Wednesday, 31 December 2025

ದೈವ ಕೃಪೆಗೆ ಶರಣು 🙏

 ದೈವ ಕೃಪೆಗೆ ಶರಣು 🙏


ಆತ್ಮ ಕಥೆಯನ್ನು ಹೇಗೆ ತಾನೇ ಬರೆಯದಿರಲಿ ? ಆತ್ಮ‌ಕಥೆಯೆಂದರೆ ಬರೀ ಗೋಳಿನ ಪ್ರವರವಲ್ಲ .ಯಶಸ್ಸಿನ ದಾರಿಯ ಹಿನ್ನೋಟ ಕೂಡಾ..


ನಗರದ ಬಸದಿಕೇರಿಯಲ್ಲಿರುವ ಪೂಜಾ ಮಂಟದ ಬಳಿ ನಡೆತುವ ಜಟ್ಟಿಗರ ಪೂಜೆಯನ್ನು ಕಾದಂಬರಿಯ ಪ್ರಮುಖ ವಸ್ತುವಾಗಿರಿಸಿಕೊಂಡು  ಬರೆಯುವ ಉದ್ದೇಶದಿಂದ ವಿಷಯಕ್ಕಾಗಿ ಹುಡುಕಾಡುತ್ತಿದ್ದೆ.ಡಾ.ಲಕ್ಷ್ಮೀ ಜಿ ಪ್ರಸಾದ ಎಂಬವರು ಬ್ಲಾಗೊಂದರಲ್ಲಿ ಬರೆದ ಜಟ್ಟಿಗ ಭೂತಾರಾಧನೆಯ ವಿವರಗಳು ನಾನು ಕಲ್ಪಿಸಿದ್ದ ಕೊಂಡಿ ಕೇವಲ ಊಹೆಯಲ್ಲ ಎನ್ನುವುದಕ್ಕೆ ಪ್ರಮುಖ ಆಧಾರ ದೊರಕಿಸುವುದರ ಜೊತೆಗೆ ಭೂತಾರಾಧನೆಯನ್ನು ಚರಿತ್ರೆ ಹೇಳುವ ಮಾಧ್ಯಮವಾಗಿ ಬಳಸಲು ಅನುವು ಮಾಡಿಕೊಟ್ಟವು ಕೂಡಾ.ತಕ್ಷಣ ಭೂತಾರಾಧನೆಯ ಬಗ್ಗೆಯೇ ಅಧ್ಯಯನ ಮಾಡಿ ಪಿಎಚ್ ಡಿ ಪಡೆದಿರುವ ಹಲವು ಪುಸ್ತಕಗಳನ್ನೂ ಬರಹಗಳನ್ನೂ ಬರೆದಿರುವ ಭೂತಾರಾಧನೆಯ ಲಕ್ಷ್ಮೀ ಎಂದೇ ಗುರುತಿಸಲ್ಪಟ್ಟಿರುವ ಲಕ್ಷ್ಮೀ ಪ್ರಸಾದರನ್ನು ಸಂಪರ್ಕಿಸಿ ಹೆಚ್ಚಿನ ವಿವರಗಳಿಗಾಗಿ ಚರ್ಚಿಸಲು ಸಮಯ ಕೋರಿದಾಗ ತಾವಾಗಿಯೇ ಮನೆಗೆ ಬಂದು ತಮ್ಮ ಸಂಶೋಧನೆಯ ಹತ್ತಾರು ಅನುಭವಗಳನ್ನು  ನೋವು ನಲಿವುಗಳನ್ನು ಹಂಚಿಕೊಳ್ಳುತ್ತಿದ್ದಂತೆ ಅವರೇ ಕಾದಂಬರಿಯ ಒಂದು ಪ್ರಮುಖ ಪಾತ್ರವಾಗಿ ರೂಪುಗೊಳ್ಳತೊಡಗಿದರು.ಹಾಗೆಂದೇ ಅವರು ಡಾ.ಲಕ್ಷ್ಮೀ ಪೋದ್ದಾರ್ ಆಗಿ ಕಾಣಿಸಿಕೊಂಡರು.ನಂತರ ಅವರು ಹಲವಾರು ಸಲಹೆಗಳನ್ನೂ ಪಾಡ್ದನಗಳ ತುಳು ಕನ್ನಡ ರೂಪಾಂತರವನ್ನೂ ನೇತ್ರಾಣಿ ಜಟ್ಟಿಗರ ಫೋಟೋವನ್ನೂ ಒದಗಿಸಿಕೊಟ್ಟಿದ್ದರಿಂದ ಕಾದಂಬರಿಗೆ ಹೊಸ ಆಯಾಮವೇ ದೊರೆಯಿತು.ಬಳ್ಳಿ ಕಾಳ ಮೆಣಸು ಸಂಪೂರ್ಣವಾಗಿ ಸಂಸ್ಕಾರಗೊಂಡು ಬಿಳಿಯ ಮೆಣಸಾಯಿತು- ಡಾ.ಕೆ ಎನ್ ಗಣೇಶಯ್ಯ ( ತಮ್ಮ ಬಳ್ಳಿ ಕಾಳ ಬಳ್ಳಿ ಕಾದಂಬರಿಯ ಕುರಿತಾಡಿದ ಮಾತುಗಳ ಉದೃತ ಭಾಗ) 


ನಾನು ಕನಸಲ್ಲೂ ಊಹಿಸದೇ ಇರುವ ವಿಚಾರವದು..ಬಹು ಪ್ರಸಿದ್ಧ ಕಾದಂಬರಿಕಾರರಾದ ಡಾ.ಕೆ ಎನ್  ಗಣೇಶಯ್ಯನವರ ಪ್ರಸಿದ್ಧ ಕಾದಂಬರಿಯಲ್ಲಿ ನಾನೊಂದು ಜೀವಂತ ಪ್ರಮುಖ ಪಾತ್ರವಾಗಿ ಬಂದಿರುವೆ ಎಂಬುದು ನಾನೆಂದಿಗೂ ಮರೆಯಲಾಗದ ರೋಮಾಂಚನ ನೀಡಿದ ವಿಚಾರ


ಯಾರಿಗೆ ತಾನೇ ಕಥಾ ನಾಯಕಿಯಾಗುವುದು,ಕಥೆಯ ಕೇಂದ್ರವಾಗುವುದು ಇಷ್ಟವಾಗದ ವಿಚಾರ?..ಎಲ್ಲರೂ ಇಷ್ಟ ಪಡುವ ಬಯಸುವ ವಿಚಾರವಿದು..ನನ್ನ ವಿಚಾರದಲ್ಲಿ ಇದು ಸಂಭವಿಸಿದೆ..


ಯಾಕೋ ಗೊತ್ತಿಲ್ಲ..ನನ್ನ ಬದುಕಿನಲ್ಲಿ ಇಂತಹ ಅನೇಕ ಅನೂಹ್ಯ ವಿಚಾರಗಳು ಘಟಿಸಿವೆ..ಅದಕ್ಕಾಗಿಯೇ ಆತ್ಮಕಥೆ ಬರೆಯಲು ನಿರ್ಧರಿಸಿ ಶುರು ಮಾಡಿರುವೆ.


ಅದಿರಲಿ ನಾನು ಲಕ್ಷ್ಮೀ ಪೋದ್ದಾರ್ ಆದದ್ದನ್ನು ಡಾ.ಕೆ ಎನ್ ಗಣೇಶಯ್ಯನವರು ಹೀಗೆ ವಿವರಿಸಿದ್ದಾರೆ..ಇನ್ನು ಪೂರ್ಣ ಮಾಹಿತಿಗೆ ಅವರ ಬಳ್ಳಿ ಕಾಳ ಬೆಳ್ಳಿ ಕಾದಂಬರಿ ಓದಬಹುದು.


"


ಲಕ್ಷ್ಮೀ ಪೋದ್ದಾರ್ ಆದ ನನ್ನನ್ನು ಗಣೇಶಯ್ಯನವರ ಕಾದಂಬರಿ ಮೂಲಕ ಸಾವಿರಾರು ಜನ ಗುರುತಿಸಿದ್ದಾರೆ.

ನನ್ನ ತುಳು ಅಧ್ಯಯನದ ಫಲಿತವನ್ನು ಪಡೆದಿದ್ದಾರೆ ಎಂಬುದು ನನಗೆ ನಿಜಕ್ಕೂ ಹೆಮ್ಮೆ ತರುವ ವಿಚಾರ..ಅದೂ ನಾವು ಲೆಕ್ಕಕ್ಕಿಡುವುದಿಲ್ಲ ಎಂದು ತುಳು ಅಧ್ಯಯನಗಾರನೊಬ್ಬನಿಂದ ನಿಂದಿಸಲ್ಪಟ್ಟ ಮಹಿಳೆಯ ಮಾತೇ ಕಾದಂಬರಿಗೆ ಪ್ರಮುಖ ಆಧಾರ ಆಗುದು..ಹಿರಿಯ ವಿದ್ವಾಂಸರಾದ ಡಾ.ಕೆ ಎನ್ ಗಣೇಶಯ್ಯ ಆ ಮಹಿಳೆಯ ಬರಹವನನ್ನು ಗೌರವದಿಂದ ಕಂಡು ಅದರೊಳಗಿನ ಸತ್ಯವನ್ನು ಪರಿಗಣಿಸಿ ಚಾರಿತ್ರಿಕ  ಕಾದಂಬರಿ ಬರೆಯುದು ಎಲ್ಲವೂ ಕಾಕತಾಳೀಯವೇ..ಕಾಲನ ಅನೂಹ್ಯ ನಡೆಯೇ..ನನಗೂ ಗೊತ್ತಿಲ್ಲ..ತೇ ನ ವಿನಾ ತೃಣಮಪಿ ನ ಚಲತಿ( ದೇವರ ಆಶಯದ ಹೊರತಾಗಿ ಹುಲುಕಡ್ಡಿಯೂ ಅಲುಗಾಡುವುದಿಲ್ಲ) 

ಈವತ್ತು ಕೂಡ ಬಸ್ಸಿನಲ್ಲಿ ರಿಟೈರ್ಡ್  ಪ್ರೊಫೆಸರ್ ರಾಜ ಗೋಪಾಲ್ ಎಂಬವರು ನನ್ನನ್ನು ಲಕ್ಷ್ಮೀ ಪೋದ್ದಾರ್ ಎಂದು ಗುರುತಿಸಿ ಮಾತನಾಡಿಸಿದರು..ಲಕ್ಷ್ಮೀ ಪೋದ್ದಾರ್  ಅನ್ನು ಸಾವಿರಾರು ಮಂದಿ ಗುರುತಿಸಿದ್ದಾರೆ  ನಿನ್ನೆ ಬೆಂಗಳೂರು ಸಿಟಿ ಯೂನಿವರ್ಸಿಟಿ ಕಾನ್ಫರೆನ್ಸ್ ನಲ್ಲಿ ಕೂಡ ಅನೇಕರು    ಕರಾವಳಿಯ ಸಾವಿರದೊಂದು ದೈವಗಳು - ಸಾವಿರದೊಂದು ದೈವಗಳು ಪುಸ್ತಕದ ಲೇಖಕಿ ಎಂದು ಗುರುತಿಸಿ ಮಾತನಾಡಿದ್ದಾರೆ.ಪುಸ್ತಕಕ್ಕೆ ಇರುವ ಶಕ್ತಿ ಅಪಾರವಾದುದೆನಿಸ್ತು ..

ಬದುಕಿನ ಸೊಬಗಿನ ಬಗ್ಗೆ ಅಚ್ಚರಿಯ ಬಗ್ಗೆ ಇನ್ನೇನು ಹೇಳಲಿ..

ಅವಹೇಳನಕ್ಕೆ ಗುರಿಯಾಗಿಸಿ ಅಳಿಸಿ ಕಾಡುವವನೂ ಅವನೇ..ಪುರಸ್ಕರಿಸಿ ಚಂದ ನೋಡುವವನೂ ಅವನೇ ಅಲ್ಲವೇ..ಮುಂದೇನು ಕಾಡುವನೋ ಇಲ್ಲ ಅನುಗ್ರಹಿಸುವನೋ ಗೊತ್ತಿಲ್ಲ..ತ್ವಮೇವ  ಶರಣಂ ಮಮ‌ 🙏

ಮರ್ಯಾದೆ ಉಳಿಸಿದ ಶಿಷ್ಯಂದಿರು.

 ಆತ್ಮ ಕಥೆಯ ಬಿಡಿ ಭಾಗಗಳು.

ನನ್ನ ಮರ್ಯಾದೆ ಉಳಿಸಿದ ಶಿಷ್ಯಂದಿರು ಯಾರು ಗೊತ್ತೇ? ಈಗಲೂ ಇವರುಗಳೇ ನನ್ನ ಸಹಾಯಕ್ಕೆ ಧಾವಿಸಿ ಬರಬೇಕಿದೆ ಎಲ್ಲ ಒಟ್ಟಾಗಿ ಬನ್ನಿ.. Ashwini Ashu Venkat Aranthady ಶ್ರೀಕಾಂತ್ ಹರಿಹರಪುರ 


ನನಗೂ ಇಂಗ್ಲಿಷ್ ಗೂ ಆಗಿ ಬರುದಿಲ್ಲ.ನನಗದು ಸದಾ ಕಬ್ಬಿಣದ ಕಡಲೆ  

ಹಾಗಾಗಿ ಅದನ್ನು ಜಗಿದು ಹಲ್ಲು ನೋಯಿಸಿಕೊಳ್ಳುದೇಕೆ ಎಂದದನ್ನು ಕಲಿಯುವ ಪ್ರಾಮಾಣಿಕ ಯತ್ನ ಮಾಡಿಯೇ ಇಲ್ಲ

ಅಥವಾ ನನಗೆ ಭಾಷಾ ಕೌಶಲ ಸಿದ್ದಿಸುವ ರೀತಿಯಲ್ಲಿ ಕಲಿಸಿಲ್ಲ

.ನಾನು ಭಾಷಾ ಕಲಿಕೆಯಲ್ಲಿ ಹಿಂದುಳಿದವಳಾ ? ಈ ಬಗ್ಗೆ ನನಗೆ ಒಂದು ದ್ವಂದ್ವ ಕಾಡುತ್ತಿರುತ್ತದೆ 

ಒಂದೊಮ್ಮೆ ಭಾಷಾ ಕಲಿಕೆಯಲ್ಲಿ ನಿದಾನಸ್ಥೆ ಆಗಿದ್ದರೆ ಸಂಸ್ಕೃತದಲ್ಲಿ  ಮಾತನಾಡಲು ಸುಲಭದಲ್ಲಿ ಅಭ್ಯಾಸ ಆಗುತ್ತಿರಲಿಲ್ಲ.

ನಾನು ಸಂಸ್ಕೃತ ಎಂಎ ಪರೀಕ್ಷೆ ಬರೆದ ನಂತರ ಇರಬೇಕು.ಸಂಸ್ಕೃತ ಭಾರತಿಯವರು ಮಂಗಳೂರಿನಲ್ಲಿ ಹತ್ತು ದಿನಗಳ  ಸಂಸ್ಕೃತ ಪ್ರಶಿಕ್ಷಣ ಶಿಬಿರ ಆಯೋಜಿಸಿದ್ದರು..

ಅದಕ್ಕೂ ಮೊದಲೇ ಸಂಭಾಷಣ ಶಿಬಿರದಲ್ಲಿ ಭಾಗವಹಿಸಿ ಸುಮಾರಾಗಿ ಸಂಸ್ಕೃತ ಮಾತನಾಡಲು ಕಲಿತಿದ್ದೆ.ಈ ಹತ್ತು ದಿನಗಳ ನಂತರ ಸರಿಯಾಗಿ ಸಂಸ್ಕೃತ ಮಾತನಾಡಲು ಕಲಿತೆ.

ಇದಾದ ನಂತರ ನಾನು ಅನೇಕ ಸಂಸ್ಕೃತ ಸಂಭಾಷಣಾ ಶಿಬಿರಗಳನ್ನು ಮಾಡಿ ಅನೇಕರಿಗೆ ಸಂಸ್ಕೃತ ಮಾತನಾಡಲು ಕಲಿಸಿದ್ದೆ.


ಕಳೆದ ಇಪ್ಪತ್ತು ವರ್ಷಗಳಿಂದ ನಾನು ಕನ್ನಡ ಉಪನ್ಯಾಸಕಿ ಯಾಗಿ ಕೆಲಸ ಮಾಡಿತ್ತಿದ್ದು ಸಂಸ್ಕೃತ ಭಾಷೆಯ ಬಳಕೆ ತಪ್ಪಿ ಹೋಗಿ ಈಗ ಮಾತನಾಡುವಾಗ ತಡವರಿಸುತ್ತೇನೆ


ಆದರೆ ಸಂಸ್ಕೃತ ವನ್ನು ಸುಲಭವಾಗಿ ಕಲಿತ ನನಗೆ ಹಿಂದಿ ಭಾಷೆ ಯಾಕೆ ಒಲಿಯಲಿಲ್ಲ ಎಂದು ಗೊತ್ತಾಗುತ್ತಿಲ್ಲ.ಹಿಂದಿ ಎಂಎ ಓದಿದ್ದು ಉತ್ತಮ ಅಂಕ ಕೂಡ ಗಳಿಸಿದ್ದೆ.

ಆದರೆ ಹಿಂದಿ ಭಾಷೆ ಮಾತನಾಡಲು ನನಗೆ ಕಷ್ಟ ಆಗುತ್ತದೆ

.

ಇನ್ನೂ ಇಂಗ್ಲಿಷ್ ಎನ್ನುದು ನನ್ನ ಪಾಲಿಗೆ ಮೃಗ ಮರೀಚಿಕೆ.

ಉಳಿದೆಲ್ಲ ವಿಷಯಗಳಲ್ಲಿ ಉತ್ತಮ ಅಂಕ ಗಳಿಸುತ್ತಿದ್ದು ಇಂಗ್ಲಿಷ್ ನಲ್ಲಿ ಫೈಲ್ ಆಗುತ್ತಿದ್ದ ನನ್ನ ಬಗ್ಗೆ ನನ್ನ ಶಾಲಾ ಶಿಕ್ಷಕರು ಗಮನ ಹರಿಸಿಲ್ಲವೇ ? ಈ ಬಗ್ಗೆ ನೆನಪಾಗುತ್ತಿಲ್ಲ.


ನಮಗೆ ಹೈ ಸ್ಕೂಲ್ ನಲ್ಲಿ ನಮಗೆ ಈರೋಡಿ ಮಾಷ್ಟ್ರು ಇಂಗ್ಲಿಷ್ ಗೆ ಇದ್ದದ್ದು.ನಾನು ನೋಟ್ಸ್ ( ಪ್ರಶ್ನೋತ್ತರ) ಬರೆಯುತ್ತಿದ್ದೆನಾ ? ಅದನ್ನೇ  ಕಲಿತು ಯಾಕೆ ಉತ್ತಮ ಅಂಕ ಅಲ್ಲದಿದ್ದರೂ ಪಾಸಾಗುವಷ್ಟು ಅಂಕ ಗಳಿಸುತ್ತಿರಲಿಲ್ಲ ಎಂದು  ನನಗೆ ನೆನಪಾಗುತ್ತಿಲ್ಲ.ಬಹುಶಃ ಅವರು ಬಹಳ ಸಾಧು ಸ್ವಭಾವದವರಾಗಿದ್ದರು.ಪ್ರಶ್ನೋತ್ತರ ಬರೆಯಿಸಿ ಕಲಿತು ಬಾರದೇ ಇದ್ದಾಗ ಎರಡೇಟು ಕೊಟ್ಟಿದ್ದರೆ ಕಲಿಯುತ್ತಿದ್ದೆನೋ ಏನೋ..

 

ನಿಜ ಹೇಳಬೇಕೆಂದರೆ ನನಗೆ is was ,ಮೊದಲಾದ prefixesಗಳ ಜ್ಞಾನ ಇರಲಿಲ್ಲ.

.ಆಗೆಲ್ಲ ಗೈಡ್ ಗಳಿದ್ದವೊ ಇಲ್ವಾ ನನಗೆ ಗೊತ್ತಿಲ್ಲ ಆದರೆ ಹಳ್ಳಿ ಶಾಲೆಯಲ್ಲಿ ಓದುವ ನಮಗೆ ಗೈಡ್ ಗಳು ಸಿಕ್ಕಿರಲಿಲ್ಲ.


ಶಾಲಾ ಕಾಲು ವಾರ್ಷಕ ಮಧ್ಯ ವಾರ್ಷಿಕ ಮುಕ್ಕಾಲು ವಾರ್ಷಿಕ ಪರೀಕ್ಷೆಗಳಲ್ಲಿ ನಾನು ಇಂಗ್ಲಿಷ್ ನಲ್ಲಿ ಪಾಸಾಗುತ್ತಿರಲಿಲ್ಲ.


ಅಂತಿಮ ಪರೀಕ್ಷೆಯಲ್ಲಿ ಒಂದಷ್ಟು ಅಂಕ ಕೊಟ್ಟು ಪಾಸ್ ಮಾಡುತ್ತಿದ್ದಿರಬಹುದು 


ಹತ್ತನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇದ್ದದ್ದು.ಇಲ್ಲಿ ಉಳಿದ ವಿಷಯಗಳಲ್ಲಿ ಉತ್ತಮ ಅಂಕ ಗಳಿಸುವ ಬಗ್ಗೆ ಆತಗಮ ವಿಶ್ವಾಸ ಇತ್ತು ನನಗೆ.

ಆದರೆ  ಇಂಗ್ಲಿಷ್ ನಲ್ಲಿ ಪಾಸ್ ಆಗುವ ಭರವಸೆ ಇರಲಿಲ್ಲ ಹಾಗಾಗಿ ಫಲಿತಾಂಶದ ದಿನ ಬಹಳಷ್ಟು ಆತಂಕಕ್ಕೆ ಒಳಗಾಗಿದ್ದೆ.ಅದೃಷ್ಟವಶಾತ್ ಪಾಸ್ ಆಗಿದ್ದೆ.


ವಿಜ್ಞಾನ ದಲ್ಲಿ ಉತ್ತಮ ಅಂಕಗಳು ಬಂದಿದ್ದವು.ನನಗೂ ಆಸಕ್ತಿ ಇತ್ತು ಹಾಗಾಗಿ ಸರ್ಕಾರಿ ಕಾಲೇಜಿನಲ್ಲಿ ( ಈಗಿನ ವಿಶ್ವ ವಿದ್ಯಾಲಯ ಕಾಲೇಜು) ವಿಜ್ಞಾನ ವಿಭಾಗದಲ್ಲಿ ದಾಖಲಾತಿ ಪಡೆದೆ.


ಈ ಕಾಲೇಜಿನ ಉಪನ್ಯಾಸಕರೋ ಸಾಕ್ಷಾತ್ ಲಂಡನ್ ನಿಂದ ಉದುರಿದವರ ಹಾಗೆ ಆಡ್ತಿದ್ದರು.


ನಮ್ಮ‌ತರಗತಿಯಲ್ಲಿ 99% ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾ್ರಥಿಗಳಿದ್ದರು.ಆದರೂ ಇಲ್ಲಿನ ಉಪನ್ಯಾಸಕರು ಒಂದಕ್ಷರ ಕನ್ನಡ ದಲ್ಲಿ ಮಾತನಾಡುತ್ತಿರಲಿಲ್ಲ.ಪರಿಣಾಮ ಬಹಳ ಘೋರವಾದದ್ದು.ಹೆಚ್ಚು ಕಡಿಮೆ ಎಲ್ಲಾ ವಿದ್ಯಾರ್ಥಿಗಳು ಫೇಲ್..ನನಗೊಂದು ವಿಚಾರ ತಿಳಿಯುತ್ತಿಲ್ಲ.ಈಗ ನಾನೂ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕಿ, ನಮಗೆ 100% ಫಲಿತಾಂಶ ತರುವಂತೆ ಇಲಾಖೆಯ ಒತ್ತಡ ಇದೆ .ಸದಾ 100% ಫಲಿತಾಂಶ ತರುವ ನನಗೂ ಪ್ರತಿ ವರ್ಷ ಫಲಿತಾಂಶ ದ ಭಯ ಕಾಡುತ್ತದೆ 

ಹಾಗಿರುವಾಗ 1%2% ಫಲಿತಾಂಶ ಕೂಡ ಬರದೇ ಇದ್ದಾಗ ಈ ಉಪನ್ಯಾಸಕರನ್ನು ಯಾರೂ ಕೇಳುತ್ತಿರಲಿಲ್ಲವೇ? ಇಲಾಖೆ ಕೇಳದಿದ್ದರೂ ಇವರಿಗೊಂದು ಆತ್ಮ ಸಾಕ್ಷಿ ಎಂಬುದು ಇರುತ್ತಿರಲಿಲ್ಲವೇ ? 

ಫಲಿತಾಂಶ ತರಿಸಬೇಕು ಎಂಬ ಇರಾದೆ ಇಲ್ಲಿನ ಉಪನ್ಯಾಸಕರಿಗೆ ಇದ್ದ ಹಾಗೆ ನನಗನಿಸಿಲ್ಲ.


ನಾನು ದ್ವಿತೀಯ ಪಿಯುಸಿ ಓದಿದ ವರ್ಷ 1990-91 ರಲ್ಲಿ ಕ್ಲಾಸ್ ಟೆಸ್ಟ್ ಮಿಡ್ ಟರ್ಮ್ ಪ್ರಿಪರೇಟರಿ ಯಾವುದೂ ಮಾಡಿರಲಿಲ್ಲ ನೇರವಾಗಿ ನಾವು ಅಂತಿಮ ಪರೀಕ್ಷೆ ಬರೆದಿದ್ದೆವು


ಬಹುಶಃ ಪ್ರಥಮ ಪಿಯುಸಿ ಯಲ್ಲಿ ಮಧ್ಯವಾರ್ಷಿಕ ಪರೀಕ್ಷೆ ಮಾಡಿದ್ದರು

ಆಗ ಇಂಗ್ಲಿಷ್ ನಲ್ಲಿದ್ದ  ಕೆಮೆಸ್ಟ್ರಿ ಪ್ರಶ್ನೆ ಪತ್ರಿಕೆಯ ಒಂದು ಪ್ರಶ್ನೆಯ ಅರ್ಥ ಕನ್ನಡದಲ್ಲಿ ಹೇಳಲು ನಾನು ಕೇಳಿದ್ದೆ.ಉಪನ್ಯಾಸಕರು ಕನ್ನಡದಲ್ಲಿ ಅರ್ಥ ಹೇಳಲು ನಿರಾಕರಿಸಿದ್ದರು.ವಾಸ್ತವದಲ್ಲಿ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಯನ್ನು ವಿಜ್ಞಾನ ವಿಷಯಗಳಲ್ಲಿ ಕೂಡ ಕನ್ನಡ ಮಾಧ್ಯಮದಲ್ಲಿ ಬರೆಯಲು ಅವಕಾಶ ಇತ್ತು‌.ಪ್ರಶ್ನೆ ಪತ್ರಿಕೆ ಕೂಡ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ  ಇರುತ್ತಿತ್ತು.ಇದು ನಮಗೆ  ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಬರೆದಾಗಲೇ ಗೊತ್ತಾದದ್ದು.ಅದಕ್ಕೂ ಮೊದಲೇ ಹಳೆ ಪ್ರಶ್ನೆ ಪತ್ರಿಕೆ ಕೊಟ್ಟು ಬರೆಸಿ ಅಥವಾ ಓದಿಕೊಂಡು ಅಭ್ಯಾಸ ಮಾಡಲು ಕೂಡ ಹೇಳಿರಲಿಲ್ಲ.


ಈ ಉಪನ್ಯಾಸಕರು ಇಂಗ್ಲಿಷ್ ನಲ್ಲಿ ಮಾತನಾಡುತ್ತಿದ್ದ ಕಾರಣ  ನಮಗೆ ಅವರಲ್ಲಿ ಮಾತನಾಡಲು ಆಗುತ್ತಿರಲಿಲ್ಲ ಪಾಠ ಅರ್ಥ ಆಗುತ್ತಿಲ್ಲ ಎಂದು ಹೇಳಲೂ ಆಗದ ಪರಿಸ್ಥಿತಿ


ಹೆಚ್ಚಿನ ವಿದ್ಯಾರ್ಥಿಗಳದೂ ನನ್ನದೇ ಪರಿಸ್ಥಿತಿ..

ಒಮ್ಮೆ ಫೇಲಾಗಿಯೂ ನಂತರ ಕಟ್ಟಿ  ಹೇಗೋ ಗೈಡ್ ನೋಡಿ ಕಲಿತು ಪಾಸಾದೆ .ಮುಂದೆ ಉಜಿರೆಯಲ್ಲಿ ಬಿಎಸ್ಸಿ ಗೆ ಸೇರಿದೆ.ಇಲ್ಲಿ ಉಪನ್ಯಾಸಕರು ಕನ್ನಡ ದಲ್ಲಿ ಪಾಠ ವಿವರಿಸದೇ ಇದ್ದರೂ ತರಗತಿಯಲ್ಲಿ ಹಾಗೂ ಹೊರಗಡೆ ಕನ್ನಡದಲ್ಲಿ ಮಾತನಾಡುತ್ತಿದ್ದರು.

ಹಾಗಾಗಿ ನಮಗೆ ಇಂಗ್ಲಿಷ್ ಉಪನ್ಯಾಸಕರಾದ ಶಂಕರ ನಾರಾಯಣ ಫಿಸಿಕ್ಸ್ ಉಪನ್ಯಾಸಕರಾದ ಕೇಶವ್ ಸಂಬಂಧಿಕರೂ ಅಲ್ಲಿ ನನಗೆ ಸೀಟ್ ಕೊಡಿಸಿರುವ ಗಣಪಯ್ಯ ಮೊದಲಾದವರಲ್ಲಿ ನಮಗೆ ಮಾತನಾಡುವಷ್ಟು ಸಲುಗೆ ಇತ್ತು.

ಬಿಎಸ್ಸಿ ಯಲ್ಲಿ ನಾನುತೀರ ಉತ್ತಮ ಅಂಕ ಗಳಿಸದಿದ್ದರೂ ಯಾವುದೇ ಸೆಮಿಷ್ಟರ್ ನಲ್ಲಿ ಫೇಲಾಗಿರಲಿಲ್ಲ.

ಇಂಗ್ಲಿಷ್ ನಲ್ಲಿ ಕೂಡ 55-60 ಅಂಕ ಗಳಿಸುತ್ತಿದ್ದೆ

ಬಿಎಸ್ಸಿ ನಂತರ ನಾನು ಸಂಸ್ಕೃತ ಎಂಎ ಗೆ ಸೇರಿದ ನಂತರ ಇಂಗ್ಲಿಷ್ ನಿಂದ ಬಚಾವಾದೆ 

ಸಂಸ್ಕೃತ ವನ್ನು ಸುಲಲಿತವಾಗಿ ಕಲಿತ ನನಗೆ ಇಂಗ್ಲಿಷ್ ಹಿಂದಿ ಭಾಷೆ ಯಾಕೆ ಒಲಿಯಲಿಲ್ಲ ಬಹುಶಃ ಸಂಸ್ಕೃತ ವನ್ನು  ಪ್ರಶಿಕ್ಷಣ ಶಿಬಿರ ಸಂಭಾಷಣಾ ಶಿಬಿರ ದಲ್ಲಿಕಲಿಸುವಂತೆ ಈ ಭಾಷೆಗಳನ್ನು ಕಲಿಸಿದ್ದರೆ ನನ್ನಂತಹ ಲಕ್ಷಾಂತರ ವಿದ್ಯಾರ್ಥಿಗಳು ಪರಿಣತಿ ಪಡೆಯುತ್ತಿದ್ದರೆನಿಸ್ತದೆ ನನಗೆ


ಸಂಸ್ಕೃಯ ಎಂಎ ಕಲಿಯುವಾಗ  ಎಲ್ಲೂ ಇಂಗ್ಲಿಷ್ ಬೇಕಾಗಿ ಬರಲಿಲ್ಲ.


ನಂತರ ಮೊದಲಿಗೆ ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ಸಂಸ್ಕೃತ ಶಿಕ್ಷಕಿ ಆಗಿ ಸೇರಿದೆ‌‌.ನಂತರ ಸೈಂಟ್ ಅಲೋಶಿಯಸ್ ಕಾಲೇಜಿನ ಅರೆ ಕಾಲಿಕ ಸಂಸ್ಕೃತ ಉಪನ್ಯಾಸಕಿ ಯಾಗಿ ಕೆಲಸ ಸಿಕ್ತು.


ಇಲ್ಲಿ ಅನೇಕ ಕನ್ನಡೇತರ ವಿದ್ಯಾರ್ಥಿಗಳು ಇದ್ದರು.ಇವರಿಗೆ ಸಂಸ್ಕೃತ ವನ್ನು ಇಂಗ್ಲಿಷ್ ಮೂಲಕ ಹೇಳಿಕೊಡಬೇಕಾಗಿತ್ತು..

ಉಫ್..ನನ್ನ ಪರಿಸ್ಥಿತಿ ಯಾರಿಗೂ ಬೇಡ.‌.ಗೈಡ್ ನಿಂದ ಬಾಯಿಪಾಠ ಮಾಡಿಕೊಂಡು ಹೋಗಿದ್ದು ತರಗತಿಯ ಒಳಗೆ ಹೋಗುವಾಗ ಮರೆತು ಹೋಗುತ್ತಿತ್ತು..ಸಂಸ್ಕೃತ ದಲ್ಲಿ ವಿವರಿಸಿದರೆ ಮಕ್ಕಳಿಗೆ ಅರ್ಥವಾಗುತ್ತಿರಲಿಲ್ಲ‌‌.ಕನ್ನಡದಲ್ಲಿ ವಿವರಿಸಿದರೆ ಕನ್ನಡೇತರ ಮಕ್ಕಳು ಕಣ್ಣು ಬಾಯಿ ಬಿಡ್ತಿದ್ದರು.ಆಗ ನನ್ನ ಭಯಾನಕ ಇಂಗ್ಲಿಷ್ ನಲ್ಲಿ ಪಾಠ ಮಾಡಿದ್ದೆ

ಈ ಸಮಯದ ನನ್ನ ಶಿಷ್ಯೋತ್ತಮರಲ್ಲಿ 

ನನ್ನ ಹತ್ತಿರ ಸಂಬಂಧಿಕರಾದ ವೆಂಕಟೇಶ್ವರ ,ರಾಮ‌ಪ್ರಸಾದ ,ಗಣರಾಜ ಮೊದಲಾದವರು ಇದ್ದರು.ಇವರು ನನ್ನ ಮರ್ಯಾದೆಯನ್ನು ಉಳಿಸಿದವರು..ನನ್ನ ಅಮೋಘ ಇಂಗ್ಲಿಷ್  ಭಾಷೆಯ ಪಾಠದ ಬಗ್ಗೆ ಇವರೆಲ್ಲಿಯೂ ತುಟಿಕ್ ಪಿಟಕ್ ಎನ್ನದೆ  ಎಲ್ಲೂ ಹೇಳದೆ ( ಹೇಳಿಲ್ಲ ಎಂದು ಭಾವಿಸಿರುವೆ ,) ನನ್ನ ಮರ್ಯಾದೆ ಉಳಿಸಿದ್ದರು ಅಷ್ಟೇ ಅಲ್ಲ ನಾನು ಚೆನ್ನಾಗಿ ಪಾಠ ಮಾಡುತ್ತೇನೆ ಎಂದು ಸುಳ್ಳು ? ಹೇಳಿ ಇಲ್ಲದೇ ಇದ್ದ  ನನ್ನ ಘನತೆಯನ್ನು ಹೆಚ್ಚಿಸಿದ್ದರು‌.


