Thursday, 17 June 2021

 ದೊಡ್ಡವರ ದಾರಿ 78 :ಸೌಜನ್ಯದ ಪ್ರತೀಕವಾಗಿರುವ  ಡಾ.ಪದ್ಮನಾಭ ಮರಾಠೆ


 ನಾನು ನಿನ್ನೆ ಸಂಜೆ ನನ್ನ ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕದ ಪ್ರಕಟಣೆಯ ಪೂರ್ವದಲ್ಲಿ ಮುಂಗಡ ಬುಕ್ಕಿಂಗ್ ಆರಂಭಿಸಿದ ಬಗ್ಗೆ ತಿಳಿಸಿ ಪುಸ್ತಕ ಬೇಕಾದವರಿಗೆ ನನ್ನ ವಾಟ್ಸಪ್ ನಂಬರ್ ನೀಡಿ  ಸಂಪರ್ಕಿಸಲು ತಿಳಿಸಿದ್ದೆ,


ಅನೇಕರು ಮೆಸೇಜ್ ಮಾಡಿ ನಮಸ್ತೆ ಮೇಡಂ/ ಅಕ್ಕ‌ ಎಂದು ಆರಂಭಿಸಿ ಪುಸ್ತಕ ಬೇಕು ಎಂದಿದ್ದರು


.ಪ್ರತಿ ನಮಸ್ಕರಿಸಿ ಪೇ ಮೆಂಟ್ ಮಾಡುವ ವಿಧಾನವನ್ನು ಕೇಳಿ ಮಾಹಿತಿ ನೀಡಿ ಅವರ ಹೆಸರು ವಿಳಾಸ ತಿಳಿಸಲು ಹೇಳುತ್ತಿದ್ದೆ‌.


ಹಾಗೆ ನಿನ್ನೆ ಒಬ್ಬರು ನಮಸ್ತೆ ಪುಸ್ತಕ ಬೇಕಿತ್ತು ಎಂದರು.ಎಲ್ಲರಿಗೆ ಮಾಡುವಂತೆ ಪ್ರತಿ ನಮಸ್ಕರಿಸಿ  ಗೂಗಲ್ ,ಪೋನ್ ಪೇ ಮೂಲಕ ಪೇ ಮಾಡಲು ತಿಳಿಸಿದೆ‌


ಅದಿಲ್ಲದಿದ್ಧರೆ ನನ್ನ ಬ್ಯಾಂಕ್ ಖಾತೆ ನಂಬರ್ ಕೊಡುತ್ತೇನೆ ಎಂದೆ .ಅವರು ಗೂಗಲ್ ಪೋನ್ ಪೆ ಇಲ್ಲದ ಕಾರಣ ( ಬಹುಶಃ ಅವರ ಊರಲ್ಲಿ ಸರಿಯಾದ ಮೊಬೈಲ್  ನೆಟ್ವರ್ಕ್ ಸಿಗುದಿಲ್ಲ.ನೆಟ್ವರ್ಕ್ ಇಲ್ಲದೇ ಇದ್ದರೆ ಪೋನ್ ಪೆ ಗೂಗಲ್ ಕೆಲಸ ಮಾಡುದಿಲ್ಲ) ಬ್ಯಾಂಕ್ ಖಾತೆ ಡಿಟೇಲ್ಸ್ ಕಳುಹಿಸಲು ಹೇಳಿದರು.ಅಂತೆಯೇ ನಾನು ನೀಡಿದೆ 


ಮತ್ತೆ ಹೆಸರು ಮತ್ತು ವಿಳಾಸ ಕಳುಹಿಸಲು ಸೂಚಿಸಿದೆ‌.


ಬೇರೆ ಕೆಲಸಕ್ಕೆ ಹೋದೆ.ಸ್ವಲ್ಪಹೊತ್ತು ಬಿಟ್ಟು ವಾಟ್ಸಪ್ ತೆರೆದೆ.

ಪದ್ಮನಾಭ ಮರಾಠೆ..ಎಂಬ ಹೆಸರು ,ವಿಳಾಸ ಬರೆದಿದ್ದರು.

.ಡಿಪಿ ನೋಡಿದೆ.ಹೌದು.ಪುಸ್ತಕ ಬೇಕೆಂದಿದ್ದವರು ನನ್ನ ಸಂಸ್ಕೃತ ಎಂಎ ಗುರುಗಳಾದ ಡಾ.ಪದ್ಮನಾಭ ಮರಾಠೆಯವರಾಗಿದ್ದರು.

ಅವರ ನಂಬರ್ ನನ್ನಲ್ಲಿ ಇತ್ತು‌


ಮೊಬೈಲ್ ಕಳೆದು ಹೋಗಿ ಅವರ ನಂಬರ್ ನನ್ನಲ್ಲಿ ಕಳೆದು ಹೋಗಿತ್ತು.ಹಾಗಾಗಿ ಶುರುವಿಗೆ ಮೆಸೇಜ್ ಮಾಡಿದಾಗ ನಾನು ಯಾರೆಂದು ಗಮನಿಸಿರಲಿಲ್ಲ 


ನನ್ನ ಗುರುಗಳೆಂದ ಮಾತ್ರಕ್ಕೆ ಅವರು ವಯಸ್ಸಿನಲ್ಲಿ ನನಗಿಂತ ತೀರಾ ಹಿರಿಯರೇನೂ ಅಲ್ಲ‌ ಅದರೆ ಜ್ಞಾನವೃದ್ದರು

ನಾನು ಕಟೀಲಿನಲ್ಲಿ ಸಂಸ್ಕೃತ ಎಂಎ ಶುರುವಾಗಿ ಮೂರನೆಯ ವರ್ಷ ಎಂದರೆ ಮೂರನೆಯ ಬ್ಯಾಚ್ ಗೆ ಸೇರಿದವಳು.

ನಮಗೆ ಉಪನ್ಯಾಸಕರಾಗಿ  ಬಹು ದೊಡ್ಡ ವಿದ್ವಾಂಸರಾದ ಡಾ.ನಾರಾಯಣ ಭಟ್ ,ಡಾ.ಜಿ ಎನ್ ಭಟ್ ಮತ್ತು ಆಗಷ್ಟೇ ಅಲ್ಕಿಯೇ  ಎಂಎ ಪಾಸಾದ ಪದ್ಮನಾಭ ಮರಾಠೆ ನಾಗರಾಜ್ ಇದ್ದರು.


ನಾನು ಎಂಎಗೆ ಬಹು ದೊಡ್ಡು ವಿದ್ವಾಂಸರಾದ ಹಿರಿಯರಾದ ಬಿಳಿಯ ಗಡ್ಡದ ರೇಷ್ಮೆ ಜುಬ್ಬ ಧರಿಸಿದ  ಬುದ್ದಿವಂತರ ಚೀಲ ಹಾಕಿದ ಸಿನೇಮಾಗಳಲ್ಕಿ ತೋರಿಸುತ್ತಿದ್ದ ರೀತಿಯ ಪ್ರೊಫೆಸರ್ ಗಳನ್ನು  ನಿರೀಕ್ಷೆ ಮಾಡಿದ್ದೆ.


ಪದ್ಮ‌ನಾಭ ಮರಾಠೆ ಮತ್ತು ನಾಗರಾಜ್ ಅಲ್ಲಿಯೇ ಮೊದಲ ಬ್ಯಾಚ್ ನಲ್ಲಿ ಎಂಎ ಓದಿ ಆಗಷ್ಟೇ ಎಂಎ ಎರಡನೇ ವರ್ಷದ ಅಂತಿಮ ಪರೀಕ್ಷೆ ಬರೆದವರು‌.ಫಲಿತಾಂಶ ಬಂದಿತ್ತೋ ಇಲ್ಲವೋ ನೆನಪಿಲ್ಲ ನನಗೆ.

ಪದ್ಮನಾಭ ಮರಾಠೆಯವರಿಗೆ ಮೊದಲ ರ‌್ಯಾಂಕ್ ಬಂದು ಗೋಲ್ಡ್ ಮೆಡಲು ಪಡೆದಿದ್ದರು.


ನಾಗರಾಜ್ ಉಜಿರೆಯಲ್ಲಿ ನನಗಿಂತ ಎರಡು ವರ್ಷ ಸೀನಿಯರ್ ಆಗಿದ್ದರು.ಅವರಿಗೆ ನನ್ನ  ಪರಿಚಯ ಇರಲಿಲ್ಲ‌.ಆದರೆ ನನಗೆ ಇತ್ತು.


ಇವರಿಬ್ಬರು ಹೆಚ್ಚು ಕಡಿಮೆ ನಮ್ಮದೇ ವಯಸ್ಸಿನವರಾಗಿದ್ದರು. ನಮಗೂ ಅವರಿಗೂ ಒಂದೆರಡು ವರ್ಷಗಳ ವಯಸ್ಸಿನ ಅಂತರ ಅಷ್ಟೇ ಇವರೆಂತ ಪಾಠ ಮಾಡಿಯಾರು ಎಂದು ನನಗೆ ಶುರುವಿಗೆ ಅನಿಸಿತ್ತು.

ನಾನು ಬಿಎಸ್ಸಿ ಮಾಡಿ ನಂತರ ಎಂ ಎ ಯಲ್ಲಿ ಆರ್ಟ್ಸ್ ಎಂದರೆ ಸಂಸ್ಕೃತವನ್ನು ತಗೊಂಡವಳು.


ಈ ವಿಜ್ಞಾನದ ವಿದ್ಯಾರ್ಥಿಗಳಿಗೆ ತಾವು ಅರ್ಟ್ಸ್ ,ಕಾಮರ್ಸ್  ವಿದ್ಯಾರ್ಥಿಗಳಿಗಿಂತ  ಜಾಣರು ಎಂಬ ಶ್ರೇಷ್ಠತೆಯ ವ್ಯಸನ ಇರುತ್ತದೆ.ನಾನು ಅದಕ್ಕೆ ಹೊರತಾಗಿರಲಿಲ್ಲ


ಹಾಗಾಗಿ ಬಿಎ ಬಿಕಾಂ( ನಾಗರಾಜರು ಬಿಕಾಂ ಮಾಡಿ ಸಂಸ್ಕೃತ ಎಂಎ ಮಾಡಿದವರು )  ಮಾಡಿ ಸಂಸ್ಕೃತ ಎಂಎ ಯನ್ನು ಆಗಷ್ಟೇ ಮುಗಿಸಿದ ಇವರಿಬ್ಬರ ಬಗ್ಗೆ ನನಗೆ ಮನಸಿನ ಒಳಗೆ ನಗು ಇತ್ತು.ಇವರೆಂತ ಎಂಎ ಗೆ ಪಾಠ ಮಾಡುದು ಎಂದು


ನಮಗಿಂತ ಗಿಡ್ಡ ಕಾಣುತ್ತಿದ್ದ ( ಕಾಣಿತ್ತದ್ದದ್ದು ಮಾತ್ರ ನಮಗಿಂತ ಎತ್ತರ ಇದ್ದರು  ಗಾತ್ರದಲ್ಲಿ ಮಾತ್ರವಲ್ಲ ಜ್ಞಾನದಲ್ಲಿಯೂ )ಇನ್ನೂ ಮೀಸೆ ಸರಿಯಾಗಿ ಬಾರದ, ಕ್ರಾಪ್ ಬಾಚಿದ  ಸಣ್ಣ ಹುಡುಗರಂತಿದ್ದ ಇವರಿಬ್ಬರನ್ನು  ನೋಡಿದಾಗ ಇವರೆಂತ ಪ್ರೊಫೆಸರ್ಗಳು ,,ಎಂತ ಪಾಠ ಮಾಡಿಯಾರು ಎನಿಸಿತ್ತು.

