬ   ಮನೆ ಮನೆಗೆ  ಬಟ್ಟೆಯ ವ್ಯಾಪಾರಿ( ಕಟ್ಟನ್ನು ಹೊತ್ತುಕೊಂಡು ಹೋಗಿ ವ್ಯಾಪಾರ ಮಾಡುವ ವ್ಯಕ್ತಿ ಎಂದು ನೆನಪು)  14 ಪ್ರಶ್ನೆಗಳಿಗೆ ಉತ್ತರಿಸಿ 50 ಲಕ್ಷ ಗೆದ್ದಿದ್ದರು.15 ನೇ ಪ್ರಶ್ನೆಗೆ ಉತ್ತರಿಸದೆ ಸ್ಪರ್ಧೆಯಿಂದ ಹೊರಬಂದರೆ 50 ಲಕ್ಷ ರುಪಾಯಿ ಅವರಿಗೆ ಸಿಗುತ್ತದೆ.15 ನೇ ಪ್ರಶ್ನೆಗೆ ತಪ್ಪು ಉತ್ತರ ನೀಡಿದರೆ ಅವರಿಗೆ ಕೇವಲ 3.50 ಲಕ್ಷ ಮಾತ್ರ ಸಿಗುತ್ತದೆ. ಈ ಹಂತದಲ್ಲಿ ಅವರಿಗೆ ಹದಿನೈದನೇ ಪ್ರಶ್ನೆಯನ್ನು ಕೇಳಿದರು.ಇವರು ಏನನ್ನೋ ಉತ್ತರಿಸಿದರು‌.ಅದನ್ನು ನಿಶ್ಚಿತ ಗೊಳಿಸುವ ಮೊದಲು ಅಮಿತಾ ಬಚ್ಚನ್ ಅವರು ಈಗ ಕೂಡ ನಿಮಗೆ ಸ್ಪರ್ಧೆಯಿಂದ ಹೊರಬಂದು 50 ಲಕ್ಷ ರುಪಾಯಿ ಪಡೆದುಕೊಳ್ಳಬಹುದು.ಸ್ಪರ್ಧೆಯಲ್ಲಿ ಮುಮದುವರಿದರೆ ಉತ್ತರ ಸರಿಯಾಗಿದ್ದರೆ ಮಾತ್ರ ಒಂದು ಕೋಟಿ ರುಪಾಯಿ ಸಿಗುತ್ತದೆ. ಉತ್ತರ ತಪ್ಪಾದರೆ  ಕೇವಲ ಮೂರೂವರೆ ಲಕ್ಷ ಮಾತ್ರ ಸಿಗುತ್ತದೆ. ಒಮ್ಮೆ ಆಲೋಚಿಸಿ ನೋಡಿ ಎಂದು ನುಡಿದರು.ಆಗ ಆ ಸ್ಪರ್ಧಿ ಸ್ಪರ್ದೆಯಿಂದ ಹೊರ ಸರಿದರು.ನಂತರ ಅವರು ಕೊಟ್ಟ ಉತ್ತರ ಸರಿಯಿದೆಯೇ ಎಂದು ನೋಡಿದಾಗ ಅದು ತಪ್ಪಾಗಿತ್ತು‌.ಒಂದೊಮ್ಮೆ ಅವರು ಸ್ಪರ್ಧೆಯಿಂದ ಹಿಂದೆ ಸರಿಯದೆ ಇರುತ್ತದ್ದರೆ ಅವರು 46.5 ಲಕ್ಷ ರುಪಾಯಿ ಗಳನ್ನು ಕಳೆದುಕೊಳ್ಳುತ್ತಿದ್ದರು.ಅಮಿತಾಭ್ ಸಲಹೆಯನ್ನು ಸ್ವೀಕರಿಸಿ ಅವರು 50 ಲಕ್ಷ ರುಪಾಯಿಗಳನ್ನು ಪಡೆದುಕೊಂಡಿದ್ದರು.ಆಗ ಅವರು ಮತ್ತು ಅವರ ಮಡದಿ ವೇದಿಕೆಯಲ್ಲಿ ಅಮಿತಾಭ್ ಕಾಲು ಮುಟ್ಟಿ ನಮಸ್ಕರಿಸಿದ್ದರು.
ಈ ಬಗ್ಗೆ ಮರುದಿನ ಚಿನ್ನಯ ಶಾಲೆಯಲ್ಲಿ ( ಆಗ ನಾನು ಅಲ್ಲಿ ಸಂಸ್ಕೃತ ಶಿಕ್ಷಕಿ ಆಗಿದ್ದೆ) ನಾನು, ನಮ್ಮ ಗಣಿತದ ಮೇಷ್ಟ್ರು ಕೃಷ್ಣ ಉಪಾಧ್ಯಾಯ ಮೊದಲಾದವರು ಚರ್ಚಿಸಿದೆವು‌ಅವರಿಗೆ ಅಷ್ಟು ದೊಡ್ಡ ಮೊತ್ತವನ್ನು ಉಳಿಸಿಕೊಟ್ಟ,ವಯಸ್ಸಿನಲ್ಲಿ ಮತ್ತು ಅನುಭವದಲ್ಲಿ ಹಿರಿಯರಾದ ಅಮಿತಾ ಬಚ್ಚನ್ ಕಾಲಿಗೆ ಬಿದ್ದು ನಮಸ್ಕರಿಸಿದ್ದರಲ್ಲಿ ನನಗೇನೂ ತಪ್ಪು ಕಂಡಿಲ್ಲ ಎಂದು ಹೇಳಿದೆ.ಆಗ 50 ಲಕ್ಷ ರುಪಾಯಿ ಎಂದರೆ ನನ್ನ ಜೀವಮಾನ ದುಡಿದರೂ ನನಗೆ ಅಷ್ಟು ದೊಡ್ಡ ಮೊತ್ತ ಗಳಿಸಲು ಅಸಾಧ್ಯ ಎಂದು ನಾನು ಭಾವಿಸಿದ್ದೆ.ಅದನ್ನು ಪಕ್ಕದಲ್ಲೇ ಕುಳಿತಿದ್ದ ಕೃಷ್ಣ ಉಪಾಧ್ಯಾಯರಲ್ಲೂ ಹೇಳಿದ್ದೆ.ಆಗ ಅವರು ಕೂಡ ಅದನ್ನು ಹೌದೆಂದು ಒಪ್ಪಿಕೊಂಡಿದ್ದರು‌.ಆಗ ನನ್ನ ತಿಂಗಳ ಸಂಬಳ ಮೂರು ಸಾವಿರ ಇತ್ತು.ವರ್ಷಕ್ಕೆ ಮೂವತ್ತಾರು ಸಾವಿರ. ಅದರಂತೆ ಮೂವತ್ತು ವರ್ಷಗಳ ಕಾಲ ದುಡಿದರೆ ಸುಮಾರು ಹತ್ತು ಹನ್ನೊಂದು ಲಕ್ಷ ರುಪಾಯಿ ಅಗುತ್ತಾ ಇತ್ತು‌ಹಾಗಾಗಿ ಐವತ್ತು ಲಕ್ಷದ ದುಡ್ಡನ್ನು ಊಹೆ ಮಾಡುವುದೂ ನಮಗೆ ಅಸಾಧ್ಯ ಆಗಿತ್ತು.
ಆದರೆ ಕಾಲ ಒಂದೇ ರೀತಿ ಇರುವುದಿಲ್ಲ. ಪ್ರಸ್ತುತ ನನ್ನ ವೇತನ ಲೆಕ್ಕ ಹಾಕಿದರೆ  ಏಳೆಂಟು ವರ್ಷದಲ್ಲಿ  50 ಲಕ್ಷ ತಲುಪಬಹುದು. ನಿವೃತ್ತಿ ಆಗುವ ತನಕದ ವೇತನ ಒಟ್ಟು  ಲೆಕ್ಕ ಹಾಕಿದರೆ ಒಂದು ಎರಡು ಕೋಟಿ ಆಗಬಹುದು.ಈಗಾಗಲೇ ನಾನು ಗಳಿಸಿದ ವೇತನ ಲೆಕ್ಕ ಹಾಕಿದರೆ ಒಟ್ಟು ಮೊತ್ತ ಮೂವತ್ತು ಲಕ್ಷ ದಷ್ಟು ಆಗಿರಬಹುದು .ಹಾಗಂತ ಅದ್ಯಾವುದೂ ಉಳಿದಿಲ್ಲ .ಅದು ಬೇರೆ ವಿಚಾರ.
ಈಗ ಕೃಷ್ಣ ಉಪಾಧ್ಯಾಯರು ಮಂಗಳೂರಿನ ಮಧುಸೂದನ ಕುಶೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿದ್ದು ನನಗಿಂತ ಹೆಚ್ಚಿನ ವೇತನ ಅವರಿಗಿರಬಹುದು .ದಿವಾಕರ್ ಕೂಡ ಮುಂದೊಂದು ದಿನ ಕೋಟ್ಯಧೀಶ ಆಗಬಹುದು.
ಹಾಗಾಗಿ ಒಂದು ಮಾತು ಹೇಳಬಯಸುವೆ.ಕಾಲವನ್ನು ಕಂಡವರಿಲ್ಲ ಆಳು ಅರಸಾಗಬಹುದು.ಅರಸ ಆಳಾಗಬಹುದು.ದುಡ್ಡು ಅಧಿಕಾರ ಶಾಶ್ವತವಲ್ಲ.ಇವುಗಳು ಇದ್ದಾಗ ನಾಲ್ಕು ಜನರಿಗೆ ಕೈಲಾದ ಸಹಾಯ ಮಾಡಬೇಕು. ಕೊಡುವುದರಲ್ಲಿ ಕೂಡ ತೃಪ್ತಿ ಕಾಣಬೇಕು.ಆಗಲೇ ಬದುಕಿಗೊಂದು ಸಾರ್ಥಕತೆ ಉಂಟಾಗುತ್ತದೆ
ಕಾಲ ಒಂದೇ ತರನಾಗಿ ಇರುವುದಿಲ್ಲ. ನಾನು ಚಿನ್ಮಯ ಶಾಲೆ ಶಿಕ್ಷಕಿ ಆಗಿದ್ದಾಗ ಮಂಗಳೂರು ಸಂಸ್ಕೃತ ಸಂಘ ಮಂಗಳೂರಿನ ಶಾಲಾ ಕಾಲೇಜು ಮಕ್ಕಳಿಗೆ ಏರ್ಪಡಿಸಿದ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಮ್ಮ ಶಾಲೆಯಲ್ಲಿ ಆಯೋಜನೆ ಮಾಡಿದ್ದೆವು.ಆಗ ಸಂಸ್ಕೃತ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಬಂದಿದ್ದರು.ಅವರೆಲ್ಲ ದೊಡ್ಡ ದೊಡ್ಡ ಹುದ್ದೆಗಳಲ್ಲಿ ಇದ್ದವರು‌.ನಾನೋರ್ವ ರ‌್ಯಾಂಕ್ ವಿಜೇತೆ ಆಗಿದ್ದರೂ ಖಾಸಗಿ ಶಾಲೆಯಲ್ಲಿ ಪುಡಿಕಾಸಿಗಾಗಿ ದುಡಿಯುತ್ತಾ ಇದ್ದೇನೆ ಎಂಬ ಕೀಳರಿಮೆ ನನ್ನಲ್ಲಿ ಇತ್ತು ಎಂದು ಕಾಣಿಸುತ್ತದೆ.ಬಂದ ಪದಾಧಿಕಾರಿಗಳು ಯಾರೂ ನನ್ನನ್ನು ಕೀಳಾಗಿ ಕಂಡಿಲ್ಲ ಆದರೂ ಅವರಲ್ಲಿ ಮಾತನಾಡುವಾಗ ನಾನು ತುಂಬಾ ತೊದಲುತ್ತಾ ಇದ್ದೆ.ಶಬ್ದಗಳು ಸಿಗದೆ ತಡವರಿಸಿ ಏನೇನೋ ಹೇಳುತ್ತಾ ಇದ್ದೆ.ಆಗ ಸಂಸ್ಕೃತ ಸಂಘದ ಅಧ್ಯಕ್ಷರಾಗಿ ಇದ್ದವರು( ಅವರ ಹೆಸರು ವಾಸುದೇವ ರಾವ್ ಎಂದು ನೆನಪು) ಯಾರೋ ಒಬ್ಬ ಪ್ರೊಫೆಸರ್ ಹೆಸರು ಹೇಳಿ ಅವರು ಕೂಡ ನನ್ನ ಹಾಗೆ ತೊದಲುತ್ತಾ ಮಾತಾಡುತ್ತಾರೆಂದು ಹೇಳಿದ್ದರು.
ನಾನು ಶಾಲಾ ದಿನಗಳಲ್ಲಿಯೇ ನಾಟಕ ಏಕಪಾತ್ರಾಭಿನಯ,ಭಾಷಣಗಳಲ್ಲಿ ರಾಜ್ಯ ಮಟ್ಟದ ಬಹುಮಾನ ಪಡೆದವಳು.ಒಳ್ಳೆಯ ಮಾತುಗಾತಿ ಎಂದು ಕೂಡ ಹೆಸರು ಪಡೆದಿದ್ದೆ.ಉತ್ತಮ ಕಾರ್ಯಕ್ರಮ ನಿರೂಪಕಿಯಾಗಿಯೂ ಹೆಸರಿತ್ತು.ಆದರೆ ಅದೇ ವರ್ಷದ ಸಂಸ್ಕೃತ ಸಂಘದ ವಾರ್ಷಿಕೋತ್ಸವದ ನಿರೂಪಣೆಯ ಜವಾಬ್ದಾರಿ ನನಗೆ ನೀಡಿದ್ದು ಹಲವಾರು ಸಂಸ್ಕೃತ ಸಂಭಾಷಣಾ ಶಿಬಿರಗಳನ್ನು ಮಾಡಿ ಸಂಸ್ಕೃತ ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡುತ್ತಿದ್ದ ನಾನು ನಿರೂಪಣೆ ಮಾಡುವಾಗ ಮತ್ತೆ ಮಾತಿಗೆ ಶಬ್ದಗಳು ಸಿಗದೆ ತೊಳಲಾಡಿದ್ದೆ.ಮೊದಲು ಅಲೋಶಿಯಸ್ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕಿ ಆಗಿದ್ದು ಮಗ ಹುಟ್ಟಿದಾಗ ಬೇರೆ ದಾರಿ ಇಲ್ಲದೆ ಅಲ್ಲಿ ಕೆಲಸ ಬಿಟ್ಟಿದ್ದೆ.ಮಗನಿಗೆ ಒಂದು ವರ್ಷವಾದಾಗ ಮತ್ತೆ ನಮ್ಮ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿ ಕೆಲಸಕ್ಕೆ ಹೋಗಬೇಕಾಯಿತು. ಆಗ ಚಿನ್ಮಯ ಪ್ರೌಢಶಾಲೆ ಯಲ್ಲಿ ಸಂಸ್ಕೃತ ಶಿಕ್ಷಕಿ ಹುದ್ದೆ ದೊರೆತಿತ್ತು.ನಂತರ ಒಂದೆರಡು ವರ್ಷಗಳಲ್ಲಿ ಮತ್ತೆ ಅಲೋಶಿಯಸ್ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕಿ ಹುದ್ದೆ ಖಾಲಿಯಿದ್ದು ,ಪ್ರಾಂಶುಪಾಲರಾದ ಸ್ವಿಬರ್ಟ್ ಡಿಸಿಲ್ವಾ ಅವರು ಫೋನ್ ಮಾಡಿ ಕರೆಸಿ ಸಂಸ್ಕೃತ ಉಪನ್ಯಾಸಕ ಹುದ್ದೆಯನ್ನು ನೀಡಿದರು.ಅಲ್ಲಿ ಮತ್ತೆ ಒಂದು ವರ್ಷ ಕೆಲಸ ಮಾಡುವಷ್ಟರಲ್ಲಿ ಪ್ರಸಾದ್ ಗೆ ಬೆಂಗಳೂರಿನಲ್ಲಿ ಕೆಲಸ ಸಿಕ್ತು .ಹಾಗಾಗಿ ನಾನು ಅಲೋಶಿಯಸ್ ಕಾಲೇಜು ಉಪನ್ಯಾಸಕ ಹುದ್ದೆಯನ್ನು ಬಿಟ್ಟು ಬೆಂಗಳೂರಿಗೆ ಬಂದೆ.ಆದರೆ ಇಲ್ಲಿ ನನ್ನ ಅರ್ಹತೆಗೆ ಅನುಗುಣವಾಗಿ ಉಪನ್ಯಾಸಕ ಹುದ್ದೆ ಸಿಕ್ಕಿದ ಕಾರಣ ಸಮಸ್ಯೆಯಾಗಲಿಲ್ಲ.ನಂತರ ಸರ್ಕಾರಿ ಹುದ್ದೆಯೂ ದೊರೆಯಿತು.ನನ್ನ ಅಧ್ಯಯನವನ್ನು ಜನರು ಗುರುತಿಸಿದರು‌.ದೇಶದ ಎಲ್ಲೆಡೆಗಳಿಂದ ಉಪನ್ಯಾಸ ನೀಡಲು ಆಹ್ವಾನಿಸುತ್ತಾರೆ‌.ಇಂದು ಲಕ್ಷ ಜನರು ಸೇರಿದ ವೇದಿಕೆಯಲ್ಲಿ ಕೂಡ ಯಾವುದೇ ಅಳುಕಿಲ್ಲದೆ ನಿರರ್ಗಳವಾಗಿ ಉಪನ್ಯಾಸ ನೀಡುತ್ತೇನೆ.
ಕೆಲವೊಮ್ಮೆ ಸಮಯ ಕಡಿಮೆ ಇದ್ದಾಗ ಸಂಘಟಕರು ವಿಷಯವನ್ನು ಮೊಟಕು ಗಲಿಸಲು ಸೂಚಿಸುತ್ತಾರೆ‌ ಅದರಮತೆ ನಾನು ನಿಲ್ಲಿಸಿದಾಗ ಸಭಾಸದರು ಮಾತು ಮುಂದುವರಿಸಿ ಎಂದು ಹೇಳಿ ಅವರುಗಳ ಕೋರಿಕೆಗೆ ಸಂಘಟಕರು ನನ್ನಲ್ಲಿ ಪೂರ್ತಿಯಾಗಿ ಮಾತಾಡುವಂತೆ ಹೇಳಿದ ಸಂದರ್ಭಗಳೂ ಇವೆ. ಕಳೆದ ವರ್ಷ ಕಂಬಳ ಪರವಾದ ಪ್ರತಿಭಟನಾ ಸಭೆಯಲ್ಲಿ ನಾನು ಮಾತು ನಿಲ್ಲಿಸ ಹೋದಾಗ ಜನರು ಪೂರ್ತಿಯಾಗಿ ಹೇಳಿ ಎಂದು ವಿನಂತಿಸಿ ಮಾತು ಮುಂದುವರಿಸಿದ್ದೆ.   ಆದರೆ ಅಂದೇಕೆ  ಸಂಸ್ಕೃತ ಸಂಘದ ವಾರ್ಷಿಕೋತ್ಸವದ ನಿರೂಪಣೆಯಲ್ಲಿ ಹಾಗೇಕೆ ತಡವರಿಸಿದೆ ? ಕೀಳರಿಮೆ ಅಷ್ಟೊಂದು ಪ್ರಭಾವ ಬೀರಿತ್ತಾ ಆಶ್ಚರ್ಯ ಆಗುತ್ತಿದೆ ಈಗ‌
ಅದಕ್ಕೆ ಹೇಳುವುದು ಕಾಲ ಒಂದೇ ರೀತಿ ಇರುವುದಿಲ್ಲ ಎಂದು. ಎಲ್ಲರಿಗೂ ಒಂದಲ್ಲ ಒಂದು ದಿನ ಒಳ್ಳೆಯ ಕಾಲ ಬಂದೇ ಬರುತ್ತದೆ ‌ಆದರೆ ಅದಕ್ಕಾಗಿ ನಿರಂತರವಾದ ಅಧ್ಯಯನ, ಪರಿಶ್ರಮ ಅತ್ಯಗತ್ಯ.- ಡಾ.ಲಕ್ಷ್ಮೀ ಜಿ ಪ್ರಸಾದ