ಒಂದೆಡೆ ಸಂಸ್ಕೃತ ಕ್ಕೆ ಸರಿಯಾದ ಉದ್ಯೋಗಾವಕಾಶ ಇಲ್ಲದಿರುದು ಇನ್ನೊಂದೆಡೆ ಇಂಗ್ಲಿಷ್ ನಲ್ಲಿ ಪಾಠ ಮಾಡಬೇಕಾದ ಅನಿವಾರ್ಯತೆ ಈ ಎರಡು ಕಾರಣಕ್ಕಾಗಿ ಸಂಸ್ಕೃತ ಬಿಟ್ಟು ಬೇರೆ ಕಲಿಯಲು ಹೊರಟೆ‌.

ಮೊದಲಿಗೆ ಹಿಂದಿ ಎಂಎ ಖಾಸಗಿ ಕಟ್ಟಿ ಓದಿದೆ.ಅಂಕ ಬಂದರೂ ಭಾಷೆ ಬರಲಿಲ್ಲ ‌ಭಾಷೆ ಬರದೆ ಹಿಂದಿ‌ಮಾತೃ ಭಾಷೆಯಾಗಿರುವ ಕೊಂಕಣಿ, ಮಾರ್ವಾಡಿ ವಿದ್ಯಾರ್ಥಿಗಳ ಎದುರು ಹೋಗಿ ವಿದೂಷಕರಂತೆ ಅತಾ ಹೆ ಕರ್ತಾ ಹೆ ಎನ್ನು ವ ಸಂಗತಿ ಅಗಲಿಕ್ಕಿಲ್ಲ 

ಎಂದು ಕನ್ನಡ ಎಂಎ ಓದಿದೆ..

ಅಬ್ಬಾ..ಕೊನೆಗೂ ಇಂಗ್ಲಿಷ್ ನ ಉರುಳಿಂದ ಬಚಾವಾದೆ .

ಕನ್ನಡ ಕೈ ಹಿಡಿಯಿತು. ತಲೆ ಎತ್ತಿ ಬದುಕುವಂತೆ ಗೌರವದ ಉದ್ಯೋಗವನ್ನು ಒದಗಿಸಿತು 

ಇಷ್ಟಾದರೂ ಇಂಗ್ಲಿಷ್ ನನ್ನನ್ನು ಬಿಡಲಿಲ್ಲ.ಎಂಪಿಲ್ ಎರಡು ಪಿಎಚ್ ಡಿಗಳ ನಂತರವೂ ತುಳು ಸಂಸ್ಕೃತಿ ದೈವಗಳ ಅಧ್ಯಯನ ಮುಂದುವರಿಸಿದೆ.ನನ್ನ ಕುತೂಹಲ ತಣಿಸಿಕೊಳ್ಳಲು ಅಧ್ಯಯನ ಮಾಡಿದ್ದಾದರೂ ನಾನು ಕಂಡುಕೊಂಡ ವಿಚಾರವನ್ನು ಆಸಕ್ತ ಜನರಿಗೆ ತಲುಪಿಸುದಕ್ಕಾಗಿ ಲೇಖನಗಳನ್ನು ಬರೆದೆ .ಪುಸ್ತಕಗಳನ್ನು ಬರೆದೆ ಪ್ರಕಟಿಸಿದೆ.


ಈಗ ಅನೇಕ ಕನ್ನಡೇತರರು ಕರೆ ಮಾಡಿ ಮೆಸೇಜ್ ಮಾಡಿ ಈ ಬಗ್ಗೆ ಇಂಗ್ಲಿಷ್ ನಲ್ಲಿ ಬರೆಯಿರಿ ನಮಗೆ ಮಾಹಿತಿ ಬೇಕೆನ್ನಲು ಶುರು ಮಾಡಿದರು.ಜೊತೆಗೆ ಇಂಗ್ಲಿಷ್ ನಲ್ಲಿ ಭೂತಾರಾದನೆ ಬಗ್ಗೆ ಸರಿಯಾದ ಪುಸ್ತಕ ಪ್ರಕಟವಾಗಿಲ್ಲ‌. ಎಸಿ ಬರ್ನೆಲ್ ಬರೆದ Devil worship of Tukuvas ಪುಸ್ತಕದ ಪ್ರಭಾವದಿಂದಾಗಿ ಹೊರ ಜಗತ್ತಿಗೆ ನಮ್ಮ ಭೂತ/ ದೈವಗಳ ಬಗ್ಗೆ ತಪ್ಪು ಅಭಿಪ್ರಾಯ ಮೂಡಿದೆ.ಹಾಗಾಗಿ ಈ ಪುಸ್ತಕವನ್ನು ಇಂಗ್ಲಿಷ್ ನಲ್ಲೂ ಪ್ರಕಟಿಸಬೇಕು ಎಂದು ನಿರ್ಧರಿಸಿದೆ.ಅಶ್ವಿನಿ ಭಟ್ ಬಹಳ ಪ್ರೀಯಿಂದ ಅನುವಾದ ಮಾಡಿ ಕೊಟ್ಟರು‌

ಇತ್ತೀಚೆಗೆ ರಣವೀರ್ ಸಿಂಗ್ ಚಾಮುಂಡಿ ದೈವವನ್ನು female ghost ಎಂದಿದ್ದನ್ನು ಕೇಳಿದ ಮೇಲೆ ಈ ಪುಸ್ತಕವನ್ನು ಪ್ರಕಟಿಸಿ  ಜನಪ್ರಿಯ ಮಾಡುವ ಅನಿವಾರ್ಯತೆ ಇದೆ ಎಂದೆನಿಸಿದೆ.ನಮ್ಮ ದೈವಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಹರಡಲೇ ಬೇಕು ಎಂಬ ನಿರ್ಧಾರಕ್ಕೆ ಬಂದೆ


ಅದರ ಫಲಿತವಾಗಿ ಮಾಯ ಮತ್ತು ಜೋಗದ ಬೆಳಕಿನಲ್ಲಿ ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್ ಮೊ 9480516684 

ಈಗ ಇಂಗ್ಲಿಷ್ ನಲ್ಲಿ ಪರಿಷ್ಕೃತ ಗೊಂಡು 1259 ದೈವಗಳ ಮಾಹಿತಿ ಒಳಗೊಂಡು  ಸಾವಿರದ ನೂರ ತೊಂಬತ್ತ ನಾಲ್ಕು ಪುಟಗಳ ಬೃಹತ್ ಗ್ರಂಥವಾಗಿ The Thousand and one Daivas of Karavali- A Hiistorical cultural and Analytical study ಎಂಬ ಹೆಸರಿನಲ್ಲಿ ಪ್ರಕಟ ಆಗುತ್ತಿದೆ 

ಇಂಗ್ಲಿಷ್ ಬಾರದ ಹಳ್ಳಿ ಹುಡುಗಿಯ ಒಂದು ಸಾವಿರದ ನೂರ ತೊಂಬತ್ತೆರಡು ಪುಟಗಳ ಬೃಹತ್ ಗ್ರಂಥವೊಂದು ಇಂಗ್ಲಿಷ್ ನಲ್ಲಿ ಪ್ರಕಟವಾಗಿ ನಮ್ಮ ಸಂಸ್ಕೃತಿಯನ್ನು ನ್ನು ವಿಶ್ವಾದ್ಯಂತ ಹರಡಲು ಹೊರಟಿದೆ ಎಂಬುದು ನಿಜವೇ ಕನಸೇ ಎಂದೆನಿಸ್ತದೆ ನನಗೆ

ಏನೋ ಒಂದು ಹುಚ್ಚು ಧೈರ್ಯದಲ್ಲಿ‌ ಅಶ್ವಿನಿ ಭಟ್ Ashwini Bhat  ಜೊತೆಗೆ ಸೇರಿಕೊಂಡು ದೊಡ್ಡದೊಂದು ಸಾಹಸಕ್ಕೆ ಹೊರಟಿದ್ದೇವೆ 

ನಿಮ್ಮೆಲ್ಲರ ಬೆಂಬಲ ಎಂದಿನಂತೆ ಇರಲಿ 

ಜನ್ನ ಹೇಳಿದಂತೆ.

ಕಟ್ಟಿಯುಮೇನೋ ಪೊಸ ಭಾಸಿಂಗಮುಮ್

ಮುಡಿವ ಭೋಗಿಗಳಿಲ್ಲದೆ ಬಾಡಿ ಪೋಗದೇ?

ನನ್ನ ಇಪ್ಪತ್ತೈದು ವರ್ಷಗಳ ಪರಿಶ್ರಮ ಕ್ಕೆ ನಿಮ್ಮೆಲ್ಲರ ಬೆಂಬಲ ಇರಲಿ ಈಗ್ರಂಥದ ಬಗ್ಗೆ ನಿಮ್ಮ ಸ್ನೇಹಿತರಿಗೆ ಬಂಧು ಬಳಗದವರಿಗೆ ತಿಳಿಸಿ 

ಈಗ ಈ ಗ್ರಂಥಕ್ಕೆ pre publication offer ಕೂಡ ಲಭ್ಯವಿದೆ 

ಡುಂಡೀರಾಜ್ ಅವರು ಹೇಳಿದಂತೆ

ರಾವಣನ ಮಡದಿ ಮಂಡೋದರಿ.

ಪುಸ್ತಕವನ್ನು ಕೊಂಡೋದಿರಿ

ಧನ್ಯವಾದಗಳು 

ಮಾತೃಶ್ರೀ ಮಾತೃಶ್ರೀ ಪ್ರಕಾಶನ ಪ್ರಕಾಶನ ಬೆಂಗಳೂರು 

ಲೇಖಕರು ಡಾ‌‌.ಲಕ್ಷ್ಮೀ ಜಿ ಪ್ರಸಾದ್, ಮೊಬೈಲ್ 9480516684 

Tulunada Porludisira 

Tulunada Thudar 

Tulunada Daivalu 

Tulu Naad Baase Sanskrithi 

Tulunada Daivolu 

Dharma Chavadi Namma Tulunad 

NaMo Tulunadu 

Tulu Patherga Tulu Oripaga-Registered 

Tulunaduda Gowji Gammathu 

Tulunadu Marlara Mane 

Tulunada Daiva Shrishti 

Tulunad Daiva 

Tulu Rajya 

Namma Tulunadu 

Karnikada Daivolu Tulunad 

Kudla Tulu Pathrike K 

Daivaradhakere Koota 

Saramani Daivolu 

Muggerkala Daivasthana Mattu Katapady 

Sri Mogera Daivasthana Kodyadka 

Daivabharana Padubidri 

Daiva Rahu Guliga 

#kolam 

#daivaradhane 

#daivakola 

#bhutakola #kundapura 

#karavali #karavalikarnataka 

#daivaradane 

#daiva #theyyamkannur #theyyamkasaragod 

#theyyamphotography 

#theyyamsofmalabar


Friday, 26 December 2025

ಆತ್ಮ‌ಕಥೆಯ ಬಿಡು ಭಾಗಗಳು- ಒಂದು ಕಾಶಿ ಇನ್ನೊಂದು ಕಾಶಿಯತ್ತ ನಡೆವಾಗ

 


ಒಂದು ಕಾಶಿ ಇನ್ನೊಂದು ಕಾಶಿಯತ್ತ ನಡೆವಾಗ ..


“ಕಾಸಿಗಿ ಹೋಗುದಕ ಏಸೊಂದು ದಿನಬೇಕು/

, ತಾಸ್ ಹೊತ್ತಿನ ಹಾದಿ ತೌರೂರು ಮನೆಯಲ್ಲಿ/

 ಕಾಶಿ ಕುಂತವಳೆ ... ಕಾಸಿ ಕುಂತವ್ಳೆ ಹಡೆದವ್ವ

ನನ್ನಮ್ಮನೇ ಒಂದು ಕಾಶಿ..ಅವರೀಗ ಕಾಶಿಗೆ ಹೋಗಿದ್ದಾರೆ 

ನನ್ನಮ್ಮ ,ಅಣ್ಣ ಅಕ್ಕ ಬಾವ ,ತಮ್ಮ ತಮ್ಮನ ಹೆಂಡತಿ ಮಕ್ಕಳು ಮೊನ್ನೆ ಕಾಶಿಗೆ ಹೊರಟರು.ಅಕ್ಕ ಬಾವ ತಮ್ಮ ತಮ್ಮನ ಮಡದಿ ಮಕ್ಕಳು ಮಂಗಳೂರಿನಿಂದ ವಿಮಾನ ಹತ್ತಿ ಇಪ್ಪತ್ತೆರಡನೆಯ ತಾರೀಕಿನಂದು ಸಂಜೆ ಬೆಂಗಳೂರಿನ ನಮ್ಮ ಮನೆಗೆ ಬಂದರು.ಅಮ್ಮ ಹದಿನೈದು ದಿನ ಮೊದಲೇ ನಮ್ಮ ಮನೆಗೆ ಬಂದಿದ್ದರು.ಮಗ ಊರಿಗೆ ಹೋದವನು ಒತ್ತಾಯ ಮಾಡಿ ಅಮ್ಮನನ್ನು ನಮ್ಮನೆಗೆ ಕರೆದುಕೊಂಡು ಬಂದಿದ್ದ.

ಇಪ್ಪತ್ತಮೂರನೇ ತಾರೀಕಿನಂದು ಬೆಳಗೆ ಎಂಟೂವರೆಯ ವಿಮಾನದಲ್ಲಿ ಕಾಶಿಗೆ( ವಾರಾಣಸಿ) ಹೋಗಲು ಸೀಟ್ ಬುಕ್ ಆಗಿತ್ತು.

ಅಕ್ಕ ಬಾವ ತಮ್ಮ ಮಕ್ಕಳೆಲ್ಲ ಸೇರಿದ್ದರಿಂದ ಬಹಳ ಸಂಭ್ರಮದ ವಾತಾವರಣ.

ತಮ್ಮನ ಮಕ್ಕಳಿಗೆ ಪಿಜ್ಜಾ ತಿನ್ನುವ ಆಸೆ ಅಯಿತು.ಇದಕ್ಕೆ ನನ್ನ ಮಗನ ಕುಮ್ಮಕ್ಕು ಇತ್ತು ,ಬಹುಶಃ ಇವನೇ ಅವರಿಗೆ ಹಾಗೆ ಹೇಳುವಂತೆ ಹೇಳಿ ಕೊಟ್ಟಿರಬಹುದು ಯಾಕೆಂದರೆ ಇವನಿಗೆ ಪಿಜ್ಜಾ ತುಂಬಾ ಇಷ್ಟ !ಆದರೆ ಮರುದಿನದಿಂದ ಐದು ದಿನಗಳ ಕಾಲ ಪ್ರಯಾಣ ಇದ್ದ ಕಾರಣ ತಮ್ಮ ಬೇಡ ಎಂದು ಹೇಳಿದರು.ಸೊಸೆಯ ಮುಖ ಚಿಕ್ಕದಾಯಿತು.ಆಗ ನಾನು ಮುಂದಿನ ಬೇಸಗೆ ರಜೆಯಲ್ಲಿ ಹದಿನೈದು ದಿನ ಇರುವಂತೆ ಬಾ..ಇಡೀ ಬೆಂಗಳೂರು ಸುತ್ತಿಸುತ್ತೇನೆ ಬೇಕಾದ್ದು ತೆಗೆದು ಕೊಡುತ್ತೇನೆ ಎಂದು ಸಮಾಧಾನ ಮಾಡಿದೆ.

‌ಮರುದಿವಸ ನಾಲ್ಕೂವರೆಗೆ ವಿಮಾನ ನಿಲ್ದಾಣಕ್ಕೆ ಹೋಗಲು ಕಾರನ್ನು ಬರುವಂತೆ ಹೇಳಿದ್ದೆವು.

‌ಮರು ದಿನದ ತಿಂಡಿ ಎಲ್ಲ ಮೊದಲೇ ಸಿದ್ಧ ಪಡಿಸಿದ್ದೆವು..

‌ಮರು ದಿನ ಮೂರು ಗಂಟೆಗೆ ಏಳ ಬೇಕಿದ್ದರಿಂದ ಬೇಗ ಬೇಗನೆ ಊಟ ಮಾಡಿ ಮಲಗಿ ಎಂದು ಅಮ್ಮ ಗದರಿದರೂ ನಮ್ಮ ಅಕ್ಕ ತಮ್ಮಂದಿರ ಮಾತು ಹರಟೆ ತಮಾಷೆ ಸುಲಭಕ್ಕೆ ಕೊನೆಗಾಣುವಂತಿರಲಿಲ್ಲ.ಅಂತೂ ಇಂತೂ ಒಂಬತ್ತೂವರೆಗೆ ಎಲ್ಲರಿಗೆ ಚಾಪೆ ಹಾಸಿ ಮಲಗಲು ವ್ಯವಸ್ಥೆ ಮಾಡಿದೆ, ಎಲ್ಲರೂ ಬೆಳಕು ನಂದಿಸಿ ಹಾಸಿಗೆಯಲ್ಲಿ ಬಿದ್ದು ಕೊಂಡೆವು.ಅವರಿಗೆಲ್ಲಾ ಪ್ರಯಾಣ ಮಾಡಿ ಬಂದು ಸುಸ್ತಾಗಿ ನಿದ್ರೆ ಬಂದಿರಬಹುದು

‌ಆದರೆ ನನಗೆ ಮಾತ್ರ ಒಂದಿನಿತು ನಿದ್ದೆ ಕಣ್ಣಿಗೆ ಹತ್ತಲಿಲ್ಲ..ಕಣ್ಣಿಗೆ ಕಾಣುತ್ತಾ ಇದ್ದದ್ದು ಒಂದೇ ದೃಶ್ಯ... ನಾನೂ ಕಾಶಿಗೆ ಬರುತ್ತೇನೆ ಎಂದು ದುಃಖಿಸಿ ದುಃಖಿಸಿ ಅಳುತ್ತಿದ್ದ ಮೂರು ನಾಲ್ಕು ವರ್ಷದ ಸಣ್ಣ ಹುಡುಗಿಯ ಚಿತ್ರ...ಆ ಹುಡುಗಿ ಬೇರೆ ಯಾರೂ ಅಲ್ಲ..ನಾನೇ ಆಗಿದ್ದೆ.

‌ನಾನು ಚಿಕ್ಕವಳಿದ್ದಾಗ ಅಂದರೆ ಸುಮಾರು ನಲುವತ್ತೆರಡು ವರ್ಷಗಳ ಮೊದಲು ನಮ್ಮ ಕುಟುಂಬವಿಡೀ ಕಾಶಿಗೆ ಹೋಗಿತ್ತು.ಸಂಸಾರದ ಜವಾಬ್ದಾರಿ ಹಾಗೂ ಎಳೆಯ ಮಕ್ಕಳಿರುವ ಕಾರಣದಿಂದಾಗಿ ನನ್ನ ತಂದೆ ತಾಯಿ ಮತ್ತು ನಾವು ಐದು ಜನ ಮಕ್ಕಳು ಮಾತ್ರ ಹೋಗಿರಲಿಲ್ಲ..

‌ನನಗೆ ಬೇರೆ ಯಾರು ಹೊದರೂ ಅಷ್ಟೊಂದು ದುಃಖ ಆಗುತ್ತಿರಲಿಲ್ಲವೋ ಏನೋ..ನನ್ನ ಜೊತೆ ಜೊತೆಗೇ ಬೆಳೆದ ನನಗಿಂತ ಕೆವಲ ಐದಾರು ತಿಂಗಳು ದೊಡ್ಡವಳಾದ ಚಿಕ್ಕಪ್ಪನ ಮಗಳು ಸಂಧ್ಯಾ ನನ್ನನ್ನು ಬಿಟ್ಟು  ಕಾಶಿಗೆ ಹೋಗುವುದು ಸಹಿಸಲಾಗದ ವಿಚಾರವಾಗಿತ್ತು.ಚಿಕ್ಕಪ್ಪ ಚಿಕ್ಕಮ್ಮ ಹೋಗುವ ಕಾರಣ ಅವಳನ್ನು ಕರೆದುಕೊಂಡು ಹೋಗಿದ್ದರು ಅದೇನು ಅಸಹಜ ವಿಚಾರವಲ್ಲ 

‌ಆದರೆ ಅಷ್ಟೆಲ್ಲ ಯೋಚಿಸುವಷ್ಟು ನಾನು ದೊಡ್ಡವಳಾಗಿರಲಿಲ್ಲ.ಹಾಗಾಗಿ ಒಂದೇ ಸಮನೆ ನಾನೂ ಕಾಶಿಗೆ ಬರುತ್ತೇನೆ ಎಂದು ಹಠ ಮಾಡುತ್ತಿದ್ದೆ

ನನ್ನಲ್ಲಿ ಇರುವುದರಲ್ಲಿ ಒಂದು ಚಂದದ  ಕೆಂಪುಬಣ್ಣದ ಫ್ರಾಕ್ ಹಾಕಿ ಸಿದ್ಧಳಾಗಿದ್ದೆ.ಯಾರೇನೂ ಹೇಳಿ ಸಮಾಧಾನ ಮಾಡಿದರೂ ನಾನು ಕೇಳುವ ಪರಿಸ್ಥಿತಿ ಯಲ್ಲಿ ಇರಲಿಲ್ಲ ಯಾಕೆಂದರೆ ಸಂಧ್ಯಾ ಹೋಗುತ್ತಿದ್ದಾಳಲ್ಲ‌! ಮತ್ತೆ ನನ್ನನ್ಯಾಕೆ ಕರೆದುಕೊಂಡು ಹೋಗಬಾರದು ಎಂಬುದೊಂದೇ ಪ್ರಶ್ನೆ ನನ್ನದು‌ಆಗ ಅಜ್ಜಿ ಅವಳ ತಂದೆ ತಾಯಿ ಹೋಗುತ್ತಾರೆ ಹಾಗಾಗಿ ಅವಳನ್ನು ಕರೆದುಕೊಂಡು ಹೋಗುತ್ತಾರೆ...ನೀನು ನಿನ್ನ ತಂದೆ ತಾಯಿ ಹೋದಾಗ ಅವರ ಜೊತೆಯಲ್ಲಿ ಹೋಗು ಕಾಶಿಗೆ ಹೋಗುದೆಂದರೆ ಸಣ್ಣ ವಿಚಣರವಲ್ಲ..ಅದಕ್ಕೆ ಪುಣ್ಯ ಬೇಕು ಎಂದು ಏನೇನೋ ಹೇಳಿದರು...ಅದೆಲ್ಲ ಅರ್ಥ ಆಗುವ ವಯಸ್ಸು ನನ್ನದಲ್ಲ.ನನಗೆ ಕಾಶಿ ಎಂದರೇನು ? ಎಂದು ಕೂಡ ಗೊತ್ತಿರಲಿಲ್ಲ. ನನ್ನ ಒಬ್ಬ ಚಿಕ್ಕಪ್ಪ ರಾಮಕೃಷ್ಣ ಭಟ್ ಕಾಶಿಯಲ್ಲಿ ಪ್ರೊಫೆಸರ್ ಆಗಿದ್ದರು‌.ಅವರೆಂದರೆ ನನಗೆ ತುಂಬಾ ಇಷ್ಟ ಹಾಗಾಗಿ ಇವರೆಲ್ಲ ಅವರ ಮನೆಗೆ ಹೋಗುತ್ತಾರೆ ಎಂದು ಭಾವಿಸಿದ್ದೆ.ಹಾಗಾಗಿ ಸಂಧ್ಯನ ಜೊತೆಗೆ ನನಗೂ ಕಾಶಿ ಅಪ್ಪಚ್ಚಿ ಮನೆಗೆ ಹೋಗಬೇಕೆಂದಿತ್ತು.

ಬಹುಶಃ ಇವರೆಲ್ಲ ಬೆಳಗಿನ ಜಾವ ಮನೆ ಬಿಟ್ಟಿರಬಹುದು ಮಂಗಳೂರು ತನಕ ಕಾರು ಅಥವಾ ಜೀಪಿನಲ್ಲಿ ಹೋಗಿ ಅಲ್ಲಿಂದ ರೈಲಿನಲ್ಲಿ ಹೋಗಿದ್ದಿರಬಹುದು.

ಇವರನ್ನು ಕಳಹಿಸಿಕೊಡುವುದಕ್ಕಾಗಿ ಇರಬಹುದು ನನ್ನ ಸೋದರತ್ತೆ ಮುಂಡ್ರಕಜೆ ಅತ್ತೆ ಬಂದಿದ್ದರು.ಇವರೆಲ್ಲ ಹೊರಡುವಾಗ ನಾನು ಅತ್ತು ಕರೆದು ಗಲಾಟೆ ಮಾಡುತ್ತೇನೆಂದು ಇರಬಹುದು, ಅತ್ತೆ ನನ್ನನ್ನು ಮುದ್ದು ಮಾಡಿ ನಾನು ನೀನು ಒಟ್ಟಿಗೆ ಕಾಶಿಗೆ ಹೋಗುವ ಆಯ್ತಾ ಎಂದು ಮುದ್ದು ಮಾಡಿ ಕೈ ಹಿಡಿದು ಗುಡ್ಡ ಹತ್ತಿ ಎಲ್ಲಿಗೋ ಕರೆದುಕೊಂಡು ಹೋದರು.ಅಲ್ಲಿ ನಾಯಿ ಬೆಕ್ಕುಗಳ ಕಥೆ ಹೇಳಿದರು.ಇಲ್ಲಿ ನನ್ನ ಅತ್ತೆ ಬಗ್ಗೆ ಒಂದೆರಡು ಮಾತು ಬರೆಯಲೇ ಬೇಕು.ನನ್ನತ್ತೆ ಹೆಚ್ಚೇನೂ ಓದಿದವರಲ್ಲ..ಆದರೆ ಹಳ್ಳಿ ಮದ್ದುಗಳ ಕುರಿತು ಅಪಾರ ಜ್ಣಾನವಿದೆ.ಅವರ ಮನೆಗೆ ಬಂದು ಅನೆಕರು ಔಷಧಿ ತಗೊಂಡು ಹೋಗಿ ಗುಣಮುಖರಾಗುತ್ತಿದ್ದರು.ಬಂದವರಿಗೆಲ್ಲ ಉಚಿತವಾಗಿ ಔಷಧ ಕೊಡುತ್ತಿದ್ದದಲ್ಲದೆ ಊಟ ತಿಂಡಿಯನ್ನು ಕೂಡ ಬಡಿಸುತ್ತಿದ್ದರು.ಆ ಬಗ್ಗೆ ಅವರಿಗೆ ಒಂದಿನಿತು ಬೇಸರವಿರಲಿಲ್ಲ.ಅವರಿಗೆ ಅನೇಕ ಕಥೆಗಳು ಗೊತ್ತಿದ್ದವು. ಹೆಣ್ಣು ನಾಯಿ ಎರಡು ಮನುಷ್ಯ ಶಿಶುಗಳನ್ನು ಮರಿ ಹಾಕುವುದು ,ಅವರು ದೊಡ್ಡವರಾದ ಮೇಲೆ ದೊಡ್ಡವಳು ತಾಯಿ ನಾಯಿ ಬಾಗಿಲಿಗೆ ಬಂದಾಗ ಕಲ್ಲು ಬಿಸಾಡಿ ಓಡಿಸುವುದು,ಚಿಕ್ಕವಳು ಆದರದಿಂದ ನೋಡಿಕೊಳ್ಳುವುದು ಅವಳಿಗೆ ತಾಯಿ ನಾಯಿ ನಿಧಿಯನ್ನು ತೋರಿಸುವುದು..ಇತ್ಯಾದಿ ಅನೇಕ ಜಾನಪದ ಕಥೆಗಳ ಭಂಡಾರವೇ ಅತ್ತೆಯ ಬಾತಿಯೊಳಗೆ ಅಡಗಿತ್ತು.

ಹೀಗೆ ಅತ್ತೆ ಕಥೆ ಹೇಳುತ್ತಾ ನನ್ನನ್ನು ಮಂಗಡಿಸಿ( ಸಮಾಧಾನ ) ಮಾಡಿ ಮನೆಗೆ ಹಿಂದಿರುಗುವಷ್ಟರಲ್ಲಿ ಮನೆ ಇಡೀ ಖಾಲಿ ಆಗಿತ್ತು.ಎಲ್ಲರೂ ಕಾಶಿಗೆ ಹೋಗಿ ಆಗಿತ್ತು.ನಾನು ಮಂಗ ಆದ್ದು ಗೊತ್ತಾಗಿ ಮತ್ತೆ ಅತ್ತು ಗೋಳಾಡಿದೆ.ಆಗ ಅಮ್ಮ ನಾವು ಕೂಡ ಮುಂದೆ ಕಾಶಿಗೆ ಹೋಗುವ ಎಂದು ಸಮಾಧಾನ ಮಾಡಿದರು.

ಅವರೆಲ್ಲ ಕಾಶಿಗೆ ಹೋಗಿ ಬಂದರು..ಅಮ್ಮನಿಗೊಂದು ಪಟ್ಟೆ ಸೀರೆ ತಂದಿದ್ದರು..ನನಗೂ ಏನಾದರೂ ಹೊಸ ಅಂಗಿ ತಂದಿರಬಹುದೇ ಎಂದು ಆಸೆ ಗಣ್ಣಿನಿಂದ ತಂದ ವಸ್ತುಗಳನ್ನು ನೊಡುತ್ತಾ ಕಾಯುತ್ತಿದ್ದೆ..ಕಾದದ್ದೇ ಬಂತು ಅಷ್ಟೇ !

ಕಾಲ ಒಂದೇ ತರಹ ಇರುವುದಿಲ್ಲ..1996 ,ರಲ್ಲಿ ನಾನು ಕಾಶಿ ಹರಿದ್ವಾರ ಹೃಶೀಕೇಶ ಮೊದಲಾದೆಡೆ ಹೋಗಿ ಬಂದೆ ಆಗಲೂ ನನಗೆ ನನ್ನನ್ನು ಬಿಟ್ಟು ಹೊದ ನೆನಪು ಕಾಡಿತ್ತು.

ತಂದೆ ಇರುವಾಗಲೇ ನಮಗೆಲ್ಲ ಕಾಶಿಗೆ ಹೋಗಿ ಬರಬೇಕೆಂದು ಇತ್ತು‌..ಆದರೆ ಯಾಕೋ ಕಾಲ ಕೂಡಿ ಬರಲಿಲ್ಲ.. ತಂದೆಯವರು ಅನಿರೀಕ್ಷಿತವಾಗಿ ಸಡನ್ ಆಗಿ ತೀರಿ ಹೋದರು‌.ಆಗ ಅವರ ಅಸ್ಥಿಯನ್ನು ಗಂಗೆಯಲ್ಲಿ ಹಾಕುವ ಸಲುವಾಗಿ ಶುದ್ಧೀಕರಿಸಿ ಎತ್ತಿಟ್ಟಿದ್ದೆವು.

ನಿನ್ನೆ ತಂದೆಯವರ ಏಳನೇ ವರ್ಷದ ತಿಥಿ ಇದನ್ನು ಪ್ರಯೋಗದಲ್ಲಿ ಮಾಡಿದರು.( ನನಗೆ ಇವರೊಂದಿಗೆ ಕಾಶಿಗೆ ಹೋಗಲಾಗಲಿಲ್ಲ)

ಈ ಬಾರಿ ಕಾಶಿಗೆ ಹೊರಡುವಾಗ ಅಮ್ಮ ಬಹಳ ಭಾವುಕರಾಗಿದ್ದರು.ಹಿಂದೆ ತಾನನುಭವಿಸಿದ ಅವಮಾನ ತಿರಸ್ಕಾರಗಳು ಜೊತೆಗೆ ಅಪ್ಪನ ನೆನಪೂ ಆಗಿರಬಹುದು.

ಮೊದಲೊಂದು ಕಾಲವಿತ್ತು‌ಜನರು ನಡೆದು ಕೊಂಡು ಕಾಶಿಗೆ ಹೋಗುತ್ತಿದ್ದರು‌

ನನ್ನ  ಅಜ್ಜಿ ಚಿಕ್ಕಪ್ಪ ನವರೆಲ್ಲ  ರೈಲಿನಲ್ಲಿ ಕಾಶಿಗೆ ಹೋಗಿದ್ದರೆ ಇಂದು ಅಮ್ಮ ವಿಮಾನದಲ್ಲಿ ಹೋಗಿದ್ದಾರೆ.

ಕಾಲ ಎಲ್ಲರ ಕಾಲನ್ನೂ ಎಳೆಯುತ್ತದೆ ,ಯಾರನ್ನೂ ಬಿಡುವುದಿಲ್ಲ..ಕಾಲದ ಚಕ್ರ ಮೇಲೆ ಕೆಳಗೆ ಹೋಗುತ್ತಲೇ ಇರುತ್ತದೆ.ಕಷ್ಟ ಬಂದಾಗ ಕುಗ್ಗದೆ ಸಿರಿ ಬಂದಾಗ ಹಿಗ್ಗದೆ ಬಾಳನ್ನು ಹದದಿಂದ ಬಾಳುವುದು ಮನುಷ್ಯ ಧರ್ಮ.ನನ್ನಮ್ಮ ಕಾಶಿಗೆ ಹೋಗುವ ಮುನ್ನ ಎರಡು ಸಾವಿರ ರುಪಾಯಿ ನನ್ನ ಕೈಗಿತ್ತು ಮೊನ್ನೆಯಷ್ಟೇ ಆಕ್ಸಿಡೆಂಟ್ ಆಗಿ ಆಸ್ಪತ್ರೆಯಲ್ಲಿ ಇರುವ ಮನೆ ಕೆಲಸದ ಅಜ್ಜಿಗೆ ಕೊಡು ಎಂದು ಹೇಳಿ ಕೊಟ್ಟರು.

ಮಾನವೀಯತೆಗಿಂತ ದೊಡ್ಡ ಧರ್ಮ ಬೇರೆ ಇಲ್ಲ ..ಕಾಶಿಗೆ ಹೋದದ್ದಕ್ಕಿಂತ ಸಾವಿರ ಪಟ್ಟು ಪುಣ್ಯ ಸಂಚಯವನ್ನು ಅಮ್ಮ ಇಲ್ಲಿಯೇ ಗಳಿಸಿ ಹೋದರು.ಸದಾ ಕಷ್ದಲ್ಲಿರುವವರಿಗಾಗಿ ಮರುಗುವ ತನ್ನ ಕೈಲಾದ ಸಹಾಯ ಮಾಡುವ ಅಮ್ಮನಿಗೆ ಕಾಶಿಗೆ ಹೋಗಿ ಆಗಬೇಕಾದ್ದು ಏನೂ ಇಲ್ಲ..ಅಮ್ಮನೇ ಒಂದು ಕಾಶಿ ..ಅದೇನೇ ಇರಲಿ  ಅಲ್ಲಿವಿಶ್ವನಾಥನ ದರ್ಶನದಿಂದ ಬದುಕು ಸಾರ್ಥಕವಾಗಲಿ ಎಂದು ಆಶಿಸುವೆ


https://shikshanaloka.blogspot.com/2019/08/blog-post.html?m=1

Wednesday, 24 December 2025

ಆತ್ಮ‌ಕಥೆಯ ಬಿಡಿ ಭಾಗಗಳು.. ಆತ್ಮ‌ಕಥೆಯನ್ನು ಬರೆಯದೆ ಹೇಗೆ ಇರಲಿ ?

 ಆತ್ಮ‌ಕಥೆಯ ಬಿಡಿ ಭಾಗಗಳು..

ಆತ್ಮ‌ಕಥೆಯನ್ನು ಬರೆಯದೆ ಹೇಗೆ ಇರಲಿ ? 


