Sunday 9 May 2021

ದೊಡ್ಡವರ ದಾರಿ 76 : ಡಾ.ಜನಾರ್ದನ ಭಟ್

 


ದೊಡ್ಡವರ ದಾರಿ 76 : ಡಾ.ಜನಾರ್ದನ ಭಟ್ Janardana Bhat

ಸೋಂಕು ತಗುಲಿದಾಗ ನಿಮಗೆ ಮೊದಲು ನೆನಪಿಗೆ ಬಂದದ್ದು ಯಾರು ? ಇದು ಅನೇಕರು ನನ್ನಲ್ಲಿ ಕೇಳಿದ ಪ್ರಶ್ನೆ

ಕೊರೊನಾ ಲಕ್ಷಣ ಕಾಣಿಸಿಕೊಂಡಾಗ ನನಗೆ ಮೊದಲು ನೆನಪಾದದ್ದು ಅಮ್ಮ.
ನನಗೇನಾದರೂ ಆದರೆ ಅಮ್ಮನಿಗೆ ತಡೆಯಲಾಗದು ಎನಿಸಿತು.
ಜೊತೆಗೆ ಇನ್ನೊಂದು ವಿಚಾರ ತಲೆಗೆ ಬಂತು
ಕಳೆದ ಇಪ್ಪತ್ತು ವರ್ಷಗಳಿಂದ ಕ್ಷೇತ್ರ ಕಾರ್ಯ ಅಧ್ಯಯನ ಮಾಡಿ ಸಾವಿರಕ್ಕು ಹೆಚ್ಚಿನ ದೈವಗಳ ಮಾಹಿತಿ ಸಂಗ್ರಹ ಮಾಡಿದ್ದೆ.ಪ್ರಕಟಿಸುವುದಕ್ಕಾಗಿ ಬರೆದು ಕೂಡ ಆಗಿದೆ.ಅದರೆ ಅದಕ್ಕೆ ಅದನ್ನು ತಿದ್ದಿ ವ್ಯವಸ್ಥಿತವಾಗಿ ಜೋಡಿಸಿ ಸೂಕ್ತ ಫೋಟೋಗಳನ್ನು ಹಾಕುವ ಕೆಲಸ ಉಳಿದಿತ್ತು
ಜೊತೆಗೆ A4size ನ ಸಾವಿರದಷ್ಟು ಪುಟಗಳುಳ್ಳ ಪುಸ್ತಕದ ಪ್ರಕಟಣೆಗೆ ಎಂಟು ಹತ್ತು ಲಕ್ಷ ಖರ್ಚಿದೆ‌.