http://shikshanaloka.blogspot.in/2018/01/blog-post.html?m=1

Sunday 3 June 2018

ಬದುಕ ಬಂಡಿಯಲಿ 15 ಇಪ್ಪತ್ತರ ಬದಲು ಐವತ್ತರ ಗುರಿ ನೀಡಬೇಕಾಗಿತ್ತು ಛೆ! ©ಡಾ.ಲಕ್ಷ್ಮೀ ಜಿ ಪ್ರಸಾದ

ಬದುಕ ಬಂಡಿಯಲಿ 15 ಇಪ್ಪತ್ತರ ಬದಲು ಐವತ್ತರ ಗುರಿ ನೀಡಬೇಕಾಗಿತ್ತು ಛೆ! ©ಡಾ.ಲಕ್ಷ್ಮೀ ಜಿ ಪ್ರಸಾದ

ಇಪ್ಪತ್ತರ ಬದಲು ಐವತ್ತರ ಗುರಿ ನೀಡಬೇಕಾಗಿತ್ತು ಛೆ! ಹೌದು ಈ ಮಾತನ್ನು ನಾನು ಸಾವಿರಕ್ಕೂ ಬಾರಿ ಮನಸಿನಲ್ಲೇ ಅಂದುಕೊಂಡಿದ್ದೇನೆ ..ಏನು ಇಪ್ಪತ್ತು ಯಾವ ಐವತ್ತು ಎಂದು ಕುತೂಹಲ ಇದೆಯೇ <ಹಾಗಾದರೆ ಮುಂದೆ ಓದಿ..

ನಾನು ಸುಮಾರು ಹದಿನೈದು ವರ್ಷಗಳ ಹಿಂದೆ ತುಳು ಸಂಸ್ಕೃತಿ ಜನಪದದ ಕಡೆಗೆ ಆಸಕ್ತಳಾದೆ,ಹಾಗಾಗಿಯೇ ನಾನು ಎಂ ಫಿಲ್ ಪದವಿಯನ್ನು ಈಜೋ ಮಂಜೊಟ್ಟಿಗೋಣ - ಒಂದು ವಿಶ್ಲೇಷಣಾತ್ಮಕ ಅಧ್ಯಯನ ಎಂಬ ವಿಷಯದಲ್ಲಿ ಪಡೆದೆ .
ಇದು ಗದ್ದೆಯಲ್ಲಿ ಆರಾಧನೆ ಗೊಳ್ಳುವ ಉರವ ಮತ್ತು ಎರು ಬಂಟ ಎಂಬ ದೈವಗಳಿಗೆ ಸಂಬಂಧಿಸಿದ್ದು.