ಅನುದಾನ ಕೊಡುವುದಿಲ್ಲ ಎಂದಷ್ಟೇ ಹೇಳಿದ್ದರೆ ನಾನಿದನ್ನು ಬರೆಯುವ ಪ್ರಮೇಯವೇ ಬರುತ್ತಿರಲಿಲ್ಲ.ಅದರ ಜೊತೆಗೆ ಹೇಳಿದ ಮಾತುಗಳು‌ ನನಗೆ ಬಹಳಷ್ಟು ತಾಗಿತ್ತು ..


ಈ ಜಗತ್ತಿಗೆ ಹೆಣ್ಣೆಂದರೆ ಎಷ್ಟು ಅಸಡ್ಡೆ !

ಆಕೆ ಗೃಹಿಣಿಯಾಗಿದ್ದರೇ ಶ್ರೇಷ್ಠ ಹೆಚ್ಚೆಂದರೆ ಶಿಕ್ಷಕಿಯಾಗಿ ಉಪನ್ಯಾಸಕಿಯಾಗಿ ಇತ್ತೀಚೆಗೆ ವೈದ್ಯರಾಗಿ ಇಂಜನಿಯರ್ ಆಗಬಹುದು ಅಷ್ಟೇ. ಇನ್ನೂ ಮಹಿಳಾ ಲೇಖಕರ ಬರವಣಿಗೆಯನ್ನು ಅಡುಗೆ ಮನೆ ಸಾಹಿತ್ಯ ಎಂದು ಹೀಗಳೆದವರೇ ಹೆಚ್ಚು ಮಂದಿ ಇದ್ದಾರೆ.ಕೆಲವರು ಎದುರಿನಿಂದ ಇನ್ನೂ ಹಲವರು ಹಿಂದಿನಿಂದ ಹೇಳಿದ್ದು ..

ಹಾಗೂ ಒಂದೊಮ್ಮೆ ಮಹಳೆಯರು ಬರೆದರೆ ಕಥೆ ಕಾದಂಬರಿ ಬರೆಯಲಷ್ಟೇ ಲಾಯಕ್ಕು.

ಇನ್ನೂ ಅಧ್ಯಯನ ಮಾಡುದಾದರೆ ಯಾರೋ ಕವಿಗಳ ಬಗ್ಗೆ ಕಾವ್ಯಗಳ ಬಗ್ಗೆ ಅಷ್ಟೇ ಹೊರತು ಕ್ಷೇತ್ರ ಕಾರ್ಯ ಆಧರಿತ ಅಧ್ಯಯನ ಮಾಡಲು ಆಕೆ ಫಿಟ್ ಅಲ್ಲ.

ಒಂದೊಮ್ಮೆ ಮಾಡಿದರೂ ಗಣನೆಗೆ ಬರುವದ್ದಲ್ಲ..ಈ ಹಿಂದೆ ಒಬ್ಬರು ತುಳು ಲೇಖಕರು ಆ ಪೊಂಜೋವು ಬರೆಯಿನೆನ್ ಎಂಕುಲು ಲೆಕ್ಕೊಗು ದೀಪುಜ್ಜ..ಆ ಹೆಂಗಸು ಬರೆದದ್ದನ್ನು ನಾವು ಗಣನೆಗೆ ತೆಗೆದುಕೊಳ್ಳುವುದಿಲ್ಕ ಎಂದಿದ್ದರು

ನಮಗೇ ತಿಳಿಯದ ದೈವಗಳ ಹೆಸರು ಇವರಿಗೆ ಹೇಗೆ ಸಿಕ್ತದೆ ಅದೆಲ್ಲ ಆಕೆಯ ಸೃಷ್ಟಿ ಎಂದವರೂ ಇದ್ದರು.ದೈವಗಳ ಕಥೆ ಬರೆದಾಗ ಅದು ಕಪೋಲ ಕಲ್ಪಿತ ಎಂದಿದವರೂ ಇದ್ದರು 

ಆಗುವುದೆಲ್ಲ ಒಳ್ಳೆಯದಕ್ಕೇ ಎಂದು ಹಿರಿಯರು ಹೇಳುದು ಸುಳ್ಳಲ್ಲ

ಇವರೆಲ್ಲರ ಟೀಕೆಗಳನ್ನು ಎದುರಿಸುತ್ತಲೇ ನಾನು ಅಧ್ಯಯನ ಮುಂದಯವರಿಸಿದೆ.

ಸಾವಿರದೊಂದು ದೈವಗಳು ಇಲ್ಲವೇ ಇಲ್ಲ ಎಂದವರಿಗೆ ದೈವಗಳ ಕೋಲದ  ಚಿತ್ರ ಎಲ್ಲಿ ಆರಾಧನೆ ಇದೆ ಮೂಲ ಕಥೆಗಳ ಬಗ್ಗೆ ದಾಖಲೆ ಇರಿಸಿ ವಿಶ್ಲೇಷಿಸು ಬರೆದೆ.

ಎಲ್ಲರಿಗೂ ಉಚಿತವಾಗಿ ಮಾಹಿತಿ ದೊರೆಯಲಿ ಎಂದು ಬ್ಲಾಗ್ ನಲ್ಲಿ ಬರೆಯತೊಡಗಿದೆ.

ಬ್ಲಾಗ್ ನಿಂದ ಬರಹ ಕದ್ದು ನನ್ನದೆಂದು ಹೇಳಿದಾಗ ನನ್ನನ್ನೇ ಅಕೆಗೆ ಹೆಸರಿನ ದಾಹ ವಿಕಿಪೀಡಿಯ ಎಂದರೆ ಎನೆಮದು ಗೊತ್ತಿಲ್ಲ ಇತ್ಯಾದಿ   ಬರೆದ ವಿಶ್ವ ನಾಥ ಬದಿಕಾನ  ಪವನಜ ಯುಬಿ‌ ಮೊದಲಾದವುಗಳು ಬರೆದಾಗ ಓದಲು ತಾನೇ ಬರೆಯುದು..ಜನಪದ ಯಾರ ಸೊತ್ತಲ್ಲ ಎಂದು ಒಂದಷ್ಟು ಧೂರ್ತರು ಕೃತಿ ಚೌರ್ಯವನ್ನು ಬೆಂಬಲಿಸಿದರು.ಆಗ ಇವುಗಳಿಂದ ಪಾಠ ಕಲಿತೆ . ಉಚಿತವಾಗಿ ಸಿಕ್ಕರೆ ಇಷ್ಟೇ ಬೆಲೆ ಎಂದು ಗೊತ್ತಾಯಿತು.

ಮಹತ್ವದ ಬರಹಗಳನ್ನು ಬ್ಲಾಗ್ ನಿಂದ ಹಿಂದೆ ತೆಗೆದೆ

1253 ದೈವಗಳ ಸಚಿತ್ರ ಮಾಹಿತಿ  ಇರುವ 1036 ಪುಟಗಳ ದೊಡ್ಡ ಗಾತ್ರದ ಗ್ರಂಥ ರಚಿಸಿ ಪ್ರಕಟಿಸಿದೆ.

ಉಚಿತವಾಗಿ ಸಿಕ್ಕಾಗ ಯಾರಿಗಾದರೂ ಓದಲು ತಾನೇ ಬರೆದದ್ದು ಯಾರ ಹೆಸರಿನಲ್ಲಿದ್ದರೇನು ? ಲೇಖಕರ ಹೆಸರು ಹಾಕದೇ ಇದ್ದರೇನು ಎಂದವರು ಕೂಡ ಮಾಹಿತಿ ಬೇಕಿದ್ದರೆ 2000₹ ಕೊಟ್ಟ ಖರೀದಿಸುದು ಅನಿವಾರ್ಯ ಆಯಿತು.

2000₹ ಬೆಲೆ ಇರಿಸಿದಾಗಲೂ ಆಕ್ಷೇಪ ಬಂತು.

ನನ್ನ ಅಧ್ಯಯನ ನನ್ನ ಪುಸ್ತಕ ಬೆಲೆ ಇರಿಸುದು ನನ್ನ ಇಷ್ಟ.ತಗೊಳ್ಳುದು ಬಿಡುದು ಅವರವರ ಇಷ್ಟ ಎಂದೆ.

ತಗೊಂಡವರು ಯಾರೂ ಇಂದಿನವರೆಗೂ ಬೆಲೆ ಜಾಸ್ತಿ ಆಯಿತು ಎಂದಿಲ್ಲ‌

ಇನ್ನೂ ಈ ಪುಸ್ತಕವನ್ನು ಜನ ಕೊಂಡುಕೊಳ್ಳಲಾರರು ಎಂದವರೂ ಇದ್ದರು.

ಈ ಪುಸ್ತಕ ಪ್ರಕಟಣೆಯ ಸಮಯದಲ್ಲಿ ನನ್ನ ಅನೇಕ ಹಿತೈಷಿಗಳು ನೀವು ಈ ಪುಸ್ತಕ ಪ್ರಕಟಣೆಗೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರಿಂದ ಅನುದಾನ ಕೇಳಿ.ಅವರು ಎಲ್ಲರಿಗೆ ಕೊಡ್ತಾರೆ ಎಂದು ಸಲಹೆ ನೀಡಿದ್ದರು.ಆಗ ಕೊರೋನಾ ಸಮಯ .ಹೋಗಲು ಸಾಧ್ಯವಿರಲಿಲ್ಲ

ಹಾಗಾಗಿ ಇ‌ಮೇಲ್ ಮಾಡಿದ್ದೆ

ಇ ಮೇಲ್ ನೋಡ್ತಾರೆ ಉತ್ತರಿಸುತ್ತಾರೆ ಎಂಬ ನಿರೀಕ್ಷೆ ನನಗೇನೂ ಇರಲಿಲ್ಲ 

ಆದರೂ ಮರು ಉತ್ತರ ಅವರ ಆಪ್ತ ಕಾರ್ಯದರ್ಶಿ ಯಿಂದ ಬಂತು.ಈ ಪರಿಸ್ಥಿತಿಯಲ್ಲಿ 

ಪುಸ್ತಕ ಮಾರಾಟವಾಗಲಾರದು.ವಿತರಣೆಗೆ ಮುನ್ನೂರು ಜನರ ಪಟ್ಟಿ ಇರಬೇಕು.ಮರು ಮುದ್ರಣ ಮಾಡಿದೆ ಅವಶ್ಯವಾಾದಲ್ಲಿ 500 ಪ್ರತಿ ಮರುಮದ್ರಣ ಮಾಡಬಹುದು ಇತ್ಯಾದಿ ಅಸಂಬದ್ಧ ? ಎಂದೆನಿಸಿದ ಉತ್ತರ ಬಂತು.ಅನುದಾನ‌ಕೊಡುದಿಲ್ಲ ಎಂಬ ಉತ್ತರ ಬಂದಿದ್ದರೆ ಬೇಜಾರು ಏನೂ ಇರುತ್ತಿರಲಿಲ್ಲ ಅವರ ದುಡ್ಡು ಅವರ ಇಷ್ಟ ‌.ಆದರೆ ಪುಸ್ತಕ ಮಾರಾಟ ಆಗಲಾರದು.ವಿತರಣೆಗೆ ಮುನ್ನೂರು ಜನರ ಪಟ್ಟಿ ಬೇಕು ಎಂದದ್ದು ನನಗೆ ತಾಗಿತ್ತು .ನನ್ನ 21 ವರ್ಷಗಳ ಅಧ್ಯಯನ ಗ್ರಂಥದ ಬಗ್ಗೆ ಇಷ್ಟು ಅನುಮಾನವೇ ? ಹೆಂಗಸೆಂದೇ ? ಪುಸ್ತಕ ನೋಡಿ ಮೆಚ್ಚಿದ್ದರೂಅವರೇ ಹೇಳಿದಂತೆ ಮರು ಮುದ್ರಣದಲ್ಲಿ  500 ಬಿಡಿ 50 ಪ್ರತಿಗಳನ್ನೂ ಖರೀದಿಸದ ಬಗ್ಗೆ ನನಗೆ ಇಂದಿಗೂ ಅಚ್ಚರಿ ಎನಿಸುತ್ತದೆ.ಎಲ್ಲರೂ ಹೇಳುವಂತೆ ಹೆಗ್ಗಡೆಯವರು ಇಂತಹ ಕೆಲಸಕ್ಕೆ ಅನುದಾನ ನೀಡುತ್ತಾರೆ .ಅನುದಾನ ಬಿಡಿ ಪುಸ್ತಕದ ಪ್ರತಿಗಳನ್ನು ಖರೀದಿಸದೇ ಇರಲು ಕಾರಣವೇನು ? ಅಲ್ಲಿನ ಪುಸ್ತಕ ವಿಭಾಗದ ಉಸ್ತುವಾರಿ ವಹಿಸಿರುವವರ ಕುತಂತ್ರವೇ ? ಈ ಬಗ್ಗೆ ಯಾರೋ ಏನೋ ಒಂದಷ್ಟು ಹೇಳಿದ್ದರೂ ದಾಖಲೆ ಇಲ್ಲ.ಆದರೂ ಇದಕ್ಕೂ ಮೊದಲು 2015 ರಲ್ಲಿಯೇ  ಆತ ಕಾರಣವಿಲ್ಲದೆ ಹಿಂದಿನಿಂದ ಕುತಂತ್ರ ಮಾಡಿರುವದ್ದು ಸ್ಪಷ್ಟವಾಗಿ ತಿಳಿದಿರುವ ಕಾರಣ ಆತನದೇ ಕಿತಾಪತಿ ಇರಬಹುದೆನಿಸ್ತದೆ.ಈ ಬಗ್ಗೆಯೂ ನಾನು ಇ ಮೇಲ್ ಮೂಲಕ ತಿೞಿಸಿದ್ದೆ.ಆತನಾರು ಎಂಬ ಕುತೂಹಲ ಇದೆಯಾ ? ನನ್ನ ಆತ್ಮ‌ಕಥೆಯಲ್ಲಿ ಆತನ ಹೆಸರು ಹಾಕಿ ಬರೆಯುವೆ ಖಂಡಿತಾ


ಅದಿರಲಿ ..ಮತ್ತೆ ವಿಷಯಕ್ಕೆ ಬರುವೆ 

ಆಗಷ್ಟೇ ಮನೆ ಕಟ್ಟಿದ್ದ ನಮಗೂ ಒಮ್ಮೆಲೇ ಪುಸ್ತಕ ಪ್ರಕಟಣೆಗೆ ಆರೇಳು ಲಕ್ಷ ಖರ್ಚು ಮಾಡುದು ಕಷ್ಟಕರ ಎನಿಸಿತು .ದೇವರು ದೊಡ್ಡವನು ನಮ್ಮ ಕೈ ಕೆಳಗಾಗದಂತೆ ಕಾಯ್ದನು ,ಕೊಟ್ಟವರ ಕೈ ಯಾವಾಗಲೂ ಮೇಲೆ ತಗೊಂಡವರ ಕೈ ಯಾವಾಗಲೂ ಕೆಳಗೆ.ಒಂದೊಮ್ಮೆ ಹೆಗ್ಗಡೆಯವರು ಅನುದಾನ ಕೊಡ್ತಿದ್ದರೆ ನಾವು ತಗೊಳ್ತಿದ್ದೆವು ನಮ್ಮ ಕೈ ಕೆಳಗಾಗುತ್ತಿತ್ತು ಆದರೆ ಹಾಗಾಗದಂತೆ ದೇವರೇ ಕಾಯ್ದಿರಬೇಕು ನಮ್ಮನ್ನು.

ಇಂತಹ ಸಮಯದಲ್ಲಿ ಸ್ನೇಹಿತರು pre publication offer ಕೊಡಲು ಸಲಹೆ ನೀಡಿದರು.

ಈ ಉಪಾಯ ಸಾಕಷ್ಟು ಯಶಸ್ವಿ ಆಯಿತು

ಸುಮಾರು 700 ಪುಸ್ತಕ ಪ್ತಿಂಟ್ ಗೆ ಮೊದಲೇ ಬುಕ್ ಆಯಿತು.ಆರಂಭದಲ್ಲಿ ಕಡಿಮೆಗೆ ಕೊಟ್ಟ ಕಾರಣ ನನ್ನ ಮೇಲೆ ನಂಬಿಕೆ ಇರಿಸಿ ಪುಸ್ತಕಕ್ಕೆ ಮುಂಗಡವಾಗಿ ಪಾವತಿಸಿ ಕಾದಿರಿಸಿದವರಿಗೆ ಕಡಿಮೆ ಬೆಲೆಗೆ ಸಿಕ್ತು ಕೂಡ.ನಮಗೂ ಫಂಡ್ ಬಂತು

ಮುಂದೆ ಮೊದಲ ಮುದ್ರಣದ ಪ್ರತಿಗಳು ಪುಸ್ತಕ ಬಿಡುಗಡೆಯಾದ ಕೆಲ ದಿನಗಳಲ್ಲಿ ಖಾಲಿಯಾದವು.

ಇನ್ನೇನು ಮರು ಮುದ್ರಣದತ್ತ ಯೋಚಿಸುವಷ್ಟರಲ್ಲಿ ಕಾಂತಾರ ಸಿನೆಮಾ ಬಂತು

ಪರಿಷ್ಕೃತ ಗೊಳಿಸಿ ಮಾಯ ಮತ್ತು ಜೋಗದ ಪರಿಕಲ್ಪನೆ ಸೇರಿಸಿ ಇನ್ನೂ ಒಂದಷ್ಟು ದೈವಗಳ ಮಾಹಿತಿ ಸೇರಿಸಿದಾಗ ಸೃಷ್ಟಿಯಾದ ಗ್ರಂಥ ಮಾಯ ಮತ್ತು ಜೋಗದ ಬೆಳಕಿನಲ್ಲಿ ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್ ‌ಮೊಬೈಲ್ 9480516684

ಮೊದಲು ಪತ್ರದಲ್ಲಿ ತಿಳಿಸಿದಂತೆ ಈ ಪರಿಷ್ಕೃತ  ಮುದ್ರಣದ 500 ಪ್ರತಿಗಳನ್ನು ಖರೀದಿಸಬಹುದು ಎಂದುಕೊಂಡಿದ್ದೆ .ತಗೊಂಡಿಲ್ಲ.ಹಾಗೆಂದು ನಮಗೇನೂ ಸಮಸ್ಯೆ ಆಗಲಿಲ್ಲ ಯಾರೋ ತಗೊಂಡು ನಾವು ಉದ್ದಾರ ಆಗುತ್ತೇವೆ ಎಂದು ಅಲೋಚನೆ ಮಾಡಿ ನಾವು ಪ್ರಕಟಿಸಿದ್ದಲ್ಲ.ಆಸಕ್ತ ಜನರು ತಗೊಂಡಾರು ಎಂಬ ಭರವಸೆ ನಮಗಿತ್ತು‌.ಅದು ಹುಸಿಯಾಗಲಿಲ್ಲ.

ಈಗ ಮರು ಮುದ್ರಣದತ್ತ ದಾಪುಗಾಲು ಇಡುತ್ತಿದೆ 

ಇದರ ನಡುವೆ ಒಂದು ಗಮ್ಮತ್ತಿನ ವಿಷಯ ನಡೆಯಿತು  ಎಂತ ಗೊತ್ತುಂಟಾ?

ಲಕ್ಷಾಂತರ ಜನರಿಗೆ ದಾನ ನೀಡಿದ ನಾನಾ ದೇವಸ್ಥಾನ ದೇವಸ್ತಾನ ಗಳಿಗೆ ಕೋಟ್ಯಂತರ ರುಪಾಯಿ ಅನುದಾನ ನೀಡಿದ ವೀರೇಂದ್ರ ಹೆಗ್ಗಡೆಯವರಿಗೆ ಅವರ ಕೋರಿಕೆಯಂತೆ  ನಾನು  ಗೌರವ ಪ್ರತಿ(ಉಚಿತವಾಗಿ) ಪುಸ್ತಕವನ್ನು ನೀಡಿದ್ದೇನೆ  .

ಒಂದು ದಿನ ಅವರ ಸಹಸಯಕರಾದ ಪವನ್ ಎಂಬವರು ಕರೆ ಮಾಡಿ ಹೆಗ್ಗಡೆಯವರು ನಿಮ್ಮ ಪುಸ್ತಕ ಓದಲು ಬಯಸಿದ್ದಾರೆ ಎಲ್ಲಿ ಸಿಗುತ್ತದೆ ಎಂದು ವಿಚಾರಿಸಿದ್ದರು.ಆಗ ಈ ಪುಸ್ತಕ ಪುಸ್ತಕ ಮಳಿಗೆಗಳಲ್ಲಿ ಸಿಗುತ್ತಿರಲಿಲ್ಲ.ಹಾಗಾಗಿ ನಾವೇ ಕಳುಹಿಸ್ತೇವೆ ಎಂದು ಅಡ್ರೆಸ್ ಪಡೆದು ಗೌರವ ಪ್ರತಿ ಕಳುಹಿಸಿದೆ.ತಲುಪಿದ ನಂತರ ಪುಸ್ತಕದ ಬಗ್ಗೆ ಮೆಚ್ಚುಗೆಯ ನುಡಿ ತಿಳಿಸಿ ಪುಸ್ತಕದ ಜೊತೆಗೆ ಫೋಟೋ ವನ್ನೂ ಕಳುಹಿಸಿ ಕೊಟ್ಟಿದ್ದರು.

ಲಕ್ಷಂತರ  ಜನರಿಗೆ ದಾನ ನೀಡಿದವರಿಗೆ ಗೌರವ ಪ್ರತಿ ನೀಡಿದ ಗೌರವ ನನ್ನದಾಯಿತು .ನನ್ನ ಕೈ ಮೇಲಾಗಿಯೇ ಉಳಿಯಿತು. ಅವರು ಒಂದೊಮ್ಮೆ ಪುಸ್ತಕ ಓದಿದ ನಂತರವಾದರೂ ಮರು ಮುದ್ರಣಕ್ಕೆ ಅನುದಾನ ನೀಡಿರುತ್ತಿದ್ದರೆ ಅಥವಾ ಸವರ ಆಪ್ತ ಸಹಾಯಕರ ಪತ್ರದಲ್ಲಿ ಇರುವಂತೆ 500 ಪುಸ್ತಕ ಖರೀದಿಸುತ್ತಿದ್ದರೆ ಈ ಹೆಮ್ಮೆ ನನ್ನದಾಗಿ ಇರುತ್ತಿರಲಿಲ್ಲ

ಅದು ಸರಿ ಅವರ ಪತ್ರದಲ್ಲಿ ಒಂದು ಸಾಲು ಈವತ್ತಿಗೂ ನನಗೆ ಅರ್ಥ ಆಗುತ್ತಿಲ್ಲ.ವಿತರಣೆಗೆ ಮುನ್ನೂರು ಜನರ ಪಟ್ಟಿ ಬೇಕು ಎಂಬುದು ಆ ಸಾಲು..ಏನರ್ಥ ಈ ವಾಕ್ಯದ್ದು..ಒಂದೊಮ್ಮೆ ಅವರು ಅನುದಾನ ನೀಡಿದರೆ ಮುನ್ನೂರು ಜನರಿಗೆ ನಾವು ಕಖುಹಿಸಬೇಕೆಂದಾ ? ಯಾರಿಗೆ ವಿತರಿಸುದು ? ಯಾಕೆ ? ಅನುದಾನ ಕೊಡುದು ಪ್ರಕಟಣೆಗೆ ತಾನೇ ? ಅದಕ್ಕೆ ಮುನ್ನೂರು ಜನರ ಪಟ್ಟಿ ಯಾಕೆ ? 

ಹೆಣ್ಣು ಹೆಂಗಸು ಬರೆದ ಪುಸ್ತಕವನ್ನು ಜನ ಓದಲಾರರು.ಅದಕ್ಕೆ ಉಚಿತವಾಗಿ ವಿತರಿಸಲು ಮುನ್ನೂರು ಜನರ ಪಟ್ಟಿ ಬೇಕೆಂಬ ಭಾವ ಇದ್ದಿರಬಹುದಾ? 

ದೊಡ್ಡವರು ಏನು ಹೇಳಿದ್ದೆಂದು ನನಗೆ ಈಗಲೂ ಅರ್ಥ ಆಗುತ್ತಿಲ್ಲ ಈಗ ಮರುಮುದ್ರಣ (ಮೊದಲನೆಯದನ್ನು ಪರಿಗಣಿಸಿದರೆ ಮೂರನೆಯ ಮುದ್ರಣಕ್ಕೆ) ಸಿದ್ದವಾಗಿದೆ. ಎಲ್ಲರ ಊಹೆಯನ್ನು ಮಾತ್ರವಲ್ಲ ನನ್ನ ನಿರೀಕ್ಷೆಯನ್ನು ಕೂಡ ತಲೆಕೆಳಗು ಮಾಡಿ ಬೇಡಿಕೆಯನ್ನು ಪಡೆದಿದೆ

ಅನೇಕರು ಪುಸ್ತಕದ ಬೆಲೆ 2000₹ ಹೆಚ್ಚಾಯಿತು ಎಂದಿದ್ದರು.ಇನ್ನೂ ಕೆಲವರಿಗೆ ಪುಸ್ತಕ ಬೇಕೆಂದಿದ್ದರೂ 2000₹ ಹೊಂದಿಸುದು ಕಷ್ಟ ಆಗಿತ್ತು

ಈಗ ಈ ಸಮಸ್ಯೆ ಗೆ ಇಲ್ಲಿ ಪರಿಹಾರ ಇದೆ 

ಮರು ಮುದ್ರಣಕ್ಕೆ ಮತ್ತೆ pre publication offer ಇದೆ .ಕಡಿಮೆ ಬೆಲೆಗೆ ಉತೃಷ್ಟ ಗುಣಮಟ್ಟದ ಕನ್ನಡ ತುಳು ಮಲೆಯಾಳ ಕೊಡವ ಪರಿಸರದ 1253 ದೈವಗಳ ಮಾಹಿತಿ ಇರುವ ಪುಸ್ತಕ ಪಡೆಯಲು ಇದು ಸುವರ್ಣಾವಕಾಶ ..

ಇನ್ನೊಂದು ಸಂತಸದ ವಿಚಾರ ಏನೆಂದರೆ ಇದರ ಇಂಗ್ಲಿಷ್ ಆವೃತ್ತಿ ಕೂಡ ಪ್ರಕಟಣೆಗೆ ಸಿದ್ದವಾಗಿದೆ.ಒಂದೆರಡು ತಿಂಗಳೊಳಗೆ ಕೈಸೇರಲಿದೆ .ಇದಕ್ಕೂ pre publication offer ಲಭ್ಯವಿದೆ .

ಯಾವುದೇ ಯೂನಿವರ್ಸಿಟಿ ಸಂಘ ಸಂಸ್ಥೆಗಳ ಒಂದು ಪೈಸೆ ಅನುದಾನ ಪಡೆಯದೇ ಇಂತಹದೊಂದು ಗ್ರಂಥ ಪ್ರಕಟವಾಗಿ ಯಶಸ್ಸು ಪಡೆದುದಲ್ಲದೆ ಇಂಗ್ಲಿಷ್ ಅವತರಣಿಕೆಯೂ ಸಿದ್ದವಾಗಿ ದೆ ಎಂದರೆ ಇದು ದೈವ ದೇವರುಗಳ ಕೃಪೆ ಅಲ್ಲದೇ ಬೇರೇನೂ ಅಲ್ಲ ಎಂದು ನನಗನಿಸುತ್ತದೆ .ಇಂತಹ ಸೋಜಿಗಗಳ ಬಗ್ಗೆ ಹೇಗೆ ತಾನೇ ಬರೆಯದಿರಲಿ.ಆತ್ಮ‌ಕಥೆ ಬೆಳೆಯುತ್ತಿದೆ 

ನನ್ನಬರಹಗಳ ಅಭಿವ್ಯಕ್ತಿಯಲ್ಲಿ ಪುಸ್ತಕಕ್ಕೆ ಪ್ರಚಾರ ನೀಡುವಲ್ಲಿ ನನಗೆ ಸದಾ ಬೆಂಬಲ ನೀಡಿದ್ದು ನೇರವಾಗಿ ಎಂದೂ ನೋಡಿರದ fb ಸ್ನೇಹಿತರು.

ಹಾಗಾಗಿ ಮತ್ತೆ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಅಪೇಕ್ಷಿಸುವೆ - ಡಾ‌.ಲಕ್ಷ್ಮೀ ಜಿ ಪ್ರಸಾದ್, ಮೊಬೈಲ್ 9480516684:

Monday, 15 December 2025

ಆತ್ಮ‌ಕಥೆಯ ಬಿಡಿ ಭಾಗಗಳು

 ಆತ್ಮ ಕಥೆಯ ಬಿಡಿ ಭಾಗಗಳು


ಪೇಟೆಯಲ್ಲಿ ಬಾಡಿಗೆ ಮನೆಯೇ ಸಿಗುವುದಿಲ್ಲ ಎಂದಿದ್ದರು..


ಹೌದು  31 ವರ್ಷಗಳ ಹಿಂದೆ  ನಾನಿದನ್ನು ಸತ್ಯವಾಗಿಯೂ ನಂಬಿದ್ದೆ.ಬಾಡಿಗೆಗೆ ಮನೆ ಸಿಗದಿದ್ದರೇನು ಮಾಡುವುದು ಎಂದು ತುಂಬಾ ಆತಂಕಕ್ಕೆ ಒಳಗಾಗಿದ್ದೆ 

ಎರಡನೆಯ ವರ್ಷ ಪದವಿ ಓದುತ್ತಿರುವಾಗ ಮದುವೆಯಾಯಿತು‌ ಅಂತಿಮ ವರ್ಷ ಅಂತೂ ಆಡಿಕೂಡಿ ಡೋಲಾಯಮಾನ ಸ್ಥಿತಿಯಲ್ಲಿಯೇ ಕಳೆಯಿತು

ಮುಂದೇನು ? ಎಂಬ ಪ್ರಶ್ನೆ ನನ್ನೆದುರು ಬೃಹದಾಕಾರವಾಗಿ ಬೆಳೆದು ನಿಂತು ಕಾಡುತ್ತಿತ್ತು

ಬಿಎಸ್ ಸಿ ಓದುವಾಗ ಅಂತಹ ಜಾಣೆ ನಾನಾಗಿರಲಿಲ್ಲ.ಆದರೆ ಹತ್ತನೆಯ ತರಗತಿ ತನಕ ಜಾಣ ವಿದ್ಯಾರ್ಥಿನಿಯೆಂದೇ ಗುರುತಿಸಿಕೊಂಡವಳು ನಾನು

ನಂತರ ವಿಜ್ಣಾನ ನನಗೆ ಕಷ್ಟವಾಯಿತೋ ಇಂಗ್ಲಿಷ್ ಬಾರದೆ ಪಾಠ ತಲೆಗೇ ಹೋಗದೆ ಕಲಿಕೆಯಲ್ಲಿ ಹಿಂದುಳಿದೆನೋ ಗೊತ್ತಿಲ್ಲ

ಆದರೂ ಬಿಎಸ್ ಸಿಯಲ್ಲಿ ಒಂದೇ ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿರಲಿಲ್ಲ

ಮುಂದೆ ಎಂ ಎಸ್ಸಿ ಆಗದೆಂದು ಅನಿಸಿತ್ತು.ಮತ್ತೆ ಆರ್ಟ್ಸ್ ತಗೊಂಡರೆ ರ‌್ಯಾಂಕ್ ತೆಗೆದು ಯಶಸ್ವಿಯಾದೇನೆಂಬ ಆತ್ಮವಿಶ್ವಾಸ ನನಗಿತ್ತು

ಹಾಗಾಗಿಯೇ ಕಟೀಲಿನಲ್ಲಿ ಸಂಸ್ಕೃತ ಎಂಎ ಗೆ ಸೇರಲು ನಿರ್ಧರಿಸಿದೆ

ಕೋಡ ಪದವು ಸಮೀಪದ ನಮ್ಮ ಮನೆಯಿಂದ ಕಟೀಲಿಗೆ ನಿತ್ಯ ಹೋಗಿ ಬರುವದ್ದು ಆಗದ ಮಾತು ಜೊತೆಗೆ ಉನ್ನತ ಕಲಿಕೆಗೆ ಮನೆ ಮಂದಿ ಬಂಧು ಬಳಗದವರಿಂದ ತೀವ್ರ ವಿರೋಧವಿತ್ತು

ಆದರೂ ನಾನು ನನ್ನ ಮೈದುನನಿಗೆ ' ನಾನು ಓದಿ ಒಳ್ಳೆಯ ಕೆಲಸ ಹಿಡಿದರೆ ನಮಗೆ ಆಸ್ತಿಯಲ್ಲಿ ಪಾಲು ಬೇಕಾಗಿ ಬರಲಾರದು.ಇಲ್ಲಿಯೇ ಇದ್ದು ಇರುವ ತುಂಡು ಭೂಮಿಯನ್ನು ಹಂಚಿಕೊಂಡು ತಲೆಗೆಳೆದರೆ ಕಾಲಿಗೆ ಬರದಂತಹ ಬದುಕು ಯಾಕೆ ? ಹಾಗಾಗಿ ನನ್ನ ಕಲಿಕೆಗೆ ವಿರೋಧವೇಕೆ ಎಂದಿದ್ದೆ

ಆಗಿನ ಕಾಲಘಟ್ಟ.ಹೇಳಿಕೊಡುವವರು ಅನೇಕರಿದ್ದರು

ಹಾಗಾಗಿ ವಿರೋಧ ಶಮನವಾಗಲಿಲ್ಲ.ಮನೆ ಮಂದಿ ಬಂಧು ಬಳಗವನ್ನು ಎದುರು ಹಾಕಿಕೊಂಡು ಮುಂದೆ ಓದಲು ನಿರ್ಧರಿಸಿದೆ

ಪ್ರಸಾದರನ್ನು ಒಪ್ಪಿಸಿದೆ

ಆಗ ಮೊದಲ ಬಾರಿಗೆ ಬಾಡಿಗೆ ಮನೆಗೆ ಹೋಗಬೇಕಾದ ಪ್ರಸಂಗ ಬಂತು.ಆಗ ನಮ್ಮ ನೆರೆಕರೆಯ ಮಂದಿಯ ಮಕ್ಕಳು ಮಂಗಳೂರಿನಲ್ಲಿದ್ದರು.ಅವರೆಲ್ಲ ಪೇಟೆಯಲ್ಲಿ ಬಾಡಿಗೆಗೆ ಮನೆಯೇ ಸಿಗುವುದಿಲ್ಲ ಎಂದಿದ್ದರು.ಪೇಟೆಯ ಅರಿವಿಲ್ಲದ ನಾನೂ ಇದು ಇರಬಹುದೇನೋ ಎಂದು ಭಯ ಪಟ್ಟಿದ್ದೆ

ಅದೃಷ್ಟವಶಾತ್ ನಮ್ಮ ಆದಾಯಕ್ಕೆ ಸರಿ ಹೊಂದುವ ಮಣ್ಣಿನ ಮೋಟು ಗೋಡೆಯ ಒಂದು ಕೊಠಡಿಯ ಮನೆ ನಮಗೆ ಕಟೀಲು ಸಮೀಪದ ಎಕ್ಕಾರಿನ ನಾಗವೇಣಿ ಅಮ್ಮನವರು ಒದಗಿಸಿದರು.