ಒಂದೊಮ್ಮೆ ನಾನಿಲ್ಲವಾದರೆ
ಇವನ್ನೆಲ್ಲ ಮಾಡಲು ಮಗ ಅರವಿಂದನಿಂದ ಸಾಧ್ಯವಿಲ್ಲ.
ನನ್ನ ಇಷ್ಡು ಸಮಯದ ಅಧ್ಯಯನ  ಮುಂದಿನ ತಲೆಮಾರಿಗೆ ತಲುಪದೇ ವ್ಯರ್ಥವಾಗುತ್ತದಲ್ಲ ಎಂಬ ಚಿಂತೆ ಕಾಡಿತು.
ಯಾವುದಕ್ಕೂ ಇರಲಿ ಎಂದು ಬರೆದಿಟ್ಟಿರುವ ವರ್್ಡ್ ಫೈಲನ್ನು ಮಗನಿಗೆ ಇ ಮೇಲ್ ಮಾಡಿದೆ.
ಆಗ ನನಗೆ ನಾನಿಲ್ಲದಿದ್ದರೂ ಈ ಕೆಲಸವನ್ನು ನಿಸ್ವಾರ್ಥದಿಂದ ಸಮರ್ಪಕವಾಗಿ ಹಿರಿಯ ಸಂಶೋಧಕರಾದ ನಿವೃತ್ತ ಪ್ರಾಾಂಶುಪಾಲರೂ ಐವತ್ತಕ್ಕಿಂತ. ಹೆಚ್ಚು ಪುಸ್ತಕಗಳನ್ನು ರಚಿಸಿ ಪ್ರರಕಟಿಸಿರು  ಡಾ.ಜನಾರ್ಧನ ಭಟ್ ಅವರು ಮಾಡಬಲ್ಲರು ಎಂದೆನಿಸಿತು.
ಅವರೊಂದು ಅದ್ಭುತ ವ್ಯಕ್ತಿ.ಹೇಗೆ ಅಷ್ಟನ್ನು ಬರೆಯುವರೊ ನನಗೆ ಗೊತ್ತಾಗುದಿಲ್ಲ.ಕೆಲವರಿಗೆ ದೇವರು ಹೆಚ್ಚಿನ ಸಾಮರ್ಥ್ಯ ಕೊಟ್ಟಿರ್ತಾನೆ
ಹಾಗೆ ಹಾಸ್ಪಿಟಲ್ ಗೆ ದಾಖಲಾಗಲು ಹೋಗುವ ಮೊದಲು‌ಡಾ.ಜನಾರ್ದನ ಭಟ್ ರಿಗೆ ಕರೆ ಮಾಡಿ ನನಗೆ ಕೊರೊನಾ ಪಾಸಿಟಿವ್ ಬಂದಿದ್ದು ಅಸ್ಪತ್ರೆಗೆ ದಾಖಲಾಗಬೇಕಿರುವ ಬಗ್ಗೆ ತಿಳಿಸಿದೆ.ಅಲ್ಲಿ‌ಮೊಬೈಲ್ ತಗೊಂಡು ಹೋಗಲು ಬಿಡುವರೊ ಇಲ್ಲವೊ ಗೊತ್ತಿಲ್ಲ.ಹಾಗಾಗಿ ಈಗಲೇ ರಿಕ್ವೆಷ್ಟ್ ಮಾಡುವೆ ಸರಗ,ಒಂದೊಮ್ಮೆ ನಾನು ಆಸ್ಪತ್ರೆಯಿಂದ ಜೀವಂತ ಬಾರದೇ ಇದ್ದರೆ ನನ್ನ ಪುಸ್ತಕವನ್ನು ಎಡಿಟ್ ಮಾಡಿ  ದುಡ್ಡು ಹೊಂದಿಸಿ ಪ್ರಕಟಿಸುವಿರಾ ? ಎಂದು ಕೇಳಿದೆ..ನೀವು ಹುಷಾರಾಗಿ ಬರ್ತೀರಿ ಎಂದು ದೃಢವಾಗಿ ಹೇಳಿದರು  ,ಒಂದೊಮ್ಮೆ ಬಾರದಿದ್ದರೆ ಪ್ರಕಟಿಸುತ್ತೀರಾ ಕೇಳಿದೆ  ಎಂದು ಹೇಳಿದೆ.ಆಗ ಅಯಿತು ಖಂಡಿತಾ ಪ್ರಕಟಿಸುತ್ತೇನೆ ,ಆದರೆ ಹಾಗಾಗುದಿಲ್ಲ‌‌.ಹುಷಾರಾಗು ಬಂದು ನೀವೇ ಅದನ್ನು ಪ್ರಕಟಿಸುತ್ತೀರಿ ಎಂದರು
ಅಬ್ಬಾ.. ಭಾರ ಇಳಿಸಿದ ಅನುಭವ ಆಯಿತು
ಮನಸ್ಸು ನಿರಾಳವಾಯಿತು.
ನೆಮ್ಮದಿಯಿಂದ ಆಸ್ಪತ್ರೆಗೆ ಹೋಗಿ ದಾಖಲಾಗಿ ಚಿಕಿತ್ಸೆ ಪಡೆದು ಹುಷಾರಾಗಿ ಬಂದೆ
ಈಗ ಬರೆದದ್ದನ್ನು ತಂಗಿಯಂತೆ ಇರುವ ಸ್ನೇಹಿತೆ ಶ್ರೀನಿಧಿ ಕರೆಕ್ಷನ್ ಹಾಕುತ್ತಿದ್ದಾರೆ.
ನಾನು ಅಲ್ಲಲ್ಲಿ ಬಿಟ್ಟು ಹೋಗಿರುದನ್ನು ತುಂಬಿಸುತ್ತಿದ್ದೇನೆ ನಾಗರಾಜ ಭಟ್ ,ರಾಜೇಂದ್ರ ಕುಮಾರ್ ಜೈನ್ ಗೌತಮ್ ಜೈನ್ ,ವಿಜಯ್ ಮೊದಲಾದವರು ಅಪರೂಪದ ಪೋಟೋಗಳನ್ನು ಒದಗಿಸಿದ್ದಾರೆ‌.ಇನ್ನು ಕೆಲವರಲ್ಲಿ ಕೇಳಿರುವೆ
ಇದನ್ನಲ್ಲ ಜೋಡಿಸುವಾಗ ಈ ಪುಸ್ತಕವನ್ನು ನಾನು ಪ್ರಕಟಿಸುವ ಬದಲು ಜನಾರ್ದನ ಭಟ್ ಅವರು ಪ್ರಕಟಿಸಿದರೆ ತುಂಬಾ ಚೆನ್ನಾಗಿ ಬರ್ತಿತ್ತು ಎಂದು ನನಗೆ ಅನಿಸಿದೆ.ಅವರ ಅನುಭವ ,ಕೌಶಲ ಬಹಳ ಹೆಚ್ಚಿನದು.
ಅವರಲ್ಲಿ ಸಲಹೆ ಪಡೆಯುವೆ
ನನ್ನ ಅಧ್ಯಯನಾತ್ಮ ಸಂಗ್ರಹ ಸಾವಿರಕ್ಕಿಂತ ಹೆಚ್ಚಿನ ದೈವಗಳ ಮಾಹಿತಿ ಇರುವ ಪುಸ್ತಕ ಪ್ರಕಟಿಸುವ ಮುನ್ನವೇ ನಾನು ಸತ್ತರೆ ಇದನ್ನಾರು ಪ್ರಕಟಿಸುವರು ಎಂಬ ಆತಂಕ ಕಾಡಿದಾಗ ದೃಡವಾಗಿ ಪ್ರಕಟಿಸುವೆ ಎಂದು ಲಕ್ಷ ಗಟ್ಟಲೆ ಖರ್ಚಿನ ತಲೆನೋವಿನ ಜವಾಬ್ದಾರಿಯನ್ನು ಹೊರಲು ಸಿದ್ದರಾಗಿದ್ದ ಜನಾರ್ದನ ಭಟ್ಟರ ಔನ್ನತ್ಯಕ್ಕೆ ಹಿರಿತನಕ್ಕೆ ಸಹೃದಯತೆಗೆ ನಾನು ಆಭಾರಿಯಾಗಿದ್ದೇನೆ