ನನ್ನ ತಂದೆ ಮನೆ ಕೋಳ್ಯೂರು ದೇವರ ಕಂಬಳ ಗದ್ದೆಯಲ್ಲಿ ಪ್ರತಿವರ್ಷ ಪೂಕರೆ ಆಗುತ್ತದೆ.ಅಲ್ಲಿ ಆಗ ಭೂತ ಕೋಲ ಕೂಡ ಆಗುತ್ತಾ ಇತ್ತು.ಅಲ್ಲಿ ಆರಾಧನೆ ಹೊಂದುವ ಎರಡು ಭೂತಗಳು ಯಾರು ಎಂದು ಹೆಸರು ಕೂಡ ನಮಗೆ ಗೊತ್ತಿರಲಿಲ್ಲ .
ನಾನು ನನ್ನ ಎಂ ಫಿಲ್ ಥೀಸಿಸ್ ಗಾಗಿಯೇ ಅಲ್ಲಿ ಮೊದಲಿಗೆ ಭೂತ ಕೊಳವನ್ನು ರೆಕಾರ್ಡ್ ಮಾಡಿ ಮಾಹಿತಿ ಸಂಗ್ರಹಿಸಿದೆ.
ಅಲ್ಲಿ ಭೂತ ಕಟ್ಟುವ ಅಪ್ಪಣ್ಣ ಅವರು ಅದು ಉರವ ಮತ್ತು ಎರು ಬಂಟ ಭೂತಗಳು ಎಂದು ತಿಳಿಸಿದರು.ಆದರೆ ಆ ದೈವಗಳ ಹಿನ್ನೆಲೆಯಾಗಲಿ ಕಥನವಾಗಲಿ ಅವರಿಗೆ ತಿಳಿದಿರಲಿಲ್ಲ.ಹಾಗಾಗಿ ನಾನು ತುಳು ವಿದ್ವಾಂಸರ ಸಂಶೋಧನಾ ಕೃತಿಗಳಲ್ಲಿ ಈ ದೈವಗಳ ಬಗ್ಗೆ ಮಾಹಿತಿಗಾಗಿ ಹುಡುಕಾಡಿದೆ .
ಆಗ ನನಗೆ ಒಂದು ಅಚ್ಚರಿ ಕಾದಿತ್ತು ,ಆ ಎರಡು ದೈವಗಳ ಹೆಸರು ಕೂಡ ವಿದ್ವಾಂಸರ ತುಳುನಾಡಿನ ಭೂತಗಳ ಪಟ್ಟಿಯಲ್ಲಿ ದಾಖಲಾಗಿರಲಿಲ್ಲ !ಆಗ ಮೊದಲ ಬಾರಿಗೆ ನನಗೆ ಇನ್ನು ಕೂಡ ತುಳು ಸಂಸ್ಕೃತಿ ಬಗ್ಗೆ ಅಧ್ಯಯನ ಮಾಡುವ ವಿಚಾರಗಳು ತುಂಬಾ ಇವೆ ,ಈ ದೈವಗಳಂತೆ ಇನ್ನೂ ಕೂಡ ನೆಕ ದೈವಗಳ ಹೆಸರು ಕೂಡ ಸಂಗ್ರಹ ಆಗಿರಲಿಕ್ಕಿಲ್ಲ ಎಂದು ಮನವರಿಕೆಯಾಯಿತು .
ಮುಂದೆ ಎಂ ಫಿಲ್ ಅನಂತರ ಡಾಕ್ಟರೇಟ್ ಗಾಗಿ ತುಳುನಾಡಿನ ನಾಗ ಬ್ರಹ್ಮ ಮತ್ತು ಕಂಬಳ ಎಂಬ ವಿಷಯವನ್ನು ಆಯ್ಕೆ ಮಾಡಿಕೊಂಡು ಕ್ಷೇತ್ರ ಕಾರ್ಯಕ್ಕಾಗಿ ತುಳುನಾಡಿನಾದ್ಯಂತ ಅಲೆದಾಡಿದೆ .ಆಗೆಲ್ಲ ಈ ತನಕ್ ಅಧ್ಯಯನವಾಗದ ಹೆಸರು ಕೂಡ ದಾಖಲಾಗದ ಅನೇಕ ದೈವಗಳ ಹೆಸರು ಸಿಕ್ಕಿದ್ದು ,ಈ ಬಗ್ಗೆ ಎಂದಾದರೂ samagra ಮಾಹಿತಿ ಸಂಗ್ರಹಿಸಬೇಕು ಎಂದು ಕೊಂಡಿದ್ದೆ .ಆಗ ನನ್ನ ಪಿಎಚ್ ಡಿ ಥೀಸಿಸ್ ಕಡೆಗೆ ಹೆಚ್ಚು ಗಮನ ಕೊಡಬೇಕಾದ ಅನಿವಾರ್ಯತೆ ಇದ್ದ ಕಾರಣ ಇಂಥ ದೈವಗಳ ಬಗ್ಗೆ ಹೆಚ್ಚು ಮಾಹಿತಿ ಸಂಗ್ರಹಿಸಲು ಸಾಧ್ಯವಾಗಲಿಲ್ಲ .ಆದರೆ ಎಂದಾದರೂ ಈ ಬಗ್ಗೆ ಅಧ್ಯಯನ ಮಾಡಬೇಕು ಎಂಬ ಹಂಬಲವಿತ್ತು .
2009 ರಲ್ಲಿ ನಾನು ಪದವಿ ಪೂರ್ವ ಕಾಲೇಜ್ ಉಪನ್ಯಾಸಕಿಯಾಗಿ ಆಯ್ಕೆಯಾದಾಗ ನನ್ನ ಹಂಬಲ ಮತ್ತೆ ಗರಿಗೆದರಿತು .ಹಾಗಾಗಿಯೇ ನಾನು ಬೆಳ್ಳಾರೆ ಯನ್ನು ಆಯ್ಕೆಮಾಡಿಕೊಂಡು ಬೆಳ್ಳಾರೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಗೆ ಕನ್ನಡ ಉಪನ್ಯಾಸಕಿಯಾಗಿ ಹೋದೆ .
ಅಲ್ಲಿಗೆ ಹೋದ ತುಸು ಸಮಯದಲ್ಲಿಯೇ ನನಗೆ ನನ್ನ ಮೊದಲ ಡಾಕ್ಟರೆಟ್ ಪದವಿ ಸಿಕ್ಕಿತು .
ಅದೇ ಸಮಯದಲ್ಲಿಯೇ(2010 ಫೆಬ್ರುವರಿ ತಿಂಗಳಲ್ಲಿ ಎಂದು ನೆನಪು )ಕರ್ಣಾಟಕ ತುಳು ಅಕಾಡೆಮಿ ಯು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಮ್ಮ ಬೆಳ್ಳಾರೆ ಕಾಲೇಜ್ ನಲ್ಲಿ ತುಳು ಮಿನದನ ಎಂಬ ಸುಳ್ಯ ತಾಲೂಕು ಮಟ್ಟದ ಕಾರ್ಯಕ್ರಮ ಏರ್ಪಡಿಸಿತು .
ಅದಾಗಲೇ ನಾನು ಸ್ಥಳಿಯರಿಗೆ  ಮಾತ್ರವಲ್ಲ ತುಳು ವಿದ್ವಾಂಸರ ಅರಿವಿಗೆ ಬಾರದೆ ಇದ್ದ ಬೆಳ್ಳಾರೆ ಸುತ್ತ ಮುತ್ತಲಿನ ಅಜ್ಜಿ ಭೂತ ,ಮೂವ,ಮಾಲಿಂಗರಾಯ,ದಾಲ್ಸುರಾಯ,ಅಡ್ಯಂತಾಯ ,ಕುಕ್ಕೆತ್ತಿ ಬಳ್ಳು ಮೊದಲಾದ ಅಪರೂಪದ ದೈವಗಳ ಬಗ್ಗೆ ಅಧ್ಯಯನ ಮಾಡಿ ಮಾಹಿತಿ ಸಂಗ್ರಹಿಸಿದ್ದೆ .ಅದನ್ನು ಬೆಳ್ಳಾರೆಯ ಜನತೆಗೆ ತಿಳಿಸಲು ಹಾಗೂ ಈ ರೀತಿಯ ಅಲಕ್ಷಿತ ಅಪರೂಪದ ಉಪದೈವಗಳ ಅಧ್ಯಯನ ಮಾಡುವಂತೆ ಪ್ರೇರೇಪಿಸಲು ಇದು ಸರಿಯಾದ ಸರಿಯಾದ ಅವಕಾಶ ಎಂದು ಅರಿತ ನಾನು ಆ ಕಾರ್ಯಕ್ರಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ತುಳು ನಾಡಿನ ಬಹುಶ್ರುತ ವಿದ್ವಾಂಸರೂ ನನಗೆ ಸಂಶೋಧನೆಗೆ ಪ್ರೇರಣೆ ಕೊಟ್ಟು ಮಾರ್ಗ ದರ್ಶನ ಮಾಡಿರುವ ನನ್ನ ಆತ್ಮೀಯರೂ ಆಗಿದ್ದ ಡಾ.ಅಮೃತ ಸೋಮೇಶ್ವರ ಅವರಲ್ಲಿ "ನನಗೆ ಒಂದು ಪ್ರಬಂಧ ಮಂಡನೆಗೆ ಅವಕಾಶವನ್ನು ಕೊಡುವಂತೆ ಕೇಳಿದೆ .
ಆಗ ಅವರು ತುಳು ಅಕಾಡೆಮಿ ಅಧ್ಯಕ್ಷರಾದ ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು .
ಮರುದಿವಸ ನಾನು ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರಿಗೆ ಫೋನ್ ಮಾಡಿದೆ .ಆಗ ಅವರು ನಿಮ್ಮನ್ನು ಕವಿ ಗೋಷ್ಠಿಗೆ ಹಾಕಿದ್ದೇವೆ ಎಂದರು !
ನನಗೆ ಹೃದಯಘಾತ ಆಗಲು ಸ್ವಲ್ಪ  ಮಾತ್ರ ಬಾಕಿ ಇತ್ತು ,ಅಷ್ಟು ಗಾಬರಿಯಾದೆ !ಯಾಕೆಂದರೆ ನನಗೆ ಮಾತೃ ಭಾಷೆ ಕನ್ನಡದಲ್ಲಿಯೇ  ಕವಿತೆ ಬರೆಯಲು ತಿಳಿದಿಲ್ಲ !ಇನ್ನು ತುಳುವಿನಲ್ಲಿ ..!
ಅಂತೂ ಹೇಗೋ ಸುಧಾರಿಸಿಕೊಂಡು ನನಗೆ ಕವಿ ಗೋಷ್ಠಿ ಬೇಡ ,ನನಗೆ ವಿಚಾರ ಗೋಷ್ಠಿಯಲ್ಲಿ ಅವಕಾಶ ಕೊಡಿ ಎಂದು ಕೇಳಿದೆ .
ಆಗ ಅವರು ಕೊಟ್ಟದ್ದನ್ನು ಮಾಡಬೇಕು ಎಂದು ಹೇಳಿದರು !ಅಯ್ಯೋ ದೇವರೇ ಇವರು ತುಳು ಮಿನದನ ಮಾಡುತ್ತಿದ್ದಾರೆಂದು ನಾನು ಇದ್ದಕ್ಕಿದ್ದಂತೆ ಕವಿಯಾಗಲು ಸಾಧ್ಯವೇ !
ಅದಾಗದು ಎಂದು ಹೇಳಿದೆ .ನೀವು ಅವಕಾಶ ಕೊಡುವುದಾದರೆ ವಿಚಾರ ಸಂಕಿರಣದಲ್ಲಿ ಕೊಡಿ ಎಂದು ಹೇಳಿದೆ .
ಆಗ ಅವರು ಅದರಲ್ಲಿ ವಿಚಾರ ಸಂಕಿರಣದಲ್ಲಿ ಸ್ಥಳಿಯರಿಗೆ ಅವಕಾಶವಿಲ್ಲ ಎಂದು ಹೇಳಿದರು !

ಹೀಗೂ ಉಂಟೆ ?ತುಳು ಭಾಷೆ ಸಂಸ್ಕೃತಿ ಜಾನಪದ ಗಳ ಅಭಿವೃದ್ಧಿಗೆಂದೇ ಸ್ಥಾಪಿತವಾದ ತುಳು ಅಕಾಡೆಮಿ ಯ ಅಧ್ಯಕ್ಷರು ಸ್ಥಳಿಯರಿಗೆ ಅವಕಾಶ ಇಲ್ಲವೆಂದು ಹೇಳಿದರೆ ಅದಕ್ಕೆ ಅರ್ಥವಿದೆಯೇ ?

ನನಗೂ ಛಲ ಬಂತು !ಆ ಕಾರ್ಯಕ್ರಮದಲ್ಲಿ ಸ್ಥಳೀಯ ವಿದ್ವಾಂಸರಾದ ಡಾ.ನರೇಂದ್ರ ರೈ ದೇರ್ಲರು ಇದ್ದಿದ್ದು ನನಗೆ ಗೊತ್ತಿತ್ತು .ಹಾಗಾಗಿ ನಾನು ನರೇಂದ್ರ ರೈ ದೆರ್ಲರು ಸ್ಥಳೀಯರಲ್ಲವೇ ?ಎಂದು ಕೇಳಿದೆ .