 ಆದರೆ ನನ್ನ ಊಹೆ ತಪ್ಪಾಗಿತ್ತು 

ಆದರೆ ಕಾಲೇಜು ಶುರುವಾಗಿ ಪಾಠ ಪ್ರವಚನಗಳು ಶುರುವಾದಾಗ ಪದ್ಮ ನಾಭ ಮರಾಠೆಯವರ ಪಾಂಡಿತ್ಯದ ಅರಿವಾಯಿತು.ಸಣ್ಣ ವಯಸ್ಸಿನ ಚಿಗುರು ಮೀಸೆಯ ಹುಡುಗರೂ ಪ್ರೊಫೆಸರ್ ಗಳಂತೆ ಪ್ರೌಢವಾಗಿ ಪಾಠ ಮಾಡಬಲ್ಲರು ಎಂದು ನನಗೆ ಮನವರಿಕೆ ಆಯಿತು.

ಆ ಸಮಯದಲ್ಲಿಯೇ ಅವರು ಎನ್ ಇ ಟಿ ಪಾಸಾಗಿದ್ದರು‌‌.ಆಗ ಎನ್ ಇ ಟಿ ಆದವರಿಗೆ ಸರ್ಕಾರಿ ಕಾಲೇಜಿನಲ್ಲಿ ಸುಲಭದಲ್ಲಿ ಕೆಲಸ ಸಿಗುತ್ತಾ ಇತ್ತು.ಇವರಿಗೆ ಊರು ಮನೆ ತೋಟ ತಂದೆ ತಾಯಿಯರನ್ನು ಬಿಟ್ಟು ಬೇರೆಡೆ ಹೋಗಲು ಇಷ್ಟವಿರಲಿಲ್ಲ.ಹಾಗೆ ಎಲ್ಲೂ ಯತ್ನ ಮಾಡಲಿಲ್ಲ.ಇಲ್ಲದಿದ್ದರೆ ಈಗ ಯುನಿವರ್ಸಿಟಿಯ ಪ್ರೊಫೆಸರ್ ಆಗಿ ಡೀನ್ ಆಗಿರುತ್ತಿದ್ದರು  ಆ ಹುದ್ದೆಗೆ ಇರುವ ಅರ್ಹತೆ ಅವರಲ್ಲಿ ಇತ್ತು.

1996 ರಲ್ಲಿ ಶಿಕಾರಿ ಪುರ ಸರ್ಕಾರಿ ಪಿಯು ಕಾಲೇಜಿಗೆ ಅಯ್ಕೆ ಆಗಿದ್ದರೂ ಅದನ್ನು ಬಿಟ್ಟಿದ್ದರು 


ಈಗಲೂ ಅವರು ಕಟೀಲು ಸಂಸ್ಕೃತ ಸ್ನಾತಕೋತ್ತರ ಕೇಂದ್ರದ ಸಂಸ್ಕೃತ ಪ್ರೊಫೆಸರೇ ಆಗಿದ್ದಾರೆ.

ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ.


ಎನ್ ಇ ಟಿ ಅಂತ ಒಂದು ಪರೀಕ್ಷೆ ಇದೆ ಇದನ್ನು ಪಾಸ್ ಮಾಡಿದರೆ ಮಾತ್ರ ಸರ್ಕಾರಿ ಕಾಲೇಜಿನ ಉಪನ್ಯಾಸಕರಾಗಲು  ಸಾಧ್ಯ ಎಂಬುದನ್ನು ನಮಗೆ ತಿಳಿಸಿದವರು ಮರಾಠೆ ಸರ್ ನಮಗೆ‌.ಕೇವಲ ಪಠ್ಯದ ವಿಚಾರವಲ್ಲ.ಇತರ ವಿಚಾರಗಳ ಬಗ್ಗೆ ಕೂಡ ನಮಗೆ ತಿಳಿಸುತ್ತಾ ಇದ್ದರು.ಅನೇಕ ವಿಚಾರಗಳಲ್ಲಿ‌ಅವರಿಗೆ ಪ್ರೌಢಿಮೆ ಇತ್ತು 

ಒಂದು ಸಂಗತಿ ಹೇಳ್ತೇನೆ.ದೀಪದಿಂದ ಮಾತ್ರ ಇನ್ನೊಂದು  ದೀಪವನ್ನು ಬೆಳಗಲು ಸಾಧ್ಯ‌

ರ‌್ಯಾಂಕ್ ಎಂಬುದು ಬರಿಯ ಸರ್ಟಿಫೀಕೇಟ್ ಮಾತ್ರ ಪರೀಕ್ಷೆ  ಅಂಕ ಗಳಿಕೆ ಎಂದರೆ ಬರಿಯ ನೆನಪಿನ ಶಕ್ತಿಯ ಪರೀಕ್ಷೆ ಎನ್ನುವುದು ಸಿನಿಕತನ 

ಏಕಾಗ್ರತೆ ಇರುವವರಿಗೆ ಪರಿಶ್ರಮ‌ಪಡುವವರಿಗೆ  ಮಾತ್ರ ಉತ್ತಮ ಅಂಕ ಗಳಿಸಲು ಸಾದ್ಯವಾಗುತ್ತದೆ  ರ‌್ಯಾಂಕ್ ಬರುತ್ತದೆ .ಅಂತಹವರು ವೃತ್ತಿ ಜೀವನದಲ್ಲೂ ಹಾಗೆಯೇ ಇರುತ್ತಾರೆ

ಓರ್ವ ರ‌್ಯಾಂಕ್ ವಿಜೇತನಿಗೆ / ಪ್ರತಿಭಾವಂತನಿಗೆ ಉತ್ತಮ ಅಂಕ ಗಳಿಸುದು ಹೇಗೆ ಎಂಬ ವಿಚಾರ ಗೊತ್ತಿರುತ್ತದೆ .ಅಂತಹವರು ಶಿಕ್ಷಕ ವೃತ್ತಿಗೆ ಬಂದರೆ ತಮ್ಮ ವಿದ್ಯಾರ್ಥಿಗಳಿಗೂ ಅದನ್ನು ಹೇಳಿಕೊಡ್ತಾರೆ.

ನಾನು ಉತ್ತಮ ಅಂಕ ಗಳಿಸುದು ಹೇಗೆ ಎಂಬುದನ್ನು ಪದ್ಮನಾಭ ಮರಾಠೆಯವರಿಂದ ಕಲಿತೆ 

ಸಂಸ್ಕೃತ ಎಂಎ ಯಲ್ಲಿ ಮೊದಲ ರ‌್ಯಾಂಕ್ ಪಡೆದದ್ದು ಮಾತ್ರವಲ್ಲದೆ ಕನ್ನಡ ಎಂಎ ಯಲ್ಲಿ ಕೂಡ ರ‌್ಯಾಂಕ್ ಗಳಿಸಿದೆ..

ಈಗ ನನ್ನ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಗಳಿಸುವ ಬಗೆಯನ್ನು ಹೇಳಿಕೊಡ್ತೇನೆ‌.ಆದರೆ ಈ ಕೌಶಲ್ಯವನ್ನು ನಾನು ಗುರುಗಳಾದ ಪದ್ಮನಾಭ ಮರಾಠೆಯವರಿಂದಲೇ ಕಲ್ತದ್ದು ತರಗತಿಗೆ ತುಂಬಾ ತಯಾರಾಗಿ ಬರುತ್ತಾ  ಇದ್ದರು‌.

ಬಹಳ ವಿದ್ವತ್ ಪೂರ್ಣವಾದ ಪಾಠ ಅವರದು. 

ಈಗಲೂ ಅವರು ಹೇಳುತ್ತಿದ್ದ ಸುಭಾಷಿತಗಳನ್ನು ನಾನು ಭಾಷಣ ಮಾಡುವಾಗ ,ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಬಳಸುತ್ತೇನೆ.

ವಿದ್ಯಾರ್ಥಿನಿಯಾಗಿದ್ದಾಗ ನಾನು ಅವರ ಪ್ರಿಯ ಶಿಷ್ಯೆ ಆಗಿರಲಿಲ್ಲ..ನಾನು ಸಣ್ಣಾಗಿಂದಲೂ ಅತ್ಯುತ್ಸಾಹದ ಸ್ವಭಾವದವಳು..ನೇರ ಬೀಡು ಬೀಸು ಸ್ವಭಾವ,ಪೆಟ್ಟೊಂದು ತುಂಡೆರಡು ಎಂಬಂತೆ ಮಾತು.

ಅಲ್ಲದೆ ನನಗೆ ಎಂಎ ಗೆ ಸೇರುವ ಮೊದಲೇ ಮದುವೆಯಾಗಿದ್ದು ಉಳಿದವರ ಹಾಗೆ ಇರಲು ನನಗೆ ಆಗುತ್ತಿರಲಿಲ್ಲ.

1996 ಮೇಯಲ್ಲಿ ದ್ವಿತೀಯ ಎಂಎ ಪರೀಕ್ಷೆ ಬರೆದ ನಂತರ ದೀರ್ಘ ಸಮಯದ ನಂತರ ಇಪ್ಪತ್ತನಾಲ್ಕು ವರ್ಷಗಳ  ನಂತರ  2015 ರಲ್ಲಿ ನಾನು ಪದ್ಮನಾಭ ಮರಾಠೆಯವರನ್ನು ಕಟೀಲಿನಲ್ಲಿ  ಭೇಟಿಯಾದೆ ,ಕಟೀಲಿನಲ್ಲಿ  ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಿದ್ದರು 

.ನನ್ನನ್ನು  ಸಭಾ ಕಾರ್ಯಕ್ರಮ ಒಂದರ  ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾದ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಅವರು ಅಹ್ವಾನಿಸಿದ್ದು ನಾನು ಹೋಗಿದ್ದೆ.

ಆಗ ಅಲ್ಲಿ ಪದ್ಮನಾಭ ಮರಾಠೆಯವರನ್ನು ನಾನು ಆಕಸ್ಮಿಕವಾಗಿ ಭೇಟಿ ಮಾಡಿದೆ.ಆಗ

ನನಗೂ ನಲವತ್ತ ಮೂರು ವರ್ಷ ಆಗಿತ್ತು ಮರಾಠೆಯವರಿಗೂ  ನಲುವತ್ತೈದು ನಲುವತ್ತಾರು ಾಗಿದ್ದಿರಬಹುದು

ಇಬ್ಬರನ್ನೂ ಬದುಕಿನ ಅನುಭವ ಮಾಗಿಸಿತ್ತು .

ಬಹಳ ಮುಕ್ತವಾಗಿ ಮಾತನಾಡಿದೆವು.ಆಗ ಅವರು ಒಂದು ಮಾತು ಹೇಳಿದರು.ನಾವೂ ಆಗಷ್ಟೇ ಎಂಎ ಮುಗಿಸಿ ಉಪನ್ಯಾಸಕರಾದವರು.ನಾವು ಹೇಳಿದ ದಾರಿಯಲ್ಲಿಯೇ ವಿದ್ಯಾರ್ಥಿಗಳು ಸಾಗಬೇಕು ಎಂದು ಆಶಿಸಿದ್ದೆವು.ಈಗ ಹಾಗಲ್ಲ‌‌ನಾವು ಹೇಳಿದ ದಾರಿಯಲ್ಲಿ ವಿದ್ಯಾರ್ಥಿಗಳು ಹೋಗದಿದ್ದರೆ ಅವರು ಹೋದ ದಾರಿಯಲ್ಲಿ ನಾವು ಹೋದರಾಯಿತು ,ಹೇಗೋ ಒಂದು ಸರಿ ದಾರಿಯಲ್ಲಿ ನಡೆದರಾಯಿತು ಎಂದಿದ್ದರು.