ನಂತರ ಒಂದು ವರ್ಷದೊಳಗೆ ಪ್ರಸಾದರಿಗೆ ಒಳ್ಳೆಯ ಕೆಲಸ ಸಿಕ್ತು. ನನ್ನ ಸೋದರ ಮಾವಂದಿರ ಪರಿಚಯದಲ್ಲಿ ಮಂಗಳೂರಿನ ವಿಜಯ ಪೆನ್ ಮಾರ್ಟ್ ( ಪೆನ್ನಿನ ಅಂಗಡಿಯ )ಶಾಮಣ್ಣನ  ಸಹಾಯದಿಂದ ಮಂಗಳೂರಿನ ವಿಜಯ ನಿವಾಸದ ಬಾಡಿಗೆ ಮನೆ ಸಿಕ್ತು 


ಮತ್ತೊಂದು ವರ್ಷದಲ್ಲಿ ಬಿಜೈ ಯಲ್ಲಿ ಶ್ರೇಯಸ್ ಅಪಾರ್ಟ್ ಮೆಂಟಿನಲ್ಲಿ ಒಂದು ಮನೆಯನ್ನು ಖರೀದಿಸಿದೆವು.

ಮುಂದೆ ಬೆಂಗಳೂರಿಗೆ ಶಿಪ್ಟ್ ಆಗುವಾಗ ಇದನ್ನು ಮಾರಾಟ ಮಾಡಿದೆವು


ಮಂಗಳೂರಿನಲ್ಲಿರುವಾಗಲೇ 2002-03 ರಲ್ಲಿ ಬೆಂಗಳೂರಿನ ಈಗಿನ ಸೈಟಿನಲ್ಲಿ ಸಣ್ಣದೊಂದು ಮನೆ ಕಟ್ಟಿಸಿದ್ದೆವು

2007 ರಿಂದ 2019 ರ ವರೆಗೆ ಅದೇ ಸಣ್ಣ ಮನೆಯಲ್ಲಿ ಇದ್ದೆವು‌ ನಂತರ ಅದನ್ನು ರಿನೊವೇಟ್ ಮಾಡಿ ಈಗಿನ ಮನೆಯ ಸ್ವರೂಪಕ್ಕೆ ತಂದೆವು.


ಇಷ್ಟಾಗಿಯೂ ಊರಲ್ಲಿ ನನಗೆ ಮನೆ ಇಲ್ಲ ಎಂಬ ಕೊರಗು ಸದಾ  ಕಾಡುತ್ತಿತ್ತು.ಹಾಗಾಗಿ ನವ ಚೇತನ ಟೌನ್ ಶಿಪ್ ನಲ್ಲಿ ಸಣ್ಣದೊಂದು ಮನೆ ತಗೊಂಡು  ಒಕ್ಕಲು ಮಾಡಿದೆವು.


ಸಧ್ಯಕ್ಕೆ ಊರ ಕಡೆ ಶಿಪ್ಟ್ ಆಗುವ ಯೋಚನೆ ಇಲ್ಲ.ಎಂದಾದರೂ ಹೋಗುವುದಾದರೆ ಇರಲಿ ಎಂದೆನಿಸ್ತು.ನವ ಚೇತನ ಟೌನ್ ಶಿಪ್ ನ ಸುವ್ಯವಸ್ಥೆ ನೋಡಿ ಖುಷಿಯಾಗಿ ತಗೊಂಡೆವು


ನಾವು ಮನೆ ಬಿಟ್ಟು ಹೊರ ನಡೆದ ನಂತರ ತಗೊಂಡ/ ಕಟ್ಟಿಸಿದ ನಾಲ್ಕನೆಯ ಮನೆ ಇದು.


ಯಾಕೋ 30  ವರ್ಷಗಳ ಹಿಂದೆ ನಮ್ಮ ನೆರೆಕರೆಯವರೊಬ್ಬರು ಪೇಟೆಯಲ್ಲಿ ಮನೆ ಬಾಡಿಗೆಗೇ ಸಿಗುವುದಿಲ್ಲ ಎಂದು ಹೆದರಿಸಿದ್ದು ನೆನಪಾಯಿತು 


ಬಾಡಿಗೆಗೆ ಮಾತ್ರವಲ್ಲ.ಇರಲು ಅಂಗೈ ಅಗಲದಷ್ಟಾದರೂ  ಮನೆ ಎಂಬ ಸ್ವಂತ ಸೂರನ್ನು ಒದಗಿಸಿದ ದೈವ ದೇವರುಗಳ ಕೃಪೆ ಅಪಾರ 🙏


 ಗಂಡ ಹೆಂಡತಿ ಇಬ್ಬರೂ ದುಡಿದು ಆಡಂಬರವಿಲ್ಲದೆ ಸರಳವಾಗಿ ಬದುಕಿದರೆ ಸಣ್ಣದೊಂದು ಮನೆ ಕಟ್ಟಿಕೊಳ್ಳುದು ತೀರ ಅಸಾಧ್ಯವಾದುದಲ್ಲ

.ಆದರೆ ಹೆಚ್ಚಿನ ಜನರು ತುಸು ಆದಾಯ ಬರುವಷ್ಟರಲ್ಲಿ ಆಡಂಬರದ ಬದುಕಿಗೆ ಮಾರು ಹೋಗಿ ಬೆಲೆಬಾಳುವ  ಕಾರು ಗೀರು ರಾಯಲ್ ಎನ್ಪೀಲ್ಡ್ ಬೈಕು ಐಫೋನ್ ಮೊದಲಾದವುಗಳ ಅಗತ್ಯವಿಲ್ಲದೇ ಇದ್ದಾಗಲೂ ಅವರಿವರಲ್ಲಿ ಇದೆ ಎಂದು ತಗೊಳ್ತಾರೆ.ಬಾಹ್ಯಾಡಂಬರದ ಶೋಕಿಯ ದೊಡ್ಡ ಬಾಡಿಗೆ ಮನೆಗೆ ಹೋಗ್ತಾರೆ .ವಿಪರೀತ ಸೀರೆ ಡ್ರೆಸ್ ಗಳನ್ನು ತಗೊಳ್ತಾರೆ ಆಗ ಅವರಲ್ಲಿ ದುಡ್ಡು ಉಳಿಯುವುದೇ ಇಲ್ಲ. 


ನನ್ನ ಕೆಲವು ವಿದ್ಯಾರ್ಥಿಗಳು 30-35,000₹ ವೇತನದ ಕೆಲಸ ಸಿಗುತ್ತಲೇ ಹೆಚ್ಚು ಬೆಲೆಯ ಕಾರು  ಐಫೋನ್ ತೆಗೆದುಕೊಳ್ಳುದನ್ನು ಗಮನಿಸಿದ್ದೇನೆ.ಹೀಗೆ ಬಾಹ್ಯಾಡಂಬರದ ವಸ್ತುಗಳ ಹಿಂದೆ ಹೋದರೆ ಇವರು ಮನೆ ತಗೊಳ್ಳಲು ದುಡ್ಡು ಉಳಿಸುದು ಹೇಗೆ ಎಂದೆನಿಸಿತ್ತು ನನಗೆ‌


ಬದಲಿಗೆ ಸಣ್ಣ ಮನೆಯಲ್ಲಿದ್ದುಕೊಂಡು ಸರಳವಾಗಿ ಬದುಕಿ ವ್ಯವಸ್ಥಿತವಾಗಿ ಉಳಿತಾಯ ಮಾಡಿಕೊಂಡು ಬಂದರೆ ಒಂದಷ್ಟು ಸಾಲ ಮಾಡಿ ಮನೆ ಕಟ್ಟಿಕೊಳ್ಳಬಹುದು‌.

ಇರಲು ಮನೆ ಆದರೆ ನಂತರ ನಿದಾನಕ್ಕೆ ಕಾರು ಗೀರಿನಂಥಹ ಆಡಂಬರದ ವಸ್ತುಗಳನ್ನು ತೆಗೆದುಕೊಳ್ಳಬಹುದು

ಇದು ನನ್ನ ಅಭಿಪ್ರಾಯ 

ಎಲ್ಲರೂ ಹೀಗೆಯೇ ಯೋಚಿಸಬೇಕಿಲ್ಲ..ಲೋಕೋ ಭಿನ್ನರುಚಿಃ ಅಲ್ಲವೇ

.ಅಂದ ಹಾಗೆ ನಾನು ಅಂದು ಹೇಳಿದ  ಕಲಿತು ಒಳ್ಳೆಯ ಕೆಲಸ ಸಿಕ್ಕರೆ ನಮಗೆ ಪಿತ್ರಾರ್ಜಿತವಾಗಿ ಬಂದ ಆಸ್ತಿಯಲ್ಲಿ ಪಾಲು ಬೇಡ ಹಂಚಿಕೊಂಡು ತುಂಡು ಮಾಡುವುದೇಕೆ ಎಂಬ ಮಾತಿಗೆ ಈಗಲೂ ಬದ್ಧಳಿದ್ದೇನೆ ,ನಾವು ಪಾಲು ತೆಗೆದುಕೊಂಡಿಲ್ಲ.

ಆತ್ಮ‌ಕಥೆಯ ಬಿಡಿ ಭಾಗಗಳು 50

 ಆತ್ಮ‌ಕಥೆಯ ಬಿಡಿ ಭಾಗಗಳು


ಯಾರೆಲ್ಲ ಸಣ್ಣಾಗಿರುವಾಗ ಬಜೆಂಟು  ಹೆಕ್ಕಿದ್ದೀರಿ? 


ಪಾಸಾದರೆ ಶಾಲೆ ಇಲ್ಲವಾದರೆ ಬಜಂಟು ಹೆಕ್ಕುವ ಖಾಯಂ ಕಾಯಕ 


ಎಪ್ರಿಲ್ ಹತ್ತರ  ಪಾಸು ಫೇಲಿನ ದಿನವೆಂಬ ಭಯ ಆತಂಕದ ದಿನ ಇದರ ನಿರ್ಧಾರ ಆಗುತ್ತಿತ್ತು‌.


ಹೌದು..ಪ್ರತಿವರ್ಷ ಎಪ್ರಿಲ್ ಹತ್ತಕ್ಕೆ ನಮ್ಮ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶಾಲೆಯ ಬೋರ್ಡ್ ನಲ್ಲಿ ಹಾಕ್ತಿದ್ದರು.ಎಪ್ರಿಲ್  ಮೊದಲ ದಿನಾಂಕದಿಂದಲೇ ಎದೆಯಲ್ಲಿ ಅವಲಕ್ಕಿ ಕುಟ್ಟಲು ಶುರುವಾಗುತ್ತಿತ್ತು.ಪಾಸ್ ಪೇಲ್ ದಿನ ಹತ್ತಿರ ಬಂದ ಹಾಗೇ ಊಟ ತಿಂಡಿ ಸೇರುತ್ತಿರಲಿಲ್ಲ.ನಮ್ಮಂತೆಯೇ ನಮ್ಮ ಹೆತ್ತವರಿಗೂ ಇದೇ ಆತಂಕ.

ಚೆನ್ನಾಗಿ ಕಲಿಯದವರನ್ನು ಫೇಲಾದವರನ್ನು "ಹೋಗು ಬಜೆಂಟ್ ಹೆರ್ಕು " ಎಂದು ಬೈಉವ ವಾಡಿಕೆ ಇತ್ತು.ಆದರೆ ಪಾಸಾಗುತ್ತಿದ್ದ ನಾವು ಕೂಡ ಬೇಸಗೆಯಲ್ಲಿ ಬಜಂಟ್ ಹೆಕ್ಕುತ್ತಿದ್ದೆವು.

ಬಜಂಟು ಎಂದರೆ ಒಣ ಸೆಗಣಿ.ಬೇಸಗೆಯ ಸಮಯದಲ್ಲಿ ನಾವು‌ಮಕ್ಕಳೆಲ್ಲ ಗುಡ್ಡವೆಲ್ಲ ಬಜೆಂಟಿಗಾಗಿ ಹುಡುಕುತ್ತಿದ್ದೆವು.ಮೇಯಲು ಬಿಟ್ಟ ಹಸುಗಳು ಹಾಕಿದ ಒಣ ಸೆಗಣಿ ಸಿಕ್ತಾ ಇತ್ತು.

ಇದನ್ನು ಮಳೆಗಾಲದಲ್ಲಿ ಒಲೆ ಉರಿಸಲು ಬಳಸುತ್ತಾ ಇದ್ದರು.

ನಾವು ಏಳೆಂಟು ಸಮ ವಯಸ್ಸಿನ ಮಕ್ಕಳು ಒಂದೊಂದು ಗೋಣಿ ಚೀಲ ಹಿಡಿದುಕೊಂಡು ಬಜಂಟು ಹೆಕ್ಕಲು ಹೋಗುತ್ತಿದ್ದೆವು.ಅದು ನಮಗೆ ಬೇಸರ ತರುವ ಕೆಲಸವಾಗಿರಲಿಲ್ಲ.ಗುಡ್ಡಗಾಡಿನ ಚೂರಿ ಮುಳ್ಳಿನ ಹಣ್ಣ ಮುಳ್ಳಣ್ಣು ಕಿಸ್ಕಾರದ ಹಣ್ಣು ಚಬುಳಕ ಮೊದಲಾದ  ಕಾಡು ಹಣ್ಣುಗಳನ್ನು ಅಯ್ದು ತಿಂದುಕೊಂಡು ಕಾಡು ಹರಟೆ ಹೊಡೆದುಕೊಂಡು ಬಹಳ ಖುಷಿಯಿಂದ ಈ ಕೆಲಸ ಮಾಡ್ತಿದ್ದೆವು ಎಂಬುದು ಬೇರೆ ವಿಚಾರ.

ಅಕಸ್ಮಾತ್ತಾಗಿ ಐರೋಳು ಬಳ್ಳಿ ,ಕಾನಕಲ್ಲಡೆ ಕಾಯಿ ಸಿಕ್ಕರೆ ಬಹಳ ಸಂಭ್ರಮ ನಮಗೆ

ಅದರೂ ಫೇಲಾದವರು ಬಜಂಟು ಹೆಕ್ಕಲು ಲಾಯಕ್ಕು ಎಂಬ ಮಾತು ಆಗ ಇತ್ತು ಈಗ ಈ ಬಜೆಂಟಿಗೆ cow dung cake ಎಂಬ ಚಂದದ ಹೆಸರಿದೆ.ಸಿಕ್ಕಾಪಟ್ಟೆ ಬೆಲೆಯೂ ಇದೆ 


ಇರಲಿ


ಆಗೆಲ್ಲ ಫೇಲ್ ಆದರೆ ಮರು ಪರೀಕ್ಷೆ ಇರುತ್ತಿರಲಿಲ್ಲ.ಮತ್ತೆ ಒಂದು ವರ್ಷ ಅದೇ ತರಗತಿಯಲ್ಲಿ ಇರಬೇಕು.ಅದು ನಮಗೆ ಬಹಳ ಅವಮಾನಕರ ವಿಚಾರ.ಹಾಗಾಗಿ ಪಾಸಾಗದಿದ್ದರೆ ಎಂಬ ಆತಂಕ ಕಾಡುತ್ತಿತ್ತು.


ಕೆಲವೊಮ್ಮೆ ಜಾಣ ಮಕ್ಕಳಿಗೆ ಏನಾದರೂ ಆರೋಗ್ಯ ಸಮಸ್ಯೆ ಉಂಟಾಗಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಆಗದಿದ್ದರೆ ಅವರೂ ಕೂಡ ಫೇಲ್ .ನಂತರದ ಒಂದು ವರ್ಷ ಅದೇ ತರಗತಿಯಲ್ಲಿ ಕುಳಿತುಕೊಳ್ಳಬೇಕು.


ಈ ಅವಮಾನ ಸ್ವೀಕರಿಸಲು ತಯಾರಿಲ್ಲದ ಮಕ್ಕಳ ವಿದ್ಯಾಭ್ಯಾಸ ಇದೇ ಕಾರಣಕ್ಕಾಗಿ ಅಲ್ಲಿಗೇ ನಿಂತು ಹೋಗುತ್ತಿತ್ತು.


ನನಗೆ ನೆನಪಿನಲ್ಲಿರುವಂತೆ ನನ್ನ ಸಹಪಾಠಿಗಳಾಗಿದ್ದ  ಇಬ್ಬರು ಜಾಣ ವಿದ್ಯಾರ್ಥಿಗಳ ಶಿಕ್ಷಣ ಹೀಗೆ ಅರ್ಧದಲ್ಲಿಯೇ ಮೊಟಕಾಗಿತ್ತು


ಒಂದು ನನ್ನ ಬಾಲ್ಯ ಸ್ನೇಹಿತೆ ಯಶೋದಾಳದು.ಅವಳು ಎಂಟನೇ ತರಗತಿಯ ಅಂತಿಮ /ವಾರ್ಷಿಕ ಪರೀಕ್ಷೆಯಲ್ಲಿ ಒಂದೆರಡು ವಿಷಯಗಳಿಗೆ ಗೈರು ಹಾಜರಾಗಿದ್ದಳು.


ಅವಳೂ ನಾನೂ ಒಟ್ಟಿಗೆ ಕೋಳ್ಯೂರಿನಿಂದ ಕೊಡ್ಲಮೊಗರಿನ ವಾಣಿವಿಜಯ ಪ್ರೌಢಶಾಲೆಗೆ  ನಡೆದುಕೊಂಡು ಹೋಗಿ ಬರುತ್ತಿದ್ದೆವು.ಎರಡು ಗುಡ್ಡ ಹತ್ತಿ ಇಳಿಯಬೇಕು.ಸುಮಾರು ನಾಲ್ಕೈದು ಮೈಲು ನಡೆಯಬೇಕಿತ್ತು.


ಅಗಿ‌ನ್ನೂ ನನಗೆ ಸರಿಯಾಗಿ ನೆನಪಿದೆ

ಸುಮಾರು ಎಂಟು ಎಂಟೂವರೆ ಗಂಟೆ ಹೊತ್ತಿಗೆ ಅವಳು ನಮ್ಮ ಮನೆಗೆ ಬರ್ತಿದ್ದಳು.ಅವಳನ್ನೇ ಕಾಯುತ್ತಿರುವ ನಾನು ಕೂಡಲೇ ಮೆಟ್ಟಿಳಿದು ಮನೆಯ ಗದ್ದೆಯ ಬದುವಿನಲ್ಲಿ ಸಾಗಿ.ತೋಡಿನ ಸಂಕ ದಾಟಿ ಅಂಗಡಿ ಎದುರು ಎತ್ತರಕ್ಕೆ ಹತ್ತಿ ಸಾಗುತ್ತಿದ್ದೆವು.

 1986 ಮಾರ್ಚ್ ಕೊನೆಯ ವಾರ.ಪ್ರೌಢ ಶಾಲೆಯಲ್ಲಿ ಅಂತಿಮ ಪರಿಕ್ಷೆಗಳು ನಡೆಯುತ್ತಿದ್ದವು.

.ನಮಗೆ ಆಗ ಹನ್ನೆರಡು ಪರೀಕ್ಷೆಗಳಿದ್ದವು.ಕನ್ನಡ ಎರಡು ಪತ್ರಿಕೆಗಳು,ವಿಜ್ಞಾನ ಮೂರು ಪತ್ರಿಕೆಗಳು,ಗಣಿತ ಎರಡು ಪತ್ರಿಕೆಗಳು ,ಸಮಾಜ ಶಾಸ್ತ್ರ ಎರಡು ಪತ್ರಿಕೆಗಳು ,ಹಿಂದಿ ಒಂದು ಪತ್ರಿಕೆ.


ಕೊನೆಯ ಒಂದೆರಡು ಪರೀಕ್ಷೆಗಳು ಉಳಿದಿದ್ದವು

ಆ ದಿನ ಯಶೋಧಾ ಎಂಟೂವರೆ ಕಳೆದರೂ ನಮ್ಮ‌ಮನೆಗೆ ಬಂದಿರಲಿಲ್ಲ.ಅವಳ ಮನೆಯಿಂದ ಶಾಲೆಗೆ ಹೋಗುವ ದಾರಿಯಲ್ಲಿ ನಮ್ಮ ಮನೆ ಇತ್ತು.


ಅವಳು ಬಾರದ ಕಾರಣ ನಾನೇ ಅವಳ ಮನೆಗೆ ಹೋದೆ.ಅವಳು ಚಳಿಗೆ ನಡುಗುತ್ತಾ ಕಂಬಳಿ ಹೊದ್ದು ಮಲಗಿದ್ದಳು.

"ನಮ್ಮ ಯಶೋಧೆಗೆ  ಮೈಯಲ್ಲಿ ಬಿದ್ದಿದೆ( ಚಿಕನ್ ಪಾಕ್ಸ್ ) .ಅವಳು ಪರೀಕ್ಷೆಗೆ ಬರುದಿಲ್ಲ‌.ನೀನು ಹೋಗು ವಿದ್ಯಾ ,( ನನ್ನನ್ನು ಮನೆಯಲ್ಲಿ,ಊರಲಿ ವಿದ್ಯಾ ಎಂದು ಕರೆಯುತ್ತಾರೆ )ಒಂದು ವಾರ ಮನೆಗೆ ಬರಬೇಡ.ನಿನಗೂ ಹರಡುತ್ತದೆ " ಎಂದು ಹೇಳಿದರು


ಆಗ ಅಯ್ಯೋ..ಅವಳು ಫೇಲ್ ಆಗ್ತಾಳಲ್ಲ ಎಂದು ನನಗೆ ಆತಂಕ ಆಯಿತು.

ನಂತರ ಒಬ್ಬಳೇ ನಡೆದುಕೊಂಡು ಶಾಲೆಗೆ ಬಂದು ಪರೀಕ್ಷೆ ಬರೆದೆ.

ನಿರೀಕ್ಷೆಯಂತೆಯೇ ಯಶೋಧಾ ಫೇಲ್ ಆಗಿದ್ದಳು.

ಅದರ ಪರಿಣಾಮವಾಗಿ ಜಾಣೆಯಾಗಿದ್ದ ಅವಳ ಓದು ಅಲ್ಲಿಗೇ ನಿಂತಿತು.ಅವಳು ಮುಂದೆ ಓದಲಿಲ್ಲ.

ನಂತರ ದೊಡ್ಡವಳಾಗಿ ಮದುವೆಯಾದ ನಂತರ ಕಾಸಗಿಯಾಗಿ ಕಟ್ಟಿ ಎಸ್ ಎಸ್ ಎಲ್ ಸಿ ಪಿಯುಸಿ ಡಿಗ್ರಿ ಮಾಡಿದ್ದಾಳೆ.


ಇದೇ ರೀತಿಯಲ್ಲಿ ನಾನು ಒಂಬತ್ತನೇ ತರಗತಿ ಓದುತ್ತಿರುವಾಗ ರವೀಂದ್ರ ಎಂಬ ಹುಡುಗನಿಗೂ ಆರೋಗ್ಯ ಸಮಸ್ಯೆ ಬಂದು‌ಪರೀಕ್ಷೆ ಬರೆಯಲಾಗಲಿಲ್ಲ.ಫೇಲಾದ ಕಾರಣ ನಂತರ ಅವನೂ ವಿದ್ಯಾಭ್ಯಾಸ ಮುಂದುವರಿಸಲಿಲ್ಲ


ಈಗ ಒಂದರಿಂದ ಒಂಬತ್ತರ ತನಕ ಫೇಲ್ ಮಾಡುದೇ ಇಲ್ಲ.ಹಾಗಾಗಿ ನಮ್ಮಷ್ಟು ಆತಂಕ ಈಗಿನ‌ಮಕ್ಕಳಿಗೆ ಇರಲಾರದೋ ಏನೋ


ನನಗೆ ಈಗ ನಗು ಬರುವ ವಿಚಾರ ಒಂದಿದೆ.ನಾನು ಸಾಮಾನ್ಯವಾಗಿ ತರಗತಿಯಲ್ಲಿ‌ ಮೊದಲ‌ ಇಲ್ಲವೇ ಎರಡನೇ Rank ತೆಗೆಯುತ್ತಿದ್ದೆ.ನನ್ನನ್ನೂ ಫೇಲ್ ಮಾಡಿದರೆ ಮತ್ತೆ ಶಿಕ್ಷಕರು ಎಂತ ಮಾಡುದು ? ಪಾಠ ಮಾಡಲು ವಿದ್ಯಾರ್ಥಿಗಳು ಬೇಡವೇ?ಮಕ್ಕಳೇ ಇಲ್ಲದಿದ್ದರೆ ಶಾಲೆಯಲ್ಲು ಅವರೆಂತ ಬಜೆಂಟ್ ಹೆಕ್ಕುದಾ ? ಆದರೆ ನನಗೆ ಆಗ ಈ ವಿಚಾರ ಎಲ್ಲ ಗೊತ್ತಿರಲಿಲ್ಲ.ಇತರ ಸಾಮಾನ್ಯ ಮಾರ್ಕ್ಸ್ನ ವಿದ್ಯಾರ್ಥಿಗಳಂತೆ ಪಾಸ್ ಫೇಲಿನ ದಿನವನ್ನು ಆತಂಕದಿಂದ ಎದುರು ನೋಡುತ್ತಿದ್ದೆ.


ಎಪ್ರಿಲ್ ಹತ್ತನೆಯ ತಾರೀಕಿನಂದು ಎಲ್ಲ ದೇವರುಗಳೂ ನೆನಪಿಗೆ ಬರ್ತಿದ್ದರು.ಅವರನ್ನೆಲ್ಲ ನೆನೆದು ನನ್ನನ್ನು ಪಾಸು ಮಾಡಿಸು ಎಂದು ಬೇಡಿಕೊಳ್ಳುತ್ತಿದ್ದೆ

ಎಂದಿಗಿಂತ ಬೇಗನೆ ಎದ್ದು ದೇವರಿಗೆ ಹೆಚ್ಚು ಹೂ ಕೊಯ್ದು ಇಡುತ್ತಿದ್ದೆ.ನಂತರ ಸ್ನಾನ ಮಾಡಿ ದೇವರಿಗೆ ಹೊಡಾಡಿ( ನಮಸ್ಕರಿಸಿ) ಶಾಲೆಗೆ ಹೋಗುತ್ತಿದ್ದೆ.ಅಲ್ಲಿ ಬೋರ್ಡ್ ನಲ್ಲಿ ಫೇಲಾದವರ ಹೆಸರನ್ನು ಹಾಕ್ತಾ ಇದ್ದರು.

ಶಾಲೆ ಸಮೀಪಿಸಿದಂತೆಲ್ಲ‌ ಎದೆ ಇತರರಿಗೆ  ಕೇಳುವಷ್ಡು ದೊಡ್ಡದಾಗಿ ಡಬ್ ಡಬ್ ಬಡಿಯುತ್ತಾ ಇತ್ತು.ಹೇಗೋ ಹೋಗಿ ಫೇಲಾದವರ ಲಿಸ್ಟ್  ಅನ್ನು ಎರಡೆರಡು ಸಲ ಓದಿ‌ ನನ್ನ ಹೆಸರು ಅದರಲ್ಲಿ ಇಲ್ಲದಿರುವುದನ್ನು ನೋಡಿ ಖಚಿತ ಗೊಳಿಸಿ ಬದುಕಿದೆಯಾ ಬಡಜೀವವೇ..ನಾನು ಪಾಸು ಎಂದು ಕುಣಿದಾಡಿಕೊಂಡು ಮನೆಗೆ ಬರ್ತಾ ಇದ್ದೆ.ಪಾಸಾದ ಇತರರೂ ಹೀಗೇ ಸಂಭ್ರಮದಿಂದ ಜೊತೆಯಾಗುತ್ತಿದ್ದರು.

ಫೇಲ್ ಆದವರು ಬಿಕ್ಕಿ ಬಿಕ್ಕಿ ಅಳ್ತಾ ಇದ್ದದ್ದು ಈಗಲೂ ನನ್ನ ಕಣ್ಣಿಗೆ ಕಟ್ತಿದೆ.ಅವರ ಬಗ್ಗೆ ನನಗೆ ಪಾಪ ಎನಿಸುತ್ತಿತ್ತು.ಯಾಕೆಂದರೆ ಫೇಲಾದ ಮಕ್ಕಳಿಗೆ ಮನೆಯಲ್ಲು ಕೂಡ ಪೆಟ್ಡು ಕಾದಿರ್ತಾ ಇದ್ದದ್ದು ನನಗೆ ಗೊತ್ತಿತ್ತು


ಇನ್ನು ಹತ್ತನೇ ತರಗತಿಯ ಫಲಿತಾಂಸದ ದಿನದ ಬಗ್ಗೆ ಹೇಳುದೇ ಬೇಡ..ಅಷ್ಡು ಆತಂಕದ ಕ್ಷಣಗಳವು.ಆ ಬಗ್ಗೆ ಇನ್ನೊಂದಿನ ಬರೆಯುವೆ

Thursday, 30 October 2025

ಆತ್ಮ ಕಥೆಯ ಬಿಡಿ ಭಾಗಗಳು : ಯಾರೆಲ್ಲ ಸಣ್ಣಾಗಿರುವಾಗ ಬಜೆಂಟು ಹೆಕ್ಕಿದ್ದೀರಿ

 ಯಾರೆಲ್ಲ ಸಣ್ಣಾಗಿರುವಾಗ ಬಜೆಂಟು  ಹೆಕ್ಕಿದ್ದೀರಿ



ಪಾಸಾದರೆ ಶಾಲೆ ಇಲ್ಲವಾದರೆ ಬಜಂಟು ಹೆಕ್ಕುವ ಖಾಯಂ ಕಾಯಕ 


ಎಪ್ರಿಲ್ ಹತ್ತರ  ಪಾಸು ಫೇಲಿನ ದಿನವೆಂಬ ಭಯ ಆತಂಕದ ದಿನ ಇದರ ನಿರ್ಧಾರ ಆಗುತ್ತಿತ್ತು‌.


ಹೌದು..ಪ್ರತಿವರ್ಷ ಎಪ್ರಿಲ್ ಹತ್ತಕ್ಕೆ ನಮ್ಮ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶಾಲೆಯ ಬೋರ್ಡ್ ನಲ್ಲಿ ಹಾಕ್ತಿದ್ದರು.ಎಪ್ರಿಲ್  ಮೊದಲ ದಿನಾಂಕದಿಂದಲೇ ಎದೆಯಲ್ಲಿ ಅವಲಕ್ಕಿ ಕುಟ್ಟಲು ಶುರುವಾಗುತ್ತಿತ್ತು.ಪಾಸ್ ಪೇಲ್ ದಿನ ಹತ್ತಿರ ಬಂದ ಹಾಗೇ ಊಟ ತಿಂಡಿ ಸೇರುತ್ತಿರಲಿಲ್ಲ.ನಮ್ಮಂತೆಯೇ ನಮ್ಮ ಹೆತ್ತವರಿಗೂ ಇದೇ ಆತಂಕ.

ಚೆನ್ನಾಗಿ ಕಲಿಯದವರನ್ನು ಫೇಲಾದವರನ್ನು "ಹೋಗು ಬಜೆಂಟ್ ಹೆರ್ಕು " ಎಂದು ಬೈಉವ ವಾಡಿಕೆ ಇತ್ತು.ಆದರೆ ಪಾಸಾಗುತ್ತಿದ್ದ ನಾವು ಕೂಡ ಬೇಸಗೆಯಲ್ಲಿ ಬಜಂಟ್ ಹೆಕ್ಕುತ್ತಿದ್ದೆವು.

ಬಜಂಟು ಎಂದರೆ ಒಣ ಸೆಗಣಿ.ಬೇಸಗೆಯ ಸಮಯದಲ್ಲಿ ನಾವು‌ಮಕ್ಕಳೆಲ್ಲ ಗುಡ್ಡವೆಲ್ಲ ಬಜೆಂಟಿಗಾಗಿ ಹುಡುಕುತ್ತಿದ್ದೆವು.ಮೇಯಲು ಬಿಟ್ಟ ಹಸುಗಳು ಹಾಕಿದ ಒಣ ಸೆಗಣಿ ಸಿಕ್ತಾ ಇತ್ತು.

ಇದನ್ನು ಮಳೆಗಾಲದಲ್ಲಿ ಒಲೆ ಉರಿಸಲು ಬಳಸುತ್ತಾ ಇದ್ದರು.

ನಾವು ಏಳೆಂಟು ಸಮ ವಯಸ್ಸಿನ ಮಕ್ಕಳು ಒಂದೊಂದು ಗೋಣಿ ಚೀಲ ಹಿಡಿದುಕೊಂಡು ಬಜಂಟು ಹೆಕ್ಕಲು ಹೋಗುತ್ತಿದ್ದೆವು.ಅದು ನಮಗೆ ಬೇಸರ ತರುವ ಕೆಲಸವಾಗಿರಲಿಲ್ಲ.ಗುಡ್ಡಗಾಡಿನ ಚೂರಿ ಮುಳ್ಳಿನ ಹಣ್ಣ ಮುಳ್ಳಣ್ಣು ಕಿಸ್ಕಾರದ ಹಣ್ಣು ಚಬುಳಕ ಮೊದಲಾದ  ಕಾಡು ಹಣ್ಣುಗಳನ್ನು ಅಯ್ದು ತಿಂದುಕೊಂಡು ಕಾಡು ಹರಟೆ ಹೊಡೆದುಕೊಂಡು ಬಹಳ ಖುಷಿಯಿಂದ ಈ ಕೆಲಸ ಮಾಡ್ತಿದ್ದೆವು ಎಂಬುದು ಬೇರೆ ವಿಚಾರ.

ಅಕಸ್ಮಾತ್ತಾಗಿ ಐರೋಳು ಬಳ್ಳಿ ,ಕಾನಕಲ್ಲಡೆ ಕಾಯಿ ಸಿಕ್ಕರೆ ಬಹಳ ಸಂಭ್ರಮ ನಮಗೆ

ಅದರೂ ಫೇಲಾದವರು ಬಜಂಟು ಹೆಕ್ಕಲು ಲಾಯಕ್ಕು ಎಂಬ ಮಾತು ಆಗ ಇತ್ತು ಈಗ ಈ ಬಜೆಂಟಿಗೆ cow dung cake ಎಂಬ ಚಂದದ ಹೆಸರಿದೆ.ಸಿಕ್ಕಾಪಟ್ಟೆ ಬೆಲೆಯೂ ಇದೆ 


ಇರಲಿ


ಆಗೆಲ್ಲ ಫೇಲ್ ಆದರೆ ಮರು ಪರೀಕ್ಷೆ ಇರುತ್ತಿರಲಿಲ್ಲ.ಮತ್ತೆ ಒಂದು ವರ್ಷ ಅದೇ ತರಗತಿಯಲ್ಲಿ ಇರಬೇಕು.ಅದು ನಮಗೆ ಬಹಳ ಅವಮಾನಕರ ವಿಚಾರ.ಹಾಗಾಗಿ ಪಾಸಾಗದಿದ್ದರೆ ಎಂಬ ಆತಂಕ ಕಾಡುತ್ತಿತ್ತು.


ಕೆಲವೊಮ್ಮೆ ಜಾಣ ಮಕ್ಕಳಿಗೆ ಏನಾದರೂ ಆರೋಗ್ಯ ಸಮಸ್ಯೆ ಉಂಟಾಗಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಆಗದಿದ್ದರೆ ಅವರೂ ಕೂಡ ಫೇಲ್ .ನಂತರದ ಒಂದು ವರ್ಷ ಅದೇ ತರಗತಿಯಲ್ಲಿ ಕುಳಿತುಕೊಳ್ಳಬೇಕು.


ಈ ಅವಮಾನ ಸ್ವೀಕರಿಸಲು ತಯಾರಿಲ್ಲದ ಮಕ್ಕಳ ವಿದ್ಯಾಭ್ಯಾಸ ಇದೇ ಕಾರಣಕ್ಕಾಗಿ ಅಲ್ಲಿಗೇ ನಿಂತು ಹೋಗುತ್ತಿತ್ತು.