ಅದಕ್ಕೆ ಪಾಲ್ತಾಡಿಯವರು "ಅವರೆಲ್ಲಿ ನೀವೆಲ್ಲಿ ?ಅವರು ಇಪ್ಪತ್ತು ಪುಸ್ತಕ ಬರೆದಿದ್ದಾರೆ ಗೊತ್ತಿದೆಯ? "ಎಂದು ಕೇಳಿದರು.
ಹೌದು ಅದು ಒಪ್ಪಿಕೊಳ್ಳಬೇಕಾದ ಮಾತು ,ದೇರ್ಲರ ವಿದ್ವತ್ ಮಟ್ಟಿಗೆ ಎರಡು ಮಾತು ನನ್ನಲ್ಲೂ ಇಲ್ಲ .ಆದರೆ ಸುಳ್ಯ ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಪ್ರಬಂಧ ಮಂಡನೆ ಮಾಡಲು ನನ್ನ ಅರ್ಹತೆ ಧಾರಾಳ ಸಾಕಿತ್ತು ,ಯಾಕೆಂದರೆ ಅದಾಗಲೇ ನಾನು ಮೊದಲ  ಡಾಕ್ಟರೇಟ್ ಪಡೆದಿದ್ದು ಎರಡನೇ ಡಾಕ್ಟರೇಟ್ ಪದವಿಗೆ ಥೀಸಿಸ್ ಸಿದ್ಧ ಪಡಿಸಿದ್ದೆ ಅಲ್ಲದೆ ಸುಮಾರು ಹತ್ತು-ಹನ್ನೆರಡು ಪುಸ್ತಕಗಳೂ ,ಸುಮಾರು 20-30 ಲೇಖನಗಳೂ ಪ್ರಕಟವಾಗಿದ್ದವು .9-1೦ ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲೂ ಪ್ರಬಂಧ ಮಂಡಿಸಿದ ಅನುಭವವಿತ್ತು .
ಹಾಗಾಗಿ ನಾನು ಅದನ್ನೇ ಹೇಳಿದೆ ,"ನಾನು ಅವರಷ್ಟು ವಿದ್ವಾಂಸೆ ಅಲ್ಲವಾದರೂ ಈ ಕಾರ್ಯಕ್ರಮದಲ್ಲಿ ಪ್ರಬಂಧ ಮಂಡಿಸುವಷ್ಟು ಅರ್ಹತೆ ಹಾಗೂ  ಸಾಮರ್ಥ್ಯ ನನ್ನಲ್ಲಿದೆ ಈಗಾಗಲೇ ನಾನು ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ ಅನುಭವವಿದೆ" ಎಂದು ಹೇಳಿದೆ .ಆಗ ಅವರು "ನಿಮಗೆ ಹೆಂಗಸರಿಗೆ ರೇಷ್ಮೆ ಸೀರೆ ಉಟ್ಟು ಮೆರೆಯಲು ಸ್ಟೇಜ್ ಬೇಕು ಅಷ್ಟೇ ತಾನೇ !ಬೇಕಾದರೆ ಕವಿಗೋಷ್ಠಿಗೆ ಬನ್ನಿ" ಎಂದು ಹೇಳಿದರು ,ಅದಕ್ಕೆ ನಾನು ಇಲ್ಲ ನಾನು ಕವಿ ಗೋಷ್ಠಿಗೆ ಬರುವುದಿಲ್ಲ ,ನಾನು ಇನ್ನು ಐದು ವರ್ಷಸಮಯ ಕೊಡಿ  , 20 ಪುಸ್ತಕ ಬರೆದು ಪ್ರಕಟಿಸಿ ಬರುತ್ತೇನೆ ,ಆಗ ಬೆಳ್ಳಾರೆ ಯಲ್ಲಿ ಮತ್ತೆ ತುಳು ಮಿನದನ ಮಾಡುತ್ತೀರಾ ?ಅಥವಾ ನೀವು ಆಗಲೂ ಅಧ್ಯಕ್ಷರಾಗಿರುತ್ತೀರಾ? ಮನಸಿಲ್ಲದಿದ್ದರೆ ಕೊಡುವುದಿಲ್ಲ ಎಂದು ಹೇಳಿ ಅದು ಬಿಟ್ಟು ಬೇರೆ ಮಾತು ಬೇಡ "ಎಂದು ಕೇಳಿ ಫೋನ್ ಕಟ್ ಮಾಡಿದ್ದೆ .



ಅದು ಇರಲಿ  ಅಂದು ಪಾಲ್ತಾಡಿಯವರಲ್ಲಿ ನಾನು 20 ಪುಸ್ತಕ ಬರೆದು ಪ್ರಕಟಿಸುತ್ತೇನೆ ಐದು ವರ್ಷದ ಒಳಗೆ ಎಂದಿದ್ದೆ !ಹೌದು ಅಂದು ಹೇಳಿದಂತೆಯೇ ಮಾಡಿದೆ ನಂತರ 3 ವರ್ಷಗಳ ಒಳಗೆ ನನ್ನ 20 ಪುಸ್ತಕಗಳೂ ಪ್ರಕಟವಾದವು !

 2013 ನವೆಂಬರ್ನಲ್ಲಿ ನನ್ನ 20 ನೆಯ ಪುಸ್ತಕ ತುಳುನಾಡಿನ ನಾಗ ಬ್ರಹ್ಮ ಮತ್ತು ಕಂಬಳ -ಒಂದು ವಿಶ್ಲೇಷಣಾತ್ಮಕ ಅಧ್ಯಯನ (ಪಿಎಚ್ ಡಿ ಮಹಾ ಪ್ರಬಂಧ ) ಪ್ರಕಟವಾಯಿತು

ಪಾಲ್ತಾಡಿ ಯವರು ಹೇಳಿದ ಗುರಿ 20 ರ ಗುರಿ ಈಡೇರುವ ತನಕ ನಿಲ್ಲಿಸದೆ ಒಂದಿನಿತೂ ವಿರಮಿಸದೆ ಕ್ಷೇತ್ರ ಕಾರ್ಯ ಮಾಡಿದೆ ಬರೆದೆ ಪ್ರಕಟಿಸಿದೆ .
 ,ತುಳು ಸಂಸ್ಕೃತಿ ಬಗ್ಗೆ ಅಧ್ಯಯನ ಮಾಡುತ್ತಿರುವ ನನಗೆ ಅವಕಾಶ ನೀಡಿ  ಬೆಂಬಲಿಸುವುದನ್ನು  ತುಳು ಅಕಾಡೆಮಿ ಮಾಡಬೇಕಾಗಿತ್ತು ,ಅದನ್ನು ಮಾಡದೇ ಇದ್ದದ್ದು ಯಾರಿಗೂ ತಪ್ಪು ಎನಿಸಲೇ ಇಲ್ಲ  ,ಆದರೆ  ಈ ಬೆಳ್ಳಾರೆ ಯಲ್ಲಿ ನಾನು ಒಂದು ಅವಕಾಶ ಕೇಳಿದ್ದು ಆಗ ಅವಮಾನಿಸಿ ಮಾತಾಡಿದ್ದಕ್ಕೆ ಪ್ರತಿ ಉತ್ತರ ನೀಡಿದ್ದು ದೊಡ್ಡ ಅಪರಾಧ ಎನಿಸಿತು !
ಅದರ ಪರಿಣಾಮ ನಾನು ಸಂಶೋಧಕಿಯಾಗಿ ಗುರುತಿಸಲ್ಪಡಲಿಲ್ಲ,ಬದಲಿಗೆ ಅಹಂಕಾರಿಯಾಗಿ ಪರಿಗಣಿಸಲ್ಪಟ್ಟು,ತುಳು ಅಕಾಡೆಮಿಯ ಎಲ್ಲ ಕಾರ್ಯಕ್ರಮಗಳಿಂದಲೂ ಹೊರಗೆ ಉಳಿಯಬೇಕಾಯಿತು ಅಥವಾ ಹೊರಗೆ ಇರಿಸಿದರು ಎಂಬುದು ಹೆಚ್ಚ್ಚು ಸರಿ !
ಜೊತೆಗೆ ನನ್ನ ತುಳು ಸಂಶೋಧನಾ ಕಾರ್ಯಕ್ಕೆ ಮನ್ನಣೆ ಸಿಗದ ಕಾರಣ ನಾನು ಕೆಲಸ ಮಾಡುವ ಸಂಸ್ಥೆಯಲ್ಲೂ ಅವಗಣನೆಗೆ ಒಳಗಾದೆ !

ಹಾಗೆ ನೋಡಿದರೆ ಪಾಲ್ತಾಡಿಯವರು ಕೆಟ್ಟ ವ್ಯಕ್ತಿ ಏನೂ ಅಲ್ಲ ಅನೇಕರಿಗೆ ಬೆಂಬಲ ಕೊಟ್ಟ ಸಹೃದಯರೇ ಆಗಿದ್ದರು .ಇದೆಲ್ಲ ಆಗಿ ಐದು ವರ್ಷಗಳ ನಂತರ ಇತ್ತೀಚೆಗೆ ನಾನು ಭಾಗವಹಿಸಿದ್ದ ಮಂಗಳೂರು ತಾಲೂಕು ತುಳು ಮಿನದನ ಕಾರ್ಯಕ್ರಮಕ್ಕೆ ಬಂದಿದ್ದ ತುಳು ಅಕಾಡೆಮಿ ಮಾಜಿ ಅಧ್ಯಕ್ಷ ಪಾಲ್ತಾಡಿಯವರು ನನಗೆ ಮಾತಿಗೆ ಸಿಕ್ಕರು ,ಆಗ ನಾನು ಹಿಂದೆ ಬೆಳ್ಳಾರೆಯಲ್ಲಿ ನೀವು ಯಾಕೆ ಅವಕಾಶ ಕೊಡಲಿಲ್ಲ ?ತುಳು ಅಧ್ಯಯನ ಆಸಕ್ತರಿಗೆ ಬೆಂಬಲ ಕೊಡಬೇಕಾದ್ದು ಅಕಾಡೆಮಿಯ ಜವಾಬ್ದಾರಿ ಕೂಡ  ತಾನೇ ಎಂದು ಕೇಳಿದೆ .ಆಗ ಅವರು ಆಗ ಆದ ಪ್ರಮಾದವನ್ನು ಒಪ್ಪಿಕೊಂಡು ಹಾಗೆ ಆಗಬಾರದಿತ್ತು ಆದರೆ ಅಲ್ಲಿ ನಿಮಗೆ ಅವಕಾಶ ಕೊಡದೆ ಇರುವುದಕ್ಕೆ  ನಿಮ್ಮ್ಮ ಸಂಸ್ಥೆಯ ಸಹೋದ್ಯೋಗಿಗಳ ಬಲವಾದ ವಿರೋಧವೂ ಕಾರಣವಾಗಿತ್ತು ಎಂದು ಹೇಳಿ ನಂತರ ನಮಗೆ ಬಂಟ್ವಾಳ ದಲ್ಲಿ ಆಗುವಾಗ ಅವಕಾಶ ಕೊತ್ತಿದೆವು ಅಲ್ವ ಎಂದು ಹೇಳಿದರು !
ಆದರೆ ಬಂಟ್ವಾಳದಲ್ಲಿಯೂ ಅವರು ವಿರೋಧ ವ್ಯಕ್ತ ಪಡಿಸಿದ್ದರು ,ಅದರ ಹಿನ್ನೆಲೆ ಹೀಗಿದೆ
ಅದಾಗಿ ಸ್ವಲ್ಪ ಸಮಯದ ನಂತರ ಬಂಟ್ವಾಳ ತಾಲೂಕಿನಲ್ಲಿ ತುಳು ಅಕಾಡೆಮಿ ದ್ರಾವಿಡ ಜಾನಪದ ಮೇಳ ಎಂಬ ಒಂದು ಕಾರ್ಯಕ್ರಮ ಆಯೋಜಿಸಿತು ,ಆಗ ಮತ್ತೆ ಅಲ್ಲ್ಲಿನ ಸಂಘಟಕರನ್ನು ಸಂಪರ್ಕಿಸಿ ನನಗೆ ಒಂದು ಅವಕಾಶ ಕೊಡಿ ಎಂದು ಕೋರಿದೆ .
ಆಗ ಕೂಡ ಅಕಾಡೆಮಿ ಅಧ್ಯಕ್ಷರಾದ ಪಾಲ್ತಾಡಿಯವರು ಬಲವಾಗಿ ವಿರೋಧಿಸಿದ ಬಗ್ಗೆ ಆಗ ಅಕಾಡೆಮಿ ಸದಸ್ಯರಾಗಿದ್ದ ಅಶೋಕ ಶೆಟ್ಟಿ ಅವರು ತಿಳಿಸಿದ್ದರು ,ನಂತರ ಸ್ಥಳೀಯ ಪ್ರಭಾವಿ ವ್ಯಕ್ತಿಗಳ ಕಾರಣಕ್ಕೆ ಮನಸಿಲ್ಲದ ಮನಸಿನಲ್ಲಿ ಅಲ್ಲಿ "ಪಾಡ್ದನೊಡು ಮೂಡಿ ಬತ್ತಿ ಪೊಣ್ಣು" ಎಂಬ ವಿಷಯದಲ್ಲಿ ಪ್ರಬಂಧ ಮಂಡನೆ ಮಾಡಲು ಅವಕಾಶ ಕೊಟ್ಟರು .ಅದನ್ನು ಬಳಸಿಕೊಂಡು ಅತ್ಯುತ್ತಮವಾಗಿ ಪ್ರಬಂಧ ಮಂಡನೆ ಮಾಡಿ ಸೈ ಎನಿಸಿಕೊಂಡೆ ಆದರೂ ಮುಂದೆ ನನಗೆ ಅವಕಾಶ ನೀಡಲಿಲ್ಲ