ನನಗೂ ಅದು ಹೌದೆನಿಸಿತ್ತು.

ಇದಾದ ನಂತರ ನಾನುಯಾವುದೋ ಮಾಹಿತಿಗಾಗಿ  ಒಮ್ಮೆಕರೆ ಮಾಡಿ ಮಾತಾಡಿದ್ದೆ..ನನ್ನ ಫೇಸ್ ಬುಕ್ ಸ್ನೆಹಿತರಾಗಿದ್ದರೂ ಅವರು ಪೇಸ್ ಬುಕ್ ನಲ್ಲಿ‌ ಅಷ್ಟೊಂದು ಆಕ್ಟೀವ್ ಆಗಿ ಇರಲಿಲ್ಲ‌.ಹಾಗಾಗಿ ಅವರು ನನ್ನ ಪೋಸ್ಟ್ ಗಳನ್ನು ನನ್ನ ಅಧ್ಯಯನವನ್ನು ಗಮನಿಸುತ್ತಾರೆ ಎಂಬ ಊಹೆಯೂ ಇರಲಿಲ್ಲ

ಹಾಗಾಗಿ ನಮಸ್ತೆ ಪುಸ್ತಕ ಬೇಕು ಎಂದು ಮೆಸೇಜ್ ಮಾಡಿದಾಗಲೂ ನಾನವರನ್ನು ಗಮನಿಸಿರಲಿಲ್ಲ

ಅವರು ಹೆಸರು ಮತ್ತು ವಿಳಾಸ ಕಳುಹಿಸಿದಾಗಲೇ ನನಗೆ ತಲೆಗೆ ಹೋದದ್ದು ಅವರು ನನ್ನ ಸಂಸ್ಕೃತದ ಗುರುಗಳೆಂದು.

ಅವರೀಗ ದೊಡ್ಡ ಸಂಸ್ಕೃತ ವಿದ್ವಾಂಸರು .ಆದರೂ ನಾನವರ ವಿದ್ಯಾರ್ಥಿನಿ ಎಂಬ ಅಭಿಮಾನ ಜೊತೆಗೆ ತುಳು ಸಂಸ್ಕೃತಿ ಕುರಿತಾದ ಒಲವಿನಿಂದ ನನ್ನ ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕಕ್ಕೆ ಪಾವತಿ ಮಾಡಿದ್ದಾರೆ.

ಅಧ್ಯಯನ ಶೀಲರು ಜೀವನವಿಡೀ ಹಾಗೆಯೆ ಇರ್ತಾರೆ ಎಂಬುದಕ್ಕೆ ಒಂದು ನಿದರ್ಶನವಾಗಿದ್ದಾರೆ.

ಇನ್ನೊಂದು ವಿಚಾರ ನಾನು ಗಮನಿಸಿದ್ದು..ನಾನು ಅವರ ವಿದ್ಯಾರ್ಥಿನಿ ವಯಸ್ಸಿನಲ್ಲೂ ,ಅನುಭವದಲ್ಲೂ ಜ್ಞಾನದಲ್ಲಿಯೂ ಕಿರಿಯಳು.ಹಾಗಾಗಿ ಅವರು ನಮಸ್ತೆ ಎನ್ನಬೇಕಿರಲಿಲ್ಲ.

ಲಕ್ಷ್ಮೀ ನನಗೊಂದು ಪುಸ್ತಕ ಬೇಕು ಎನ್ನ ಬಹುದಿತ್ತು.ಅದರೆ  ಎಲ್ಲರಿಗೂ ,ಅವರ ವಿದ್ಯಾರ್ಥಿನಿಗೂ ಕೂಡ ಗೌರವ ನೀಡುವ  ಅವರ ಸೌಜನ್ಯದ ವ್ಯಕ್ತಿತ್ವ  ಇಲ್ಲಿ ಎದ್ದು ಕಾಣುತ್ತದೆ‌.ಇದು ನಾವು ಅವರಿಂದ ಕಲಿಯಬೇಕಾದ ಅಂಶ ಎಂದು ನನಗನಿಸಿತು


शुभाशिषः सन्तु भवत्याः संशोधनाध्ययने ಎಂದು ಹಾರೈಸಿದ ಗುರುಗಳಾದ ಪದ್ಮ ನಾಭ ಮರಾಠೆಯವರಿಗೆ ವಂದಿಸಿದ್ದೇನೆ 

ಅವರು ವಿದ್ಯಾರ್ಥಿಗಳಿಗೆ ತೋರುವ ಗೌರವಾದರಗಳನ್ನು ನಾನೂ ಮುಂದಕ್ಕೆ ಅಳವಡಿಸಿಕೊಳ್ಳುವೆ

Tuesday, 8 June 2021

ದೊಡಗಡವರ ದಾರಿ -77 ಬಹು ಎತ್ತರದ ವ್ಯಕ್ತಿತ್ವದ ಡಾ.ಬಿಎ ವಿವೇಕ ರೈ


 ದೊಡ್ಡವರ ದಾರಿ - ಎತ್ತರದ ವ್ಯಕ್ತಿತ್ವದ ಡಾ.ಬಿ ಎ ವಿವೇಕ ರೈ 

ಲಜ್ಷ್ಮೀಯವರೇ ನಮಸ್ಕಾರ ಎಂದಾಗ ಒಂದು ಕ್ಷಣ ನಾನು ಗಲಿಬಿಲಿಗೊಳಗಾಗಿದ್ದೆ 

ನಾನು ಕನ್ನಡ ಎಂಎಯನ್ನು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಓದಿದ್ದಲ್ಲ.ಹಾಗಾಗಿ ಇಲ್ಲಿನ ಪ್ರಾಧ್ಯಾಪಕರ ನೇರ ಪರಿಚಯ ನನಗಿರಲಿಲ್ಲ.ಆದರೂ ಡಾ.ಬಿ ಎ ವಿವೇಕ ರೈ  ಬಗ್ಗೆ ಬಹಳ ಗಂಭೀರ ಸ್ವಭಾವದವರು ,ಬಹಳ ಸಮತೂಕದ ವ್ಯಕ್ತಿತ್ವದವರು ,ಅರ್ಹತೆ ಯಾರಲ್ಲಿಯೆ ಇದ್ದರೂ ಗುರುತಿಸುತ್ತಾರೆ ಇತ್ಯಾದಿ ಕೇಳಿ ತಿಳಿದಿದ್ದೆ


ನನ್ನ ಮೊದಲನೆಯ ಡಾಕ್ಟರೇಟ್ ಅಧ್ಯಯನ ಶುರು ಮಾಡಿದ ಸಂದರ್ಭದಲ್ಲಿ ನನಗೆ ಅವರನ್ನೊಮ್ಮೆ ಭೇಟಿ ಮಾಡಿ ಒಂದಷ್ಟು  ಮಾರ್ಗದರ್ಶನ ಪಡೆಯಬೇಕೆನಿಸಿತ್ತು.ಆಗ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ  ಉಪ ಕುಲಪತಿಗಳಾಗಿದ್ದರು.

ಹಾಗೆ ಮೈಸೂರಿಗೆ ಹೋಗಿ ಭೇಟಿಯಾಗಲು ಯತ್ನ ಮಾಡಿದ್ದೆ.ಅದರೆ ಅವರು ಬಹಳ ಬ್ಯುಸಿ ಇದ್ದರು.ಹಾಗಾಗಿ ಮಾತನಾಡಲಾಗಲಿಲ್ಕ.


ಅದಾಗಿ ಸುಮಾರು ಹತ್ತು ವರ್ಷಗಳ  ನಂತರ ಅವರನ್ನು ನಾನು ಬೆಂಗಳೂರಿನಲ್ಲಿ  ಪುಸ್ತಕ ಬಿಡುಗಡೆ ಕಾರ್ಯಕ್ರಮ ಒಂದರಲ್ಲಿ ಭೇಟಿಯಾಗಿದ್ದೆ.ಆಗ ನನ್ನ ಎರಡೂ ಡಾಕ್ಟರೇಟ್ ಪದವಿಗಳು ಕೂಡ ಸಿಕ್ಕಿ ಆಗಿತ್ತು.ಮಾತನಾಡುವದ್ದು ಏನೂ ಇರಲಿಲ್ಲ.ಒಂದು ಅವರ ಜೊತೆ ಪೋಟೋ ತೆಗೆಸಿಕೊಂಡಿದ್ದೆ ಅಷ್ಟೇ

ನನಗೆ ಯಾರಲ್ಲೂ ಅತಿ ವಿನಯ ಪ್ರದರ್ಶಿಸಿ ಓಂಗುವ ಅಭ್ಯಾಸವಿಲ್ಲ.ನನಗೇನಾದರೂ ಅಗತ್ಯದ ಕೆಲಸ ಇದ್ದರೇ ಆ  ಕೆಲಸದ ಬಗ್ಗೆ ಮಾತ್ರ ಮಾತಾಡ್ತೇನೆ.ಬೇರೆ ನೀನೇ ಇಂದ್ರ ಚಂದ್ರ ಎಂದು ಹಾಡಹೊಗಳುವ ಅಭ್ಯಾಸವಿಲ್ಲ‌.ನನಗೆ ಪುಸ್ತಕ ಬೇಕಿದ್ದರೆ ಖರೀದಿಸುತ್ತೇನೆ‌.ದುಡ್ಡು ಕೊಟ್ಟು ಖರೀದಿಸಿದ ಪುಸ್ತಕದದ ಮೇಲೆ ಹಸ್ತಾಕ್ಷರ ಪಡೆವ ಅಭ್ಯಾಸ ನಾನಿಟ್ಟುಕೊಂಡಿಲ್ಲ.


