Thursday 13 February 2020

ನನಗೂ ಆತ್ಮವಿದೆ : ಆಲದ ಮರಗಳು ಬೇರೆರಗಿಡಗಳ‌್ನು ಬೆಳೆಯಲು ಬಿಡುವುದಿಲ್ಲ

ರೇಡಿಯೋ ದಿನಾಚರಣೆಯ ಶುಭಾಶಯಗಳು.

ಆಲದ ಮರಗಳು ಇತರ ಮರಗಿಡಗಳನ್ನು ಬೆಳೆಯಲು ಬಿಡುವುದಿಲ್ಲ.

ನನ್ನ ಬರವಣಿಗೆಯ ಆರಂಭಿಕ ದಿನಗಳಲ್ಲಿ ನನ್ನ ಬರವಣಿಗೆಯ ಅಭಿವ್ಯಕ್ತಿಗೆ ರೇಡಿಯೋ ಸಹಾಯ ಮಾಡಿದೆ‌..
 ಮಂಗಳೂರು ಆಕಾಶವಾಣಿಯಲ್ಲಿ ನನ್ನ ಮೂರು ನಾಲ್ಕು ಭಾಷಣಗಳು,ಐದಾರು ಕಥೆಗಳು ಪ್ರಸಾರವಾಗಿವೆ‌.
ಇನ್ನೊಂದು ಗಮ್ಮತ್ತಿದ ವಿಚಾರ ಹೇಳ್ತೇನೆ
ಬಹುಶಃ 1997 ಜನವರಿ ಪೆಬ್ರವರಿ ಇರಬಹುದು.
ನಾನು ಸಂತ ಅಲೋಶಿಯಸ್ ಕಾಲೇಜಿನಲ್ಲಿ ತಾತ್ಕಾಲಿಕವಾಗಿ ಸಂಸ್ಕೃತ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದೆ ‌.ಸಮಯ ಸಿಕ್ಕಾಗೆಲ್ಲ‌ ಅಲ್ಲಲ್ಲಿ  ಉಚಿತ ಸಂಸ್ಕೃತ ಸಂಭಾಷಣಾ ಶಿಬಿರಗಳನ್ನು ನಡೆಸುತ್ತಿದ್ದೆ‌.
ಒಂದಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಶಿಕಾರಿ ಪುರ ಕೃಷ್ಣ ಮೂರ್ತಿಯವರು ನಾನು ನಡೆದುವ ಸಂಭಾಷಣಾ ಶಿಬಿರದ ಪಾಠಗಳ ಪಠ್ಯವನ್ನು ವಿಭಜಿಸಿ ಅರ್ಧ ಗಂಟೆಯ 52 ವಿಭಾಗಗಳನ್ನಾಗಿ ಮಾಡಿಕೊಡಲಯ ಹೇಳಿದರು‌.ಆಕಾಶವಾಣಿಗೆ ಬೇಕು ಎಂದರು ‌.ಸರಿ ಎಂದು ಎರಡು ಮೂರು ದಿನ ಕುಳಿತು 52 ಕಂತು ಅರ್ಧ ಗಂಟೆಗಾಗುವಷ್ಟು ಸಂಭಾಷಣೆ ಬರೆದು ಕೊಟ್ಟೆ.
ಇದಾಗಿ ಒಂದು ಮೂರು ನಾಲ್ಕು ತಿಂಗಳ ನಂತರ ಆಕಾಶವಾಣಿಯಲ್ಲಿ ಒಂದು ದಿನದ  ಸಂಸ್ಕೃತ ಪಾಠ ಮಾಡುವಂತೆ ಆಹ್ವಾನಿಸಿ ನನಗೆ ಪತ್ರ ಬಂದು ಪಾಠ .ಯಾವ ಅಂಶವನ್ನು ಹೊಂದಿರಬೇಕು ಎಂದು ಕೂಡ ತಿಳಿಸಿದ್ದರು.
ನಾನು ಇಬ್ಬರು ವಿದ್ಯಾರ್ಥಿಗಳಿಗೆ ಪಾಠ ಹೇಳಿ ಕೊಡುವ ಮಾದರಿಯಲ್ಲಿ ಬರೆದು ಅಭ್ಯಾಸ ಮಾಡಿಸಿ ರೆಕಾರ್ಡಿಂಗ್ ಗೆ ಹೋದೆ.
ಅಲ್ಲಿ ಶರಭೇಂದ್ರ ಸ್ವಾಮಿಯವರಲ್ಲಿ ಮಾತಿನ ನಡುವೆ ರೇಡಿಯೋ ಸಂಸ್ಕೃತ ಪಾಠದ ಪಠ್ಯವನ್ನು ನಾನು ತಯಾರಿಸಿ ಕೊಟ್ಟ ಬಗ್ಗೆ ಹೇಳಿದೆ.ಆಗ ನೋಡಬೇಕಿತ್ತು ಅವರ ಮುಖದಲ್ಲಿ ನನ್ನ ಬಗೆಗಿನ ಅಪನಂಬಿಕೆ..ನನ್ನನ್ನು ವಿಚಿತ್ರವಾಗಿ  ನೋಡುತ್ತಾ
ಶಿಕಾರಿಪುರ ಕೃಷ್ಣ ಮೂರ್ತಿ,ಜಿ ಎನ್ ಭಟ್ ಮೊದಲಾದವರೆಲ್ಲ ಸೇರಿ ತಯಾರಿಸಿದ ಪಠ್ಯ ಇದು ಎಂದರು‌.
ಆಗ ಪಠ್ಯ ತಯಾರಿಸಿದ ನನ್ನ ಬಗ್ಗೆ ಒಂದಕ್ಷರವನ್ನು ಕೂಡ ಹೇಳದೆ ದೊಡ್ಡವರು ಅದರ ಕ್ರೆಡಿಟ್‌ ಅನ್ನು ತಾವೇ ಪಡೆದುಕೊಂಡಿದ್ದಾರೆ ಎಂದು ನನಗೆ ಅರ್ಥವಾಯಿತು.
ಆಲದ ಮರಗಳು ಇತರ ಮರಗಿಡಗಳನ್ನು ಬೆಳೆಯಲು ಬಿಡುವುದಿಲ್ಲ.