2013 ರಲ್ಲಿ ಸವಣೂರಿನಲ್ಲಿ ಅಖಿಲ ಭಾರತ ತುಳು ಸಮ್ಮೇಳನ ಆಯಿತು ,ಅದಕ್ಕೆ ಒಂದು ಅಹ್ವಾನ ಪತ್ರ ಕೂಡ ನನಗೆ ಕಳುಹಿಸಿಲ್ಲ. ಅದಕ್ಕೆ ಎಂದಲ್ಲ ಇಂದಿನ ತನಕವೂ ಯಾವುದೇ ಒಂದು ತುಳು ಅಕಾಡೆಮಿ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಪತ್ರಿಕೆ ಕಳುಹಿಸುವುದೇ ಇಲ್ಲ ಯಾಕೆಂದರೆ ಇನ್ನೂ ನಾನು ತುಳು ಅಕಾಡೆಮಿ ಪದಾಧಿಕಾರಿಗಳ ದೃಷ್ಟಿಯಲ್ಲಿ ತುಳು ಸಂಶೋಧಕಿಯಲ್ಲ !
ಇದಕ್ಕೆ ಕೇವಲ ಪಾಲ್ತಾಡಿಯವರು ಕಾರಣರಲ್ಲ ಖಂಡಿತ ಎಂಬುದು ನನಗೆ ಈಗ ಮನವರಿಕೆಯಾಗಿದೆ .ಯಾಕೆಂದರೆ ಅವರ ನಂತರ ಬೇರೆ ಅಧ್ಯಕ್ಷರು ಬಂದಾಗಲೂ ನನಗೆ ಯಾವ ಬೆಂಬಲವೂ ಸಿಗಲಿಲ್ಲ.ಅದರಲ್ಲಿಯೇ ಸ್ಪಷ್ಟವಾಗುತ್ತದೆ ಇದರಲ್ಲಿ ಬೇರೆ ಪದಾಧಿಕಾರಿಗಳ ಕೈವಾಡ ಇದೆಯೆಂಬುದು !
ಇದರೊಟ್ಟಿಗೆ ಇನ್ನೊಂದು ವಿಚಾರವೂ ನೆನಪಾಗುತ್ತದೆ !
2012 ಅಥವಾ 2013 ರಲ್ಲಿ ಇರಬೇಕು ,ತುಳು ಅಕಾಡೆಮಿಯು ತುಳು ಭಾಷೆ ಸಂಸ್ಕೃತಿಗೆ ಸಂಬಂಧಿಸಿ ಸಂಶೋಧನೆ ಮಾಡಲು ಇಚ್ಚಿಸುವ ಐವರಿಗೆ ಒಂದು ಲಕ್ಷ ರು ಸಂಶೋಧನಾ ಸಹಾಯ ಧನ ಕೊಡುವ ಬಗ್ಗೆ ತಿಳಿಸಿ ಆಸಕ್ತರು ಅರ್ಜಿ ಸಲ್ಲಿಸಲು ಪತ್ರಿಕೆಯಲ್ಲಿ ಹೇಳಿಕೆ ನೀಡಿದ್ದರು ,ಆಗ ನಾನು ಅರ್ಜಿ ಸಲ್ಲಿಸಲು ಇಚ್ಚಿಸಿ ಆ ಬಗ್ಗೆ ತುಳು ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಗಳಿಗೆ ಫೋನ್ ಮಾಡಿದೆ ಆಗ ಅವರು ಅವರು ಅಧ್ಯಕ್ಷರಾದ ಪಾಲ್ತಾಡಿ ಯವರಿಗೆ ಫೋನ್ ಕೊಟ್ಟರು .ಆಗ ಅವರು ಸರ್ಕಾರಿ ಉದ್ಯೋಗಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ಹೇಳಿದರು ,ಹಾಗಾಗಿ ನಾನು ಅರ್ಜಿಸಲ್ಲಿಸಲಿಲ್ಲ !
ಒಂದು ಗಮ್ಮತ್ತು ನೋಡಿ ..ಒಂದೆರಡು ತಿಂಗಳು ಕಳೆದು ಪತ್ರಿಕೆಯಲ್ಲಿ ಪೆರುವಾಜೆ ಸರ್ಕಾರಿ ಪದವಿ ಕಾಲೇಜ್ ಉಪನ್ಯಾಸಕ ದ.ನರೇಂದ್ರ ರೈ ದೇರ್ಲ ಸೇರಿದಂತೆ ಐವರಿಗೆ ತಲಾ ಒಂದು ಲಕ್ಷ ಸಂಶೋಧನಾ ಸಹಾಯ ಧನ ಸಿಕ್ಕಿದ ವಿಚಾರ ಬಂತು !
ನಾನು ವಿಚಾರಿಸುವಾಗ ಸರ್ಕಾರಿ ಉದ್ಯೋಗಿಗಳಿಗೆ ಅವಕಾಶವಿಲ್ಲ ಎಂದವರು ನನ್ನಂತೆಯೇ  ಸರ್ಕಾರಿ ಉದ್ಯೋಗಿ ಯಾಗಿರುವ ದೇರ್ಲರಿಗೆ  ಸಂಶೋಧನಾ ಸಹಾಯ ಧನ ನೀಡಿದ್ದರು !

ಈಗ ಇಪ್ಪತ್ತರ ಗುರಿ ತಲುಪಿದ್ದೇನೆ,ಅಕಾಡೆಮಿ ಅಧ್ಯಕ್ಷರು ಬದಲಾದರು, ಮತ್ತೆ ಬೆಳ್ಳಾರೆಯಲ್ಲಿ ತುಳು ಅಕಾಡೆಮಿ ಯ ಕಾರ್ಯಕ್ರಮಗಳು ಆಗಿವೆ ಅದರಿಂದಲೂ ನನ್ನನ್ನು ಹೊರಗೆ ಇರಿಸಿದ್ದರು ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ ತಾನೇ ?  ಇಂದಿನವರೆಗೂ ತುಳು ಅಕಾಡೆಮಿ ನನಗೆ ನನ್ನ ಸಂಶೋಧನೆಯ ಆಸಕ್ತಿಯ ವಿಚಾರವಾದ ಉಪದೈವಗಳ ಬಗ್ಗೆ ಮಾತನಾಡಲು ಕರೆದಿಲ್ಲ,ತುಳು ವಿದ್ವಾಂಸರ ಪಟ್ಟಿಯಲ್ಲಿ ನಾನಿನ್ನೂ ಸೇರಿಲ್ಲ ,ಯಾಕೆಂದರೆ ನಾನು ಯಾರ ಚೀಲವನ್ನೂ ಹಿಡಿದುಕೊಂಡು ಓಲೈಸಿಕೊಂದು ಹೋಗಲಾರೆ !ಹಾಗಾಗಿ ಅಂದಿನಿಂದ ಇಂದಿನವರೆಗೂ ನಾನು ನನ್ನ ಸಂಶೋಧನೆಗೆ ಯಾರ ಸಹಾಯವನ್ನೂ ಆಶಿಸಲಿಲ್ಲ ,ನಾನು ಸ್ವತಂತ್ರವಾಗಿಯೇ ಅಧ್ಯಯನ ಮಾಡಿದೆ !
 ೆರಡು(ಅಧ್ಯಕ್ಷೆಯಾಗಿ ಜಾನಕಿ ಬ್ರಹ್ಮಾವರ ಅವರು ಬಂದಮೇಲೆ ಒಂದು ಮಂಗಳೂರು ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಡಿ ಕೆ ಚೌಟರ ಮಿತ್ತ ಬೈಲು ಯಮುನಕ್ಕೆ ಕಾದಂಬರಿ ಬಗ್ಗೆ ಮಾತನಾಡಲು ಕರೆದಿದ್ದು ನಾನು ಹೋಗಿ ಮಾತನಾಡಿ ಬಂದಿದ್ದೇನೆ )


ಅಂದು ಸ್ಥಳಿಯರಿಗೆ ಅವಕಾಶವಿಲ್ಲ ಎಂದು ಅವರು ಹೇಳಲು ಕಾರಣವೇನು ಇಂದು ನನಗೆ ಅರಿವಾಗಿದೆ ,ಅಲ್ಲಿ ನನಗೆ ಅವಕಾಶ ಕೊಡಬಾರದು ಎಂಬ ನಿರ್ಬಂಧ ನನ್ನ  ಸಹೋದ್ಯೋಗಿ ಗಳಿಂದ ಉಂಟಾಗಿತ್ತು ಅಂತೆ !ಹೊಟ್ಟೆ ಕಿಚ್ಚು ಏನೆಲ್ಲಾ ಮಾಡಿಸುತ್ತದೆ ಎಂಬುದಕ್ಕೆ ನಾನು ಪ್ರತ್ಯಕ್ಷ ಸಾಕ್ಷಿಯಾಗಿದ್ದೆನೆ !ಅಂದು ಆರಂಭಿಸಿದ ಕಿರುಕುಳ ಮುಂದು ವರಿಯುತ್ತಲೇ ಬಂದಿದೆ,ಇಂದಿನ ವರೆಗೂ ,ಅದನ್ನು ಇನ್ನೊಂದು ದಿನ ಬರೆಯುತ್ತೇನೆ ..

ಅದಿರಲಿ ,ಇಪ್ಪತ್ತರ ಗುರಿ ತಲುಪಿ ನಾಲ್ಕು ವರ್ಷಗಳು ಆಗುತ್ತಾ ಬಂತು ,ಒಂದೇ ಒಂದು ಪುಸ್ತಕ ಬರೆದಿಲ್ಲ ಪ್ರಕಟಿಸಿಲ್ಲ ,ಯಾಕೋ ಏನೋ ಬರೆಯುವ ಪ್ರಕಟಿಸುವ ಮೂಡ್ ಹೊರಟು ಹೋಗಿದೆ ,ಹಾಗಾಗಿ ಈಗ ನನಗೆ ಅವರು ಇಪ್ಪತ್ತರ ಬದಲು ಐವತ್ತರ ಗುರಿ ನೀಡಿರುತ್ತಿದ್ದರೆ ಛೆ !ಎಂದೆನಿಸುತ್ತದೆ ,ಹಾಗೊಂದು ವೇಳೆ ಅವರು ಹೇಳಿರುತ್ತಿದ್ದರೆ ನಾನು ಖಂಡಿತವಾಗಿಯೂ 50 ಪುಸ್ತಕ ಪ್ರಕಟವಾಗುವ ವರೆಗೂ ವಿರಮಿಸುತ್ತ ಇರಲಿಲ್ಲ!ಖಂಡಿತ !