ಇದರ ನಡುವೆ ನಾನು ಮಂಗಳೂರು ಯುನಿವರ್ಸಿಟಿಯ ಸಂದರ್ಶನಕ್ಕೆ ಹಾಜರಾಗುವ ಸಂದರ್ಭದಲ್ಲಿ ನನ್ನ ಆತ್ಮೀಯರಾದ ಸ್ವಂತ ಅಣ್ಣನಂತೆ ಇರುವ ರಾಮಚಂದ್ರ ಭಟ್ ಅವರಲ್ಲಿ ಅಲ್ಲಿ ನೀಡಿದ API ಆಧಾರಿತ ಅಂಕಗಳನ್ನು ಪ್ರಶ್ನಿಸಬಹುದು ಎಂದು ಸಲಹೆ ನೀಡಿದ್ದರು.ಶೈಕ್ಷಣಿಕ ಅರ್ಹತೆ,ಎಂ ಎ ಮಾರ್ಕ್ಸ್  ಎನ್ ಇ ಟಿ ಡಾಕ್ಟರೇಟ್ ) ಮತ್ತು ಸಂಶೋಧನಾ ಪ್ರಕಟಣೆಗಳಿಗೆ ಸಂಬಂಧಿಸಿದ 57  ಅಂಕಗಳನ್ನು ಸಂದರ್ಶನಕ್ಕೆ ಮೊದಲೇ ನೀಡುತ್ತಾರೆ.ಇದರಲ್ಲಿ ಧನಂಜಯ ಕುಂಬಳೆ ಅವರಿಗೆ ಸಂಶೋಧನಾ ಪ್ರಕಟಣೆಯ ವಿಭಾಗದಲ್ಲಿ ಕೇವಲ ಎರಡು ಪುಸ್ತಕ ಪ್ರಕಟವಾಗಿದ್ದು ಅದರಲ್ಲಿ ಒಂದು ಪಿಎಚ್ ಡಿ ಗ್ರಂಥ ಆಗಿತ್ತು.ಹಾಗಾಗಿ ಅವರಿಗೆ ಈ ವಿಭಾಗದ ಇಪ್ಪತ್ತು ಅಂಕಗಳಲ್ಲಿ ಐದು ಮಾತ್ರ ನೀಡಬೇಕಿತ್ತು.ಆದರೆ ಪೂರ್ಣಾಂಕ  20 ಅನ್ನು ನೀಡಿದ್ದರು.ನನ್ನದು ಹದಿನೇಳು ಪುಸ್ತಕಗಳಿದ್ದ ಕಾರಣ ಹೇಗೂ ಪೂರ್ಣಾಂಕ  20 ಬಂದಿತ್ತು.ಆದರೆ ಅವರಿಗೆ ಅರ್ಹತೆ ಇಲ್ಲದೆ ಇದ್ದಾಗಲೂ ಹದಿನೈದು ಅಂಕ ಹೆಚ್ಚು ನೀಡಿದ್ದು ನನಗೆ ಗೊತ್ತಾಯಿತು.ಬಹುಶಃ ವಿವೇಕ ರೈಗಳಿಗೆ ಮೊದಲೇ ಗೊತ್ತಿತ್ತೋ ಅಥವಾ ವೀಸಿಯಾಗಿ ನಿವೃತ್ತರಾದ ಅವರಿಗೆ ಇದರ ಕಲ್ಪನೆ ಇತ್ತೋ ಗೊತ್ತಿಲ್ಲ.ಅಂತಹದೊಂದು ಸಂದರ್ಭವನ್ನು ಊಹಿಸಿ   ಸಲಹೆ ನೀಡಿದ್ದಂತೂ ನಿಜ

ಅಂತೆಯೇ ಅದನ್ನು ನಾನಲ್ಲಿ ಪ್ರಶ್ನಿಸಿದೆ.ಸರಿ ಇಲ್ಲ ಎನಿಸಿದರೆ ಕೋರ್ಟಿಗೆ ಹೋಗಿ ಎಂಬ ಸಿದ್ದ ಉತ್ತರ ತಯಾರಾಗಿತ್ತು.ಅದೇ ಉತ್ತರ ಬಂತು

ಹಾಗೆ ಹೇಳುವಾಗಲೇ ಅಲ್ಲಿ‌ವರಿಗೆ ಕೋರ್ಟಿಗೆ ಹೋಗಿ ಗೆಲ್ಲಲು ಆಗುವುದಿಲ್ಲ ಎಂಬ ಸಂಗತಿ ಗೊತ್ತಿತ್ತು.ಯಾಕೆಂದರೆ ಕೋರ್ಟ್ ಅರ್ಹತೆಯನ್ನು ನಿರ್ಧರಿಸುದು ಆಯ್ಕೆ ಸಮಿತಿ ಅದರಲ್ಲಿ ಇಂಟರ್ಫಿಯರ್ ಆಗಲು ಕಾನೂನಿನಲ್ಲಿ ಅವಕಾಶ ಇಲ್ಲ‌ಎಂಬ ಒಂದೇ ಮಾತಿನಲ್ಲಿ ನಮಗೆ ಹೆಚ್ಚು ಅರ್ಹತೆ ಇದೆ ಎಂಬ ವಾದವನ್ನು ತಳ್ಳಿ ಹಾಕುತ್ತದೆ.

ಇದು ಅಲ್ಲಿನ ಆಯ್ಕೆ ಕಮಿಟಿಯ ಮುಖ್ಯಸ್ಥರಾಗಿದ್ದ ಡಾ.ಚಿನ್ನಪ್ಪಗೌಡ ಹಾಗೂ ಇತರರಿಗೆ ಗೊತ್ತಿದ್ದಿರಬಹುದು‌ ಯಾಕೆಂದರೆ ಮಂಗಳೂರು ಯುನಿವರ್ಸಿಟಿ ಪ್ರಾಧ್ಯಾಪಕ ಹುದ್ದೆಗೆ ಅಯ್ಕೆಯಾದಾಗ ಅವರಿಗಿಂತ ಹೆಚ್ಚು ಅರ್ಹತೆ ಇದ್ದವರು ( ಇವರಿಗೆ ಪಿಎಚ್ ಡಿ ಆಗಿರಲಿಲ್ಲವಂತೆ ,ಅವರಿಗೆ ಆಗಿತ್ತಂತೆ ) ಒಬ್ಬರು ಕೋರ್ಟಿಗೆ ಹೋಗಿದ್ದರಂತೆ.ಆಗಲೂ ಅರ್ಜತೆಯನ್ನು ನಿರ್ಧರಿಸುದು ಅಯ್ಕೆ ಸಮಿತಿ ಕೋರ್ಟಿಗೆ ಇಂಟಫಿಯರ್ ಆಗಲು ಆಗುದಿಲ್ಲ ಎಂಬ ತೀರ್ಪು ಬಂದಿತ್ತಂತೆ‌ಇದು ನಿಜವಾ ಸುಳ್ಳಾ ಗೊತ್ತಿಲ್ಲ.ಆದರೆ ಐವತ್ತು ಅರುವತ್ತು ಲಕ್ಷ ಲಂಚ ತಗೊಂಡರೂ ಧೈರ್ಯವಾಗಿ ಇರುವ ವಿಸಿ ,ಪ್ರೊಫೆಸರ್ ಗಳನ್ನು ಕಾಣುವಾಗ ಇದು ನಿಜವಿರಬಹುದೆನಿಸುತ್ತದೆ‌ ಮಂಗಳೂರು ಯುನಿವರ್ಸಿಟಿ ಕನ್ನಡ ವಿಭಾಗ ನೇಮಕಾತಿಯಲ್ಲಿ  ಅನ್ಯಾಯವಾಗಿದೆ ಎಂದು ನಾನು ಕೋರ್ಟಿಗೆ ಹೋದಾಗಲೂ ಇದೇ ಉತ್ತರ ಸಿಕ್ಕಿತ್ತು.ಭ್ರಷ್ಟರ ಕೂದಲು ಕೂಡ ಕೊಂಕಲಿಲ್ಲ


ಇರಲಿ..ಆದರೆ ಇಂತಹದ್ದೊಂದರ ಸೂಚನೆ ಡಾ.ಬಿಎ ವಿವೇಕ ರೈಗಳಿಗಿದ್ದೇ ಅವರು ಈ ಬಗ್ಗೆ ಸಲಹೆ ನೀಡಿರಬಹುದು


ಅವರಿಗೆ ನನ್ನ ಪರಿಚಯ ಇದ್ದಿರಲಾರದು‌ನನ್ನ ಬಗ್ಗೆ ,ನನ್ನ ಅಧ್ಯಯನದ ಬಗ್ಗೆ ತಿಳಿದಿರಲಾರದು ಎಂದೇ ನಾನು ಭಾವಿಸಿದ್ದೆ


ಕಾಂತಾವರ ಕನ್ನಡ ಸಂಘದ  ಮೂಲಕ ನಾಡಿಗೆ ಗಣನೀಯವಾದ  ಕೊಡುಗೆ ನೀಡಿದವರ ಬಗ್ಗೆ ನಾಡಿಗೆ ನಮಸ್ಕಾರ ಸರಣಿಯಲ್ಲಿ ಡಾ.ನಾ.ಮೊಗಸಾಲೆ ಪುಸ್ತಕಗಳನ್ನು ಪ್ರಕಟಿಸುತ್ತಿದ್ದು ಇತ್ತೀಚೆಗೆ ಎರಡು ವರ್ಷಗಳ ಮೊದಲು ನನ್ನ ಬಗ್ಗೆಯೂ ತುಳು ಸಂಸ್ಕೃತಿಯ ಸಂಶೋಧಕಿ ಲಕ್ಷ್ಮೀ ಜಿ ಪ್ರಸಾದ್ ವಾರಣಾಸಿ ಎಂಬ   ಪುಸ್ತಕ ಪ್ರಕಟಿಸಿದರು.

ಅದರ ಬಿಡುಗಡೆ ಸಮಾರಂಭಕ್ಕೆ ನಾನು ಕಾಂತಾವರಕ್ಕೆ ಹೋಗಿದ್ದೆ.


ಹಿಂದಿನ ದಿನ ರಾತ್ರಿ ಬೆಂಗಳೂರಿನಿಂದ ಹೊರಟು ಮಂಗಳೂರು ತಲುಪಿ ಸ್ನೇಹಿತೆಯ ಮನೆಗೆ ಹೋಗಿ ಸ್ನಾನ ಗೀನ‌ ಮುಗಿಸಿ ತಿಂಡಿ ತಿಂದು ಬಾಡಿಗೆ ಕಾರು ಮಾಡ ಹೊರಟಿದ್ದೆ.ಅರ್ಧ ದಾರಿ ತಲುಪುವಾಗ ಕಾರು ಹಾಳಾಗಿ ನಿಂತಿತು.ಅಲ್ಲಿಂದ ಬಸ್ ಹಿಡಿದು ಕಾಂತಾವರ ಕನ್ನಡ ಭವನ ತಲುಪುವಾಗ ಹನ್ನೊಂದು ಗಂಟೆ ಆಗಿತ್ತು.


ಎದುರಿಗೆ ಸಿಕ್ಕಿದ ಹಿರಿಯರಾದ ಡಾ.ನಾ ಮೊಗಸಾಲೆಯವರು ಬಹಳ ಪ್ರೀತಿಯಿಂದ ಸ್ವಾಗತಿಸಿ ತಿಂಡಿ ತಿಂದು  ಕಾಫಿ ಕುಡಿದು ಬನ್ನಿ ಎಂದು ಒಳಗೆ ಕಳುಹಿಸಿದರು.


ರಣ ಬಿಸಿಲಿಗೆ ಬಂದ ನನಗೆ ಒಳ ಹೊಕ್ಕಾಗ ಏನೂ ಕಾಣಿಸುತ್ತಿರಲಿಲ್ಲ.ಕೆಪ್ ಮುಪ್ಪಾಗಿ ಆ ಕಡೆ ಈ ಕಡೆ ನೋಡುತ್ತಿದ್ದೆ.


ಆಗ ಲಕ್ಷ್ಮಿಯವರಿಗೆ ನಮಸ್ಕಾರ ಎಂಬ ಗಂಭೀರವಾದ ದ್ವನಿ ಕೇಳಿಸಿತು.ಯಾರೆಂದು ನೋಡಿದರೆ ಉಪ್ಪರಿಗೆ ಮೆಟ್ಟಲಿನಿಂದ ಇಳಿದು ಬರುತ್ತಿದ್ದ ಡಾ ವಿವೇಕ್ ರೈ ಮತ್ತಿರರನ್ನು ನೋಡಿದೆ‌‌‌‌.ಹಾಗಂದಿದ್ದು ವಿವೇಕ ರೈಗಳೆಂದು ಅರ್ಥ ಮಾಡಿಕೊಂಡು ಅವರಿಗೆ ನಮಸ್ಕರಿಸಿದೆ.


ನನಗೆ ತುಂಬಾ ಅಚ್ಚರಿ ಆಗಿತ್ತು ಆಗ.ನನ್ನ ಮುಖ ಪರಿಚಯ ಬಿಡಿ ಹೆಸರು ಕೂಡ ಅವರಿಗೆ ತಿಳಿದಿರಲಾರರು ಎಂದು ನಾನು ಭಾವಿಸಿದ್ದೆ.