ನನಗೆ ನೆನಪಿನಲ್ಲಿರುವಂತೆ ನನ್ನ ಸಹಪಾಠಿಗಳಾಗಿದ್ದ  ಇಬ್ಬರು ಜಾಣ ವಿದ್ಯಾರ್ಥಿಗಳ ಶಿಕ್ಷಣ ಹೀಗೆ ಅರ್ಧದಲ್ಲಿಯೇ ಮೊಟಕಾಗಿತ್ತು


ಒಂದು ನನ್ನ ಬಾಲ್ಯ ಸ್ನೇಹಿತೆ ಯಶೋದಾಳದು.ಅವಳು ಎಂಟನೇ ತರಗತಿಯ ಅಂತಿಮ /ವಾರ್ಷಿಕ ಪರೀಕ್ಷೆಯಲ್ಲಿ ಒಂದೆರಡು ವಿಷಯಗಳಿಗೆ ಗೈರು ಹಾಜರಾಗಿದ್ದಳು.


ಅವಳೂ ನಾನೂ ಒಟ್ಟಿಗೆ ಕೋಳ್ಯೂರಿನಿಂದ ಕೊಡ್ಲಮೊಗರಿನ ವಾಣಿವಿಜಯ ಪ್ರೌಢಶಾಲೆಗೆ  ನಡೆದುಕೊಂಡು ಹೋಗಿ ಬರುತ್ತಿದ್ದೆವು.ಎರಡು ಗುಡ್ಡ ಹತ್ತಿ ಇಳಿಯಬೇಕು.ಸುಮಾರು ನಾಲ್ಕೈದು ಮೈಲು ನಡೆಯಬೇಕಿತ್ತು.


ಅಗಿ‌ನ್ನೂ ನನಗೆ ಸರಿಯಾಗಿ ನೆನಪಿದೆ

ಸುಮಾರು ಎಂಟು ಎಂಟೂವರೆ ಗಂಟೆ ಹೊತ್ತಿಗೆ ಅವಳು ನಮ್ಮ ಮನೆಗೆ ಬರ್ತಿದ್ದಳು.ಅವಳನ್ನೇ ಕಾಯುತ್ತಿರುವ ನಾನು ಕೂಡಲೇ ಮೆಟ್ಟಿಳಿದು ಮನೆಯ ಗದ್ದೆಯ ಬದುವಿನಲ್ಲಿ ಸಾಗಿ.ತೋಡಿನ ಸಂಕ ದಾಟಿ ಅಂಗಡಿ ಎದುರು ಎತ್ತರಕ್ಕೆ ಹತ್ತಿ ಸಾಗುತ್ತಿದ್ದೆವು.

 1986 ಮಾರ್ಚ್ ಕೊನೆಯ ವಾರ.ಪ್ರೌಢ ಶಾಲೆಯಲ್ಲಿ ಅಂತಿಮ ಪರಿಕ್ಷೆಗಳು ನಡೆಯುತ್ತಿದ್ದವು.

.ನಮಗೆ ಆಗ ಹನ್ನೆರಡು ಪರೀಕ್ಷೆಗಳಿದ್ದವು.ಕನ್ನಡ ಎರಡು ಪತ್ರಿಕೆಗಳು,ವಿಜ್ಞಾನ ಮೂರು ಪತ್ರಿಕೆಗಳು,ಗಣಿತ ಎರಡು ಪತ್ರಿಕೆಗಳು ,ಸಮಾಜ ಶಾಸ್ತ್ರ ಎರಡು ಪತ್ರಿಕೆಗಳು ,ಹಿಂದಿ ಒಂದು ಪತ್ರಿಕೆ.


ಕೊನೆಯ ಒಂದೆರಡು ಪರೀಕ್ಷೆಗಳು ಉಳಿದಿದ್ದವು

ಆ ದಿನ ಯಶೋಧಾ ಎಂಟೂವರೆ ಕಳೆದರೂ ನಮ್ಮ‌ಮನೆಗೆ ಬಂದಿರಲಿಲ್ಲ.ಅವಳ ಮನೆಯಿಂದ ಶಾಲೆಗೆ ಹೋಗುವ ದಾರಿಯಲ್ಲಿ ನಮ್ಮ ಮನೆ ಇತ್ತು.


ಅವಳು ಬಾರದ ಕಾರಣ ನಾನೇ ಅವಳ ಮನೆಗೆ ಹೋದೆ.ಅವಳು ಚಳಿಗೆ ನಡುಗುತ್ತಾ ಕಂಬಳಿ ಹೊದ್ದು ಮಲಗಿದ್ದಳು.

"ನಮ್ಮ ಯಶೋಧೆಗೆ  ಮೈಯಲ್ಲಿ ಬಿದ್ದಿದೆ( ಚಿಕನ್ ಪಾಕ್ಸ್ ) .ಅವಳು ಪರೀಕ್ಷೆಗೆ ಬರುದಿಲ್ಲ‌.ನೀನು ಹೋಗು ವಿದ್ಯಾ ,( ನನ್ನನ್ನು ಮನೆಯಲ್ಲಿ,ಊರಲಿ ವಿದ್ಯಾ ಎಂದು ಕರೆಯುತ್ತಾರೆ )ಒಂದು ವಾರ ಮನೆಗೆ ಬರಬೇಡ.ನಿನಗೂ ಹರಡುತ್ತದೆ " ಎಂದು ಹೇಳಿದರು


ಆಗ ಅಯ್ಯೋ..ಅವಳು ಫೇಲ್ ಆಗ್ತಾಳಲ್ಲ ಎಂದು ನನಗೆ ಆತಂಕ ಆಯಿತು.

ನಂತರ ಒಬ್ಬಳೇ ನಡೆದುಕೊಂಡು ಶಾಲೆಗೆ ಬಂದು ಪರೀಕ್ಷೆ ಬರೆದೆ.

ನಿರೀಕ್ಷೆಯಂತೆಯೇ ಯಶೋಧಾ ಫೇಲ್ ಆಗಿದ್ದಳು.

ಅದರ ಪರಿಣಾಮವಾಗಿ ಜಾಣೆಯಾಗಿದ್ದ ಅವಳ ಓದು ಅಲ್ಲಿಗೇ ನಿಂತಿತು.ಅವಳು ಮುಂದೆ ಓದಲಿಲ್ಲ.

ನಂತರ ದೊಡ್ಡವಳಾಗಿ ಮದುವೆಯಾದ ನಂತರ ಕಾಸಗಿಯಾಗಿ ಕಟ್ಟಿ ಎಸ್ ಎಸ್ ಎಲ್ ಸಿ ಪಿಯುಸಿ ಡಿಗ್ರಿ ಮಾಡಿದ್ದಾಳೆ.


ಇದೇ ರೀತಿಯಲ್ಲಿ ನಾನು ಒಂಬತ್ತನೇ ತರಗತಿ ಓದುತ್ತಿರುವಾಗ ರವೀಂದ್ರ ಎಂಬ ಹುಡುಗನಿಗೂ ಆರೋಗ್ಯ ಸಮಸ್ಯೆ ಬಂದು‌ಪರೀಕ್ಷೆ ಬರೆಯಲಾಗಲಿಲ್ಲ.ಫೇಲಾದ ಕಾರಣ ನಂತರ ಅವನೂ ವಿದ್ಯಾಭ್ಯಾಸ ಮುಂದುವರಿಸಲಿಲ್ಲ


ಈಗ ಒಂದರಿಂದ ಒಂಬತ್ತರ ತನಕ ಫೇಲ್ ಮಾಡುದೇ ಇಲ್ಲ.ಹಾಗಾಗಿ ನಮ್ಮಷ್ಟು ಆತಂಕ ಈಗಿನ‌ಮಕ್ಕಳಿಗೆ ಇರಲಾರದೋ ಏನೋ


ನನಗೆ ಈಗ ನಗು ಬರುವ ವಿಚಾರ ಒಂದಿದೆ.ನಾನು ಸಾಮಾನ್ಯವಾಗಿ ತರಗತಿಯಲ್ಲಿ‌ ಮೊದಲ‌ ಇಲ್ಲವೇ ಎರಡನೇ Rank ತೆಗೆಯುತ್ತಿದ್ದೆ.ನನ್ನನ್ನೂ ಫೇಲ್ ಮಾಡಿದರೆ ಮತ್ತೆ ಶಿಕ್ಷಕರು ಎಂತ ಮಾಡುದು ? ಪಾಠ ಮಾಡಲು ವಿದ್ಯಾರ್ಥಿಗಳು ಬೇಡವೇ?ಮಕ್ಕಳೇ ಇಲ್ಲದಿದ್ದರೆ ಶಾಲೆಯಲ್ಲು ಅವರೆಂತ ಬಜೆಂಟ್ ಹೆಕ್ಕುದಾ ? ಆದರೆ ನನಗೆ ಆಗ ಈ ವಿಚಾರ ಎಲ್ಲ ಗೊತ್ತಿರಲಿಲ್ಲ.ಇತರ ಸಾಮಾನ್ಯ ಮಾರ್ಕ್ಸ್ನ ವಿದ್ಯಾರ್ಥಿಗಳಂತೆ ಪಾಸ್ ಫೇಲಿನ ದಿನವನ್ನು ಆತಂಕದಿಂದ ಎದುರು ನೋಡುತ್ತಿದ್ದೆ.


ಎಪ್ರಿಲ್ ಹತ್ತನೆಯ ತಾರೀಕಿನಂದು ಎಲ್ಲ ದೇವರುಗಳೂ ನೆನಪಿಗೆ ಬರ್ತಿದ್ದರು.ಅವರನ್ನೆಲ್ಲ ನೆನೆದು ನನ್ನನ್ನು ಪಾಸು ಮಾಡಿಸು ಎಂದು ಬೇಡಿಕೊಳ್ಳುತ್ತಿದ್ದೆ

ಎಂದಿಗಿಂತ ಬೇಗನೆ ಎದ್ದು ದೇವರಿಗೆ ಹೆಚ್ಚು ಹೂ ಕೊಯ್ದು ಇಡುತ್ತಿದ್ದೆ.ನಂತರ ಸ್ನಾನ ಮಾಡಿ ದೇವರಿಗೆ ಹೊಡಾಡಿ( ನಮಸ್ಕರಿಸಿ) ಶಾಲೆಗೆ ಹೋಗುತ್ತಿದ್ದೆ.ಅಲ್ಲಿ ಬೋರ್ಡ್ ನಲ್ಲಿ ಫೇಲಾದವರ ಹೆಸರನ್ನು ಹಾಕ್ತಾ ಇದ್ದರು.

ಶಾಲೆ ಸಮೀಪಿಸಿದಂತೆಲ್ಲ‌ ಎದೆ ಇತರರಿಗೆ  ಕೇಳುವಷ್ಡು ದೊಡ್ಡದಾಗಿ ಡಬ್ ಡಬ್ ಬಡಿಯುತ್ತಾ ಇತ್ತು.ಹೇಗೋ ಹೋಗಿ ಫೇಲಾದವರ ಲಿಸ್ಟ್  ಅನ್ನು ಎರಡೆರಡು ಸಲ ಓದಿ‌ ನನ್ನ ಹೆಸರು ಅದರಲ್ಲಿ ಇಲ್ಲದಿರುವುದನ್ನು ನೋಡಿ ಖಚಿತ ಗೊಳಿಸಿ ಬದುಕಿದೆಯಾ ಬಡಜೀವವೇ..ನಾನು ಪಾಸು ಎಂದು ಕುಣಿದಾಡಿಕೊಂಡು ಮನೆಗೆ ಬರ್ತಾ ಇದ್ದೆ.ಪಾಸಾದ ಇತರರೂ ಹೀಗೇ ಸಂಭ್ರಮದಿಂದ ಜೊತೆಯಾಗುತ್ತಿದ್ದರು.

ಫೇಲ್ ಆದವರು ಬಿಕ್ಕಿ ಬಿಕ್ಕಿ ಅಳ್ತಾ ಇದ್ದದ್ದು ಈಗಲೂ ನನ್ನ ಕಣ್ಣಿಗೆ ಕಟ್ತಿದೆ.ಅವರ ಬಗ್ಗೆ ನನಗೆ ಪಾಪ ಎನಿಸುತ್ತಿತ್ತು.ಯಾಕೆಂದರೆ ಫೇಲಾದ ಮಕ್ಕಳಿಗೆ ಮನೆಯಲ್ಲು ಕೂಡ ಪೆಟ್ಡು ಕಾದಿರ್ತಾ ಇದ್ದದ್ದು ನನಗೆ ಗೊತ್ತಿತ್ತು


ಇನ್ನು ಹತ್ತನೇ ತರಗತಿಯ ಫಲಿತಾಂಸದ ದಿನದ ಬಗ್ಗೆ ಹೇಳುದೇ ಬೇಡ..ಅಷ್ಡು ಆತಂಕದ ಕ್ಷಣಗಳವು.ಆ ಬಗ್ಗೆ ಇನ್ನೊಂದಿನ ಬರೆಯುವೆ

Saturday, 20 September 2025

ಆತ್ಮ‌ಕಥೆಯ ಬಿಡಿಭಾಗಗಳು : ಸ್ವಂತ ಕೇಸ್ ಹಾಕಲು ಧೈರ್ಯವಿಲ್ಲದ ಹೇಡಿಗಳ ಅಡ್ಡದಾರಿ

 ಹೇಡಿಗಳು ಈ ಬರಹದಬಗ್ಗೆ ಪ್ರತಿಲಿಪಿಗೆ ರಿಪೋರ್ಟ್ ಮಾಡಿವೆ,ಈ ಬಗ್ಗೆ ಲೋಕಾಯುಕ್ತಕ್ಕೂ ತಿಳಿಸ್ತೇನೆ ದೈರ್ಯ ಇದ್ದರೆ   ಕೇಸ್ ಹಾಕಲಿ...


ಮೊದಲು ನನ್ನ ಪುಸ್ತಕದಲ್ಲಿ  ಈ ಬಗ್ಗೆ ನಾನು ಬರೆದಿದ್ದೆ.ಅದರ ಬಗ್ಗೆ ಡಾ.ಚಿನ್ನಪ್ಪ ಗೌಡ ಮತ್ತು ಧನಂಜಯ ಕುಂಬಳೆ ಯೂನಿವರ್ಸಿಟಿ ವಿ ಸಿ ಗೆ ದೂರು ನೀಡಿದ್ದು ಅದರಂತೆ ನಡೆದ ಅಕ್ರಮ ಬಗ್ಗೆ ಬರೆದದ್ದರಿಂದ ಯೂನಿವರ್ಸಿಡಿಯ ಘನತೆಗೆ ದಕ್ಕೆ ಬಂದಿದೆ ಕ್ಷಮೆ ಕೇಳಬೇಕು ಇಲ್ಲವಾದರೆ ಕೇಸ್ ಹಾಕ್ತೇವೆ ಎಂದು ರಿಜಿಸ್ಟ್ರಾರ್  ಅರುಣ ಶ್ಯಾಮ್ ಅಸೊಸಿಯೇಟ್ಸ್ ಮೂಲಕ ಲೀಗಲ್ ನೋಟೀಸ್ ಕಳುಹಿಸಿದ್ದರು.ಅದರೆ 2013 ರ ನೇಮಕಾತಿಯಲ್ಲಿ ವ್ಯಾಪಕ ಅಕ್ರಮ ನಡೆದ ಬಗ್ಗೆ ಆಗ ರಿಜಿಸ್ಟ್ರಾರ್ ಆಗಿದ್ದು ಈಗ ವೀಸಿಯಾಗಿರುವ ಡಾ.ಪಿಎಸ್ ಯಡಪಡಿತ್ತಾಯರೇ ಮುಕ್ತವಾಗಿ ಒಪ್ಪಿಕೊಂಡಿದ್ದು ಈ ಕೇಸ್ ಮುಂದುವರಿಯದಂತೆ ತಡೆ ಹಿಡಿದಿದ್ದಾರೆ


ಈಗ ಇಂತಹ ಅಡ್ಡ ಮಾರ್ಗ ಹಿಡಿದಿವೆ ..ನಾಚಿಗೆ ಮಾನ ಮರ್ಯಾದಿ ಇಲ್ಲದ ಅತೃಪ್ತ ಆತ್ಮಗಳು  ಯಾರೆಂದು ಗೊತ್ತಿಲ್ಲ 

ದೈರ್ಯ ಇದ್ದರೆ ಸ್ವತಃ ಕೇಸ್ ಹಾಕಲಿ..ನಾನು ಗೆದ್ದು ಮತ್ತೆ ಬರೆಯುತ್ತೇನೆ..


ನನ್ನ ಧ್ವನಿ ಉಡುಗಿದೆ..


ಇಂತಹ ಸಾವಿರ ನೋಟೀಸ್ ಗಳನ್ನೂ ಕೇಸ್ ಗಳನ್ನೂ ಎದುರಿಸಬಲ್ಲೆ ಆದರೆ ನಮ್ಮ ಬಡ ಪ್ರತಿಭಾವಂತ ಯುವಕರಿಗೆ ಅನ್ಯಾಯವಾಗುವುದನ್ನು ಸಹಿಸಲಾಗದು.ಇದಕ್ಕೊಂದು ಅಂತಿಮ ಪರಿಹಾರ ಬೇಕೇ ಬೇಕು..ನಿಮಗಿದು ಸರಿ ಎನಿಸಿದರೆ ಶೇರ್ ಮಾಡಿ..ಒಂದಷ್ಟಾದರೂ ಜಾಗೃತಿ ಮೂಡಲಿ‌..


ಏನಿದು ವಿಷಯ..ಇಲ್ಲಿ ಓದಿ 


ಸುತ್ತ ಮುತ್ತ ಎತ್ತ ನೋಡಿದರೂ ಭ್ರಷ್ಟಾಚಾರದ ಕಂಬಂಧ ಬಾಹುಗಳು ಎಲ್ಲೆಡೆ ಹರಡಿ ಅಟ್ಟಹಾಸ ಮಾಡುತ್ತಿವೆ.ಎಫಡಿಎ  ಹಿಡಿದು ಯೂನಿವರ್ಸಿಟಿ ತನಕದ ಎಲ್ಲ ಹುದ್ದೆಗಳು 30-80 ಲಕ್ಷಗಳಿಗೆ ಬಿಕರಿಯಾಗಿದೆ.

ನಮ್ಮ‌ಬಡಮಕ್ಕಳು ಊಟ ತಿಂಡಿಯ ಪರಿವೆಯಿಲ್ಲದೆ ಓದುತ್ತಿದ್ದಾರೆ.ಯಾಕೆಂದರೆ ಚೆನ್ನಾಗಿ ಓದಿ ಮಕ್ಕಳೇ..ಉತ್ತಮ‌ಅಂಕ ಪಡೆದರೆ ನಿಮಗೆ ಒಳ್ಳೆಯ ಕೆಲಸ ಸಿಗುತ್ತದೆ ,ಸರ್ಕಾರಿ ಉದ್ಯೋಗ ಭದ್ರತೆಯನ್ನು ಕೊಡುತ್ತದೆ ಎಂಬ ಭರವಸೆಯನ್ನುಬಣ್ಣ ಬಣ್ಣದ ಕನಸನ್ನು  ನಾವು ಸದಾ ತುಂಬುತ್ತಿರುತ್ತೇವೆ

ಮೊದ ಮೊದಲು ಈ ಮಾತು ಹೇಳುವಾಗ ನನಗೂ ಈ ಬಗ್ಗೆ ತುಂಬಾ ಭರವಸೆಯಿತ್ತು

ಯಾಕೆಂದರೆ 2009 ರಲ್ಲಿ ಲಿಖಿತ ಪರೀಕ್ಷೆಯ ಮೂಲಕ ಯಾವುದೇ ದುಡ್ಡು ವಶೀಲಿ ಇಲ್ಲದೆ ಕೇವಲ ಅರ್ಹತೆಯಿಂದಲೇ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಹುದ್ದೆಯನ್ನು ಪಡೆದವಳು ನಾನು.

ಈ ನನ್ನ ಮಕ್ಕಳಂತೆಯೇ ನಾನೂ ಕೆಲಸದ ಜೊತೆಗೆ ಹಗಲು ರಾತ್ರಿ ಅಧ್ಯಯನ ಮಾಡುತ್ತಿದ್ದೆ.ನನಗೊಂದು ಕನಸಿತ್ತು.ರಾಷ್ಟ್ರಪತಿಗಳಾಗಿದ್ದ ಅಬ್ದುಲ್ ಕಲಾಂ ಅವರು ದೊಡ್ಡದಾದ ಕನಸು ಕಾಣಿರಿ ಎಂದಿದ್ದರಲ್ಲ.ಅಂತೆಯೇ ನನ್ನ‌ ಮಂಗಳೂರು  ಯೂನಿವರ್ಸಿಟಿ ಪ್ರೊಫೆಸರಾಗುವ  ಕನಸೂ ಕೂಡ ನನ್ನ ಪಾಲಿಗೆ ದೊಡ್ಡದೇ ಇರಬೇಕು.ಹಾಗಾಗಿಯೇ ಡಾ.ಅಮೃತ ಸೋಮೇಶ್ವರರರಂತಹ ಹಿರಿಯರೂ ನನಗೆ ಮಹತ್ವಾಕಾಂಕ್ಷೆ ಒಳ್ಳೆಯದಲ್ಲ ಎಂದು ಹಿತ ನುಡಿದಿದ್ದರು.ಬಹುಶಃ ಅದಾಗಲೇ ಯೂನಿವರ್ಸಿಟಿಗಳಲ್ಲಿನ ಅವ್ಯವಹಾರಗಳ ಬಗ್ಗೆ ಅವರಿಗೆ ಅವರಿವಿದ್ದಿರಬಹುದೋ ಏನೋ.ಇರುವ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕ ಹುದ್ದೆಯಲ್ಲಿಯೇ ತೃಪ್ತಿ ಪಡುವುದು ಒಳ್ಳೆಯದೆಂದು ಹೇಳಿರಬಹುದು.ಈ ಮಾತು ನಾನು ಮಾತ್ರ ವಲ್ಲ ನನ್ನ ಸ್ನೇಹಿತರಾದ ನನ್ನ ಜೊತೆಗೆ ಸರ್ಕಾರಿ ಪಿಯು ಕಾಲೇಜು ಕನ್ನಡ ಉಪನ್ಯಾಸಕ ಹುದ್ದೆಯನ್ನು ಪಡೆದ ಬಹುಮುಖೀ ಪ್ರತಿಭಾವಂತ ಡಾ.ಶ್ರೀಧರ ಹೆಗಡೆ ಭದ್ರನ್ ಅವರೂ ಕೇಳಿದ್ದರು‌ಅವರ ಹಿತೈಷಿಗಳು ಯಾರೋ ಅವರಿಗೆಮಹತ್ವಾಕಾಂಕ್ಷೆ ಒಳ್ಳೆಯದಲ್ಲ ಎಂದಿದ್ದ ಬಗ್ಗೆ ಮಾತಿನ ನಡುವೆ ನನ್ನಲ್ಲಿ ಒಮ್ಮೆ ಅವರು ಹೇಳಿದ್ದರು

ಪ್ರಾಧ್ಯಾಪಕರಿಗೆ ಬೇಕಾದ  ಎಲ್ಲ ಅರ್ಹತೆಯನ್ನು ಪಡೆದ ನಂತರ ಅದನ್ನು ಬಯಸುವುದು ಮಹತ್ವಾಕಾಂಕ್ಷೆ ಆಗುತ್ತದಾ ? ಏನೋ ನನಗೆ ಗೊತ್ತಿಲ್ಲ.ನನಗೆ ಅದು ಈಗಲೂ ತಪ್ಪೆನಿಸಿಲ್ಲ

2009 ರಲ್ಲಿ ಸರ್ಕಾರಿ ಉದ್ಯೋಗಕ್ಕೆನಾನು ಸೇರುವಾಗ ನನ್ನ‌ಮೊದಲ ಡಾಕ್ಟರೇಟ್ ಅಧ್ಯಯನದ ಪಿಎಚ್ ಡಿ ಮಹಾ ಪ್ರಬಂಧ ಸಲ್ಲಿಸಿ ಆಗಿತ್ತು.ಮತ್ತೆ ಸ್ವಲ್ಪ ಸಮಯದ ಒಳಗೆ ಡಾಕ್ಟರೇಟ್ ಪದವಿಯನ್ನು ಪಡೆದೆ.

ನಾನು ಬೆಳ್ಳಾರೆ ಕಾಲೇಜಿಗೆ ಸೇರಿದಾಗ ಅದು ಸುವರ್ಣ ಮಹೋತ್ಸವವನ್ನು ಆಚರಿಸುತ್ತಾ ಇತ್ತು.ಆ ಐವತ್ತು ವರ್ಷಗಳಲ್ಲಿ ಆ ಕಾಲೇಜಿನ ಮೊದಲ ಡಾಕ್ಟರೇಟ್ ಪದವಿ ಪಡೆದ ಮೊದಲ ಉಪನ್ಯಾಸಕಿ ನಾನಾಗಿದ್ದೆ.

.ಪಿಯು ಇಲಾಖೆಯಲ್ಲಿ ಉನ್ನತ ಶಿಕ್ಷಣಕ್ಕೆ ಯಾವುದೇ ಮನ್ನಣೆ ಇಲ್ಲ.ಹೆಚ್ಚಾಗಿ ಪ್ರೌಢಶಾಲೆಯಿಂದ ಭಡ್ತಿ ಬಂದ ಉಪನ್ಯಾಸಕರೇ ಇರುತ್ತಾರೆ.ಹಾಗಾಗಿ ಆಗ ಡಾಕ್ಟರೇಟ್ ಪದವಿ ಪಡೆದ ಉಪನ್ಯಾಸಕರ ಸಂಖ್ಯೆ ತೀರ ಕಡಿಮೆ ಇತ್ತು.2009 ರ ಬ್ಯಾಚ್ ನಲ್ಲಿ ಆಯ್ಕೆ ಆದವರಲ್ಲಿ  ಅನೇಕರು ಪಿಎಚ್ ಡಿ ಪದವಿಧರರಿದ್ದರು

ಇರಲಿ

ಮೊದಲ ಡಾಕ್ಟರೇಟ್ ನ‌  ಅಧ್ಯಯನ ಕನಿಷ್ಠ ಅವಧಿ  ಎರಡೂವರೆ ವರ್ಷ ಮುಗಿದ ಕೂಡಲೇ ನಾನು ಎರಡನೆಯ ಡಾಕ್ಟರೇಟ್ ಅಧ್ಯಯನಕ್ಕಾಗಿ ಕುಪ್ಪಂ ನ ದ್ರಾವಿಡ ವಿಶ್ವ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಅದೂ ಪ್ರಬಂಧ ಸಿದ್ದವಾಗಿತ್ತು.2012 ರಲ್ಲಿಯೇ ಪ್ರಬಂಧ ಸಲ್ಲಿಸಿದ್ದರೂ ಮೌಲ್ಯ ಮಾಪಕರ ಹಾಗೂ ಮಾರ್ಗ ದರ್ಶಕರ  ನಿರ್ಲಕ್ಷ್ಯದಿಂದಾಗಿ  ಬಹಳ‌ ತಡವಾಗಿ 2015 ರಲ್ಲಿ ಎರಡನೆಯ ಡಾಕ್ಟರೇಟ್ ಪದವಿಯನ್ನೂ ಪಡೆದೆ

ಈ ನಡುವೆ 2013 ರಲ್ಲಿ ಮಂಗಳೂರು ಯೂನಿವರ್ಸಿಟಿ ವಿವಿಧ ಬೋಧಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದ್ದು ನಾನೂ ಅರ್ಜಿ ಸಲ್ಲಿಸಿದ್ದೆ

ಈ ಬಾರಿ ನಾನು ಖಂಡಿತಾ ಆಯ್ಕೆ ಆಗುವೆನೆಂಬ ಆತ್ಮ ವಿಶ್ವಾಸ ನನಗಿತ್ತು.ಯಾಕೆಂದರೆ ಅರ್ಜಿ ಸಲ್ಲಿಸಿದವರಲ್ಲಿ ಅತಿ ಹೆಚ್ಚು ಅಕಾಡೆಮಿಕ್ ಫರ್ಪಾಮೆನ್ಸ್ ಇಂಡಿಕೇಟರ್ ನನಗಿತ್ತು.ನನಗೆ 1157 accademi performance indication ಪಾಯಿಂಟುಗಳಿದ್ದವುಅಲ್ಲಿ ಪ್ರೊಫೆಸರಾಗಿ ಆಯ್ಕೆ ಆದವರಿಗೆ ಕೂಡ 530 ರಷ್ಟು ಮಾತ್ರ ಇತ್ತು.ಅದಕ್ಕಿಂತ ಎರಡು ಪಟ್ಟು ಹೆಚ್ಚು ಅರ್ಹತೆ ನನಗಿತ್ತು.ನಾನು ಅರ್ಜಿ ಸಲ್ಲಿಸಿದ್ದು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ...

ನಾನು ಅದಾಗಲೇ ಎಂಎ( ಕನ್ನಡ)  73.7% - ನಾಲ್ಕನೆಯ ರ‌್ಯಾಂಕ್,ಎಂಎ( ಹಿಂದಿ) ಎಂಎ( ಸಂಸ್ಕೃತ)- ಮೊದಲ ರ‌್ಯಾಂಕ್ ,ಎಂಫಿಲ್ ಪಿಎಚ್ ಡಿ ಪದವಿ ಗಳಿಸಿದ್ದು ಎರಡನೆಯ ಪಿಎಚ್ ಡಿ ಪದವಿಗೆ ಪ್ರಬಂಧ ಸಲ್ಲಿಕೆ ಆಗಿತ್ತು.

ಅ ಸಮಯಕ್ಕಾಗುವಾಗಲೇ ನನ್ನ ಹದಿನೇಳು ಸಂಶೋಧಾನಾ ಕೃತಿಗಳು ನೂರರಷ್ಟು ಸಂಶೋಧನಾ ಬರಹಗಳು,ಮುನ್ನೂರರಷ್ಟು ಇತರ ವೈಚಾರಿಕ ಬರಹಗಳು ಪ್ರಕಟವಾಗಿದ್ದವು

ಸುಮಾರು ಇನ್ನೂರೈವತ್ತು ಅಂತರಾಷ್ಟ್ರೀಯ,ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ ಮಾಡಿದ್ದೆ

ಯುಜಿಸಿ ನಿಯಮಾವಳಿಗಳಂತೆ ಅಂಕಗಳನ್ನು ನೀಡಿದರೆ ನನಗೆ ಸಹಾಯಕ ಪ್ರಾಧ್ಯಾಪಕ ಹುದ್ದೆ ಖಂಡಿತವಾಗಿಯೂ ಸಿಗುತ್ತಿತ್ತು.ಆದರೆ ದುಡ್ಡು ಇನ್ಪ್ಲೂಯೆನ್ಸ್ ಗೆ ಒಳಗಾದ ವೀಸಿ ಯನ್ನೊಳಗೊಂಡ ಆಯ್ಕೆ ಸಮಿತಿ ಯುಜಿಸಿ ನಿಯಮಗಳನ್ನು ಮೀರಿ ತಮಗೆ ಬೇಕಾದ ಅಭ್ಯರ್ಥಿಗಳು ಕಡಿಮೆ ಅರ್ಹತೆ ಹೊಂದಿದ್ದರೂ ಅವರನ್ನೇ ಆಯ್ಕೆ ಮಾಡಿದ್ದರು.

ಕನ್ನಡ ವಿಭಾಗದಲ್ಲಿ ಜೆನರಲ್ ಮೆರಿಟ್ ಗೆ ಒಂದು ಹುದ್ದೆ ಇತ್ತು.ಅದಕ್ಕೆ ಒಂದು ಕನ್ನಡ( ಎಂಎ)66% ಎರಡು ಸಂಶೋಧನಾ ಕೃತಿ( ಅದರಲ್ಲಿ ಒಂದು ಪಿಎಚ್ ಡಿ ಪ್ರಬಂಧ) ಗಳನ್ನು ಪ್ರಕಟಿಸಿದ ಧನಂಜಯ ಕುಂಬಳೆ ಆಯ್ಕೆ ಆದರು.

ಇಲ್ಲಿ ಒಟ್ಟು ನೂರು ಅಂಕಗಳ ಸಂದರ್ಶನದಲ್ಲಿ 20 ಅಂಕಗಳು ರಿಸರ್ಚ್ ಫರ್ಫಾರ್ಮೆನ್ಸ್ ಗೆ ಮೀಸಲಾಗಿವೆ.ಇಲ್ಲಿ ಒಂದು ಸಂಶೋಧನಾ ಕೃತಿಗೆ ಐದು ಅಂತ ಮತ್ತು ಅಂತ ರಾಷ್ಟ್ರೀಯ ರಿಸರ್ಚ್ ಜರ್ನಲ್ ನಲ್ಲಿ ಪ್ರಕಟಿತ ಬರಹಕ್ಕೆ ಎರಡು ಅಂಕ,ರಾಷ್ಟ್ರೀಯ ರಿಸರ್ಚ್ ಜರ್ನಲ್ ನಲ್ಲಿ ಪ್ರಕಟಿತ ಬರಹಕ್ಕೆ ಒಂದು ಅಂಕ ಇದರ ಹೊರತಾಗಿ ಈ ವಿಭಾಗದಲ್ಲಿ ಅಂಕಗಳನ್ನು ಕೊಡುವಂತಿಲ್ಲ ಎಂದು ಯುಜಿಸಿ ಸ್ಪಷ್ಟವಾಗಿ ತಿಳಿಸಿದೆ.ಇಲ್ಲಿ ಗರಿಷ್ಠ ಅಂಕಗಳು 20

ನನ್ನದು 17 ಸಂಶೋಧನಾ ಕೃತಿಗಳು ಪ್ರಕಟವಾದ ಕಾರಣ ಗರಿಷ್ಠ 20 ಅಂಕಗಳು ಲಭಿಸಿದ್ದವು.

ಆದರೆ ಇಲ್ಲಿ ಆಯ್ಕೆಯಾದ ಧನಂಜಯ ಕುಂಬಳೆ ಅವರು ಅವರ ಅರ್ಜಿಯಲ್ಲಿ ಡಿಕ್ಲೇರ್ ಮಾಡಿರುವಂತೆ ಕೇವಲ ಎರಡು ಸಂಶೋಧನಾ ಕೃತಿಗಳು ಪ್ರಕಟವಾಗಿದ್ದು ಅದರಲ್ಲಿ ಒಂದು ಪಿಎಚ್ ಡಿ ಪ್ರಬಂಧವಾಗಿದ್ದು ಅದಕ್ಕೆ ಇನ್ನೊಂದು ಅಕಾಡೆಮಿಕ್ ವಿಭಾಗದಲ್ಲಿ ಅಂಕಗಳು ನೀಡಲ್ಪಟ್ಟಿದೆ

ಹಾಗಾಗಿ ಇಲ್ಲಿ ಅವರು ಅವರ ಒಂದು ಪುಸ್ತಕಕ್ಕೆ 5 ಅಂಕಗಳನ್ನು ಮಾತ್ರ ಪಡೆಯಲು‌ಅರ್ಹರಾಗಿದ್ದರು.ಇದನ್ನು ಪ್ರಾಥಮಿಕ ಶಾಲೆಯ ಬಾಲಕ ಕೂಡ ಲೆಕ್ಕ ಹಾಕಬಲ್ಲ. 

ಆದರೆ ಇಲ್ಲಿ ಆಯ್ಕೆ ಸಮಿತಿಯವರು ಹೆಚ್ಚಿನ ಅಂಕ ನೀಡಲು ಅವರಿಗೆ ಅರ್ಹತೆ ಇಲ್ಲದೆ ಇದ್ದಾಗಲೂ ಹೆಚ್ಚುವರಿಯಾಗಿ ಹದಿನೈದು ಅಂಕ ನೀಡಿ ಗರಿಷ್ಟ 20 ಅಂಕ ನೀಡಿದ್ದರು.