ಹಾಗೆಂದು ನನ್ನ ಕಾರ್ಯವನ್ನು ನಾನು ನಿಲ್ಲಿಸುತ್ತೇನೆ ಎಂದಲ್ಲ ,ಸಂಶೋಧನೆಯನ್ನು ನಾನು ನಂತರವೂ ಮುಂದುವರಿಸಿದ್ದೇನೆ ,ಪುಸ್ತಕ ಬರೆಯುದು ಪ್ರಕಟಿಸುವ ಬದಲು ಬ್ಲಾಗ್ ನಲ್ಲಿ ಬರೆದು ಎಲ್ಲರಿಗೂ ಸಿಗುವ ಹಾಗೆ ಮಾಡಿದ್ದೇನೆ ,ಮುಂದೆ ಸಂದರ್ಭ ಸಿಕ್ಕಾಗ ಪ್ರಕಟಿಸಬೇಕು ಎಂದು ಇದೆ


ನನ್ನ ಸಂಶೋಧನಾ ಸಾಹಿತ್ಯಿಕ ಕೃತಿಗಳುಗಳು ಇನ್ನು ಪ್ರಕಟವಾಗುತ್ತವೋ ಇಲ್ಲವೋ ಗೊತ್ತಿಲ್ಲ ಆದರೆ ಮುಂದೆ ಒಂದಿನ ನನ್ನ ಆತ್ಮ ಚರಿತ್ರೆ ಖಂಡಿತ ಬರೆದು ಪ್ರಕಟಿಸುತ್ತೇನೆ ಯಾಕೆಂದರೆ ನನ್ನ ಕಾಲೇಜ್ ಸಹೋದ್ಯೋಗಿ ಗಳು ,ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ,ತುಳು ಅಕಾಡೆಮಿ ಬೆಳ್ಳಾರೆ ಚೊಕ್ಕಾಡಿ ಪಂಜ ಸೀಮಾ ಹವ್ಯಕ ಪರಿಷತ್ ನ ಅಧ್ಯಕ್ಷರುಗಳು,ನನ್ನ ಸಂಬಂಧಿಕರು ಹೀಗೆ ಹತ್ತು ಹಲವು ಜನರು ಅದರ ಪುಟಗಳನ್ನೂ ತುಂಬಲು ಸಾಕಷ್ಟು ವಸ್ತುಗಳನ್ನು ಕೊಟ್ಟಿದ್ದಾರೆ !!ಅದಕ್ಕಾಗಿಯಾದರೂ ಬರೆಯಬೇಕು ಎಂದುಕೊಂಡಿದ್ದೇನೆ !
© ಡಾ.ಲಕ್ಷ್ಮೀ ಜಿ ಪ್ರಸಾದ
http://laxmipras.blogspot.com/2015/10/15.html?m=1

ಬದುಕ ಬಂಡಿಯಲಿ 14 ಇವೆಲ್ಲವೂ ನನ್ನ ಸ್ವಂತದ್ದು !© ಡಾ.ಲಕ್ಷ್ಮೀ ಜಿ ಪ್ರಸಾದ

ಬದುಕ ಬಂಡಿಯಲಿ 14 ಇವೆಲ್ಲವೂ ನನ್ನ ಸ್ವಂತದ್ದು !© ಡಾ.ಲಕ್ಷ್ಮೀ ಜಿ ಪ್ರಸಾದ

ತುಳು ಸಂಸ್ಕೃತಿ ಭೂತಾರಾಧನೆ ಕುರಿತು ಅಧ್ಯಯನ ಮಾಡುವಾಗ ಇಂತಹದೊಂದು ಪ್ರಶ್ನೆ ನನಗೆ ಎದುರಾಗಬಹುದು ಎಂದು ನಾನು ಊಹೆ ಕೂಡ ಮಾಡಿರಲಿಲ್ಲ.
ಅನೇಕರು ನನ್ನಲ್ಲಿ ಕೇಳುವ ಪ್ರಶ್ನೆಗಳು ಇವು
 ,ಈ ಭೂತಗಳ ಫೋಟೋಗಳು ನಿಮಗೆ ಎಲ್ಲಿಂದ ಸಿಕ್ಕುತ್ತವೆ ? ಸಾವಿರದ ಐನೂರು ಹೆಸರುಗಳನ್ನು ಸಂಗ್ರಹಿಸಿ ಕೊಟ್ಟವರಾರು ? ಈ ಮಾಹಿತಿಗಳು ಎಲ್ಲಿಂದ ಸಿಕ್ಕಿತ್ತು ? ವಿಕಿಪೀಡಿಯದಿಂದ ಪಡೆದಿರಾ ?
ಹೌದು !ಭೂತಗಳ ಫೋಟೋಗಳ ಮೇಲೆ ಹೆಸರು ಇವೆಯಲ್ಲ ?ಯಾರದೆಂದು ಕೂಡ ಹಾಕುತ್ತೆನಲ್ಲ ಎಂದು ಉತ್ತರಿಸಿದರೆ ಅದಲ್ಲ .ಡಾ.ಲಕ್ಷ್ಮೀ ಜಿ ಪ್ರಸಾದ ಎಂದು ನೀವು ಹಾಕುತ್ತೀರಲ್ಲ ಆ ಫೋಟೋಗಳು ನಿಮಗೆ ಎಲ್ಲಿಂದ ಸಿಕ್ತು ?ಯಾರು ಕೊಟ್ಟದ್ದು?ಎಂಬ ಮರು ಪ್ರಶ್ನೆ ಎದುರಾಗುತ್ತದೆ.

ಬೇರೆಯವರು ತೆಗೆದ ಫೋಟೋ ನಮ್ಮ ಹೆಸರನ್ನು ಹಾಕಿಕೊಳ್ಳಲು ಸಾಧ್ಯವೇ ?!ನಾನು ಸ್ವತಹ ಸೆರೆ ಹಿಡಿದ ಚಿತ್ರಗಳು ಎಂದರೆ ಅನೇಕರಿಗೆ ನಂಬಿಕೆ ಇಲ್ಲ !
ಸಾಮಾನ್ಯವಾಗಿ ಭೂತಾರಾಧನೆ ನಡು ರಾತ್ರಿ ನಡೆಯುತ್ತದೆ ,
ಏಕಾಂಗಿಯಾಗಿ ಯಾರ ಸಹಾಯವಿಲ್ಲದೆ ಭೂತಗಳ ಕುರಿತು ರೆಕಾರ್ಡ್ ಮಾಡಿ ಸಮೀಪದಿಂದ ಮಾಹಿತಿ ಕಲೆ ಹಾಕುವುದು ತುಸು ಕಷ್ಟದ ವಿಚಾರ ,ಹಾಗಾಗಿಯೇ ಹೆಚ್ಚಿನವರು ಈಗಾಗಲೇ ಸಂಗ್ರಹವಾಗಿರುವ ಮಾಹಿತಿಯ ವಿಶ್ಲೇಷಣೆಯನ್ನು ಆಧರಿಸಿ ಸಂಶೋಧನೆಗೆ ಮುಂದಾಗುವುದು ಕಾಣಿಸುತ್ತಿದೆ.ಸ್ತ್ರೀಯರಂತು ಈ ವಿಭಾಗದ ಅಧ್ಯಯನಕ್ಕೆ ಕೈ ಹಾಕುವ ಸಾಹಸಕ್ಕೆ ಹೋಗುವುದಿಲ್ಲ ಎನ್ನುವುದೂ ಸತ್ಯವೇ .
ಹಾಗಾಗಿ ಈ ಬಗ್ಗೆ ಅಧ್ಯಯನ ಮಾಡಿರುವ ಸ್ತ್ರೀಯರ ಸಂಖ್ಯೆ ಬೆರಳೆಣಿಕೆಯಷ್ಟು ಕೂಡ ಇಲ್ಲ ಎನ್ನುವುದು ವಾಸ್ತವ .ಹಾಗೆಂದು ಸ್ತ್ರೀಯರು ಈ ಬಗ್ಗೆ ಅಧ್ಯಯನ ಮಾಡಿಯೇ ಇಲ್ಲ ಎಂದು ಹೇಳುವಂತಿಲ್ಲ .ಮಾರ್ಥಾ ಆಸ್ಟನ್ ಒಂದಿಗೆ ಅಧ್ಯಯನನ್ಕ್ಕಾಗಿ ಸುತ್ತಿದ ಡಾ.ಲೀಲಾ ಕೆ ,ತುಳುನಾಡ ಆಲಡೆಗಳ ಬಗ್ಗೆ ಅಧ್ಯಯನ ಮಾಡಿರುವ ಡಾ.ಇಂದಿರಾ ಹೆಗಡೆಯವರೂ ಆನುಷನ್ಗಿಕವಾಗಿ ಭೂತಾರಾಧನೆಯ ಕುರಿತೂ ಅಧ್ಯಯನ ಮಾಡಿದ್ದಾರೆ.ಇನ್ನು ಒಬ್ಬಿಬ್ಬರು ಇರಬಹುದು.
ಇದು ಸ್ತ್ರೀಯರಿಗೆ ಅಸಾಧ್ಯ ಖಂಡಿತಾ ಅಲ್ಲ ,ಸ್ವಲ್ಪ ಜಾಗರೂಕತೆ ,ಮುನ್ನೆಚ್ಚರಿಕೆ ,ಒಳ್ಳೆಯ ಸಂವಹನ ಕಲೆ ,ಎಲ್ಲಕ್ಕಿಂತ ಹೆಚ್ಚಾಗಿ ತುಳು ಸಂಸ್ಕೃತಿ ಹಾಗೂ ಭೂತಾರಾಧನೆ ಕುರಿತಂತೆ ತೀವ್ರ ಸೆಳೆತ ಇದ್ದರೆ ಯಾರೂ ಕೂಡ ಈ ಕ್ಷೇತ್ರದಲ್ಲಿ ಸಂಶೋಧನೆ ಮಾಡಬಹುದು.
ಹಾಗಾಗಿಯೇ ನನಗೆ ಈ ಕ್ಷೇತ್ರದಲ್ಲಿ ಅಧ್ಯಯನ ಮಾಡಲು ಸಾಧ್ಯವಾಯಿತು .ನಾನೇ ಸ್ವತಹ ಮಾಡಿದ್ದರೂ ಅನೇಕರಿಗೆ ನಂಬಿಕೆ ಇಲ್ಲದಾದಾಗ ಮಾತ್ರ ತುಸು ಖೇದವಾಗುತ್ತದೆ. ಮಿಲಿಟರಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸೈ ಎನಿಸಿಕೊಂಡಿರುವ ಸ್ತ್ರೀಯರಿಗೆ ಭೂತಾರಾಧನೆಯ ಕ್ಷೇತ್ರದ ಅಧ್ಯಯನ ಅಸಾಧ್ಯವೇ ?ಹೆಂಗಸರ ಸಾಮರ್ಥ್ಯದ ಬಗ್ಗೆ ಅಥವಾ ನನ್ನ ಬಗ್ಗೆ ಇಷ್ಟು ಅಪನಂಬಿಕೆಯೇಕೆ ಜನರಿಗೆ ಎಂದು ನನಗೆ ಅರ್ಥವಾಗುತ್ತಿಲ್ಲ !ಆದ್ದರಿಂದಲೇ ನಾನು ಪ್ಲೀಸ್ ನಂಬಿ ..ಇವೆಲ್ಲವೂ ನನ್ನ ಸ್ವಂತದ್ದು ! ಎಂದು ಹೇಳಬೇಕಾಯಿತು .
ಇನ್ನೂ ಕೆಲವರದ್ದು ನಮಗೆ ಗೊತ್ತಿಲ್ಲದೆ ಇರುವ ಮಾಹಿತಿ ಇವರಿಗೇಗೆ ಸಿಗಲು ಸಾಧ್ಯ ? ನಮಗೆ ತಿಳಿಯದ ಭೂತಗಳ ಹೆಸರು ಇರಲು ಹೇಗೆ ಸಾಧ್ಯ ? ಎಂಬ ವಿತ್ತಂಡ ವಾದವೂ ಇದೆ.ಅಧ್ಯಯನ ಮಾಡಿದ ಎಲ್ಲರಿಗೂ ಇಂತಹ ಅಪರೂಪದ ಮಾಹಿತಿಗಳು ದೊರೆತಸವು.ಆದರೆ ಛಲ ಬಿಡದೆ ನಿರಂತರ ಯತ್ನ ಮಾಡುತ್ತಾ ಇರಬೇಕು ಅಷ್ಟೇ
ಇನ್ನೂ ಕೆಲವರದು ಇದಕ್ಕೆ ರೆಫರೆನ್ಸ್ ಇಲ ಎಂಬ ಆರೋಪ ! ಹೌದು ,ಅಪರೂಪದ ಕನ್ನಡ ಬೀರ,ಅಚ್ಚು ಬಂಗೇತಿ,ಅಕ್ಕಚ್ಚು,ಅಜ್ಜಿ ಭೂತ,ಕುಕ್ಕೆತ್ತಿ ಬಳ್ಳು,ನೆಲ್ಲೂರಾಯ,ಬಾಣಿಯೆತ್ತಿ,ಪುರುಷ ಭೂತ ಮೊದಲಾದ ಅನೇಕ ದೈವಗಳ ಬಗ್ಗೆ ನಾನೇ ಮೊದಲಿಗೆ ಬರೆದವಳು. ಇಂತಹ ನೂರೈವತ್ತು ಇನ್ನೂರಕಿಂತ  ಹೆಚ್ಚಿನ ದೈವಗಳ ಬಗ್ಗೆ ಬೇರೆ ವಿದ್ವಾಂಸರ ಕೃತಿಗಳಲ್ಲಿ ಒಂದು ಗೆರೆಯ ಮಾಹಿತಿ ಕೂಡ ಇಲ್ಲ,ಈ ಹೆಸರುಗಳು ಕೂಡ ಇಲ್ಲ .ನಾನು ಕ್ಷೇತ್ರ ಕಾರ್ಯದಲ್ಲಿ ಸಿಕ್ಕ ಮಾಹಿತಿಯನ್ನು ಅಧರಿಸಿ ಬರೆದ ಬರಹಗಳು ಇವು.ಹಾಗಾಗಿ ಇವುಗಳಿಗೆ ರೆಫರೆನ್ಸ್ ಇರುವುದಿಲ್ಲ
ಹಾಗೆಂದು ನಾನು ಸಾವಿರದೊಂದು ಗುರಿಯೆಡೆಗೆ ಬಳಸಿದ ಎಲ್ಲ ಫೋಟೋಗಳು ನನ್ನದಲ್ಲ ,ಅನೇಕ ತುಳು ಸಂಸ್ಕೃತಿ ಆಸಕ್ತರು ತೆಗೆದ ಫೋಟೋಗಳನ್ನು ಅವರ ಅನುಮತಿಯೊಂದಿಗೆ ಅವರವರ ಹೆಸರು ಉಲ್ಲೇಖಿಸಿ ಬಳಸಿದ್ದೇನೆ .ಧರ್ಮ ದೈವ .ಜೀವಿತ್ ಶೆಟ್ಟಿ ,ಸಂಕೇತ ಪೂಜಾರಿ ,ಪವನ್ ಕೆ ಎಸ ,ಭರತ್ ಬಿ ಭಂಡಾರಿ ,ರಾಜಗೋಪಾಲ ಹೆಬ್ಬಾರ್ ನೆರಿಯ ,ಯಶ್ವಿನ್ ,ನಮ್ಮ ಮರ್ನೆ ಗರೋಡಿ ಮೊದಲಾದವರ ಅದ್ಭುತ ಫೋಟೋಗಳನ್ನು ಅಗತ್ಯವಿದ್ದಾಗ ಬಳಸಿಕೊಂಡಿದ್ದೇನೆ . ಹಾಗೆ ನೋಡಿದರೆ ಒಳ್ಳೆಯ ಫೋಟೋಗಳುಸಿಕ್ಕಾಗ ನನ್ನ ಬರವಣಿಗೆಯ ವೇಗ ಹೆಚ್ಚಾಗುತ್ತದೆ.ಕೆಲವೊಂದು ಮಾಹಿತಿಯನ್ನು ಕೂಡ ಬೇರೆಯವರು ನೀಡಿದ್ದು ಅಲ್ಲಿ ಕೂಡ ಮಾಹಿತಿ ಕೃಪೆ ಎಂದು ಹಾಕಿ ನೀಡಿದವರ ಹೆಸರನ್ನು ಸ್ಮರಿಸಿ ಅದರ ಕ್ರೆಡಿಟ್ ಅನ್ನು ಅವರಿಗೆ ಸಲ್ಲಿಸಿದ್ದೇನೆ.