ಬಹಳ ದೊಡ್ಡ ವ್ಯಕ್ತಿ ಅವರು .ಯುನಿವರ್ಸಿಟಿಯ ವಿಸಿಯಾಗಿ ನಿವೃತ್ತರಾದವರು.ವಿದೇಶೀ ವಿಶ್ವ ವಿದ್ಯಾಲಯಗಳ ಆಹ್ವಾನಿತ ಅತಿಥಿ ಉಪನ್ಯಾಸಕರಾಗಿ ಬಲು ದೊಡ್ಡ ಗೌರವಕ್ಕೆ ಪಾತ್ರರಾದವರು...ಅವರೆಲ್ಲಿ..ಸಾಮಾನ್ಯ ಉಪನ್ಯಾಸಕಿಯಾಗಿರುವ ನಾನೆಲ್ಲಿ ? 


ಹಾಗಾಗಿ ಅವರೇ ಲಕ್ಷ್ಮೀಯವರಿಗೆ ನಮಸ್ಕಾರ ಎಂದಾಗ ಒಂದು ಕ್ಷಣ ಗಲಿಬಿಲಿಗೆ ಒಳಗಾಗಿದ್ದೆ.


ನಂತರ ನಾನು ಕಾಫಿ ಕುಡಿಯಲು ಹೋದೆ ಅಲ್ಲಿ ಈ ಪುಸ್ತಕದ ಸಂಪಾದಕರಾದ ಡಾ.ಜನಾರ್ದನ ಭಟ್ ಲೇಖಕರಾದ ಗುಣಾಜೆ ರಾಮಚಂದ್ರ ಭಟ್ ಸಿಕ್ಕರು.

ನಂತರ ಸಭಾ ಕಾರ್ಯಕ್ರಮ,ಪುಸ್ತಕ ಬಿಡುಗಡೆಯನ್ನು ತುಕಾರಾಮ ಪೂಜಾರಿಯವರು ಮಾಡಿದರು ( ಕಾಲನ ನಡೆ ಬಹಳ ವಿಚಿತ್ರವಾದುದು ,ಈ ಬಗ್ಗೆ ಇನ್ನೊಂದಿನ ಬರೆಯುವೆ  )

ನಂತರ ಮೀಯಪದವು ಪ್ರೌಢ ಶಾಲೆಯ ರಾಜಾರಾಮ‌ಮಾಸ್ಟ್ರು ತಮ್ಮ  ಕಾರಿನಲ್ಲಿ ಮನೆಗೆ ತನಕ ಬಿಟ್ಟರು .


ಈ ವಿಚಾರವನ್ನು ಮರೆತೇ ಬಿಟ್ಟಿದ್ದೆ ಕೂಡ‌.ನಿನ್ನೆ ಫ್ಯಾಕ್ಟ್ ಚೆಕ್ ಒಂದರಲ್ಲಿ ನಮ್ಮ‌ ಪ್ರಧಾನಿ ಯವರಾದ ನರೇಂದ್ರ ಮೋದಿಯವರು ಸಾಮಾಜಿಕ ಕಾರ್ಯಕರ್ತೆ ಮೊಂಡಲ್  ಅವರಿಗೆ ನಮಸ್ಕರಿಸಿದ ಫೋಟೋ ನೋಡಿದೆ


ಆ ಬಗ್ಗೆ ಮೊಂಡಲ್  ಅವರು ನರೇಂದ್ರ ಮೋದಿಯವರಿಗೆ ನಾನು ನಮಸ್ಕರಿಸಿದೆ ಆಗ ನೀವು ಏನು ಮಾಡುತ್ತೀರಿ ಎಂದು ವಿಚಾರಿಸಿದರು.ಆಗ ನಾನು ಸಮಾಜ ಸೇವಾ ಕಾರ್ಯಕರ್ತೆ ಎಂದೆ.ಆಗ ಅವರು ಕೈಮುಗಿದರು.

ಆಗ ನನಗೆಷ್ಟು ಸಂತಸವಾಯಿತೆಂದು ನನ್ನ ನಗುತ್ತಿರುವ ಫೋಟೋ ನೋಡಿದರೆ ತಿಳಿಯಬಹುದು ಎಂದಿದ್ದ ಬಗ್ಗೆ ವಿವರಣೆ ಇತ್ತು


ಹೌದು‌.ದೊಡ್ಡವರು ಯಾವಾಗಲೂ ಹಾಗೆಯೇ..ಅರ್ಹತೆಯನ್ನು ಗುರುತಿಸಿ ಅವರಿಗೆ ತಲೆಬಾಗುತ್ತಾರೆ.


ಆಗ ನನಗೆ ಡಾ.ಬಿ ಎ ವಿವೇಕ ರೈಗಳು ಕಾಂತಾವರದಲ್ಲಿ  ಅವರಾಗಿಯೇ  ಕರೆದು ನಮಸ್ಕರಿಸಿದ್ದು ನೆನಪಾಯಿತು.


ದೊಡ್ಡವರ ನಡೆ ಯಾವಾಗಲೂ ಹಾಗೆಯೇ..ಅನೂಹ್ಯವಾದದ್ದು.

ದೊಡ್ಡವರು ಯಾವಾಗಲೂ ಒಳಿತನ್ನು ಗುರುತಿಸಿ ಗೌರವಿಸುತ್ತಾರೆ.


ಅವರು ನಮಗೆ ನಮಸ್ಕರಿಸಿದ್ದಾರೆ ಎಂದರೆ ನಾವು ದೊಡ್ಡವರು ಎಂದರ್ಥವಲ್ಲ.ಅವರಿಗೆ ಎಳೆಯರಲ್ಲಿನ ಅರ್ಹತೆಯನ್ನು ಗುರುತಿಸಿ ಗೌರವಿಸುವ ಉದಾರ ಹೃದಯ ಇದೆ ಎಂದು ಅರ್ಥ ಅಷ್ಟೇ‌


ಡಾ.ಬಿ ಎ ವಿವೇಕ ರೈಗಳು ಎಷ್ಟು ಎತ್ತರದ ವ್ಯಕ್ತಿ ಎಂದಿದರಲ್ಲಿ ಅರ್ಥವಾಗುತ್ತದೆ.ಆ ಪೊಂಜೋವಿನ ಪಾತೆರನ್ ಎಂಕುಲು ಲೆಕ್ಕೊಗ್ ದೀಪುಜ್ಜ ( ಅ ಹೆಂಗಸಿನ ಮಾತನ್ನು ನಾನು ಲೆಕ್ಕಕ್ಕೆ ತಗೊಳ್ಳುದಿಲ್ಲ ) ಸರ್ಟಿಫಿಕೇಟ್ ಗಳು ಮಾನದಂಡವಲ್ಲ ಎಂಬವರ ನಡುವೆ ಇವರು ಭಿನ್ನರಾಗಿ ನಿಲ್ಲುತ್ತಾರೆ.


ಭ್ರಷ್ಟರಿಗೆ ನನ್ನ ಮೂರು ಎಂಎ ಎರಡು ಡಾಕ್ಡರೇಟ್ ಪದವಿಗಳ,ಇನ್ನೂರರಷ್ಡು ಅಂತರಾಷ್ಟ್ರೀಯ ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಸಂಶೋಧನಾ ಪ್ರಬಂಧಗಳ ಬಗೆಗಿನ ಸರ್ಟಿಫಿಕೇಟ್ ಗಳು ಮಾನದಂಡವಲ್ಲ.ಪ್ರಕಟಿತ ಇಪ್ಪತ್ತು ಪುಸ್ತಕಗಳು,ಬರಹಗಳು ಮಾನದಂಡವಲ್ಲ‌ಹಾಗಾದರೆ ಆಯ್ಕೆ ಸಮಿತಿಯವರ ಮಾನ ದಂಡ ಯಾವುದು ? ಮಾನವೂ ಇಲ್ಲ..ದಂಡವೇ ಎಲ್ಲ..ದುಡ್ಡು,ಜಾತಿ ,ಇನ್ಪ್ಲೂಯೆನ್ಸ್ ಅಷ್ಟೇ ಎಲ್ಲ 


ಮಾನ ಇರುವ ಹಿರಿಯರಿಗೆ ಅರ್ಹತೆ ಕಾಣಿಸುತ್ತದೆ ಎಂಬುದಕ್ಕೆ ವಿವೇಕ ರೈಗಳೇ ಸಾಕ್ಷಿ 

ತುಳು ಜಾನಪದ ಸಂಸ್ಕೃತಿ ಅದರಲ್ಲೂ ನಡು ರಾತ್ರಿ ನಡೆವ ಭೂತ ಕೋಲವನ್ನು ರೆಕಾರ್ಡ್ ಮಾಡಿ ಅಧ್ಯಯನ ಮಾಡಿ ಮಾಹಿತಿ ಕಲೆ ಹಾಕುದು ಎಷ್ಟು ಕಷ್ಟದ ವಿಚಾರ ಹೇಳುದು ಮೂಲತಃ ಜಾನಪದ ಸಂಶೋಧಕರಾದ ಅವರಿಗೆ ಅರಿವಿತ್ತು.ಫ್ಯಾನ್ ಅಡಿಯಲ್ಲಿ ಕುಳಿತು ಯಾರದೊ ಕೃತಿ ಬಗ್ಗೆ ಬರೆದು ಡಾಕ್ಟರೇಟ್ ಪದವಿ ಪಡೆವದಕ್ಕೂ ಕ್ಷೇತ್ರ ಕಾರ್ಯದ ಆಧಾರಿತ ಅಧ್ಯಯನಕ್ಕೂ ಅಜಗಜಾಂತರವಿದೆ.ಅದರ ಮಹತ್ವವನ್ನು ಡಾ.ವಿವೇಕ ರೈಗಳು ಗುರುತಿಸಿದ್ದರು 


ಡಾ.ಲಕ್ಷ್ಮೀ ಜಿ ಪ್ರಸಾದ್

Sunday, 9 May 2021

ದೊಡ್ಡವರ ದಾರಿ 76 : ಡಾ.ಜನಾರ್ದನ ಭಟ್

 


ದೊಡ್ಡವರ ದಾರಿ 76 : ಡಾ.ಜನಾರ್ದನ ಭಟ್ Janardana Bhat

ಸೋಂಕು ತಗುಲಿದಾಗ ನಿಮಗೆ ಮೊದಲು ನೆನಪಿಗೆ ಬಂದದ್ದು ಯಾರು ? ಇದು ಅನೇಕರು ನನ್ನಲ್ಲಿ ಕೇಳಿದ ಪ್ರಶ್ನೆ

ಕೊರೊನಾ ಲಕ್ಷಣ ಕಾಣಿಸಿಕೊಂಡಾಗ ನನಗೆ ಮೊದಲು ನೆನಪಾದದ್ದು ಅಮ್ಮ.
ನನಗೇನಾದರೂ ಆದರೆ ಅಮ್ಮನಿಗೆ ತಡೆಯಲಾಗದು ಎನಿಸಿತು.
ಜೊತೆಗೆ ಇನ್ನೊಂದು ವಿಚಾರ ತಲೆಗೆ ಬಂತು
ಕಳೆದ ಇಪ್ಪತ್ತು ವರ್ಷಗಳಿಂದ ಕ್ಷೇತ್ರ ಕಾರ್ಯ ಅಧ್ಯಯನ ಮಾಡಿ ಸಾವಿರಕ್ಕು ಹೆಚ್ಚಿನ ದೈವಗಳ ಮಾಹಿತಿ ಸಂಗ್ರಹ ಮಾಡಿದ್ದೆ.ಪ್ರಕಟಿಸುವುದಕ್ಕಾಗಿ ಬರೆದು ಕೂಡ ಆಗಿದೆ.ಅದರೆ ಅದಕ್ಕೆ ಅದನ್ನು ತಿದ್ದಿ ವ್ಯವಸ್ಥಿತವಾಗಿ ಜೋಡಿಸಿ ಸೂಕ್ತ ಫೋಟೋಗಳನ್ನು ಹಾಕುವ ಕೆಲಸ ಉಳಿದಿತ್ತು
ಜೊತೆಗೆ A4size ನ ಸಾವಿರದಷ್ಟು ಪುಟಗಳುಳ್ಳ ಪುಸ್ತಕದ ಪ್ರಕಟಣೆಗೆ ಎಂಟು ಹತ್ತು ಲಕ್ಷ ಖರ್ಚಿದೆ‌.