ಇಲ್ಲಿ ಅರ್ಹತೆ ಇಲ್ಲದೆ ಇದ್ದಾಗಲೂ ಅವರನ್ನು ಆಯ್ಕೆ ಮಾಡುವ ಸಲುವಾಗಿ ಹೆಚ್ಚುವರಿಯಾಗಿ ನೀಡಿದ 15 ಅಂಗಳನ್ಮು ಅವರು ಸಂದರ್ಶನದಲ್ಲಿ ಗಳಿಸಿದ ಒಟ್ಟು ಅಂಕ‌69.4 ರಿಂದ ಕಳೆದರೆ ಅವರಿಗೆ ಸಿಗಬೆಕಾಗಿದ್ದ ಅಂಕ‌54.4% 

ನನಗೆ ಸಿಕ್ಕ ಒಟ್ಟು ಅಂಕ 63.9 ಹಾಗೆಯೇ ಇರುತ್ತದೆ.ಹಾಗಾಗಿ ನಾನೇ ಹೆಚ್ಚು ಅರ್ಹಳು ಆದರೆ ದುಡ್ಡು ವಶೀಲೊಗೊಳಗಾಗಿ ಆಯ್ಕೆಸಮಿತಿ ಅಕ್ರಮವಾಗಿ ರಿಸೃಚ್ ಫರ್ಫಾರ್ಮೆನ್ಸ್ ವಿಭಾಗದಲ್ಲಿ ಅವರಿಗೆ ಹದಿನೈದು ಅಂಕ‌ ನೀಡಿದ ಕಾರಣ ನನಗೆ ಅನ್ಯಾಯ ಆಗಿದೆ

ಹಾಗೆ ಸುಪ್ರೀಂ ಕೋರ್ಟ್ ತನಕ ಹೋಗಿ ಹೋರಾಡಿದರೂ ಗೆಲ್ಲಾಗಲಿಲ್ಲ ಯಾಕೆಂದರೆ ನ್ಯಾಯಾಲಯ ನನಗೆ ಹೆಚ್ಚಿನ ಅರ್ಹತೆ  ಇಲ್ಲ ಎಂದಿಲ್ಲ‌ .ಬದಲಿಗೆ ಅರ್ಹತೆಯನ್ನು ನಿರ್ಧರಿಸುವುದು ಆಯ್ಕೆ ಸಮಿತಿ‌ ಅದರಲ್ಲಿ ತಲೆಹಾಕಲು ಕಾನೂನಿನಲ್ಲಿ ಅವಕಾಶ ಇಲ್ಲ ಎನ್ನುತ್ತದೆ

ಕಾನೂನಿನ ಈ ಪರಿಮಿತಿಯನ್ನು ತಿಳಿದೇ ಆಯ್ಕೆ ಸಮಿತಿಯವರು ಅಕ್ರಮ ಎಸಗಿ ತಮಗೆ ಬೇಕಾದವರನ್ನು ಬೇಕಾ ಬಿಟ್ಟಿ ಆಯ್ಕೆ ಮಾಡುತ್ತಾರೆ

ಆಯ್ಕೆ ಸಮಿತಿಯವರೇ ಯುಜಿಸಿ ಮಾರ್ಗದರ್ಶಕ ಸೂತ್ರಗಳನ್ನು ಉಲ್ಲಂಘಸಿ‌ ದುಡ್ಡು ವಶೀಲಿಗೆ ಒಳಗಾಗಿ ಅನರ್ಹರನ್ನು ಆಯ್ಕೆ ಮಾಡಿದರೆ ಈ ಅನ್ಯಾಯವನ್ನು ಪ್ರಶ್ನಿಸುವವರು ಯಾರು ? ಇದಕ್ಕೇನು ಪರಿಹಾರ? ಇದು ಇಂದಿಗೂ ಉತ್ತರ ಸಿಗದ ಪ್ರಶ್ನೆಯಾಗಿದೆ.

ಈ ಬಗ್ಗೆ ಸರ್ಕಾರ ಸಿಐಡಿ ಗೆ ವಹಿಸಿ ಸರಿಯಾದ ತನಿಖೆ ಮಾಡಿ ಅಕ್ರಮ ಎಸಗಿದವರ ಮೇಲೆ ಸೆಒಯಾದ ಕ್ರಮ‌ತೆಗೆದುಕೊಂಡರೆ ಸರಿ ಹೋಗಬಹುದು.

2013 ರಲ್ಲಿ ಮಂಗಳೂರು ಯೂನಿವರ್ಸಿಟಿಯಲ್ಲಿ ರಿಜಿಸ್್ಟ್ರಾರ್ ಆಗಿದ್ದು ಈಗ ಅದೇ ಯೂನಿವರ್ಸಿಟಿಯಲ್ಲಿ ವೀಸಿಗಳಾಗಿರುವ ಡಾ.ಪಿಎಸ್ ಎಡಪಡಿತ್ತಾಯರು 2013 ರಲ್ಲಿ ನಡೆದ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಅಕ್ರಮ ನಡೆದ ಬಗ್ಗೆ ಒಪ್ಪಿಕೊಳ್ಳುತ್ತಾರೆ.ಅದಕ್ಕಾಗಿಯೇ  ನೇಮಕಾತಿ ಪ್ರಕ್ರಿಯೆಯಿಂದ ಆಗಿನ ವೀಸಿಗಳಾದ ಶಿವಶಂಕರಮೂರ್ತಿಗಳು   ರಿಜಿಸ್ಟ್ರಾರ್ ಆಗಿದ್ದ ಡಾ.ಪಿಎಸ್ ಎಡಪಡಿತ್ತಾಯರನ್ನು ಹೊರಗಿರಿಸಿ ನಡೆಸಿದ ಬಗ್ಗೆಯೂ ಹೇಳಿದ್ದಾರೆ.ಆಗಿನ ವೀಸಿಗಳು ಕೆಲವು ಕ್ಲರ್ಕ್ ಹಾಗೂ ಒಬ್ಬಿಬ್ಬರು ಪ್ರಾಧ್ಯಾಪಕರನ್ನು ಇಟ್ಟುಕೊಂಡು ಅಕ್ರಮ‌ಎಸಗಿದ್ದರಂತೆ.ಅಂದಿನ ನೇಮಕಾತಿಗಳಲ್ಲಿ ಎರಡು ಕೋರ್ಟಿನಲ್ಲಿ ರದ್ದಾಗಿವೆ.ಇನ್ನೂ ಹಲವು ಪ್ರಕರಣಗಳು ನ್ಯಾಯಾಲಯದ ಮುಂದಿವೆ ಎಂದವರು ತಿಳಿಸಿದ್ದಾರೆ.

ಅಂದ ಹಾಗೆ ಅಂದಿನ ನೇಮಕಾತಿಯ ಆಯ್ಕೆ ಸಮಿತಿಯಲ್ಲಿ‌ಡಾ.ಚಿನ್ನಪ್ಪ ಗೌಡ ಮತ್ತು ಡಾ.ಸಬೀಹಾ ಭೂಮಿ ಗೌಡ ಮತ್ತಿತರರು ಇದ್ದರು


ನನ್ನ ವಿಷಯದಲ್ಲಿಯೇ ಇಷ್ಟು ಅನ್ಯಾಯವಾದಾಗ ಓದಿ ಕಲಿಯಿರಿ ಮಕ್ಕಳೇ ಒಳ್ಳೆಯ ಭವಿಷ್ಯ ಇದೆ ಎನ್ನುವಾಗ ನನ್ನ ಧ್ವನಿ ನಡುಗದೆ ಇರಲು ಸಾಧ್ಯವೇ ? ಆದರೂ ನಾನಿದನ್ನು ಮಕ್ಕಳ ಜೊತೆ ಹಂಚಿಕೊಳ್ಳುವುದಿಲ್ಲ.ಅವರ ಆತ್ಮ ವಿಶ್ವಾಸಕ್ಕೆ ಧಕ್ಕೆ ಬಂದು ನಿರಾಸೆ ಮೂಡೀತು ಎಂಬ ಆತಂಕ ನನಗೆ‌

ಇಷ್ಟರ ತನಕ ಸಂದರ್ಶನ ಇರುವಲ್ಲಿ ಮಾತ್ರ ದುಡ್ಡು ವಶೀಲಿ‌ ನಡೆಯುತ್ತದೆ ಎಂಬ ಭಾವ ಇತ್ತು.ಈಗ ಲಿಖಿತ ಪರೀಕ್ಷೆ ಇರುವಲ್ಲಿನಡೆದ ಅಕ್ರಮ ನೋಡಿ ಆಘಾತವಾಗಿದೆ.ನಮ್ಮ‌ಬಡ ಪ್ರತಿಭಾವಂತ ಮಕ್ಕಳ ಪಾಡೇನು ಎಂಬ ಆತಂಕ ಉಂಟಾಗಿದೆ


ನನಗೇನೋ ಬದುಕಲೊಂದು ಗೌರವದ ಉದ್ಯೋಗವಿದೆ.ಮಂಗಳೂರು ಯೂನಿವರ್ಸಿಟಿಗೆ ಅರ್ಜಿ ಅಲ್ಲಿಸುವ ಮೊದಲೇ ನಾನು ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕಿಯಾಗಿದ್ದೆ.ಆದರೆ ಉದ್ಯೋಗವಿಲ್ಲದ ಬಡ ಪ್ರತಿಭಾವಂತರ ಬಗ್ಗೆಯೇ ನನ್ನ ಕಾಳಜಿ..

ಈಗ ಸರ್ಕಾರ ಎಲ್ಲ‌ ಅಕ್ರಮಗಳ ಬಗ್ಗೆ ಸರಿಯಾದ ತನಿಖೆ ನಡೆಸಿ ಅದಕ್ಕೆ ಕಾರಣರಾದವ ಮೇಲೆಬಲವಾದ ಕ್ರಮ ತೆಗೆದುಕೊಂಡರೆ ಸ್ವಲ್ಪ ಪ್ರಯೋಜನವಾಗಬಹುದು 


ಇದರ ನಡುವೆ ಒಂದು ಗಮ್ಮತ್ತಿನ ವಿಚಾರ ಹೇಳಲು ಮರೆತು ಹೋಯಿತು.ಕಳೆದ ವಾರ ಮಂಗಳೂರು ಯೂನಿವರ್ಸಿಟಿಯ ಈಗಿನ ರಿಜಿಸ್ಟ್ರಾರ್( ಅವರ್ಯಾರೆಂದು ನನಗೆ ಗೊತ್ತಿಲ್ಲ) ಅವರಿಂದ ಲಾಯರ್ ಅರುಣ ಶ್ಯಾಮ್ ಅಸೋಸಿಯೇಟ್ ನ ಸುಯೋಗ ಹೇರಳೆ ಎಂಬವರ ಮೂಲಕ ಒಂದು ಲೀಗಲ್ ನೋಟೀಸ್ ಬಂದಿದೆ.ಮೇಲೆ ಹೇಳಿದ ಮಂಗಳೂರು ಯೂನಿವರ್ಸಿಯಲ್ಲಿ 2013 ರಲ್ಲಿನ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ,ನನಗೆ ಅನ್ಯಾಯವಾದ ಬಗ್ಗೆ ನನ್ನ ನೋವಿನ ಬಗ್ಗೆ ನನ್ನ ಕರಾವಳಿಯ ಸಾವಿರದೊಂದು ದೈವಗಳು ಕೃತಿಯ ಮನದಾಳದ ಮಾತಿನಲ್ಲಿ ಹಂಚಿಕೊಂಡಿದ್ದೆ.ಇದು ಅವರಿಗೆ ಅವಮಾನ ಆಗಿದೆಯಂತೆ.2013 ರಲ್ಲಿ ರಿಜಿಸ್ಟ್ರಾರ್ ಆಗಿದ್ದು ಈಗ ಅದೇ ಯೂನಿವರ್ಸಿಟಿಯ ವೀಸಿಗಳಾದ ಡಾ.ಸುಬ್ರಹ್ಮಣ್ಯ ಎಡಪಡಿತ್ತಾಯರು ಆಗ ನಡೆದ ಅಕ್ರಮ ಅನ್ಯಾಯಗಳನ್ನು ಮುಕ್ತವಾಗಿ ಹೇಳಿದ್ದಾರೆ.ಆದರೆ ಈಗಿನ ರಿಜಿಸ್ಟ್ರಾರಿಗೆ ಆಗ ನಡೆದದ್ದನ್ನು ಹೇಳಿದ್ದು ಅವಮಾನ ಎನಿಸಿದೆಯಂತೆ.ಬಹುಶಃ ಅವರು ಇತ್ತೀಚೆಗೆ ರಿಜಿಸ್ಟ್ರಾರ್ ಆಗಿದ್ದು ಆಗ 2013 ರಲ್ಲಿ ನಡೆದ ಅವ್ಯವಹಾರ ಅಕ್ರಮಗಳ ಬಗ್ಗೆ ಅವರಿಗೆ ತಿಳಿದಿರಲಾರರು.ಹಾಗಾಗಿ ಅವರಿಗೆ ಇರುವ ವಿಚಾರವನ್ನು ಲೀಗಲ್ ನೋಟೀಸಿನ ಉತ್ತರದಲ್ಲಿ ತಿಳಿಸಿರುವೆ.ಇನ್ನು ಇಲ್ಲಿನ ನಡೆದ ಅಕ್ರಮ ಅವ್ಯವಹಾರ ಭ್ರಷ್ಟಾಚಾರದ ಬಗ್ಗೆ ನನಗಿಂತ ಹೆಚ್ಚು ಅಧಿಕೃತವಾಗಿ ತಿಳಿದವರು ಆಗ ರಿಜಿಸ್ಟ್ರಾರ್ ಆಗಿದ್ದು ಈಗ ವೀಸಿಗಳಾಗಿರುವ ಡಾ.ಪಿ ಎಸ್ ಎಡಪಡಿತ್ತಾಯರು.ಹಾಗಾಗಿ ಅವರಲ್ಲಿ ಮಾಹಿತಿ ಪಡೆಯುವಂತೆ ಸೂಚಿಸಿರುವೆ..ಅನ್ಯಾಯ ಅಕ್ರಮಮಾಡಬಹುದು..ಹೇಳಬಾರದು ಎಂದರೆ ಹೇಗೆ ?  

ಇಂತಹ ಸಾವಿರ ನೋಟೀಸ್ ಗಳನ್ನೂ ಕೇಸ್ ಗಳನ್ನೂ ನಾನು ಎದುರಿಸಬಲ್ಲೆ ಆದರೆ ಪ್ರಾಮಾಣಿಕವಾಗಿ ಶೆಡ್ಡಿನಲ್ಲಿ ಚಿಮಿಣಿ ದೀಪದಲ್ಲಿ ಕಚ್ಚುವ ಸೊಳ್ಳೆಗಳ ಕಾಟದ ನಡುವೆಯೂ ಓದುವ ಕಲಿಯುವ ನಮ್ಮ‌ಬಡ ಮಕ್ಕಳಿಗೆ ಉದ್ಯೋಗ ಸಿಗದೆ ಅವೆಲ್ಲವೂ ಭ್ರಷ್ಟರ ಪಾಲಾದರೆ ಎಂಬ ಆತಂಕ ನನ್ನನ್ನು ನಡುಗಿಸುತ್ತಿದೆ.ನಮ್ಮ‌ ಪ್ರತಿಭಾವಂತ ಮಕ್ಕಳ ಮುಖ ನೋಡುವಾಗ ಇವರಿಗೊಂದು ಒಳ್ಳೆಯ ಕೆಲಸ ದೊರೆಯಲಿ ದೇವರೇ ಎಂದು ಪ್ರಾರ್ಥಿಸುವಂತಾಗುತ್ತಿದೆ.ಮೊದಲೆಲ್ಲ ಈ ಆತಂಕ ನನಗಿರಲಿಲ್ಲ.ನಾನು ಲಿಖಿತ ಪರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ಆಯ್ಕೆ ಆಗಿದ್ದೆನಲ್ಲ.ಹಾಗೆಯೇ ಇವರೂ ಗೆಲ್ಲವರು ಎಂಬ ದೃಢ ನಂಬಿಕೆ ನನಗಿತ್ತು.ಆದರೆ ಭ್ರಷ್ಟಾಚಾರ ಎಲ್ಲೆಡೆ ಹರಡಿದೆ.ಇದನ್ನು ಬುಡ ಸಹಿತ ಕತ್ತರಿಸಿದರೆ ಮಾತ್ರ ಭಾರತಕ್ಕೆ ಭವಿಷ್ಯವಿದೆ 

ಡಾ.ಲಕ್ಷ್ಮೀ ಜಿ ಪ್ರಸಾದ್ ,ಕನ್ನಡ ಉಪನ್ಯಾಸಕರು ಸರ್ಕಾರಿ ಪಿಯು ಕಾಲೇಜು,ಬ್ಯಾಟರಾಯನಪುರ,ಬೆಂಗಳೂರು



ಆತ್ಕಕಥೆಯ ಬಿಡಿ ಭಾಗಗಳು ಗಲ್ ನೋಟೀಸಿಗೆ ನಾನು ನೀಡಿದ ಉತ್ತರ




















 ಲೀಗಲ್ ನೋಟೀಸಿಗೆ ನಾನು ನೀಡಿದ ಉತ್ತರ









..

ಅನೇಕರು ಕುತೂಹಲದಿಂದ ಲೀಗಲ್ ನೋಟೀಸಿಗೆ ನೀವು ಲಾಯರ್ ಮೂಲಕ ಉತ್ತರ ಕೊಟ್ಟಿರಾ ? ಅಥವಾ ನೀವೇ ಉತ್ತರಿಸಿದಿರಾ? ಏನೆಂದು ಉತ್ತರಿಸಿದ್ದೀರಿ ?  ಎಂದು ಕೇಳಿದ್ದಾರೆ ,ಇದರಲ್ಲಿ ಮುಚ್ಚುಮರೆ ಮಾಡುವದ್ದು ಏನೂ ಇಲ್ಲ.ಇರುವುದನ್ನು ಇರುವ ಹಾಗೆಯೇ ಬರೆದು ಉತ್ತರಿಸಿದ್ದೆ.

ಈ ಬಗ್ಗೆ ತಿಳಿಯಲು ಆಸಕ್ತಿ ಇರುವವರಿಗಾಗಿ ಇಲ್ಲಿ ಕಾಪಿ ಪೇಸ್ಟ್ ಮಾಡಿರುವೆ,ಮುಂದಕ್ಕೆ ಲೀಗಲ್ ನೋಟೀಸ್ ಮತ್ತು ಅದಕ್ಕೆ ನೀಡಿರುವ ಉತ್ತರ ತದನಂತರದ ಹೆಜ್ಜೆಗಳು ಎಲ್ಲವೂ ಆತ್ಮಕಥೆಯಲ್ಲಿ ಸೇರಲಿವೆ.


ಅರುಣಶ್ಯಾಮ್ ಅಸೋಸಿಯೇಟ್ಸ್  ನೀಡಿದ ಲೀಗಲ್ ನೋಟೀಸಿಗೆ    ಉತ್ತರ


ನಮಸ್ಕಾರ,

ನಾನು ಡಾ.ಲಕ್ಷ್ಮೀ ಜಿ‌ ಪ್ರಸಾದ್,ಕನ್ನಡ ಪ್ರಾಧ್ಯಾಪಕರು ,ಸರ್ಕಾರಿ ಪಿಯು ಕಾಲೇಜು ಬ್ಯಾಟರಾಯನ ಪುರದ ವಿಳಾಸಕ್ಕೆ ಕೆಲ ದಿನಗಳ ಹಿಂದೆ ತಾವು ಕಳುಹಿಸಿದ ಲೀಗಲ್ ನೋಟೀಸ್ ರಿಜಿಸ್ಟರ್ಡ್ ಪೋಸ್ಟ್ ಮೂಲಕ ಬಂತು.ಒಂದು ಕ್ಷಣ ಸ್ವೀಕರಿಸಲೇ ಬೇಡವೇ ಎಂಬ ತೊಳಲಾಟ ನನ್ನನ್ನು ಕಾಡಿತು ಯಾಕೆಂದರೆ ಪಿಯು ಕಾಲೇಜಿನ ಉಪನ್ಯಾಸಕರು ಎಂದಿಗೂ ಪ್ರಾಧ್ಯಾಪಕರಾಗುವುದಿಲ್ಲ.ಎನ್ ಇ ಟಿ,ಡಾಕ್ಟರೇಟ್ ಪದವಿಗಳನ್ನು ಪಡೆದಿದ್ದರೂ  ಸೇರುವಾಗ ಉಪನ್ಯಾಸಕರಾದವರು ನಿವೃತ್ತಿಯಾಗುವಾಗಲೂ ಉಪನ್ಯಾಸಕರೇ ಅಗಿರಬೇಕಾಗಿದೆ.ನಾವೆಂದಿಗೂ ಗೈಡ್ ಆಗಲು ಆಗುವುದಿಲ್ಲ.ಸಂಶೋಧನಾ ತಂಡವನ್ನು ಹದಿನಾರು ಹದಿನೇಳು ವಯಸ್ಸಿನ‌ಮಕ್ಕಳ ಜೊತೆ ಕಟ್ಟಲಾಗುವುದಿಲ್ಲ


ಇಲ್ಲಿ ಪ್ರಾಧ್ಯಾಪಕರಾಗಿ ಭಡ್ತಿ ಕೊಡುವ ಪದ್ಧತಿ ಇಲ್ಲ


ಇದೇ ಕಾರಣಕ್ಕಾಗಿ ನಾನು ಮೊದಲೇ ಸರ್ಕಾರಿ ಉದ್ಯೋಗದಲ್ಲಿದ್ದರೂ ಕೂಡ ಮಂಗಳೂರು ಯೂನಿವರ್ಸಿಟಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದೆ


ನಾನು ಎಂಎ( ಕನ್ನಡ )77% ನಾಲ್ಕನೆಯ ರ‌್ಯಾಂಕ್ ಎಂಎ( ಸಂಸ್ಕೃತ) ಮೊದಲ ರ‌್ಯಾಂಕ್ ಎಂಎ(ಹಿಂದಿ) ಎಂಫಿಲ್ ಹಾಗೂ ಎರಡು ಡಾಕ್ಟರೇಟ್ ಪದವಿಗಳನ್ನು ಪಡೆದಿರುವೆ.ಜೊತೆಗೆ ಅರ್ಜಿ ಸಲ್ಲಿಸುವ ಸಮಯಕ್ಕಾಗುವಾಗಲೇ 250 ಕ್ಕೂಹೆಚ್ಚಿನ ಅಂತರಾಷ್ಟ್ರೀಯ ರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಮಾಡಿದ್ದೆ.ಆಗ ನನ್ನ 17 ಸಂಶೋಧನಾ ಕೃತಿಗಳೂ ನೂರಕ್ಕೂಹೆಚ್ಚು ಸಂಶೋದನಾ ಬರಹಗಳು ಐದು ನೂರರಷ್ಟು ಇತರ ಬರಹಗಳು ಪ್ರಕಟವಾಗಿದ್ದು ಯುಜಿಸಿ ಗೈಡ್ ಲೈನ್ ನಂತೆ ಲೆಕ್ಕ ಹಾಕಿದಾಗ 1154 ರಷ್ಟು ಶೈಕ್ಷಣಿಕ ನಿರ್ವಹಣಾಂಕ( academic performance indicators) ಗಳನ್ನು ಗಳಿಸಿದ್ದು  ಅರ್ಜಿಯಲ್ಲಿ ಡಿಕ್ಲೇರ್ ಮಾಡಿರುವೆ.


 ಶೈಕ್ಷಣಿಕ ನಿರ್ವಹಣಾಂಕಗಳನ್ನು ಆಧರಿಸಿ   ಹತ್ತು ಜನ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿದ್ದರು‌.ನನಗೂ ಆಹ್ವಾನ ಬಂದಿತ್ತು.ನಾನೂ ಸಂದರ್ಶನಕ್ಕೆಹಾಜರಾದೆ.ಎಲ್ಲರಿಗಿಂತ ಹೆಚ್ಚು‌ ಅರ್ಹತೆಗಳಿಸಿದ್ದಕಾರಣ ನನಗೆ ಮೊದಲು ಸಂದರ್ಶನ ಇತ್ತು


ಒಟ್ಟು ನೂರು ಅಂಕಗಳಲ್ಲಿ ಇಪ್ಪತ್ತು ಅಂಕಗಳು ರಿಸರ್ಚ್ ಪರ್ಪಾರ್ಮೆನ್ಸ್ ವಿಭಾಗಕ್ಕೆ ಇತ್ತು.ಇಲ್ಲಿ ಒಂದುಸಂಶೋಧನಾ  ಪುಸ್ತಕಕ್ಕೆ ಐದು ಅಂಕ  ಒಂದು ಅಂಕ,ರಾಷ್ಟ್ರೀಯ ಸಂಶೋದನಾಪತ್ರಿಕೆಗಳಲ್ಲಿ ಪ್ರಕಟಿತ ಬರಹಕ್ಕೆ ಒಂದು ಅಂಕ ಎಂದುಯುಜಿಸಿ ನಿಗದಿ ಪಡಿಸಿದ್ದು.ಇದನ್ನುಯೂನಿವರ್ಸಿಟಿ statue of conduct interview ನಲ್ಲಿ ಯೂನಿವರ್ಸಿಟಿಯೂ ವೆಬ್ ನಲ್ಲಿ  ಹಾಕಿತ್ತು.ಸಂಶೋಧನಾ ಕೃತಿ ಮತ್ತು ಬರಹಗಳಿಗೆ ಮಾತ್ರ ಅಂಕ ನೀಡಬೇಕು ಎಂಬ ಸ್ಪಷ್ಟ ಉಲ್ಲೇಖವೂ ಯುಜಿಸಿ ಗೈಡ್ ಲೈನ್ಸ್ ನಲ್ಲಿ ಇವೆ.


ಇದರಂತೆ ನನಗೆ ಹದಿನೇಳು ಸಂಶೋಧನಾ ಪುಸ್ತಕಗಳು ಪ್ರಕಟಗೊಂಡಿರುವ ಕಾರಣ ರಿಸರ್ಚ್ ಫರ್ಪಾರ್ಮೆನ್ಸ್  ವಿಭಾಗದಲ್ಲಿ  ಗರಿಷ್ಟ 20 ಅಂಕಗಳು ದೊರೆಯಬೇಕಾಗಿತ್ತು.ದೊರೆತಿದೆ  ಕೂಡ.


ಆದರೆ ಇಲ್ಲಿ ನನ್ನ ಬದಲಿಗೆ ಆಯ್ಕೆಯಾದ ಧನಂಜಯ ಕುಂಬಳೆ ಅವರು ಅವರೇ ಅರ್ಜಿಯಲ್ಲಿ ಡಿಕ್ಲೇರ್ ಮಾಡಿಕೊಂಡಂತೆ ಅವರ ಎರಡು ಸಂಶೋಧನಾ ಕೃತಿಗಳು ಮಾತ್ರ ಪ್ರಕಟವಾಗಿದ್ದು ಒಂದು ಪಿಎಚ್ ಡಿ ಪ್ರಬಂಧವಾಗಿದೆ.ಕನ್ನಡದಲ್ಲಿ ರಾಷ್ಟ್ರೀಯಾಂತರಾಷ್ಟ್ರೀ ಸಂಶೋಧನಾ ಪತ್ರಿಕೆಗಳು ಇಲ್ಲ.ಹಾಗಾಗಿ ಲೇಖನಗಳಿಗೆ ಯಾರಿಗೂ ಅಂಕ ಸಿಗುವುದಿಲ್ಲ.


ಧನಂಜಯರ ಎರಡು ಕೃತಿಗಳಲ್ಲಿ ಒಂದು ಪಿಎಚ್ ಡಿ ಪ್ರಬಂಧವಾಗಿದ್ದು ಅದಕ್ಕೆ ಅಕಾಡೆಮಿಕ್ ವಿಭಾಗದಲ್ಲಿ ಹತ್ತು ಅಂಕಗಳನ್ನು ನೀಡಿದ್ದಾರೆ.ಹಾಗಾಗಿ ರಿಸರ್ಚ್ ಪರ್ಫಾರ್ಮೆನ್ಸ್ ವಿಭಾಗದಲ್ಲಿ ಅವರು ಕೇವಲ ಐದು ಅಂಕಕ್ಕೆ ಅರ್ಹರಿದ್ದರು


ಆದರೆ ಸಂದರ್ಶನವೆಂಬ ನಾಟಕದಲ್ಲಿ ಆಯ್ಈಕೆ ಸಮಿತಿಯವರು   ರಿಸರ್ಚ  ಫರ್ಫಾರ್ಮೆನ್ಸ್ ವಿಭಾಗದಲ್ಲಿ  ಹೆಚ್ಚುವರಿಯಾಗಿ 15 ಅಂಕಗಳನ್ನು ನೀಡಿ  ಅವರಿಗೆ ಗರಿಷ್ಠ 20 ಅಂಕಗಳನ್ನು ನೀಡಿದ್ದಾರೆ


.ಅವರು ಗಳಿಸಿದ ಒಟ್ಟು 69.4ಅಂಕಗಳಿಂದ ಇಲ್ಲಿ ಹೆಚ್ಚುವರಿಯಾಗಿ ನೀಡಿದ ಹದಿನೈದು ಅಂಕಗಳನ್ನು ಕಳೆದರೆ ಅವರಿಗೆ 54.4 ಅಂಕ ಮಾತ್ರ ಸಿಗುತ್ತದೆ.ಎಂದರೆ ಅವರು ಇಷ್ಟಕ್ಕೆ ಮಾತ್ರ ಅರ್ಹರಾಗಿದ್ದರು.ಹದಿನೈದು ಅಂಕಗಳನ್ನುಈ ವಿಭಾಗದಲ್ಲಿ ಅರ್ಹತೆ ಇಲ್ಲದೇ ಇರುವಾಗ ಕೂಡ  ಹೆಚ್ಚು ಕೊಟ್ಟು ಅವರನ್ನು ಆಯ್ಕೆ ಮಾಡಿದ್ದಾರೆ.ಇದರಿಂದಾಗಿ ನನಗೆ ಅನ್ಯಾಯವಾಗಿದೆ .ನನಗೆ 66 ಅಂಕಗಳ ನ್ನು ನೀಡಿದ್ದರು.


ಮೂರು ಸ್ನಾತಕೋತ್ತರ ಪದವಿಗಳು,ಅದರಲ್ಲಿ ಗಳಿಸಿದ ಅಂಕಗಳು,ಸಂಶೋಧನಾ ಪ್ರಕಟಣೆ,ಸಂಶೋಧನಾ ಪ್ರಬಂಧ ಮಂಡನೆ ಎಲ್ಲದರಲ್ಲೂ ನಾನೇ ಹೆಚ್ಚಿನವಳಾಗಿದ್ದರೂ ಆಯ್ಕೆಯಲ್ಲಿ ಅಕ್ರಮ ,ಅನ್ಯಾಯಗಳು ನಡೆದ ಕಾರಣ ನಾನು ಆಯ್ಕೆ ಆಗದೆ ನನಗಿಂತ ಕಡಿಮೆ ಅರ್ಹತೆಯ ಧನಂಜಯ ಕುಂಬಳೆ ಅವರು ಆಯ್ಕೆ ಆಗಿದ್ದರು


ಈ ಬಗ್ಗೆ ನಾನು ಸುಪ್ರೀಂ ಕೋರ್ಟ್ ತನಕ ಹೋಗಿದ್ದರೂ ನನಗೆ ಗೆಲವು ಸಿಗಲಿಲ್ಲ ಯಾಕೆಂದರೆ ನ್ಯಾಯಾಲಯ ನನಗೆ ಹೆಚ್ಚಿನ ಅರ್ಹತೆ ಇಲ್ಲವೆಂದಿಲ್ಲ.ಬದಲಿಗೆ ಅರ್ಹತೆಯನ್ನು ನಿರ್ಣಯಿಸುವುದು ಆಯ್ಕೆ ಸಮಿತಿ.ಅದರಲ್ಲಿ ನ್ಯಾಯಾಲಯಕ್ಕೆ ತಲೆಹಾಕಲು ಬರುವುದಿಲ್ಲ ಎಂದು ತೀರ್ಪು ನೀಡಿದೆ


ಇದು ನಮ್ಮಲ್ಲಿನ ಕಾನೂನಿನ ಪರಿಮಿತಿ  ಇರಬಹುದು.ಆದರೆ ದುಡ್ಡು influenceಗೆ ಒಳಗಾಗಿ ಯುಜಿಸಿ‌ ಮಾರ್ಗದರ್ಶಕ ಸೂತ್ರಗಳನ್ನು ಉಲ್ಲಂಘಸಿ ಹೆಚ್ಚು ಅರ್ಹರನ್ನು ಬಿಟ್ಡುಕಡಿಮೆ ಅರ್ಹರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದ್ದುಅನ್ಯಾಯ ಎಸಗಿದ್ದು  ಇದಕ್ಕೆ ಪರಿಹಾರವೇನು ? ಇದು ನನಗೆ ಮಾತ್ರವಲ್ಲ ಇಲ್ಲಿ ಸಂದರ್ಶನಕ್ಕೆ ಬಂದ ಹೆಚ್ಚು ಅರ್ಹತೆ ಇದ್ದೂ ಆಯ್ಕೆಯಾಗದವರ ಎಲ್ಲರ ಪ್ರಶ್ನೆ.ಇಂದಿಗೂ ಎಂದಿಗೂ ಉತ್ತರ ಸಿಗದ ಸಿಗಲಾರದ ಪ್ರಶ್ನೆಯಾಗಿದೆ.