ಇರಲಿ ನನ್ನ ಅಧ್ಯಯನದ ಕುರಿತು ನಂಬಿಕೆ ಇರುವ ತುಳು ಸಂಸ್ಕೃತಿ ಬಗ್ಗೆ ಆಸಕ್ತರು/ ಸಹೃದಯಿಗಳು ನನ್ನ ಪೇಜ್ ಮತ್ತು ಬ್ಲಾಗ್ ಗೆ ಒಮ್ಮೆ ಭೇಟಿ ಕೊಡಬೇಕಾಗಿ ವಿನಂತಿ.ನನ್ನ ಕೆಲವು ಫೋಟೋಸ್ ಇಲ್ಲಿ ಕೊಟ್ಟಿದ್ದೇನೆ

 ಹಾಸನ ,ಸಕಲೇಶಪುರ,ಕೊಡುಗು ,ಮಡಿಕೇರಿ ,ಶಿವಮೊಗ್ಗ ,ತೀರ್ಥ ಹಳ್ಳಿ ,ಕಳಸ, ಕೊಲ್ಲೂರು ಗಳಲ್ಲಿ ಕೆಲವೆಡೆ ತುಳು ಭೂತ /ದೈವಗಳ ಆರಾಧನೆ ಇದೆ .ಆದರೆ ಅದು ಇಲ್ಲಿಂದ ಹೋಗಿ ಅಲ್ಲಿ ನೆಲೆಯಾದವರು ನಡೆಸಿಕೊಂಡು ಬರುತ್ತಾ ಇರುವುದು ಆಗಿರಬೇಕು ,ಭೂತಗಳ ಬಗ್ಗೆ ಭಯ ಬೇಡ ,ತುಳು ಭೂತ ಪದಕ್ಕೆ ಕನ್ನಡ/ಸಂಸ್ಕೃತದ ದ ಭೂತ ಪದದ ಅರ್ಥವಿಲ್ಲ ,ಇಲ್ಲಿ ಭೂತ ದೈವ ಮತ್ತು ದೇವರು ಸಮಾನಾರ್ಥಕ ಪದಗಳು ,ತಮ್ಮನ್ನು ಮಣ್ಣಿನ ಸತ್ಯಗಳು ಎಂದು ಕರೆದುಕೊಂಡಿರುವ ದೈವಗಳು ಶಿಷ್ಟ ರಕ್ಷಕ ,ದುಷ್ಟ ಶಿಕ್ಷಕ ಶಕ್ತಿಗಳು ,ತುಳು ಸಂಶೋಧನೆಯ ಆರಂಭ ಕ್ರಿಶ್ಚಿಯನ್ ಮೆಶಿನರಿಗಳಿಂದ ಆಗಿದ್ದು ,ಆಗ ಆ ಕಾಲಕ್ಕೆ ಅವರಿಗೆ ಮಾಹಿತಿ ಕೊಟ್ಟವರು ಆಗ ತುಳು ಬೂತೋ ಪದವನ್ನು ಕನ್ನಡ/ಸಂಸ್ಕೃತದ ಭೂತ ಪದವೆಂದು ಭಾವಿಸಿ ಭೂತ ಪ್ರೇತ ಪಿಶಾಚಿ ಎಂಬ ಅರ್ಥವನ್ನು ನೀಡಿದ್ದಾರೆ ,ಆದ್ದರಿಂದ ತುಳುವರ ಭೂತಾರಾಧನೆಯನ್ನು ಹೊರ ಜಗತ್ತು ಭಯಾನಕ ,devil worship ಎಂದು ಭಾವಿಸುವಂತೆ ಆಯಿತು ,ಆದರೆ ವಾಸ್ತವದಲ್ಲಿ ಭೂತ ಕೋಲವೊಂದು ಧಾರ್ಮಿಕ ಆರಾಧನಾ ರಂಗ ಭೂಮಿಯಾಗಿದ್ದು ನೊಂದವರಿಗೆ ಸಾಂತ್ವನ ಹೇಳುವ ,ಮೂರು ಕಾಲಕ್ಕೆ ಸತ್ವನ್ನು ಗೆಲ್ಲಿಸಿಕೊಡುತ್ತೇನೆ ಎಂದು ನುಡಿಯುವ ದೈವ ಮಾತನಾಡದೆ ಇರುವ ದೇವರಿಗಿಂತ ಆಪ್ತವಾಗುತ್ತದೆ ಎಂಬುದು ನನ್ನ ಕ್ಷೇತ್ರ ಕಾರ್ಯದ ಅನುಭವ ,ದೈವ್ದದಲ್ಲಿ ತಮ್ಮ ಕಷ್ಟವನ್ನು ,ತಮಗಾದ ಅನ್ಯಾಯವನ್ನು ,ಜಗಳವನ್ನು ನಿವೇದಿಸುವ ತುಳುವರು ದೈವದ ನುಡಿಯನ್ನು ನಂಬಿ ನೆಮ್ಮದಿಯನ್ನು ಕಾಣುತ್ತಾರೆ .ಅನೇಕ ಜನರ ಜಗಳವನ್ನು ವಿವಾದಗಳನ್ನು ದೈವ ಗಳು ಪರಿಹರಿಸಿಕೊಟ್ಟಿವೆ ,ಅಲೌಕಿಕ ನೆಲೆಯನ್ನು ಬಿಟ್ಟು ಲೌಕಿಕ ನೆಲೆಯಲ್ಲಿ ನೋಡುವಾಗಲೂ ದೈವಗಳ ಅಭಿವ್ಯಕ್ತಿ ಬಹಳ ಸುಂದರ ಮತ್ತು ಮನೋಜ್ಞವಾದುದು ,ಜೀವಮಾನದಲ್ಲಿ ಒಮ್ಮೆಯಾದರೂ ಭೂತ ಕೋಲ ನೋಡದಿದ್ದರೆ ನಾವು ಏನೋ ಕಳಕೊಂಡಂತೆ !ಒಮ್ಮೆ ನಮ್ಮ ತುಳುನಾಡಿಗೆ  ಬನ್ನಿ
http://laxmipras.blogspot.com/2014/10/blog-post_23.html?m=1
http://laxmipras.blogspot.com