ಒಂದೊಮ್ಮೆ ನಾನಿಲ್ಲವಾದರೆ
ಇವನ್ನೆಲ್ಲ ಮಾಡಲು ಮಗ ಅರವಿಂದನಿಂದ ಸಾಧ್ಯವಿಲ್ಲ.
ನನ್ನ ಇಷ್ಡು ಸಮಯದ ಅಧ್ಯಯನ  ಮುಂದಿನ ತಲೆಮಾರಿಗೆ ತಲುಪದೇ ವ್ಯರ್ಥವಾಗುತ್ತದಲ್ಲ ಎಂಬ ಚಿಂತೆ ಕಾಡಿತು.
ಯಾವುದಕ್ಕೂ ಇರಲಿ ಎಂದು ಬರೆದಿಟ್ಟಿರುವ ವರ್್ಡ್ ಫೈಲನ್ನು ಮಗನಿಗೆ ಇ ಮೇಲ್ ಮಾಡಿದೆ.
ಆಗ ನನಗೆ ನಾನಿಲ್ಲದಿದ್ದರೂ ಈ ಕೆಲಸವನ್ನು ನಿಸ್ವಾರ್ಥದಿಂದ ಸಮರ್ಪಕವಾಗಿ ಹಿರಿಯ ಸಂಶೋಧಕರಾದ ನಿವೃತ್ತ ಪ್ರಾಾಂಶುಪಾಲರೂ ಐವತ್ತಕ್ಕಿಂತ. ಹೆಚ್ಚು ಪುಸ್ತಕಗಳನ್ನು ರಚಿಸಿ ಪ್ರರಕಟಿಸಿರು  ಡಾ.ಜನಾರ್ಧನ ಭಟ್ ಅವರು ಮಾಡಬಲ್ಲರು ಎಂದೆನಿಸಿತು.
ಅವರೊಂದು ಅದ್ಭುತ ವ್ಯಕ್ತಿ.ಹೇಗೆ ಅಷ್ಟನ್ನು ಬರೆಯುವರೊ ನನಗೆ ಗೊತ್ತಾಗುದಿಲ್ಲ.ಕೆಲವರಿಗೆ ದೇವರು ಹೆಚ್ಚಿನ ಸಾಮರ್ಥ್ಯ ಕೊಟ್ಟಿರ್ತಾನೆ
ಹಾಗೆ ಹಾಸ್ಪಿಟಲ್ ಗೆ ದಾಖಲಾಗಲು ಹೋಗುವ ಮೊದಲು‌ಡಾ.ಜನಾರ್ದನ ಭಟ್ ರಿಗೆ ಕರೆ ಮಾಡಿ ನನಗೆ ಕೊರೊನಾ ಪಾಸಿಟಿವ್ ಬಂದಿದ್ದು ಅಸ್ಪತ್ರೆಗೆ ದಾಖಲಾಗಬೇಕಿರುವ ಬಗ್ಗೆ ತಿಳಿಸಿದೆ.ಅಲ್ಲಿ‌ಮೊಬೈಲ್ ತಗೊಂಡು ಹೋಗಲು ಬಿಡುವರೊ ಇಲ್ಲವೊ ಗೊತ್ತಿಲ್ಲ.ಹಾಗಾಗಿ ಈಗಲೇ ರಿಕ್ವೆಷ್ಟ್ ಮಾಡುವೆ ಸರಗ,ಒಂದೊಮ್ಮೆ ನಾನು ಆಸ್ಪತ್ರೆಯಿಂದ ಜೀವಂತ ಬಾರದೇ ಇದ್ದರೆ ನನ್ನ ಪುಸ್ತಕವನ್ನು ಎಡಿಟ್ ಮಾಡಿ  ದುಡ್ಡು ಹೊಂದಿಸಿ ಪ್ರಕಟಿಸುವಿರಾ ? ಎಂದು ಕೇಳಿದೆ..ನೀವು ಹುಷಾರಾಗಿ ಬರ್ತೀರಿ ಎಂದು ದೃಢವಾಗಿ ಹೇಳಿದರು  ,ಒಂದೊಮ್ಮೆ ಬಾರದಿದ್ದರೆ ಪ್ರಕಟಿಸುತ್ತೀರಾ ಕೇಳಿದೆ  ಎಂದು ಹೇಳಿದೆ.ಆಗ ಅಯಿತು ಖಂಡಿತಾ ಪ್ರಕಟಿಸುತ್ತೇನೆ ,ಆದರೆ ಹಾಗಾಗುದಿಲ್ಲ‌‌.ಹುಷಾರಾಗು ಬಂದು ನೀವೇ ಅದನ್ನು ಪ್ರಕಟಿಸುತ್ತೀರಿ ಎಂದರು
ಅಬ್ಬಾ.. ಭಾರ ಇಳಿಸಿದ ಅನುಭವ ಆಯಿತು
ಮನಸ್ಸು ನಿರಾಳವಾಯಿತು.
ನೆಮ್ಮದಿಯಿಂದ ಆಸ್ಪತ್ರೆಗೆ ಹೋಗಿ ದಾಖಲಾಗಿ ಚಿಕಿತ್ಸೆ ಪಡೆದು ಹುಷಾರಾಗಿ ಬಂದೆ
ಈಗ ಬರೆದದ್ದನ್ನು ತಂಗಿಯಂತೆ ಇರುವ ಸ್ನೇಹಿತೆ ಶ್ರೀನಿಧಿ ಕರೆಕ್ಷನ್ ಹಾಕುತ್ತಿದ್ದಾರೆ.
ನಾನು ಅಲ್ಲಲ್ಲಿ ಬಿಟ್ಟು ಹೋಗಿರುದನ್ನು ತುಂಬಿಸುತ್ತಿದ್ದೇನೆ ನಾಗರಾಜ ಭಟ್ ,ರಾಜೇಂದ್ರ ಕುಮಾರ್ ಜೈನ್ ಗೌತಮ್ ಜೈನ್ ,ವಿಜಯ್ ಮೊದಲಾದವರು ಅಪರೂಪದ ಪೋಟೋಗಳನ್ನು ಒದಗಿಸಿದ್ದಾರೆ‌.ಇನ್ನು ಕೆಲವರಲ್ಲಿ ಕೇಳಿರುವೆ
ಇದನ್ನಲ್ಲ ಜೋಡಿಸುವಾಗ ಈ ಪುಸ್ತಕವನ್ನು ನಾನು ಪ್ರಕಟಿಸುವ ಬದಲು ಜನಾರ್ದನ ಭಟ್ ಅವರು ಪ್ರಕಟಿಸಿದರೆ ತುಂಬಾ ಚೆನ್ನಾಗಿ ಬರ್ತಿತ್ತು ಎಂದು ನನಗೆ ಅನಿಸಿದೆ.ಅವರ ಅನುಭವ ,ಕೌಶಲ ಬಹಳ ಹೆಚ್ಚಿನದು.
ಅವರಲ್ಲಿ ಸಲಹೆ ಪಡೆಯುವೆ
ನನ್ನ ಅಧ್ಯಯನಾತ್ಮ ಸಂಗ್ರಹ ಸಾವಿರಕ್ಕಿಂತ ಹೆಚ್ಚಿನ ದೈವಗಳ ಮಾಹಿತಿ ಇರುವ ಪುಸ್ತಕ ಪ್ರಕಟಿಸುವ ಮುನ್ನವೇ ನಾನು ಸತ್ತರೆ ಇದನ್ನಾರು ಪ್ರಕಟಿಸುವರು ಎಂಬ ಆತಂಕ ಕಾಡಿದಾಗ ದೃಡವಾಗಿ ಪ್ರಕಟಿಸುವೆ ಎಂದು ಲಕ್ಷ ಗಟ್ಟಲೆ ಖರ್ಚಿನ ತಲೆನೋವಿನ ಜವಾಬ್ದಾರಿಯನ್ನು ಹೊರಲು ಸಿದ್ದರಾಗಿದ್ದ ಜನಾರ್ದನ ಭಟ್ಟರ ಔನ್ನತ್ಯಕ್ಕೆ ಹಿರಿತನಕ್ಕೆ ಸಹೃದಯತೆಗೆ ನಾನು ಆಭಾರಿಯಾಗಿದ್ದೇನೆ

Saturday, 10 April 2021

ನನಗೂ ಆತ್ಮವಿದೆ..ಪಾಸು ಫೇಲೆಂಬ ಆತಂಕದ ದಿನದಂದು

 ಎಪ್ರಿಲ್ ಹತ್ತರ  ಪಾಸು ಫೇಲಿನ ದಿನವೆಂಬ ಭಯ ಆತಂಕದ ದಿನ 


ಹೌದು..ಪ್ರತಿವರ್ಷ ಎಪ್ರಿಲ್ ಹತ್ತಕ್ಕೆ ನಮ್ಮ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಶಾಲೆಯ ಬೋರ್ಡ್ ನಲ್ಲಿ ಹಾಕ್ತಿದ್ದರು.ಎಪ್ರಿಲ್  ಮೊದಲ ದಿನಾಂಕದಿಂದಲೇ ಎದೆಯಲ್ಲಿ ಅವಲಕ್ಕಿ ಕುಟ್ಟಲು ಶುರುವಾಗುತ್ತಿತ್ತು.ಪಾಸ್ ಪೇಲ್ ದಿನ ಹತ್ತಿರ ಬಂದ ಹಾಗೇ ಊಟ ತಿಂಡಿ ಸೇರುತ್ತಿರಲಿಲ್ಲ.ನಮ್ಮಂತೆಯೇ ನಮ್ಮ ಹೆತ್ತವರಿಗೂ ಇದೇ ಆತಂಕ.

ಚೆನ್ನಾಗಿ ಕಲಿಯದವರನ್ನು ಫೇಲಾದವರನ್ನು "ಹೋಗು ಬಜೆಂಟ್ ಹೆರ್ಕು " ಎಂದು ಬೈಉವ ವಾಡಿಕೆ ಇತ್ತು.ಆದರೆ ಪಾಸಾಗುತ್ತಿದ್ದ ನಾವು ಕೂಡ ಬೇಸಗೆಯಲ್ಲಿ ಬಜಂಟ್ ಹೆಕ್ಕುತ್ತಿದ್ದೆವು.

ಬಜಂಟು ಎಂದರೆ ಒಣ ಸೆಗಣಿ.ಬೇಸಗೆಯ ಸಮಯದಲ್ಲಿ ನಾವು‌ಮಕ್ಕಳೆಲ್ಲ ಗುಡ್ಡವೆಲ್ಲ ಬಜೆಂಟಿಗಾಗಿ ಹುಡುಕುತ್ತಿದ್ದೆವು.ಮೇಯಲು ಬಿಟ್ಟ ಹಸುಗಳು ಹಾಕಿದ ಒಣ ಸೆಗಣಿ ಸಿಕ್ತಾ ಇತ್ತು.