ಮಂಗಳೂರು ಯೂನಿವರ್ಸಿಟಿಯಲ್ಲಿ 2013 ರಲ್ಲಿ ನಡೆದ ನೇಮಕಾತಿಯಲ್ಲಿ ವ್ಯಾಪಕ  ಅಕ್ರಮ‌ ಅವ್ಯಹಾರಗಳುಭ್ರಷ್ಟಾಚಾರ  ನಡೆದ ಬಗ್ಗೆ ಆ ಸಮಯದಲ್ಲಿ ಟಿವಿಗಳಲ್ಲಿ ಪತ್ರಿಕೆಗಳಲ್ಲಿಯೂ ಬಂದಿತ್ತು


ಆಗ ಮಂಗಳೂರು ಯೂನಿವರ್ಸಿಟಿಯ  ರಿಜಿಸ್ಟ್ರಾರ್ ಆಗಿದ್ದ ಈಗ ಅದೇ ಯೂನಿವರ್ಸಿಟಿಯ  ವೀಸಿಗಳಾಗಿರುವ ಡಾ.ಸುಬ್ರಹ್ಮಣ್ಯ ಎಡಪಡಿತ್ತಾಯರೂ ಕೂಡ  "ಆಗಿನ ವೀಸಿ‌ ಶಿವಶಂಕರ ಮೂರ್ತಿಯವರು ರಿಜಿಸ್ಟ್ರಾರನ್ನು ನೇಮಕಾತಿ ಪ್ರಕ್ರಿಯೆಯಿಂದ ಹೊರಗಿರಿಸಿ ಕೆಲ ಕ್ಲರ್ಕ್ ಹಾಗೂ ಇನ್ಯಾರನ್ನೋ ಸೇರಿಸಿಕೊಂಡು‌ ಅಲ್ಲಿ ವ್ಯಾಪಕ ಅಕ್ರಮ,ಅನ್ಯಾಯ  ಭ್ರಷ್ಟಾಚಾರವನ್ನು ಮಾಡಿ ಅರ್ಹರನ್ನು ಬಿಟ್ಟು ಅನರ್ಹರನ್ನು ಆಯ್ಕೆ ಮಾಡಿದ ಬಗ್ಗೆ" ಮುಕ್ತವಾಗಿ ತಿಳಿಸಿದ್ದಾರೆ


ಆಗಿನ ಇಬ್ಬರ ಅಕ್ರಮ ನೇಮಕಾತಿ ರದ್ದಾಗಿ .ಆಗಿನ ನೇಮಕಾತಿಯ ಅಕ್ರಮದ ಬಗ್ಗೆ ಕೋರ್ಟಿಗೆ ಹೋದವರಿಗೆ ಈ ಹುದ್ದೆಗಳು ಸಿಕ್ಕಿವೆ ಇನ್ನೂ ಅನೇಕರು ಕೋರ್ಟಿಗೆ ಹೋಗಿದ್ದು ತೀರ್ಪಿಗೆ ಕಾಯುತ್ತಿದ್ದಾರೆ ಎಂಬ ಬಗ್ಗೆಯೂ ಆಗ ರಿಜಿಸ್ಟ್ರಾರ್ ಆಗಿದ್ದ ಈಗ ವೀಸಿಗಳಾಗಿರುವ ಡಾ.ಸುಬ್ರಹ್ಮಣ್ಯ  ಎಡಪಡಿತ್ತಾಯರು ಹೇಳಿದ್ದಾರೆ


.ಈ ಬಗ್ಗೆ ದಾಖಲೆ ಬೇಕಾಗಿದ್ದರೆ ಒದಗಿಸಬಲ್ಲೆ ಆದರೆ ಅದರ ಅಗತ್ಯವೇನಿದೆ ? ತಾವು ಅಥವಾ ತಮ್ನ ಕಕ್ಷಿದಾರರು ಅವರಲ್ಲಿಯೇ ಈ ಬಗ್ಗೆ  ವಿಚಾರಿಸಬಹುದು


ಇನ್ನು ನನ್ನ ಕರಾವಳಿಯ ಪುಸ್ತಕದಲ್ಲಿ ನನಗಾದ ಅನ್ಯಾಯ ಅದರಿಂದಾದ ನನ್ನ ನೋವನ್ನು ಹಂಚಿಕೊಂಡಿದ್ದೇನೆ.ಅಲ್ಲಿ ಹಾಕಿದ ಎಲ್ಲ ವಿಚಾರಗಳೂ  ನೂರಕ್ಕೆ ನೂರು ನಿಜವಾದುದು


ಹಾಗಾಗಿ ತಮ್ಮ‌ ಕಕ್ಷಿದಾರರಾದ ರಿಜಿಸ್ಟ್ರಾರರು  ನನಗಾದ ಅನ್ಯಾಯಕ್ಕೆ  ನೈತಿಕವಾಗಿ  ವಿಷಾದ ವ್ಯಕ್ತಪಡಿಸಬಹುದಿತ್ತು..ಬದಲಿಗೆ ನನ್ನಿಂದ ಕ್ಷಮಾಪಣೆ ಬಯಸಿದ್ದು ಅಚ್ಚರಿ ತರಿಸಿದೆ


ಕ್ಷಮೆ ಯಾಚಿಸುವಂತಹ ಯಾವುದೇ ತಪ್ಪನ್ನು ನಾನು ಎಸಗಿರುವುದಿಲ್ಲ.ನಡೆದಿರುವ ಸತ್ಯದ ವಿಚಾರಗಳನ್ನು ಪುಸ್ತಕದಲ್ಲಿ ಬರೆಯುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಮಗೆ ನಮ್ಮ ಸಂವಿಧಾನ ನೀಡಿದೆ.ಅಕ್ರಮ ಮಾಡಬಹುದು.ಹೇಳಬಾರದು ಎಂದರೆ ಹೇಗೆ ? ತಮ್ಮ‌ ಕಕ್ಷಿದಾರರೇ ವಿವೇಚಿಸಲಿ


ಅಂದ ಹಾಗೆ ಮಂಗಳೂರು ಯುನಿವರ್ಸಿಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಹೋಗುವ ಸಲುವಾಗಿ ವಕೀಲರಾಗಿದ್ದ ತಮ್ಮನ್ನು ( ಅರುಣ ಶ್ಯಾಮರನ್ನು)ನಾನು ಸಂಪರ್ಕಿಸಿದ್ದು ತಮ್ಮ ಫೀಸ್ ಎರಡು ಲಕ್ಷ ರುಪಾಯಿ ಎಂದಿದ್ದೀರಿ ಕೂಡ


ಇಷ್ಟು ಶುಲ್ಕ ನನ್ನಿಂದ ಭರಿಸಲು ಸಾಧ್ಯವಿಲ್ಲವೆಂದು ಸ್ವಲ್ಪ ಕಡಿಮೆಗೆ ಒಪ್ಪಿದ ಪರೀಕ್ಷಿತ್ ಅಂಗಡಿ ಎಂಬ ವಕೀಲರ ಮೂಲಕ ನಾನು ಸುಪ್ರೀಂಕೋರ್ಟಿಗೆ ಹೋದೆನಾದರೂ ಜಯಗಳಿಸಲು ಸಾಧ್ಯವಾಗಿಲ್ಲ.ಇಲ್ಲೆಲ್ಲ ಹೈ ಕೋರ್ಟಿನ ತೀರ್ಪನ್ನು ಒಪ್ಪಿದ್ದರು


ಹೀಗೆ ಹೈ ಕೋರ್ಟ. ,ಡಬಲ್  ಬೆಂಚ್ ಸುಪ್ರೀಂ ಕೋರ್ಟ್ ಎಂದು ಕೋರ್ಟ್ ಕಛೇರಿಗೆ ಅಲೆಯುವ ಬದಲು ಲಾಯರುಗಳಿಗೆ ಲಕ್ಷಗಟ್ಟಲೆ ಶುಲ್ಕ ನೀಡುವ ಬದಲು ಅದನ್ನೇ ಲಂಚವಾಗಿ ನೀಡಿದ್ದರೆ ನಾನಿಂದು ಪ್ರೊಫೆಸರಾಗಿರುತ್ತಿದ್ದೆ.ಆದರೆ ಎಂದಿಗೂ ಅನ್ಯಾಯದ ಹಾದಿಯನ್ನು ತುಳಿಯದ ನನಗೆ ಅದಾಗದು  ಎಂಬುದೂ ನನ್ನ ಮನದಾಳದ ಮಾತು


ಎಲ್ಲೆಡೆ ಭ್ರಷ್ಟಾಚಾರ ನಡೆದರೆ ಬಡ ಪ್ರತಿಭಾವಂತರ ಪಾಡೇನು ? ಇದೂ ಕೂಡ ಉತ್ತರ ಸಿಗದ ಪ್ರಶ್ನೆ


ನನಗೇನೋ ಬದುಕಲು ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕ ವೃತ್ತಿ ಇದೆ.ಆದರೆ ಇತರ ಬಡ ಪ್ರತಿಭಾವಂತರ ಪಾಡೇನು ? ನಮ್ಮ ವಿದ್ಯಾರ್ಥಿಗಳಿಗೆ ಚೆನ್ನಾಗಿ ಓದಿ ಉತ್ತಮ ಅಂಕ ಗಳಿಸಿ ರ‌್ಯಾಂಕ್ ತೆಗೆಯಿರಿ ಒಳ್ಳೆಯ ಕೆಲಸ ಸಿಗುತ್ತದೆ ಎಂದು ಹೇಳುವಾಗೆಲ್ಲ ಸರ್ಕಾರಿ ಹುದ್ದೆಗಳ ಆಯ್ಕೆಯಲ್ಲಿ ನಡೆಯುವ ಅಕ್ರಮ ,ವ್ಯಾಪಕ ಭ್ರಷ್ಟಾಚಾರ ನೆನಪಾಗಿ ಧ್ವನಿ ಕಂಪಿಸುತ್ತದೆ


ಹಾಗಾಗಿಯೇ ನನಗಾದ ನೋವನ್ನು ನಾನು ನನ್ನ ಅಧ್ಯಯನ ಕೃತಿ ಕರಾವಳಿಯ ಸಾವಿರದೊಂದು ದೈವಗಳು ನ ಮನದಾಳದ ಮಾತಿನಲ್ಲಿ ನನ್ನ ಪುಸ್ತಕದ ಓದುಗರೊಂದಿಗೆ ಹಂಚಿಕೊಂಡಿರುವೆ


ಇದರಲ್ಲಿ ತಮ್ಮ ಕಕ್ಷಿದಾರರಿಗೆ ಏನು ತಪ್ಪು ಕಂಡಿದೆಯೋ ನನಗರಿವಾಗಿಲ್ಲ.ಬಹು಼ಶಃ ಈಗಿನ ರಿಜಿಸ್ಟ್ರಾರಿಗೆ ಹತ್ತು ವರ್ಷ ಹಿಂದೆ ನಡೆದ ನೇಮಕಾತಿಯಲ್ಲಿನ ಅಕ್ರಮ ,ವ್ಯಾಪಕ ಭ್ರಷ್ಟಾಚಾರಗಳ ಅರಿವಿಲ್ಲ ಎಂದೆನಿಸುತ್ತದೆ.ಆದರೆ ಆಗ ರಿಜಿಸ್ಟ್ರಾರ್ ಆಗಿದ್ದು ಈಗ ವೀಸಿಗಳಾಗಿರುವ ಡಾ.ಸುಬ್ರಹ್ಮಣ್ಯ ಎಡಪಡಿತ್ತಾಯರಿಗೆ ಆಗ ನಡೆದ ಅಕ್ರಮಗಳ ,ಅನ್ಯಾಯಗಳ,ವ್ಯಾಪಕ ಭ್ರಷ್ಟಾಚಾರದ  ಅರಿವಿದೆ.ಅದನ್ನವರು  ನನ್ನಲ್ಲಿ ಮಾತನಾಡುವಾಗ ಒಪ್ಪಿಕೊಂಡಿದ್ದಾರೆ ಕೂಡ.


ನಿಮ್ಮ ಕಕ್ಷಿದಾರರು ಸರ್ಕಾರದ ದುಡ್ಡಿನಲ್ಲಿ ನನ್ನ ವಿರುದ್ಧ ಕೋರ್ಟಿಗೆ ಹೋದರೆ ಇವರದೇ ಪ್ರಬಲ ಸಾಕ್ಷ್ಯವಾಗುತ್ತದೆ


ಹಾಗಾಗಿ ಮಾನ್ಯ ವೀಸಿಗಳಾದ ಡಾ.ಯಡಪಡಿತ್ತಾಯರಲ್ಲಿ ಆಗ ನಡೆದ ಭ್ರಷ್ಟಾಚಾರದ ಅನ್ಯಾಯಗಳ ಬಗ್ಗೆ  ವಿಚಾರಿಸಿ ಮುಂದುವರಿಯುವಂತೆ ತಮ್ಮ ಕಕ್ಷಿದಾರರಿಗೆ ತಿಳಿಸಿ 


ಯುನಿವರ್ಸಿಟಿಯೋ ಅಕಾಡೆಮಿಯೋ ಮಾಡಬೇಕಾಗಿದ್ದ ವ್ಯಾಪಕ ಕ್ಷೇತ್ರ ಕಾರ್ಯದ ಅಗತ್ಯವಿದ್ದ ಬಹು ಪರಿಶ್ರಮದ ಭೂತಾರಾಧನೆಯ ಅಧ್ಯಯನವನ್ನು ನಾನು ಸ್ವಂತ ಖರ್ಚಿನಿಂದ ಮಾಡಿ ಪ್ರಕಟಿಸಿದಾಗ ಓದಿದ  ಯೂನಿವರ್ಸಿಟಿಯ  ರಿಜಿಸ್ಟ್ರಾರ್ ಮೆಚ್ಚುತ್ತಿದ್ದರು..ಬಹುಶಃ ಅವರು ಮನದಾಳದ ಮಾತನ್ನು ಮಾತ್ರ ಓದಿರಬೇಕು.ಇಡೀ ಪುಸ್ತಕವನ್ನು ಅಥವಾ ಕೊನೆಯ ಪಕ್ಷ ಅದರ ಪರಿವಿಡಿಯನ್ನೂ ಓದಲಿಲ್ಲವೋ ಏನೋ..ಇರಲಿ ಯಾರದೇ ಮೆಚ್ಚುಗೆ ಅಥವಾ ದೂಷಣೆಗಾಗಿ ನಾನು ಅಧ್ಯಯನ ಮಾಡಿ ಪ್ರಕಟಿಸಿಲ್ಲ.ಇದು ನನ್ನ ಸ್ವಂತ ಆತ್ಮ ತೃಪ್ತಿಗಾಗಿ ಮಾಡಿದ್ದು.ಇದರಲ್ಲಿ ನನಗಾದ ಅನ್ಯಾಯ ನೋವನ್ನು ಹಂಚಿಕೊಳ್ಳುವ ಅಭಿವ್ಯಕ್ತಿ ಸ್ವಾತಂತ್ರ್ಯ ನನಗಿದೆ ಎಂಬುದನ್ನು ತಮ್ಮ ಕಕ್ಷಿದಾರರಿಗೆ ನೀವು ತಿಳಿಸಬೇಕಾಗಿ ಕೋರುವೆ..ಅವರು ಆಗ ರಿಜಿಸ್ಟ್ರಾರ್ ಆಗಿದ್ದ ಈಗ ವೀಸಿಗಳಾಗಿರುವ ಡಾ.ಪಿ ಎಸ್ ಯಡಪಡಿತ್ತಾಯರಲ್ಲಿ ಆಗ ನಡೆದ ಭ್ರಷ್ಟಾಚಾರದ ಬಗ್ಗೆ ವಿಚಾರಿಸಿದರೆ ಮುಕ್ತ ಮಾಹಿತಿ ಅವರಿಗೆ ಸಿಕ್ಕಿ,ನಾನು ಬರೆದದ್ದು ಸರಿಯಾಗಿದೆ ಎಂದು ಮನವರಿಕೆಯಾಗಬಹುದು ಹಾಗಾಗಿ ಅವರಲ್ಲೊಮ್ಮೆ ವಿಚಾರಿಸಲು ತಿಳಿಸಬೇಕಾಗಿ ಕೋರುವೆ 


ನನ್ನ 21 ವರ್ಷದ ಅಧ್ಯಯನದ ಫಲವಾದ , ಸಾವಿರಕ್ಕಿಂತ ಹೆಚ್ಚು ಪುಟಗಳ 1228 ದೈವಗಳ ಮಾಹಿತಿ ಇರುವ 2000₹ ಬೆಲೆಯ ಪುಸ್ತಕವನ್ನು ಖರೀದಿಸಿ ಓದಿದ್ದಕ್ಕಾಗಿ ಧನ್ಯವಾದಗಳು


ಡಾ.ಲಕ್ಷ್ಮೀ ಜಿ ಪ್ರಸಾದ್ 


ಮೊಬೈಲ್ 9480516684 

e mail : samagramahithi@gmail.com

blogs : http:// laxmipras.blogspot.com

  http:// shikshanaloka.blogspot.com

   http://laxmihavyaka.blogspot.com

Tuesday, 24 June 2025

ಆತ್ಮ‌ಕಥೆಯ ಬಿಡಿ ಭಾಗಗಳು ಅನುಭವ ಆಗಲು ಏನು ಮಾಡಬೇಕು ?

 ಆತ್ಮ‌ಕಥೆಯ ಬಿಡಿ ಭಾಗಗಳು 


ಅನುಭವ ಆಗಲು ಏನು ಮಾಡಬೇಕು ?


ಹೌದು..ಹೀಗೊಂದು ತಲೆಬಿಸಿ ಮಾಡ್ತಾ ಇದ್ದ ಕಾಲ ಒಂದಿತ್ತು..


ನಾನು ಎರಡನೆಯ ವರ್ಷ ಬಿಎಸ್ ಸಿ ಪದವಿ ಓದುತ್ತಿರುವಾಗಲೇ ನನಗೆ ಮದುವೆಯಾಯಿತು..ಚಿಕ್ಕಂದಿನಿಂದಲೂ ಬರವಣಿಗೆಯ ಹವ್ಯಾಸ ಇದ್ದ ನನ್ನ ಬರಹಗಳು ಒಂದೊಂದಾಗಿ ಹೊಸ ದಿಗಂತ ಉದಯವಾಣಿ ಮಂಗಳ ಮೊದಲಾದ ಪತ್ರಿಕೆಗಳಲ್ಲಿ ಪ್ತಕಟವಾಗತೊಡಗಿದ್ದವು..


ದಕ್ಷಿಣ ಕನ್ನಡದ ಹಿರಿಯ ಸಾಹಿತಿ ಗಂಗಾ ಪಾದೇಕಲ್ಲು ನನ್ನ ಗಂಡ ಪ್ರಸಾದರ ಸಂಬಂಧಿ..ಒಂದು ದಿನ ಯಾವುದೋ ಕೌಟುಂಬಿಕ ಕಾರ್ಯಕ್ರಮದಲ್ಲಿ ಭೇಟಿಯಾದವರು ನನ್ನ ಬರವಣಿಗೆಗೆ ಮೆಚ್ಚುಗೆ ಸೂಸಿ ಬರಹಕ್ಕೆ ಅನುಭವದ ತಳಹದಿ ಇದ್ದರೆ ಇನ್ನಷ್ಡು ಗಟ್ಟಿಯಾಗುತ್ತದೆ ಎಂದಿದ್ದರು


ಈ ಅನುಭವವನ್ನು ಪಡೆಯುವುದು ಹೇಗೆ ಎಂಬುದೊಂದು ತಲೆಬಿಸಿ ಶುರು ಆಯಿತು ನನಗೆ.ಚಿಕ್ಕಂದಿನಲ್ಲಿ ಶಾಲಾ ಪ್ರಬಂಧದಲ್ಲಿ  ಪ್ರವಾಸ ಮಾಡಿದರೆ ಬೇರೆ ಬೇರೆ ಊರಿನ ಜನರ ಸಂಸ್ಕೃತಿಯ ಪರಿಚಯ ಆಗುತ್ತದೆ.ಅನುಭವ  ದೊರೆಯುತ್ತದೆ ಎಂದು ಬರೆದಿದ್ದೆ.ಅದು ನೆನಪಾಯಿತು.


ನೆನಪಾಗಿಯೂ ಏನೂ ಪ್ರಯೋಜನವಿಲ್ಲದಾಯಿತು..

ಮೊದಲಿಗೆ ಪ್ರವಾಸ ಮಾಡುವಷ್ಟು ದುಡ್ಡು ನಮ್ಮಲ್ಲಿ ಇರಲಿಲ್ಲ.ಅಲ್ಲದೆ ನಾನು ವಿದ್ಯಾರ್ಥಿಯಾಗಿದ್ದು ಪ್ರವಾಸ ಹೋಗಲು ರಜೆಯದ್ದೂ ಸಮಸ್ಯೆಯೇ..ಎಲ್ಲಕ್ಕಿಂತ ಹೆಚ್ಚು ಟ್ರಾವೆಲಿಂಗ್ ಸಿಕ್ ನೆಸ್ ಇರುವ ನನಗೆ ಪ್ರವಾಸ ಬಹಳ ಪ್ರಯಾಸವಾಗಿ ಪರಿಣಮಿಸುತ್ತದೆ.ಹಾಗಾಗಿ ಪ್ರವಾಸದತ್ತ ನನಗೆ ಒಲವಿರಲಿಲ್ಲ..


ಆದರೆ ಹಿರಿಯ ಸಾಹಿತಿ ಗಂಗಾ ಪಾದೇಕಲ್ಲು ಅವರು ಹೇಳಿದ  ಮಾತು ಸದಾ ಕೊರೆಯುತ್ತಿತ್ತು.ಅನುಭವ ಇಲ್ಲದೆ ಬರಹ ಗಟ್ಟಿತನ ಹೊಂದುದಿಲ್ಲ ಎಂದು..


ಹಾಗೆಂದು ನಾನು ಪ್ರವಾಸ ಹೋಗಿಯೇ ಇಲ್ಲವೆಂದಲ್ಲ..ಸುಮಾರು 25-26 ವರ್ಷಗಳ ಮೊದಲು ನಿಜಾಮುದ್ದೀನ್ ನಲ್ಲಿ ನಡೆದ ರಾಷ್ಟ್ರ ಸೇವಿಕ ಸಂಘದ ಸಮ್ಮೇಳನದಲ್ಲಿ ಭಾಗವಹಿಸಲು ಹೋಗಿದ್ದೆ.ಹಾಗೆ ಹೋದವರೆಲ್ಲ ಅಗ್ರ ಡೆಲ್ಲಿ ಹರಿದ್ವಾರ ಹೃಷಿಕೇಶ ಕಾಶಿ ಮೊದಲಾದೆಡೆ ಮೂರು ನಾಲ್ಕು ದಿನ ಸುತ್ತಾಡಿ ಬಂದಿದ್ದೆವು


ಅಂತೆಯೇ ಬೆಂಗಳೂರಿನ ಎಪಿಎಸ್ ಕಾಲೆಜಿನಲ್ಲಿ ಉಪನ್ಯಾಸಕಿಯಾಗಿದ್ದಾಗ ಡಿಡಿ 1 ಚಾನೆಲ್ ನವರು ಆಯೋಜಿಸಿದ್ದ ಖೇಲ್ ಖೇಲ್ ಮೇ ಬದಲೋ ದುನಿಯ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳನ್ನು ಡೆಲ್ಲಿಗೆ ಕರೆದುಕೊಂಡು ಹೋಗಿದ್ದೆ.ಆಗಲೂ ಒಂದಿನಿತು ಸುತ್ತಾಡಿದ್ದೆವು


ನಂತರವೂ ಪ್ರಬಂಧ ಮಂಡನೆಗೆ ಅಹ್ವನಿತಳಾಗಿ ಭಾರತೀಯಾರ್ ಯೂನಿವರ್ಸಿಟಿ,ಗಾಂಧಿ ಗ್ರಾಮ ? ಕೊಯಂಬತ್ತೂರು ಏಲಾಗಿರಿ ಮೊದಲಾದೆಡೆ ಹೋಗಿದ್ದು ಅಲ್ಲೂ ಸುತ್ತ ಮುತ್ತ ಸ್ವಲ್ಪ ತಿರುಗಾಡಿ ಬಂದಿರುವೆ


ಆದರೆ ಈ ಪ್ರವಾಸಗಳು ಯಾವುವೂ ನನಗೆ ಅಂಥಹ ದೊಡ್ಡ ಅನುಭವವನ್ನು ತುಂಬಿ ಕೊಡಲಿಲ್ಲವೇನೋ ಎಂದೆನಿಸ್ತದೆ


ಪ್ರವಾಸಗಳು ಅನುಭವವನ್ನು ತುಂಬಿ ಕೊಡದಿದ್ದರೂ ಬದುಕು ಮೂಟೆ ಮೂಟೆಯಾಗಿ ನಾನಾವಿಧವಾದ ಅನುಭವಗಳನ್ನು ತುಂಬಿಕೊಟ್ಟಿದೆ.

ಒಂದೊಂದು ಯೂನಿವರ್ಸಿಟಿಗೆ ಸಂದರ್ಶನಕ್ಕೆ ಹೋದಾಗ ಒಂದೊಂದು ಅನುಭವ..ನನಗೆ ಪರಿಚಯವೇ ಇಲ್ಲದವರೂ ವಿನಾಕಾರಣ ದ್ವೇಷ ಕಾರುವ ಪರಿಯಂತೂ ನನಗೆ ಅಚ್ಚರಿ ತಂದಿದೆ


ನಾನು ಯಾರ ಸುದ್ದಿಗೂ ಹೋಗದೆ ನನ್ನದೇ ವೃತ್ರಿ ಪ್ರವೃತ್ತಿ ಯಾಗಿ ಬರವಣಿಗೆಯ ಲೋಕದಲ್ಲಿ ಇರುವವಳು


ಆದರೆ ಅದೇ ಕಾರಣಕ್ಕೆ ಸ್ವಕೀಯರಿಂದ ಹಾಗೂ ಪರಕೀಯರಿಂದ ಮತ್ಸರದ ನಡೆಯನ್ನು ಎದುರಿಸಿದೆ..


ಇನ್ನು ಪುಸ್ತಕ ಬರೆಯುವುದು ಪ್ರಕಟಿಸುವುದು ಒಂದು ಚಾಲೆಂಜ್ ಅಗಿದ್ದರೆ ಬಿಡುಗಡೆಯದೇ ಒಂದು ಅನುಭವ


ಕೆಲವರಿಗೆ ಬರಹಗಾರರ ಬಗ್ಗೆ ಎಷ್ಟು ಮತ್ಸರ ಅಹಸನೆ ಇದೆ ಎಂಬುದರ ಅರಿವಾಗ ಬೇಕಾದರೆ ಪುಸ್ತಕ ಬರೆದೇ ಆಗಬೇಕು..

ಬೆಂಗಳೂರು ಹವ್ಯಕ ಸಭೆಯ ಸಂಸ್ಥಾಪಕರಾದ ಮೇಣ ರಾಮಕೃಷ್ಣ ಭಟ್ ಅವರ ಸಂಸ್ಮರಣಾ ಸಮಾರಂಭದಲ್ಲಿ ನನ್ನ ದೈವಿಕ ಕಂಬಳ ಕೋಣ ಎಂಬ ಪುಸ್ತಕ ಮಲ್ಲೇಪುರಂ ವೆಂಕಟೇಶ್ ಅವರಿಂದ ಬಿಡುಗಡೆಯಾಯಿತು..ಇಲ್ಲಿನದೊಂದು ದೊಡ್ಡ ಕಥೆಯೇ ಇದೆ


ಇದಾದ ನಂತರ ಚೊಕ್ಕಾಡಿಯಲ್ಲಿ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ಹಸ್ತದಿಂದ ನನ್ನ ಐದು ಪುಸ್ತಕಗಳು ಬಿಡುಗಡೆಯಾದವು..ಇಲ್ಲಿನದು ಮತ್ತೊಂದು ಕಥೆ

ಈ ನಡುವೆ ನನ್ನ ಎರಡು ಪುಸ್ತಕಗಳು ತುಳು ಅಕಾಡೆಮಿಯಲ್ಲಿ ಕಲ್ಲಡ್ಕ ಡಾ.ಕಮಲಾ ಭಟ್ ಅವರಿಂದ ಬಿಡುಗಡೆಯಾದವು..ಅಲ್ಲಿನದೂ ಮತ್ತೊಂದು ಕಥೆ


2021 ರಲ್ಲಿ ನನ್ನ ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕ ಮತ್ತೆ ಬೆಂಗಳೂರಿನಲ್ಲಿ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಯವರ ದಿವ್ಯ ಹಸ್ತದಿಂದ ಬಿಡುಗಡೆಯಾಯಿತು..ಈ ಬಗ್ಗೆ ಕನ್ನಡ ಪ್ರಭ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ವರದಿ ಪ್ರಕಟವಾಯಿತು.ಇಲ್ಲಿ ಸಭೆಯಲ್ಲಿದ್ದ ಯಾರೋ ಒಬ್ಬ ಮತ್ಸರಿಯ ಕುತಂತ್ರದಿಂದ ತಪ್ಪೇ ಮಾಡದ ಓರ್ವ  ಪತ್ರಕರ್ತರಿಗೆ ತುಂಬಾ ತೊಂದರೆ ಆಯಿತು..


ಇನ್ನು ವೃತ್ತಿ ಜೀವನದಲ್ಲೂ ನಾನಾ ಅನುಭವಗಳು..ಸಿಹಿ ಕಹಿ ಎರಡೂ ಅನುಭವಗಳೇ..

ಓದುವಾಗಲೂ ಒಂದೊಂದು ಅನುಭವ..


ನಾನು ಕಾಲೇಜಿಗೆ ಸೇರುವ ವರೆಗೆ ಪೋಲೀಸರನ್ನು ನೋಡಿರಲಿಲ್ಲ‌‌.ಸಿನೇಮವನ್ನೂ ಆ ವರೆಗೆ ನೋಡಿರದ ಕಾರಣ  ಪೋಲೀಸರ ಬಗ್ಗೆ ತಿಳಿದೇ ಇರಲಿಲ್ಲ..ಬೆಂಗಳೂರಿಗೆ ಬರುವವರೆಗೆ ಎಂದರೆ ನನಗೆ 35 ವರ್ಷ ಆಗುವವರೆಗೆ ನನಗೆ ಪೊಲೀಸ್ ಸ್ಟೇಶನ್ ,ಹೇಗಿರುತ್ತದೆ  ಕೋರ್ಟು ಹೇಗಿರುತ್ತದೆ ? ನ್ಯಾಯಾಧೀಶರು ಹೇಗಿರ್ತಾರೆ ಎಂಬ ಕಲ್ಪನೆಯೂ ಇರಲಿಲ್ಲ..


ನಿದಾನಕ್ಕೆ ಬದುಕು ಎಲ್ಲವನ್ನೂ ತೋರಿಸಿಕೊಟ್ಟಿತು. ಉಡುಪಿಯ ಬಹುಜನ ಹಿತಾಯ ವೇದಿಕೆಯ ಡಾ.ರವೀಂದ್ರನಾಥ ಶಾನುಭಾಗರಿಂದ ಅನ್ಯಾಯದ ವಿರುದ್ದ ನ್ಯಾಯಯುತವಾಗಿ ಹೋರಾಡಲು ಪ್ರೇರಣೆ ಪಡೆದೆ..

ಜಗತ್ತಿಡೀ ಅನ್ಯಾಯಕ್ಕೊಳಗಾದವರು ತುಂಬಾ ಜನ ಇದ್ದಾರೆ.ಅವರೆಲ್ಲರ ಪರ ಹೋರಾಡಲು ಸಾಧ್ಯವಿಲ್ಲದಿದ್ದರೂ ಕೊನೆಯ ಪಕ್ಷ ನನಗೆ ಕಿರುಕುಳ ಕೊಟ್ಟವರ ವಿರುದ್ಧ ಹೋರಾಡಲು ಕಲಿತೆ..

ಪೋಲೀಸರ ಭ್ರಷ್ಟಾಚಾರದ ಅರಿವಾಯಿತು..ರಕ್ಷಕರೇ ಭಕ್ಷಕರಾದರೆ ಸಾಮಾನ್ಯ ಜನರಿಗೆ ಬದುಕು ಬಹಳ ಕಷ್ಟಕರ ಎಂದೆನಿಸ್ತದೆ

ಬಸವಣ್ಣನವರು ಒಲೆ ಹತ್ತಿ ಉರಿದರೆ ನಿಲಲುಬಹುದಲ್ಲದೆ ಧರೆ ಹತ್ತಿ ಉರಿದರೆ ನಿಲಲು ಬಾರದು ಎಂದು 12 ನೆಯ ಶತಮಾನದಲ್ಲಿ ಹೇಳಿದ್ದರ ನಿಜವಾದ ಅರ್ಥ ಗೊತ್ತಾಯಿತು


ಕೇಳಬಾರದಂತ ಮಾತುಗಳನ್ನೂ ಆರೋಪಗಳನ್ನೂ ಎದುರಿಸಿರುವೆ,ಕನಸಲ್ಲೂ ಕಲ್ಪಿಸದಂತಹ ಪ್ರಶಸ್ತಿ ಪುರಸ್ಕಾರ ಗೌರವಗಳನ್ನೂ ಓದುಗರನ್ನೂ ಪಡೆದಿರುವೆ 


ಆದರೆ ಕೊಲ್ಲುವ ಪಿಶಾಚಿಗಳಿಗಿಂತ ಕಾಯುವ ದೇವರು ದೊಡ್ಡವನು..ಇನ್ನೇನು ಸೋತು ಹೋಗುವೆ ಎನ್ನುವಷ್ಟರಲ್ಲಿ ಏನೋ ಒಂದು ಬೆಳಕು ಎಲ್ಲಿಂದಲೋ  ಬಂದು ರಕ್ಷಿಸುತ್ತದೆ 


ಭವಿತವ್ಯಾಣಿ ದ್ವಾರಾಣಿ ಭವಂತಿ ಸರ್ವತ್ರ..ಆಗಲೇ ಬೇಕಾದವುಗಳಿಗೆ ಎಲ್ಲೆಡೆ ಬಾಗಿಲುಗಳು ಇರುತ್ತವೆ ಎಂದು ಕಾಳಿದಾಸ ಹೇಳಬೇಕಾಗಿದ್ದರೆ ಅವನಿಗೂ ಬದುಕಿನಲ್ಲಿ ಇಂತಹ  ಅಪಾರ ಅನುಭವಗಳು ಆಗಿದ್ದಿರಬೇಕು.


ಈಗ ಅಂದು ಗಂಗಾ ಪಾದೇಕಲ್ಲು ಅವರು ಹೇಳಿದ ಅನುಭವ ಆಗಬೇಕು ಆಗ ಬರಹ ಗಟ್ಟಿಯಾಗುತ್ತದೆ ಎಂದ ಮಾತಿನ ಸರಿಯಾದ ಅರ್ಥ ಆಗುತ್ತಿದೆ


ಅನುಭವ  ಎಲ್ಲೋ ಎಲ್ಲಿಂದಲೋ ಆಗುವದಲ್ಲ..ಬದುಕಿಗೆ ನಾವು ತೆರೆದುಕೊಂಡರೆ ಅದಾಗಿಯೇ ಆಗುತ್ತದೆ 

ಇನ್ನೂ ಆಗುವದ್ದು ತುಂಬಾ ಇರಬಹುದು


ನನ್ನ ಅನುಭವಗಳೆಲ್ಲವೂ ಕಹಿಯಾದುದಲ್ಲ..ಅದರಲ್ಕಿ ಕಹಿಗಿಂತ ಸಿಹಿಯಾದ ಸಂಭ್ರಮವೇ ಹೆಚ್ಚಿದೆ.ಕೆಲವು ಕಹಿ ಅನುಭವಗಳೂ  ಇವೆ


ನಾನು ಉಪನ್ಯಾಸಕಿಯಾದ ಕಾರಣ ಇರಬೇಕು..ನಾನು ಸದಾ ವಿದ್ಯಾರ್ಥಿಗಳ ಗೆಲುವನ್ನು ಸಂಭ್ರಮಿಸುತ್ತೇನೆ.ಅವರಿಗೆ ಬಾಷಣ ಪ್ರಬಂಧ ನಾಟಕ ಹೇಳಿಕೊಟ್ಟು ವೇದಿಕೆಯಲ್ಲಿ ಪ್ರಸ್ತುತ ಪಡಿಸಿ ಅವರ ಜೊತೆ ನಾನೂ ಸಂಭ್ರಮಿಸುತ್ತೆವೆ.ಪ್ರರಿ ವರ್ಷ ಹೊಸ ಹೊಸ ವಿದ್ಯಾರ್ಥಿಗಳು..ಹೊಸ ಹೊಸ ಅನುಭವಗಳು..ಇವರಿಗಾಗಿಯೇ ನಾಟಕ ಬರೆದು ನಾಟಕಗಾರ್ತಿ ಎನಿಸಿಕೊಂಡೆ..ನಾಟಕ ರಚನೆಯ ಬಗ್ಗೆ ಏನೊಂದೂ ಮಾಹಿತಿ ಇರದಿದ್ದರೂ ಏನೋ ನನಗರಿತಂತೆ ಬರೆದೆ .ನಿರ್ದೇಶನದ ಗಂಧ ಗಾಳಿ‌ಇರದಿದ್ದರೂ ಏನೋ ಒಂದು ನನಗರಿತಂತೆ ಮಕ್ಕಳಿಗೆ ಹೇಳಿಕೊಟ್ಟೆ..ಕೆಲವು ಬಹುಮಾನಗಳೂ ಬಂದವು..