Saturday 2 June 2018

ಬದುಕ ಬಂಡಿಯಲಿ 13 ಧನುಷ್ಕೋಟಿ ಅಜ್ಜಿಯ ನೆನಪು

MONDAY, 20 OCTOBER 2014

ಧನುಷ್ಕೋಟಿ ಅಜ್ಜಿಯ ನೆನಪು-ಡಾ.ಲಕ್ಷ್ಮೀ ಜಿ ಪ್ರಸಾದ


ನಿನ್ನೆ ರಶೀದ್ ವಿಟ್ಲ ಅವರು ಬರೆದ ಸರೋಜಮ್ಮನ ವೃತ್ತಾಂತ ಓದಿದಲ್ಲಿಂದ ನನಗೆ ಕಾಡಿದ್ದು ಧನುಷ್ಕೋಟಿ ಅಜ್ಜಿಯ ನೆನಪು .ಸುಮಾರು ಎರಡೂವರೆ ಮೂರು ವರ್ಷಗಳ ಹಿಂದಿನ ವಿಚಾರವಿದು .ನಾನು ನನ್ನ ಎರಡನೆಯ ಡಾಕ್ಟರೇಟ್ ಪದವಿಯ ಅಧ್ಯಯನಕ್ಕಾಗಿ ಆಗಾಗ ಕುಪ್ಪಂ ನ ದ್ರಾವಿಡ ವಿಶ್ವ ವಿದ್ಯಾಲಯಕ್ಕೆ ಹೋಗಿ ಬರುತ್ತಿದ್ದೆ .ಬೆಳಗ್ಗೆ ಏಳು ಗಂಟೆಯ ಚೆನ್ನೈ ಎಕ್ಸ್ ಪ್ರೆಸ್ ನಲ್ಲಿ ಹೋಗಿ ಸಂಜೆ ಚೆನ್ನೈ ಯಿಂದ ಕುಪ್ಪಂ ಗೆ ಐದೂವರೆ ಹೊತ್ತಿಗೆ ಬರುವ ಎಕ್ಸ್ಪ್ರೆಸ್ ಗಾಡಿ ಒಂದರಲ್ಲಿ ಹಿಂದೆ ಬರುತ್ತಿದ್ದೆ .
ಹೀಗೆ ಒಂದು ದಿನ ಹೋಗಿ ಹಿಂದೆ ಬರುವಾಗ (ಬಹುಶ ಅಕ್ಟೋಬರ್ 2011ರಲ್ಲಿ ) ಟ್ರೈನ್ ನಲ್ಲಿ ಓರ್ವ ವೃದ್ಧ ಮಹಿಳೆಯ ಪರಿಚಯ ಆಯಿತು .ಅವರ ಹೆಸರು ಧನುಷ್ಕೋಟಿ ಎಂದು .ಸುಮಾರು 80 ವರ್ಷ ವಯಸ್ಸು .ಮೈ ತುಂಬಾ ಚಿನ್ನದ ಒಡವೆಗಳನ್ನು ಧರಿಸಿದ್ದರು .ಹಾಗಾಗಿ ಸಾಕಷ್ಟು ಧನವಂತರೆ ಇರಬೇಕು.ನಾವು ಮಾಧ್ವ ಬ್ರಾಹ್ಮಣರೆಂದು ಹೇಳಿದ್ದರು. ತುಂಬಾ ಗೊಂದಲದಲ್ಲಿದ್ದ ಹಾಗೆ ಕಾಣುತ್ತಿದ್ದರು.ಒಂದು ಸಣ್ಣ ಡೈರಿ ಯಲ್ಲಿ ಬರೆದಿದ್ದ ವಿಳಾಸವನ್ನು ಓದಿ ಇದು ಎಲ್ಲಿ ಬರುತ್ತೆ ಎಂದು ಕೇಳಿದರು .ಅದು ತಮಿಳಿನಲ್ಲಿತ್ತು.ಹಾಗಾಗಿ ನಾನು ಅಲ್ಲಿ ಕೆಲವರಲ್ಲಿ ತಮಿಳು ಓದಲು ಬರುತ್ತಾ ಎಂದು ವಿಚಾರಿಸಿ ಓದಿ ಹೇಳಲು ತಿಳಿಸಿದೆ .ಅದು ಒಂದು ಗಿರಿನಗರದ ಒಂದು ಕಲ್ಯಾಣ ಮಂಟಪದ ವಿಳಾಸ ಆಗಿತ್ತು .ಅಲ್ಲಿ ಮರುದಿನ ಒಂದು ಮದುವೆ ಇದೆ ಹತ್ತಿರದ ನೆಂಟರದ್ದು,ಅಲ್ಲಿಗೆ ನಾನು ಹೊರಟಿದ್ದೇನೆ ಎಂದು ಅವರು ಹೇಳಿದರು
.ಟ್ರೈನ್ ಇಳಿದು ಅವರು ತಮ್ಮ ಮಗನ /ಮೊಮ್ಮಗನ ಮನೆಗೆ ಹೋಗಬೇಕಾಗಿತ್ತು . .ಅವರು ಚೆನ್ನೈ ಯಲ್ಲಿರುವ ಯಾವುದೊ ಒಂದುಮಠ/ ಅಶ್ರಮಲ್ಲಿರುವುದು (ಪೇಜಾವರ ಸ್ವಾಮೀಜಿಗಳು ನಡೆಸುವದು ಎಂದು ಹೇಳಿದ ನೆನಪು )ಎಂದು ಹೇಳಿ ಸ್ವಾಮಿಜಿಯವರ /ಆಶ್ರಮದ ಫೋನ್ ನಂಬರ್ ಇದೆ ಎಂದು ಹೇಳಿದರು .ಆ ನಂಬರ್ ಗೆ ಫೋನ್ ಮಾಡಿದರೆ ಯಾರೂ ಎತ್ತಲಿಲ್ಲ .ಈ ಅಜ್ಜಿಗೆ ತನ್ನ ಮೊಮ್ಮಗನ ನಂಬರ್ ಬರೆದುಕೊಂಡು ಎಲ್ಲಿ ಇಟ್ಟದ್ದು ಹೇಳಿ ನೆನಪಿರಲಿಲ್ಲ .ತಾನು ಈಗ ಮಗನ ಮನೆಗೆ ಹೋಗಬೇಕು.ಎಂದು ಹೇಳಿ ಒಂದು ಜಯನಗರದ ಯಾವುದೊ ಒಂದು ವಿಳಾಸವನ್ನು ಹೇಳಿದರು.ಅದು ಅವರ ಮಗನ/ಮೊಮ್ಮಗನ ಮನೆ ವಿಳಾಸವಾಗಿದ್ದು ಅವರಿಗೆ ಅದು ಸ್ಮರಣೆಯಲ್ಲಿತ್ತು..ಅವರ ಫೋನ್ ನಂಬರ್ ಅಜ್ಜಿ ಕೈಯಲ್ಲಿ ಇರಲಿಲ್ಲ .ಮಗ ಸೊಸೆ ಒಳ್ಳೆ ಕೆಲಸದಲ್ಲಿದ್ದಾರೆ.ಸೊಸೆ ಗೈನಕಾಲಜಿಸ್ಟ್ ಆಗಿದ್ದಾರೆ ಎಂದೂ ಅವರು ಹೇಳಿದರು.
ತನ್ನನ್ನು ಮಗನ ಮನೆಗೆ ತನಕ ಆಟೋದಲ್ಲಿ ಬಿಡುತ್ತೀರಾ ಎಂದು ನನ್ನಲ್ಲಿ ಕೇಳಿದರು .ರಾತ್ರಿ ಯಾಗಿತ್ತು . ಆದ್ದರಿಂದ ನಾನು ಜೊತೆಗೆ ಬರಲು ಸಾಧ್ಯವಿಲ್ಲ .ಅಟೋ ಹತ್ತಿಸಿ ಬಿಡುತ್ತೇನೆ ಎಂದು ಹೇಳಿದೆ . ಅದೇ ಟ್ರೈನ್ ನಲ್ಲಿ ಸಹೃದಯಿ (ಹೆಸರು ರಾಜೇಶ್ ಶೆಟ್ಟಿ ಎಂದು ನೆನಪು ) ಇದ್ದರು .ಟ್ರೈನ್ ಬೆಂಗಳೂರು ಹತ್ರ ಬರುತ್ತಾ ಇತ್ತು .ತಡ ಆಗಿ ಬಂದ ಕಾರಣ ಸಂಜೆ ಏಳೂವರೆಗೆ ತಲುಪಬೇಕಾದ ಟ್ರೈನ್ ಬೆಂಗಳೂರು ತಲುಪುವಾಗ ರಾತ್ರಿ ಒಂಬತ್ತು ಗಂಟೆ ಆಗಿತ್ತು .ಈ ರಾತ್ರಿಯಲ್ಲಿ ಸರಿಯಾಗಿ ವಿಳಾಸ ಗೊತ್ತಿಲ್ಲದ ,ಕಾಂಟಾಕ್ಟ್ ನಂಬರ್ ಇಲ್ಲದ ವೃದ್ಧ ಮಹಿಳೆಯನ್ನು ಹೀಗೆ ಆಟೋಹತ್ತಿಸಿ ಕಳುಹಿಸಿದರೆ ಅಪಾಯ ಹಾಗಾಗಿ ರೈಲ್ವೇಸ್ ಪೊಲೀಸರಿಗೆ ತಿಳಿಸುವ ಎಂದು ಅವರು (ರಾಜೇಶ್ ?) ತಿಳಿಸಿದರು .ನನಗೂ ಅದೇ ಸರಿ ಎನ್ನಿಸಿತು . ಹಾಗಾಗಿ ನಾವು ಯಶವಂತ ಪುರ ಇಳಿದ ತಕ್ಷಣ ಅಜ್ಜಿಯನ್ನು ಅಲ್ಲಿನ ಪೊಲೀಸರ ಹತ್ತಿರ ಕರೆದುಕೊಂಡು ಹೋಗಿ ವಿಷಯ ತಿಳಿಸಿದೆವು
ಆಗ ಅವರು ಮೊದಲಿಗೆ ನಮ್ಮ ಗುರುತು ಪರಿಚಯ ಕೇಳಿದರು .ನಾವು ಯಾವುದೊ ಸಂಚು ಮಾಡುತ್ತಿಲ್ಲ ಎಂದು ಮನವರಿಕೆ ಆದಮೇಲೆ ನಮ್ಮ ಫೋನ್ ನಂಬರ್ ತಗೊಂಡು "ಸರಿ ನೀವು ಹೋಗಿ ಈ ಅಜ್ಜಿಯನ್ನು ಅವರ ಮಗನ ಮನೆ ತಲುಪಿಸುತ್ತೇವೆ ನಾವು" ಎಂದು ಭರವಸೆಯನ್ನು ಕೊಟ್ಟರು ಪ್ರಸಾದ್ ರೈಲ್ವೇಸ್ಟೇಷನ್ ಹೊರಗಡೆ ನನ್ನನ್ನು ಕಾಯುತಿದ್ದರು.ನಾವು ನಮ್ಮ ದಾರಿ ಹಿಡಿದು ರಾತ್ರಿ ಹನ್ನೊಂದು ಗಂಟೆ ಮನೆ ಸೇರಿದೆವು .
ಮುಂದೇನೂ ಆ ಅಜ್ಜಿಗೆ ತೊಂದರೆಯಾಗಿರಲಾರದು ಎಂದು ಭಾವಿಸಿದ್ದೇನೆ .ಆದರೆ ನನಗೆ ವೃದ್ಧರ ಸಮಸ್ಯೆ ,ಕಿರುಯರಿಗೆ ವೃದ್ಧರ ಕುರಿತು ಇರುವ ಅವಜ್ನೆಯ ಅರಿವಾದದ್ದು ಅಂದೇ .ಮಗ ಸೊಸೆ ಇಬ್ಬರೂ ಒಳ್ಳೆ ಕೆಲಸದಲ್ಲಿದ್ದರೂ ಆ ಅಜ್ಜಿ ಆಶ್ರಮದಲ್ಲಿ/ಮಠ ಯಾಕಿರಬೇಕಾಯಿತು ?ಮಠ/ಆಶ್ರಮದಿಂದ ಯಾವುದೇ ಜವಾಬ್ದಾರಿ ಇಲ್ಲದೆ ಅವರನ್ನು ಒಬ್ಬರೇ ಯಾಕೆ ಬೆಂಗಳೂರಿಗೆ ಕಳುಹಿಸಿದರು ?ಅವರನ್ನು ಕರೆದುಕೊಂಡು ಹೋಗಲು ಮನೆ ಮಂದಿ ಯಾಕೆ ಬರಲಿಲ್ಲ ?.ಆ ಅಜ್ಜಿ ಮೊಮ್ಮಗನ /ಸಂಬಂಧಿಕರ ವಿವಾಹ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗ ಆಶ್ರಮದಿಂದ ಹೇಳದೆ ತಪ್ಪಿಸಿಕೊಂಡು ಬಂದಿದ್ದರೇ?ಅಥವಾ ವೃದ್ಧ್ಹಾಪ್ಯದ ಮರೆವು ,ಭ್ರಮೆಗೆ ಒಳಗಾಗಿದ್ದರೆ?ಈ ಎಲ್ಲ ಪ್ರಶ್ನೆಗಳು ಉತ್ತರವಿಲ್ಲದೇ ಸದಾ ಕಾಡುತ್ತಿವೆ .
ಏನೇ ಆದರೂ ವೃದ್ಧಾಪ್ಯದ ಇಳಿಗಾಲದಲ್ಲಿ ತಮ್ಮ ಹೆತ್ತವರನ್ನು ಹೀಗೆ ಅನಾಥ .ಅಸಹಾಯಕ ಪರಿಸ್ಥಿತಿಗೆ ತಳ್ಳುವುದು ಅಕ್ಷಮ್ಯ ಅಪರಾಧ ಅಲ್ಲವೇ ?
© ಡಾ.ಲಕ್ಷ್ಮೀ ಜಿ ಪ್ರಸಾದ