ಇದನ್ನು ಮಳೆಗಾಲದಲ್ಲಿ ಒಲೆ ಉರಿಸಲು ಬಳಸುತ್ತಾ ಇದ್ದರು.

ನಾವು ಏಳೆಂಟು ಸಮ ವಯಸ್ಸಿನ ಮಕ್ಕಳು ಒಂದೊಂದು ಗೋಣಿ ಚೀಲ ಹಿಡಿದುಕೊಂಡು ಬಜಂಟು ಹೆಕ್ಕಲು ಹೋಗುತ್ತಿದ್ದೆವು.ಅದು ನಮಗೆ ಬೇಸರ ತರುವ ಕೆಲಸವಾಗಿರಲಿಲ್ಲ.ಗುಡ್ಡಗಾಡಿಬ ಕಾಡು ಹಣ್ಣುಗಳನ್ನು ಅಯ್ದು ತಿಂದುಕೊಂಡು ಕಾಡು ಹರಟೆ ಹೊಡೆದುಕೊಂಡು ಬಹಳ ಖುಷಿಯಿಂದ ಈ ಕೆಲಸ ಮಾಡ್ತಿದ್ದೆವು ಎಂಬುದು ಬೇರೆ ವಿಚಾರ.ಅದರೂ ಫೇಲಾದವರು ಬಜಂಟು ಹೆಕ್ಕಲು ಲಾಯಕ್ಕು ಎಂಬ ಮಾತು ಆಗ ಇತ್ತು 


ಆಗೆಲ್ಲ ಫೇಲ್ ಆದರೆ ಮರು ಪರೀಕ್ಷೆ ಇರುತ್ತಿರಲಿಲ್ಲ.ಮತ್ತೆ ಒಂದು ವರ್ಷ ಅದೇ ತರಗತಿಯಲ್ಲಿ ಇರಬೇಕು.ಅದು ನಮಗೆ ಬಹಳ ಅವಮಾನಕರ ವಿಚಾರ.ಹಾಗಾಗಿ ಪಾಸಾಗದಿದ್ದರೆ ಎಂಬ ಆತಂಕ ಕಾಡುತ್ತಿತ್ತು.


ಕೆಲವೊಮ್ಮೆ ಜಾಣ ಮಕ್ಕಳಿಗೆ ಏನಾದರೂ ಆರೋಗ್ಯ ಸಮಸ್ಯೆ ಉಂಟಾಗಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಆಗದಿದ್ದರೆ ಅವರೂ ಕೂಡ ಫೇಲ್ .ನಂತರದ ಒಂದು ವರ್ಷ ಅದೇ ತರಗತಿಯಲ್ಲಿ ಕುಳಿತುಕೊಳ್ಳಬೇಕು.


ಈ ಅವಮಾನ ಸ್ವೀಕರಿಸಲು ತಯಾರಿಲ್ಲದ ಮಕ್ಕಳ ವಿದ್ಯಾಭ್ಯಾಸ ಇದೇ ಕಾರಣಕ್ಕಾಗಿ ಅಲ್ಲಿಗೇ ನಿಂತು ಹೋಗುತ್ತಿತ್ತು.


ನನಗೆ ನೆನಪಿನಲ್ಲಿರುವಂತೆ ನನ್ನ ಸಹಪಾಠಿಗಳಾಗಿದ್ದ  ಇಬ್ಬರು ಜಾಣ ವಿದ್ಯಾರ್ಥಿಗಳ ಶಿಜ್ಷಣ ಹೀಗೆ ಅರ್ಧದಲ್ಲಿಯೇ ಮೊಟಕಾಗಿತ್ತು


ಒಂದು ನನ್ನ ಬಾಲ್ಯ ಸ್ನೇಹಿತೆ ಯಶೋದಾಳದು.ಅವಳು ಎಂಟನೇ ತರಗತಿಯ ಅಂತಿಮ /ವಾರ್ಷಿಕ ಪರೀಕ್ಷೆಯಲ್ಲಿ ಒಂದೆರಡು ವಿಷಯಗಳಿಗೆ ಗೈರು ಹಾಜರಾಗಿದ್ದಳು.


ಅವಳೂ ನಾನೂ ಒಟ್ಟಿಗೆ ಕೋಳ್ಯೂರಿನಿಂದ ಕೊಡ್ಲಮೊಗರಿನ ವಾಣಿವಿಜಯ ಪ್ರೌಢಶಾಲೆಗೆ  ನಡೆದುಕೊಂಡು ಹೋಗಿ ಬರುತ್ತಿದ್ದೆವು.ಎರಡು ಗುಡ್ಡ ಹತ್ತಿ ಇಳಿಯಬೇಕು.ಸುಮಾರು ನಾಲ್ಕೈದು ಮೈಲು ನಡೆಯಬೇಕಿತ್ತು.


ಅಗಿ‌ನ್ನೂ ನನಗೆ ಸರಿಯಾಗಿ ನೆನಪಿದೆ

ಸುಮಾರು ಎಂಟು ಎಂಟೂವರೆ ಗಂಟೆ ಹೊತ್ತಿಗೆ ಅವಳು ನಮ್ಮ ಮನೆಗೆ ಬರ್ತಿದ್ದಳು.ಅವಳನ್ನೇ ಕಾಯುತ್ತಿರುವ ನಾನು ಕೂಡಲೇ ಮೆಟ್ಟಿಳಿದು ಮನೆಯ ಗದ್ದೆಯ ಬದುವಿನಲ್ಲಿ ಸಾಗಿ.ತೋಡಿನ ಸಂಕ ದಾಟಿ ಅಂಗಡಿ ಎದುರು ಎತ್ತರಕ್ಕೆ ಹತ್ತಿ ಸಾಗುತ್ತಿದ್ದೆವು.

 1986 ಮಾರ್ಚ್ ಕೊನೆಯ ವಾರ.ಪ್ರೌಢ ಶಾಲೆಯಲ್ಲಿ ಅಂತಿಮ ಪರಿಕ್ಷೆಗಳು ನಡೆಯುತ್ತಿದ್ದವು.

.ನಮಗೆ ಆಗ ಹನ್ನೆರಡು ಪರೀಕ್ಷೆಗಳಿದ್ದವು.ಕನ್ನಡ ಎರಡು ಪತ್ರಿಕೆಗಳು,ವಿಜ್ಞಾನ ಮೂರು ಪತ್ರಿಕೆಗಳು,ಗಣಿತ ಎರಡು ಪತ್ರಿಕೆಗಳು ,ಸಮಾಜ ಶಾಸ್ತ್ರ ಎರಡು ಪತ್ರಿಕೆಗಳು ,ಹಿಂದಿ ಒಂದು ಪತ್ರಿಕೆ.


ಕೊನೆಯ ಒಂದೆರಡು ಪರೀಕ್ಷೆಗಳು ಉಳಿದಿದ್ದವು

ಆ ದಿನ ಯಶೋಧಾ ಎಂಟೂವರೆ ಕಳೆದರೂ ನಮ್ಮ‌ಮನೆಗೆ ಬಂದಿರಲಿಲ್ಲ.ಅವಳ ಮನೆಯಿಂದ ಶಾಲೆಗೆ ಹೋಗುವ ದಾರಿಯಲ್ಲಿ ನಮ್ಮ ಮನೆ ಇತ್ತು.


ಅವಳು ಬಾರದ ಕಾರಣ ನಾನೇ ಅವಳ ಮನೆಗೆ ಹೋದೆ.ಅವಳು ಚಳಿಗೆ ನಡುಗುತ್ತಾ ಕಂಬಳಿ ಹೊದ್ದು ಮಲಗಿದ್ದಳು.

"ನಮ್ಮ ಯಶೋಧೆಗೆ  ಮೈಯಲ್ಲಿ ಬಿದ್ದಿದೆ( ಚಿಕನ್ ಪಾಕ್ಸ್ ) .ಅವಳು ಪರೀಕ್ಷೆಗೆ ಬರುದಿಲ್ಲ‌.ನೀನು ಹೋಗು ವಿದ್ಯಾ ,( ನನ್ನನ್ನು ಮನೆಯಲ್ಲಿ,ಊರಲಿ ವಿದ್ಯಾ ಎಂದು ಕರೆಯುತ್ತಾರೆ )ಒಂದು ವಾರ ಮನೆಗೆ ಬರಬೇಡ.ನಿನಗೂ ಹರಡುತ್ತದೆ " ಎಂದು ಹೇಳಿದರು


ಆಗ ಅಯ್ಯೋ..ಅವಳು ಫೇಲ್ ಆಗ್ತಾಳಲ್ಲ ಎಂದು ನನಗೆ ಆತಂಕ ಆಯಿತು.

ನಂತರ ಒಬ್ಬಳೇ ನಡೆದುಕೊಂಡು ಶಾಲೆಗೆ ಬಂದು ಪರೀಕ್ಷೆ ಬರೆದೆ.

ನಿರೀಕ್ಷೆಯಂತೆಯೇ ಯಶೋಧಾ ಫೇಲ್ ಆಗಿದ್ದಳು.

ಅದರ ಪರಿಣಾಮವಾಗಿ ಜಾಣೆಯಾಗಿದ್ದ ಅವಳ ಓದು ಅಲ್ಲಿಗೇ ನಿಂತಿತು.ಅವಳು ಮುಂದೆ ಓದಲಿಲ್ಲ.

ನಂತರ ದೊಡ್ಡವಳಾಗಿ ಮದುವೆಯಾದ ನಂತರ ಕಾಸಗಿಯಾಗಿ ಕಟ್ಟಿ ಎಸ್ ಎಸ್ ಎಲ್ ಸಿ ಪಿಯುಸಿ ಡಿಗ್ರಿ ಮಾಡಿದ್ದಾಳೆ.


ಇದೇ ರೀತಿಯಲ್ಲಿ ನಾನು ಒಂಬತ್ತನೇ ತರಗತಿ ಓದುತ್ತಿರುವಾಗ ರವೀಂದ್ರ ಎಂಬ ಹುಡುಗನಿಗೂ ಆರೋಗ್ಯ ಸಮಸ್ಯೆ ಬಂದು‌ಪರೀಕ್ಷೆ ಬರೆಯಲಾಗಲಿಲ್ಲ.ಫೇಲಾದ ಕಾರಣ ನಂತರ ಅವನೂ ವಿದ್ಯಾಭ್ಯಾಸ ಮುಂದುವರಿಸಲಿಲ್ಲ


ಈಗ ಒಂದರಿಂದ ಒಂಬತ್ತರ ತನಕ ಫೇಲ್ ಮಾಡುದೇ ಇಲ್ಲ.ಹಾಗಾಗಿ ನಮ್ಮಷ್ಟು ಆತಂಕ ಈಗಿನ‌ಮಕ್ಕಳಿಗೆ ಇರಲಾರದೋ ಏನೋ

ನನಗೆ ಈಗ ನಗು ಬರುವ ವಿಚಾರ ಒಂದಿದೆ.ನಾನು ಸಾಮಾನ್ಯವಾಗಿ ತರಗತಿಯಲ್ಲಿ‌ ಮೊದಲ‌ ಇಲ್ಲವೇ ಎರಡನೇ Rank ತೆಗೆಯುತ್ತಿದ್ದೆ.ನನ್ನನ್ನೂ ಫೇಲ್ ಮಾಡಿದರೆ ಮತ್ತೆ ಶಿಕ್ಷಕರು ಎಂತ ಮಾಡುದು ? ಪಾಠ ಮಾಡಲು ವಿದ್ಯಾರ್ಥಿಗಳು ಬೇಡವೇ?