ನನಗನಿಸಿದ್ದನ್ನು ಬರೆದು ಪತ್ರಿಕೆಗೆ ಕಳುಹಿಸಿ ಪ್ರಕಟವಾಗಿ ನಾನೂ ಒಬ್ಬ ಲೇಖಕಿ ಎನಿಸಿಕೊಂಡೆ.ನನ್ನ ಬ್ಲಾಗ್ ಬರಹಗಳ ಹೊರತಾಗಿಯೂ   ಮುನ್ನೂರರಷ್ಟು ನನ್ನ ಬರಹಗಳು ಬೇರೆ ಬೇರೆ ಪತ್ರಿಕೆಗಳಲ್ಲಿ  ವೆಬ್ ಪೋರ್ಟರ್ ಗಳಲ್ಲಿ  ಪ್ರಕಟವಾಗಿವೆ 25 ಪುಸ್ತಕಗಳೂ ಪ್ರಕಟವಾಗಿವೆ .ಬ್ಲಾಗ್ ನಲ್ಲಿ ಸಾವಿರಕ್ಕಿಂತ ಹೆಚ್ಚು ಬರಹಗಳಿವೆ

ಸುಮಾರು ಐದೂವರೆ ಲಕ್ಷ ಓದುಗರೂ ಇದ್ದಾರೆ 

ಕಣ್ಣಿಗೇ ಕಾಣಿಸದ ಸಾವಿರಾರು ಮಂದಿ ಹಿತೈಷಿಗಳಿದ್ದಾರೆ.ಅಂತೆಯೇ ಪರಿಚಯವೇ ಇಲ್ಲದಿದ್ದರೂ ದ್ವೇಷ ಸಾಧಿಸುವ ಕೆಲ ಜನರೂ ಇದ್ದಾರೆ.

ಡಾ

ಗಣೇಶಯ್ಯನರ ಕಾದಂಬರಿ ಬಳ್ಳಿ ಕಾಳಬೆಳ್ಳಿಯಲ್ಲಿ ಒಮದು ಪ್ರಮುಖ ಪಾತ್ರವಾಗಿ ಲಕ್ಷ್ಮೀ ಪೋದ್ದಾರ್ ಹೆಸರಿನ ನಿಜ ಪಾತ್ರವಾಗಿ ನನ್ನದೇ ತುಳು ಅಧ್ಯಯನದ ವಿಚಾರಗಳನ್ನು ಪ್ರಸ್ತುತ ಪಡಿಸುವ ವಿಶಿಷ್ಟ ಅನುಭವ ನನ್ನದಾಗಿದೆ 


ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕದ ಸಾವಿರಕ್ಕಿಂತ ಹೆಚ್ಚಿನ ಪುಟಗಳನ್ನು ತಿರುವಿ ಹಾಕುವಾಗ ಇದೆಲ್ಲ ನಾನು ಬರೆದದ್ದಾ ಎಂಬ ಅಚ್ಚರಿ ನನಗಾಗುತ್ತದೆ


ದೈವ ಕೃಪೆ ಎಂದರೆ ಇದೇ ಇರಬೇಕೆನಿಸುತ್ತದೆ..

ಮನುಷ್ಯ ಪ್ರಯತ್ನವನ್ನೇ ನಂಬಿದ್ದವಳು ನಾನು..ಆದರೂ ಮಂಗಳೂರು ಯೂನಿವರ್ಸಿಟಿಯ ಕನ್ನಡ ವಿಭಾಗದಲ್ಲಿ ನಡೆದ ನೇಮಕಾತಿಯ ಅಕ್ರಮ ಅನ್ಯಾಯದ ವಿರುದ್ದ ಸುಪ್ರೀಂ ಕೋರ್ಟಿನ ವರೆಗೂ ಹೋಗಿ ಸ್ಪಷ್ಟ ದಾಖಲೆ ಇದ್ದಾಗಲೂ ಸೋತ ನಂತರ ಮನುಷ್ಯ ಯತ್ನವನ್ನು ಮೀರಿದ ಏನೋ ಒಂದು ಇದೆ ಎಂಬುದು ನನ್ನ ಅರಿವಿಗೆ ಬಂದಿದೆ.ಅದು ತನಕ ನಾನು ಅದೃಷ್ಟ ದುರದೃಷ್ಟ ಎಂಬುದನ್ನು ಒಪ್ಪಿದವಳೇ ಅಲ್ಲ

ತೇನ ವಿನಾ ತೃಣಮಪಿ ನ ಚಲತಿ ಎಂಬಂತೆ ಎಲ್ಲವೂ ಅವನ ಅಣತಿಯಂತೆಯೇ ನಡೆಯುತ್ತದಾ ? 

ನನಗೆ ಗೊತ್ತಿಲ್ಲ..

ತೀರ ಸಣ್ಣ ವಯಸ್ಸಿನಲ್ಲಿಯೆ ಕ್ಯಾನ್ಸರ್ ನಂತಹ ಮಾರಕ ರೋಗಕ್ಕೆ ತುತ್ತಾಗಿ ಈ ಜಗತ್ತಿನಿಂದ ನಿರ್ಗಮಿಸಿದ ಸಹಪಾಠಿಗಳನ್ನು ಸಂಬಂಧಿಕರ  ನೆನಪಾದಾಗ ಐವತ್ತು ತಲುಪಿಸಿದ ದೇವರಿಗೆ ಕೃತಜ್ಞತೆಯನ್ನು  ಅರ್ಪಿಸಬೇಕು ಎಂದು  ನೆನಪಾಗುತ್ತದೆ 


ಹದಿನೈದು ವರ್ಷಗಳ ಹಿಂದೆ ನನಗೆ ಸರಿಯಾದ ಕೆಲಸವಿಲ್ಲ ಎಂದು ತಲೆಕೆಡಿಸಿಕೊಂಡಿದ್ದೆ.ವಯಸ್ಸು ಮೀರುತ್ತದೆ ಎಂಬ ಆತಂಕ ಕಾಡುತ್ತಿತ್ತು.ಅಂತೂ ನಾನು ಬಯಸಿದ ಸರ್ಕಾರಿ ಕಾಲೇಜು ಉಪನ್ಯಾಸಕ ಹುದ್ದೆ ದೊರೆತು ಹದಿನೈದು ವರ್ಷಗಳಾಗುತ್ತಾ ಬಂತು.ನನ್ನ ಕನಸಿನಂತೆ ಯಥೇಚ್ಛವಾಗಿ  ಭೂತ ಕೋಲ ರೆಕಾರ್ಡ್ ಮಾಡಿ ಅಧ್ಯಯನ ಮಾಡುದಕ್ಕಾಗಿಯೇ  ಬೆಳ್ಲಾರೆ ಕಾಲೇಜನ್ನು ಆಯ್ಕೆ ಮಾಡಿದೆ 

ಅದರ ಫಲ ರೂಪವಾಗಿ  ಕರಾವಳಿಯ ಸಾವಿರದೊಂದು ದೈವಗಳು ಗ್ರಂಥ ಯಶಸ್ವಿಯಾಗಿದೆ 


ಇನ್ನು ಹತ್ತು ವರ್ಷಗಳ ಸರ್ವಿಸ್ ಇದೆ ನಂತರ ಮತ್ತೆ ಭೂತಾರಾಧನೆಯ ಅದ್ಯಯನ ಮುಂದುವರಿಸಬೇಕೆಂದಿರುವೆ

ನಿವೃತ್ತಿಯ ನಂತರದ ಬದುಕಿಗೆ ಈಗಲೇ ಸಿದ್ಧತೆ ಮಾಡಿಕೊಂಡಿರುವೆ.ನಮ್ಮ ಊರು ಪುತ್ತೂರಿನಲ್ಲಿ ನವ ಚೇತನ ರಿಟೈರ್ ಮೆಂಟ್ ಟೌನ್ ಶಿಪ್ ನಲ್ಲೊಂದು ಮನೆ ನಮಗಾಗಿ ತೆಗೆದಿರಿಸಿರುವೆ.


. A resort for seniors ಆಗಿರುವ ನವ ಚೇತನದಲ್ಲಿ   ಈಗಲೂ ರಜೆಯಲ್ಲಿ ಪೇಟೆಯವೆಲ್ಲ ಜಂಜಾಟಗಳಿಂದ ಹೊರ ಬಂದು ಶಾಂತವಾಗಿ ನಾಲ್ಕು ದಿನ ಅಲ್ಲಿ ಇದ್ದು ಬರುತ್ತಿರುವೆ 


ಮುಂದಿನದು ದೈವ ಚಿತ್ತ..


ಡಾ.ಲಕ್ಷ್ಮೀ ಜಿ ಪ್ರಸಾದ್

Saturday, 31 May 2025

ಕಟೀಲಿನ ಊಟವೂ ಸಂಸ್ಕೃತ ಪಾಠವೂ

 ಕಟೀಲಿನ ಊಟವೂ ಸಂಸ್ಕೃತ ಪಾಠವೂ

ಬಡವರಿಗೆ ಕೊಡುವ ಸೌಲಭ್ಯಗಳನ್ನು ಬಿಟ್ಟಿ ಭಾಗ್ಯ ಎಂದು ಕೀಳಾಗಿ ಆಡಿಕೊಳ್ಳುವವರನ್ನು ಕಂಡಾಗ ನೆನಪಾದದ್ದು ಇದು 

 

ಈಶಾವಾಸ್ಯಮಿದಂ ಸರ್ವಮ್
ತೇನ ತ್ಯಕ್ತೇನ ಭುಂಜೀತಾಃ

ಈ ಜಗತ್ತು ದೇವರದು..ಅವನು ಉಂಡು ಬಿಟ್ಟದ್ದನ್ನು ನಾವು ಉಣ್ಣುತ್ತೇವೆ


 

ನಾವೆಲ್ಲರೂ ಭಗವಂತನ ಬಿಟ್ಟಿಯನ್ನೇ ತಿಂದು ಬದುಕುವುದು.ಅಗತ್ಯವಿರುವವರಿಗೆ ಉಚಿತ ಅಕ್ಕಿ ಇತರ ಸೌಲಭ್ಯಗಳನ್ಮು ನೀಡುವುದರಲ್ಲಿ ತಪ್ಪಿಲ್ಲ..ಎಲ್ಲರಿಗೂ ಕೊಡುವುದು ಅಸಾಧ್ಯ.
ಹಾಗಾಗಿ ಕಡು ಬಡವರು ಯಾರೆಂದು ಗುರುತಿಸಿ ಕೊಡಬೇಕು‌.ಆಗ ಅದು ಬೊಕ್ಕಸಕ್ಕೂ ಹೊರೆಯಾಗಲಾರದು.
ಭ್ರಷ್ಟಾಚಾರವನ್ನು ನಿಯಂತ್ರಿಸಿದರೆ ಇದು ಅಸಾಧ್ಯವೂ ಅಲ್ಲ

ನಾನೂ ಕಟೀಲಿನ ಉಚಿತ ಊಟ ಉಂಡು ಕಲಿತವಳೇ..

ನನ್ನ ಜೀವನದಲ್ಲಿ ಎಂದಿಗೂ ಮರೆಯಲಾಗದ ಅನುಭವಗಳಿವು

1994 ರ ಅಗಸ್ಟ್ ನಲ್ಲಿ ಕಟೀಲಿನಲ್ಲಿ ಸಂಸ್ಕೃತ ಎಂಎಗೆ ಸೇರಿದ್ದೆ.ಅದಾಗಲೇ ನನಗೆ ಪ್ರಸಾದರೊಂದಿಗೆ ಮದುವೆಯಾಗಿ ಒಂದೂವರೆ ವರ್ಷವಾಗಿತ್ತು

ನನ್ನ ಕಲಿಕೆಗೆ ಮನೆ ಮಂದಿಯಿಂದ ತೀವ್ರ ವಿರೋಧ ಬಂದಕಾರಣ ಎಲ್ಲರನ್ನೂ ಎದುರು ಹಾಕಿಕೊಂಡು ಕಟೀಲಿನಲ್ಲಿ ಸಂಸ್ಕೃತ ಎಂಎ ಗೆ ಸೇರಿದ್ದೆ

ಕಟೀಲು ಕಾಲೇಜು ಪ್ರಿನ್ಸಿಪಾಲರಾಗಿದ್ದ ಡಾ.ಜಿ ಎನ್ ಭಟ್ ಅವರಿಂದಾಗಿ ಎಕ್ಕಾರಿನ ನಾಗವೇಣಿ‌ ಅಮ್ಮ ನಮಗೊಂದು ಬಾಡಿಗೆ ಮನೆ ಒದಗಿಸಿದ್ದರು.ಅದು ಮೋಟು ಗೋಡೆಯ ಮಣ್ಣಿನ‌ಮನೆ

ಪೂರ್ತಿ ಒರಳೆ ಹತ್ತಿದ ಮನೆ.ನಮಗೋ ನಮ್ಮ ಆದಾಯಕ್ಕೆ ಒಂದು ಮನೆಯಂತಹದ್ದು ಸಿಕ್ಕಿದರೆ ಸಾಕಿತ್ತು

ಬೆಂಗಳೂರಿನಲ್ಲಿದ್ದ ಕೆಲಸವನ್ನು ಬಿಟ್ಟು ಪ್ರಸಾದ್ ಊರಿಗೆಬಂದಿದ್ದರು.ನಂತರ ನನ್ನ ಕಲಿಕೆಯ ಕಾರಣಕ್ಕೆ ಮನೆಯಲ್ಲಿ ವಿವಾದ ಉಂಟಾದಾಗ ಮತ್ತೆ ಮಂಗಳೂರಿನ ವೆಟರ್ನರಿ ಶಾಪೊಂದರಲ್ಲಿ ತಿಂಗಳಿಗೆ 800₹ ವೇತನಕ್ಕೆ ಅರೆಕಾಲಿಕ ಕೆಲಸಕ್ಕೆ ಸೇರಿದ್ದರು

ಕಟೀಲಿನಿಂದ ಮಂಗಳೂರಿಗೆ ಹೋಗಿಬರಲು ತಿಂಗಳಿಗೆ 300₹ ಖರ್ಚಾಗುತ್ತಿತ್ತು.ಉಳಿದ ಐದು ನೂರು ರುಪಾಯಿಗಳಲ್ಲಿ ಮನೆ ಬಾಡಿಗೆ ಕಟ್ಟಿಉಳಿದ ಊಟ ತಿಂಡಿಯಖರ್ಚನ್ನು ನಿಭಾಯಿಸಬೇಕಿತ್ತು

ನಮ್ಮ‌ ಅದೃಷ್ಟಕ್ಕೆ ಎಕ್ಕಾರಿನ ಮನೆಯನ್ನು ನಾಗವೇಣಿ‌ ಅಮ್ಮ 150₹ ಬಾಡಿಗೆಗೆ ಕೊಟ್ಟರು.

800₹ ನಲ್ಲಿ 30+-150=450  ಕಳೆದು ಉಳಿದ 350 ರಲ್ಲಿ ಇಡೀ ತಿಂಗಳು ಕಳೆಯಬೇಕಿತ್ತು.ಅದರಲ್ಲಿ ದಿನಕ್ಕೆ ಒಂದೂವರೆ ರುಪಾಯಿಯಂತೆ ತಿಂಗಳಿಗೆ  37.50₹ ನನಗೆ ಎಕ್ಕಾರಿನಿಂದ ಕಟೀಲಿಗೆ ಹೋಗಿ ಬರಲು ಬಸ್ಸಿಗೆ ಖರ್ಚಾಗುತ್ತಿತ್ತು.

ಈ ಕಷ್ಟಕಾಲದಲ್ಲಿ ನನಗೆ ಸಹಾಯಕ್ಕೆ ಬಂದದ್ದು ಕಟೀಲಿನ ಮಧ್ಯಾಹ್ನದ ಊಟ

ಕಟೀಲು ವಿದ್ಯಾ ಸಂಸ್ಥೆಯಲ್ಲಿ ಓದುವ ಎಲ್ಲ ಮಕ್ಕಳಿಗೂ ಉಚಿತ ಊಟದ ವ್ಯವಸ್ಥೆ ಇತ್ತು

ಇದಲ್ಲದೆ ಕಟೀಲು ದೇವಾಲಯದಲ್ಲಿಯೂ ನಮಗೆ ಊಟ ಮಾಡಲು ಅವಕಾಶವಿತ್ತು.ಸಂಸ್ಕೃತ ಓದುತ್ತಿದ್ದವರಲ್ಲಿ ಒಬ್ಬಿಬ್ಬರನ್ನು ಹೊರತು ಪಡಿಸಿದರೆ ಉಳಿದವರೆಲ್ಲರೂ ಬ್ರಾಹ್ಮಣರಾಗಿದ್ದು ದೇವಾಲಯದಲ್ಲಿನ ಬ್ರಾಹ್ಮಣರ ಪಂಕ್ತಿಗೆ ಹೋಗಬಹುದಿತ್ತು.ನಿತ್ಯವೂ ಪಾಯಸದ ಊಟ.ಆಗಾಗ ಯಾರಾದರೂ ಚಂಡಿಕಾ ಹೋಮವನ್ನೋ ಇನ್ನೇನೋ ವಿಶೇಷ ಪೂಜೆಗಳಿದ್ದರೆ ಪಾಯಸ ಮಾತ್ರವಲ್ಲದೆ ಹೋಳಿಗೆ ಲಾಡು ಮೊದಲಾದ ಸಿಹಿ ಭಕ್ಷ್ಯಗಳೂ ಇರುತ್ತಿದ್ದವು.ಜೊತೆಗೆ ನಮಗೆ ಎರಡು ರುಪಾಯಿ ಐದು ರುಪಾಯಿ ಊಟ ದಕ್ಷಿಣೆ ಸಿಗುತ್ತಿತ್ತು.ವಾರಕ್ಕೊಂದಾದರೂ ಇಂತಹ ಊಟ ದಕ್ಷಿಣೆ ಸಿಗುತ್ತಿತ್ತು.ನಮಗೆ ಬಹಳ ಖುಷಿ ಆಗುತ್ತಿತ್ತು.ಆಗಿನ ಐದು ರುಪಾಯಿಗೆ ತುಂಬಾ ಬೆಲೆ ಇತ್ತು.ಸಂಸ್ಕೃತ ಓದಲು ಬಂದ ನಾವ್ಯಾರೂ ಸಿರಿವಂತರಾಗಿರಲಿಲ್ಲ.ಒಂದೇ ದೋಣಿಯ ಪಯಣಿಗರಾಗಿದ್ದೆವು.ಹಾಗಾಗಿ ಚಂಡಿಕಾ ಹೋಮ‌ಇದ್ದ ದಿನ ನಮಗಾಗುತ್ತಿದ್ದ ಸಂತೋಷ ವರ್ಣನಾತೀತ

ಅದರೆ ಅದನ್ನು ತೋರಿಸಿಕೊಳ್ಳುತ್ತಿರಲಿಲ್ಲ.ಈ ಮಧ್ಯಾಹ್ನದ ಊಟದ ವ್ಯವಸ್ಥೆ ನಮಗೆ ಬಹಳಷ್ಟು ಉಪಕಾರ ಮಾಡಿತ್ತು.ಒಂದು ಹೊತ್ತು ಹೊಟ್ಟೆ ತುಂಬಾ ಉಣ್ಣುದಕ್ಕೆ ಅಡ್ಡಿ ಇರಲಿಲ್ಲ.ಅಲ್ಲಿ ಅಸ್ರಣ್ಣರು ಮತ್ತಿತರರು ನಮಗೆ ಒತ್ತಾಯ ಮಾಡಿ ಪಾಯಸ ಇನ್ನಿತರ ಊಟದ ವಸ್ತುಗಳನ್ನು ಬಡಿಸುತ್ತಿದ್ದರು.ಅವರ ಪ್ರೀತಿಯನ್ನು ಮರೆಯಲಾಗದು

ಕಟೀಲಿನ ಸಾರಿನ ಪರಿಮಳ ನೆನಪಾದರೆ ನನಗೆ ಮನೆಯಲ್ಕಿ ಮಾಡಿದ ಸಾರು ಸಾಂಬಾರಿನ ರುಚಿ ಪೇಲವೆನಿಸುತ್ತದೆ.ಅಲ್ಲಿ ಒಂದು ಉಪ್ಪಿನಕಾಯಿ ರೀತಿಯ ವ್ಯಂಜನ ಬಡಿಸುತ್ತಿದ್ದರು.ಅದ್ಭುತ ರುಚಿ ಅದು.ಅಷ್ಟು ರುಚಿಯಾದ ವಸ್ತುವನ್ನು ನಾನು ಬೇರೆಲ್ಲೂ ತಿಂದಿಲ್ಲ.ಇನ್ನು ಪ್ರತಿ ಶುಕ್ರವಾರ ಗಂಜಿ ಪ್ರಸಾದ ಇರುತ್ತಿತ್ತು.ಇದನ್ನು ಗೋದಿಯಿಂದ ಹಾಲು ಹಾಕಿ ಬೇಯಿಸಿ ತಯಾರಿಸುತ್ತಿದ್ದರೆಂದು ನೆನಪು.ಬಹಳ ರುಚಿಯಾದ ಗಂಜಿ ಇದು.ಇದಕ್ಕಾಗಿ ಶುಕ್ರವಾರ ಆಗುವುದನ್ನೇ ನಾನು ಕಾಯುತ್ತಿದ್ದೆ

ದೇವಾಲಯದ ಊಟದ ಸಮಯ ಒಂದೇ  ೀತಿ ಇರುತ್ತಿರಲಿಲ್ಲ.ಶುಕ್ರವಾರ ತಡ ಆಗುತ್ತಿತ್ತು.ನಮ್ಮ ಉಪನ್ಯಾಸಕರಾದ ಪದ್ಮನಾಭ ಮರಾಠೆ ಮತ್ತು ನಾಗರಾಜರೂ ದೇವಾಲಯಕ್ಕೆ ಊಟಕ್ಕೆ ಬರುತ್ತಿದ್ದರು.ಹಾಗಾಗಿ ಉಟದ ಸಮಯಕ್ಕೆ ಸರಿಯಾಗಿ ಪಾಠದ ಸಮಯ ಹೊಂದಾಣಿಕೆ ಆಗುತ್ತಿತ್ತು.ಕೆಲವೊಮ್ಮೆ ಹೊಟ್ಟೆ ಬಿರಿವಷ್ಟು ಉಂಡ ದಿನ ನಮಗೆ ತರಗತಿಗೆ ಹೋಗಲು ಇಷ್ಟವಿರುತ್ತಿರಲಿಲ್ಲ.ಅಂತಹ ಸಂದರ್ಭದಲ್ಲಿ ನಮ್ಮನ್ನು ಬಿಟ್ಡು ಬಿಡುತ್ತಿದ್ದರು‌.ನಾನುಮನೆಗೆ ಬಂದು ಗಡದ್ದಾಗಿ ನಿದ್ರೆ ಹೊಡೆಯುತ್ತಿದ್ದೆ

ನಾನು ಬಿಎಸ್ಸಿ ಮಾಡಿ ನಂತರ ಸಂಸ್ಕೃತ ಎಂಎ ಗೆ ಸೇರಿದ್ದು. ವಿಜ್ಞಾನ ದ ಕಷ್ಟದ ಪಾಠಗಳು ಶಿಸ್ತನ್ನು ಬಯಸುವ ಪ್ರಯೋಗ ತರಗತಿಗಳಿಂದ ನಾನು ಸೋತು ಸುಣ್ಣವಾಗಿದ್ದೆ.ನಂತರ ಎಂಎ ಗೆ ಸೇರಿದಾಗ ಕಲಿಕೆ ಎಷ್ಟು ಸುಲಭದ್ದು ಎನಿಸಿತ್ತು.ಡಾ.ಕೆ ನಾರಾಯಣ ಭಟ್ಟರು ಅದ್ವಿತೀಯ ವಿದ್ವಾಂಸರು‌.ಪ್ರಗಲ್ಭ ಪಂಡಿತರು.ಅವರ ಪಾಠ ಕೇಳುದೊಂದು ಭಾಗ್ಯವೇ ಸರಿ..ಜೊತೆಗೆ ಪದ್ಮನಾಭ ಮರಾಠೆಯವರು ಆಗಷ್ಟೇ ಎಂ ಎ ಮುಗಿಸಿದ ಎಳೆಯರಾಗಿದ್ದರೂ ಪಾಂಡಿತ್ಯಕ್ಕೆ ಕೊರತೆ ಇರಲಿಲ್ಲ.ಡಾ.ಜಿ ಎನ್ ಭಟ್ಟರೂ ಅದ್ವಿತೀಯ ವಿದ್ವಾಂಸರು.ಆದರೆ ಅಲಂಕಾರ ಶಾಸ್ತ್ರ( ಕಾವ್ಯ ಮೀಮಾಂಸೆ) ಪಾಠ ಮಾಡುತ್ತಿದ್ದರು.ವೇದಾಂತವನ್ನು ಐಚ್ಛಿಕ ವಿಷಯವಾಗಿ ತಗೊಂಡಿದ್ದ ಕಾರಣ ನನಗೆ ಕಾವ್ಯ ಮೀಮಾಂಸೆ ಇರಲಿಲ್ಲ.ಹಾಗಾಗಿ ಡಾ.ಜಿ ಎನ್ ಭಟ್ಟರ ಪಾಠ ಕೇಳುವ ಅವಕಾಶ ನನಗಿರಲಿಲ್ಲ

ಬಹುಶಃ ಇಲ್ಲಿನ ಉತ್ತಮ ಉಪನ್ಯಾಸಕರಿಂದಾಗಿ ಸಂಸ್ಕೃತವನ್ನು ನಾನು ಬಹಳಷ್ಟು ಇಷ್ಟ ಪಟ್ಟು ಕಲಿತೆ.ಪದವಿಯಲ್ಲಿ ಐಚ್ಛಿಕ ವಿಷಯವಾಗಿ ಸಂಸ್ಕೃತ ಕಲಿತು Rank ಪಡೆದಿದ್ದ ರಮಿತಾ ಶ್ರೀದೇವಿ‌ ಮೊದಲಾದವರು ನನ್ನ ಸಹಪಾಠಿಗಳಾಗಿದ್ದರು.ಪದವಿಯಲ್ಲಿ ಎರಡು ವರ್ಷ ದ್ವಿತೀಯ ಭಾಷೆಯಾಗಿ ಸಂಸ್ಕೃತ ಕಲಿತ ನನಗೆ ಎಂಎ ಯಲ್ಲಿ ಈ Rank ವಿಜೇತರ ಜೊತೆಗಿನ ಸ್ಪರ್ಧೆ ಸುಲಭದ್ದಾಗಿರಲಿಲ್ಲ.ಆದರೆ ನಾನು ಓದಿ Rank ತೆಗೆದು ಒಳ್ಳೆಯ ಕೆಲಸವನ್ನು ಗಳಿಸಲೇ ಬೇಕೆಂದು ನಿರ್ಧರಿಸಿ ಎಂಎ ಗೆ ಸೇರಿದವಳು.ಹಾಗಾಗಿ ದಿನಕ್ಕೆ ಕಡಿಮೆ ಎಂದರೂ ಎಂಟು ಗಂಟೆ ಓದುತ್ತಿದ್ದೆ.ಆದ್ದರಿಂದ ನನಗೆ ಮೊದಲ Rank ಪಡೆಯಲು ಸಾಧ್ಯವಾಯಿತು

ಇಂದಿಗೂ ನಾನೇನಾದರೂ ನನ್ನ ಭಾಷಣ ಚಂದ ಆದರೆ ಅದಕ್ಕೆ ಕಾರಣ ಇಲ್ಲಿನ ಸಂಸ್ಕೃತ ಕಲಿಕೆ ಮತ್ತು ಉಪನ್ಯಾಸಕರು‌.ನಮ್ಮಲ್ಲಿ ಸೆಮಿನಾರ್ ಮಾಡಿಸಿ ಹೊರ ಜಗತ್ತನ್ನು ಸಮರ್ಥವಾಗಿ ಎದುರಿಸಿ ಗೆಲ್ಲವಂತೆ ನಮ್ಮನ್ನು ತಯಾರು .ಮಾಡಿದ್ದರು.

ಪ್ರಸಾದರ ವೇತನದಲ್ಲಿ ನಮಗೆ ಒಂದು ಹೊತ್ತು ಮಾತ್ರ ಊಟ ಮಾಡಲು ಸಾಧ್ಯವಿತ್ತು

ಆದರೆ ಕಟೀಲಿನ ಮದ್ಯಾಹ್ನದ ಊಟ ಎರಡು ಹೊತ್ತೂ ಊಟ ಸಿಗುವಂತೆ ಮಾಡಿತ್ತು.ಮತ್ತು ಅದು ಬಹಳ ರುಚಿಕರವಾದ ಊಟ ಕೂಡ.ಹಾಗಾಗಿ ನಾನು ಕಟೀಲಿನಲ್ಲಿ ಎರಡು ವರ್ಷ ಹೊಟ್ಟೆ ತುಂಬಾ ಉಂಡದ್ದನ್ನೂ ಪಾಠ ಕೇಳಿದ್ದನ್ನೂ ಜೀವನವಿಡೀ ಮರೆಯಲಾಗದು.

ನಾನು ಎರಡನೇ ವರ್ಷ ಎಂಎಗೆ ಬರುವಷ್ಟರಲ್ಲಿ ಪ್ರಸಾದರಿಗೆ ಮಂಗಳೂರಿನಲ್ಲಿ ಒಳ್ಳೆಯ ಕೆಲಸ ಸಿಕ್ಕಿತ್ತು.ಹಾಗಾಗಿ ಮುಂದೆ ಅಂತಹ ಸಮಸ್ಯೆ ಏನೂ ಆಗಲಿಲ್ಲ

ಉಚಿತ ಊಟ ತಿಂಡಿಗಳು ಮಕ್ಕಳನ್ನು ಹಾಳು ಮಾಡುವುದಿಲ್ಲ

ಬದಲಿಗೆ ಮಕ್ಕಳೆಡೆಗಿನ ಉದಾರತೆ ತರಗತಿಗೆ ಹಾಜರಾಗದೇ ಇದ್ದರೂ ಪರೀಕ್ಷೆ ಬರೆಯಲು ಬಿಡುವುದು,ಫಲಿತಾಂಶಕ್ಕಾಗಿ ತೀರಾ ಉದಾರವಾಗಿ‌ಮೌಲ್ಯ ಮಾಪನ ಮಾಡುದು.ಪಾಸ್ ಮಾಡುದು ಶಿಕ್ಷಣದ ಗುಣಮಟ್ಟ ಕುಸಿಯಲು ಕಾರಣವಾಗಿದೆ

ಉಚಿತ ಉಟ ಕೊಟ್ಟರೆ ಹಾಳಾಗುವುದಾದರೆ ನಾವೆಲ್ಲ ಹಾಳಾಗಿ ಎಕ್ಕುಟ್ಟಿ ಹೋಗಿರುತ್ತಿದ್ದೆವು

ಆದರೆ ನಾವ್ಯಾರೂ ಉಚಿತ ಊಟ ಸಿಕ್ಕ ಕಾರಣಕ್ಕೆ ಹಾಳಾಗಿಲ್ಲ.ನನ್ನ ಸಹಪಾಠಿಗಳೆಲ್ಲರೂ ಅವರವರ ಕ್ಷೇತ್ರದಲ್ಲಿ ಯಶಸ್ವಿಯಾಗಿದ್ದಾರೆ.ಅವಿನಾಶ ಪುತ್ತೂರಿನಲ್ಲಿ ಸರಸ್ವತಿ ವಿದ್ಯಾಮಂದಿರ ಎಂಬ ವಿದ್ಯಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ.ಗಜಾನನ ಮರಾಠೆ ,ರಮೇಶ ಆಚಾರ್ಯ ಡಾ.ಈಶ್ವರ ಪ್ರಸಾದ್  ಕಮಲಾಯಿನಿಯರು ಉತ್ತಮ ಶಿಕ್ಷಕ/ ಉಪನ್ಯಾಸಕರಾಗಿ ಹೆಸರು ಗಳಿಸಿದ್ದಾರೆ

ರಮಿತಾ ಭಾಷೆಯೇ ತಿಳಿಯದ ಊರು ವಯನಾಡಿನ ಮಲೆಯಾಳ ಕಲಿತು ತನ್ನದೇ ಅದ ಸಣ್ಣ ಉದ್ಯಮ‌ ನಡೆಸುತ್ತಿದ್ದಾರೆ.

ನನ್ನ ಸಹಪಾಠಿ ನೀತಾ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ.ಆದರೆ ಮುಂದೆ ತುಂಬಾ ಓದಿ ಉತ್ತಮ ಕೆಲಸದಲ್ಲಿದ್ದಾರೆ ಎಂದು ಕೇಳಿರುವೆ.

ಉಚಿತ ಊಟ ಬಡ ಮಕ್ಕಳಿಗೆ ಅಗತ್ಯವಾಗಿ ನೀಡಬೇಕಾದದ್ದೇ..ಆದರೆ ಪಾಠಕ್ಕಿಂತ ಊಟ ಉಪಾಹಾರ ಹಾಲು ಮೊಟ್ಟೆ ಸಕಾಲದಲ್ಲಿ ಬೇಯಿಸಿ ಕೊಡುವ ಕೆಲಸದಲ್ಲಿ ಮುಳುಗಿ ಹೋಗುವ ಶಿಕ್ಷಕರಿಗೆ ಪಾಠ ಮಾಡಲು ಸಮಯವಿಲ್ಲದಂತಾಗಬಾರದು ಅಷ್ಟೇ..

ದಿನೇ ದಿನೇ ಶಿಕ್ಷಣ ಮಟ್ಟ ಕುಸಿಯುತ್ತಿದೆ.ಮೊದಲು ಕಾಗುಣಿತ ಗೊತ್ತಿಲ್ಲದ ಹತ್ತನೆಯ ತರಗತಿಯಮಕ್ಕಳು ಪಾಸಾಗಿ ಪಿಯು ಗೆ ಬರುತ್ತಿದ್ದರೆ ಈಗ ಅಕ್ಷರ ಮಾಲೆಯ ಬರವಣಿಗೆಯನ್ನೇ ಅರಿಯದವರು ಬರುತ್ತಿದ್ದಾರೆ.ಸರಳ ವಾಕ್ಯಗಳನ್ನು ಮಾಡಲು ಬರೆಯಲು ತಿಳಿಯದವೇ ಹೆಚ್ಚಾಗಿದ್ದಾರೆ

ಊಟ ತಿಂಡಿ ಹಾಲು ಹಣ್ಣು ನೀಡುವಷ್ಟೇ ಕಾಳಜಿಯಲ್ಲಿ ಗುಣ ಮಟ್ಟದ ಶಿಕ್ಷಣವನ್ನು ನೀಡುವ ಅಗತ್ಯವಿದೆ ಎಂದು ನನಗನಿಸುತ್ತದೆ

ಯಾವುದೇ ಉಚಿತ ಕೊಡುಗೆ ತಪ್ಪಲ್ಲ ಆದರೆ ಅದು ನಿಜಕ್ಕೂ ಅಗತ್ಯ ಇರುವವರಿಗೆ ಮಾತ್ರ ಸಿಗಬೇಕು.ಇಲ್ಲವಾದರೆ ದೇಶ ದಿವಾಳಿಯಂಚಿಗೆ ತಲುಪಬಹುದು 

 

- ಡಾ.ಲಕ್ಷ್ಮೀ  ಜಿ ಪ್ರಸಾದ್