ಆದರೆ ನನಗೆ ಆಗ ಈ ವಿಚಾರ ಎಲ್ಲ ಗೊತ್ತಿರಲಿಲ್ಲ.ಇತರ ಸಾಮಾನ್ಯ ಮಾರ್ಕ್ಸ್ನ ವಿದ್ಯಾರ್ಥಿಗಳಂತೆ ಪಾಸ್ ಫೇಲಿನ ದಿನವನ್ನು ಆತಂಕದಿಂದ ಎದುರು ನೋಡುತ್ತಿದ್ದೆ.

ಎಪ್ರಿಲ್ ಹತ್ತನೆಯ ತಾರೀಕಿನಂದು ಎಲ್ಲ ದೇವರುಗಳೂ ನೆನಪಿಗೆ ಬರ್ತಿದ್ದರು.ಅವರನ್ನೆಲ್ಲ ನೆನೆದು ನನ್ನನ್ನು ಪಾಸು ಮಾಡಿಸು ಎಂದು ಬೇಡಿಕೊಳ್ಳುತ್ತಿದ್ದೆ

ಎಂದಿಗಿಂತ ಬೇಗನೆ ಎದ್ದು ದೇವರಿಗೆ ಹೆಚ್ಚು ಹೂ ಕೊಯ್ದು ಇಡುತ್ತಿದ್ದೆ.ನಂತರ ಸ್ನಾನ ಮಾಡಿ ದೇವರಿಗೆ ಹೊಡಾಡಿ( ನಮಸ್ಕರಿಸಿ) ಶಾಲೆಗೆ ಹೋಗುತ್ತಿದ್ದೆ.ಅಲ್ಲಿ ಬೋರ್ಡ್ ನಲ್ಲಿ ಫೇಲಾದವರ ಹೆಸರನ್ನು ಹಾಕ್ತಾ ಇದ್ದರು.

ಶಾಲೆ ಸಮೀಪಿಸಿದಂತೆಲ್ಲ‌ ಎದೆ ಇತರರಿಗೆ  ಕೇಳುವಷ್ಡು ದೊಡ್ಡದಾಗಿ ಡಬ್ ಡಬ್ ಬಡಿಯುತ್ತಾ ಇತ್ತು.ಹೇಗೋ ಹೋಗಿ ಫೇಲಾದವರ ಲಿಸ್ಟ್  ಅನ್ನು ಎರಡೆರಡು ಸಲ ಓದಿ‌ ನನ್ನ ಹೆಸರು ಅದರಲ್ಲಿ ಇಲ್ಲದಿರುವುದನ್ನು ನೋಡಿ ಖಚಿತ ಗೊಳಿಸಿ ಬದುಕಿದೆಯಾ ಬಡಜೀವವೇ..ನಾನು ಪಾಸು ಎಂದು ಕುಣಿದಾಡಿಕೊಂಡು ಮನೆಗೆ ಬರ್ತಾ ಇದ್ದೆ.ಪಾಸಾದ ಇತರರೂ ಹೀಗೇ ಸಂಭ್ರಮದಿಂದ ಜೊತೆಯಾಗುತ್ತಿದ್ದರು.

ಫೇಲ್ ಆದವರು ಬಿಕ್ಕಿ ಬಿಕ್ಕಿ ಅಳ್ತಾ ಇದ್ದದ್ದು ಈಗಲೂ ನನ್ನ ಕಣ್ಣಿಗೆ ಕಟ್ತಿದೆ.ಅವರ ಬಗ್ಗೆ ನನಗೆ ಪಾಪ ಎನಿಸುತ್ತಿತ್ತು.ಯಾಕೆಂದರೆ ಫೇಲಾದ ಮಕ್ಕಳಿಗೆ ಮನೆಯಲ್ಲು ಕೂಡ ಪೆಟ್ಡು ಕಾದಿರ್ತಾ ಇದ್ದದ್ದು ನನಗೆ ಗೊತ್ತಿತ್ತು


ಇನ್ನು ಹತ್ತನೇ ತರಗತಿಯ ಫಲಿತಾಂಸದ ದಿನದ ಬಗ್ಗೆ ಹೇಳುದೇ ಬೇಡ..ಅಷ್ಡು ಆತಂಕದ ಕ್ಷಣಗಳವು.ಆ ಬಗ್ಗೆ ಇನ್ನೊಂದಿನ ಬರೆಯುವೆ

ಡಾ.ಲಕ್ಷ್ಮೀ ಜಿ ಪ್ರಸಾದ್ 

Tuesday, 30 March 2021

 ಸತ್ಯನಾಪುರದ ಸಿರಿಯನ್ನು ನೆನಪಿಸಿದ ಮಾದರಿ ಮಹಿಳೆ ಮಹಾಲಕ್ಷ್ಮಿ ಮೇಡಂ ದಿಟ್ಟತನಕ್ಕೆ ನಮೋನ್ನಮಃ 


ಹೌದು . ಸುಮಾರು  ಒಂದು ಸಾವಿರದ ಅರುನೂರು ವರ್ಷಗಳ ಹಿಂದೆಯೇ ಅನ್ಯ ಸ್ತ್ರೀಯ ಹಿಂದೆ ಹೋದ ಗಂಡನಿಗೆ ವಿಚ್ಚೇದನ ನೀಡಿ ಮರು ಮದುವೆಯಾಗಿ ತುಳುನಾಡಿನ ಮಹಿಳೆಯರಿಗೆ ಮಾತ್ರವಲ್ಲ‌ ಇಡೀ ಜಗತ್ತಿನ ಸ್ತ್ರೀಯರಿಗೇ ಮಾದರಿಯಾದ ಮಹಾನ್ ಚೇತನ ಸತ್ಯನಾಪುರದ ಬಾಲಕ್ಕೆ ಸಿರಿಯದು.

ಸಿರಿಗೆ ಮದುವೆಯಾಗಿ ಒಬ್ಬ ಮಗನಿದ್ದ .ಸಿರಿ ಎರಡನೆ ಮದುವೆಯಾಗುವ ತೀರ್ಮಾನಕ್ಕೆ ಬರುವಷ್ಟರಲ್ಲಿ ಆತನೂ ದುರಂತವನ್ನಪ್ಪಿದ‌. 

ಸಿರಿ ಕೂಡ  ದೈಹಿಕ ಕಾಮನೆಗಳಿಗಾಗಿ ಇನ್ನೊಂದು ವಿವಾಹವಾಗುದಿಲ್ಲ.ತುಳುವ ಸ್ತ್ರೀಯರ ಸ್ವಾಭಿಮಾನದ ರಕ್ಷಣೆಗಾಗಿ ಅಕೆ ದುರುಳ ಗಂಡನನ್ನು ಧಿಕ್ಕರಿಸಿ ಮರು ಮದುವೆಯಾಗುತ್ತಾಳೆ.ಒಂಟಿ ಮಹಿಳೆಯಾಗಿದ್ದ ಆಕೆಗೆ ಆಶ್ರಯವೂ ಬೇಕಿದ್ದಿರಬಹುದು.ವಿವಾಹದ ನಂತರ ಮಡದಿಯಾಗಿ ತನ್ನ ಕರ್ತವ್ಯವವನ್ನು ನಿರ್ವಹಿಸಿದ ಸಿರಿ ಹೆಣ್ಣು ಮಗುವೊಂದಕ್ಕೆ ಜನ್ಮವಿತ್ತು ದೈವತ್ವ ಪಡೆದು ಅರಾದಿಸಲ್ಪಡುತ್ತಾಳೆ

ಸ್ವಾಭಿಮಾನದ ಕಾರಣಕ್ಕಾಗಿಯೇ ನನಗೆ ಸತ್ಯನಾಪುರದ ಸಿರಿ ದೈವತ ಬಹಳ ಹತ್ತಿರವಾದವಳು.

ಮತ್ತೆ ಇಂದು ಅಕೆಯನ್ನು ನೆನಪಿಸಿದರು ಮೈಸೂರಿನ ನಿವೃತ್ತ ಶಿಕ್ಷಕಿ ಎಪ್ಪತ್ತಮೂರರ ಜೀವನೋತ್ಸಾಹಿ‌ ಮಹಾಲಕ್ಷ್ಮೀ ಮೇಡಂ 

ಕೆಲ ದಿನಗಳ ಹಿಂದೆ ನಿವೃತ್ತ ಶಿಕ್ಷಕಿಗೆ 73 ಕ್ಕಿಂತ ಹೆಚ್ಚಿನ ವಯಸ್ಸಿನ ಅರೋಗ್ಯವಂತ ಬ್ರಾಹ್ಮಣ  ವರ ಬೇಕಾಗಿದ್ದಾನೆ ಎಂಬ ಜಾಹಿರಾತು ಪ್ರಕಟವಾಯಿತು.

ಇದನ್ನೋದಿದ ಅನೇಕ ಬುದ್ದಿ ಹೀನರು ನಕ್ಕದ್ದೇನು ? ಅವಹೇಳನ ಮಾಡಿದ್ದೇನು..ಅಬ್ಬಬ್ಬಾ ಇವರೆಲ್ಲ ಮನುಷ್ಯ ವರ್ಗಕ್ಕೆ ಸೇರಿದವರಾ ಎನಿಸಿತ್ತು ನನಗೆ‌.

ಅಗಲೇ ಮಂಜುನಾಥ ಕೊಳ್ಳೇಗಾಲ ಜೆ ಬಿ ಅರ್ ಮೊದಲಾದವರು ಅವಹೆಳನ ಮಾಡಿದವರನ್ನು ವಿರೋಧಿಸಿ ವಾಸ್ತವಿಕತೆಯ ಅರಿವು ಮುಡಿಸುವ ಬರಹ ಬರೆದಿದ್ದರು.


ಇಂದು ನಾನು ಅ ಜಾಹಿರಾತು ನೀಡಿದ ಮಹಿಳೆ ಮಹಾಲಕ್ಷ್ಮೀ ಮೇಡಂ ಗೆ ಕರೆ ಮಾಡಿದೆ.ಆರಂಭದಲ್ಲಿ ಅವರು ಕರೆ ಸ್ವೀಕರಿಸಲಿಲ್ಲ.ಅದನ್ನು ನಾನು ನಿರೀಕ್ಷಿಸಿದ್ದೆ ಕೂಡ.


ಈಗಾಗಲೇ ಅವರಿಗೆ ಅನೆಕರು ಕರೆ ಮಾಡಿ ಅವಹೇಳನ ಮಾಡರ್ತಾರೆ.ಈಗ ಕರೆ ಮಾಡಿದ ನನ್ನ ಕರೆ ಕೂಡ ಅಂತಹದೇ ಒಂದು ಎಂದು ಭಾವಿಸಿ ಕರೆ ಸ್ವೀಕರಿಸಲಿಲ್ಲ.


ಹಾಗಾಗಿ ನಾನವರಿಗೆ ಹೀಗೆ ಮೆಸೇಜ್ ಮಾಡಿದೆ.

ನಮಸ್ತೆ ಮೇಡಂ

"ನಾನು ಡಾ.ಲಕ್ಷ್ಮೀ ಜಿ ಪ್ರಸಾದ್

ಕನ್ನಡ ಉಪನ್ಯಾಸಕಿ

ಸರ್ಕಾರಿ ಪದವಿ ಪೂರ್ವ ಕಾಲೇಜು,ಬ್ಯಾಟರಾಯನಪುರ,ಬೆಂಗಳೂರು


ನನಗೆ ನಿಮ್ಮ ಬಗ್ಗೆ ಅತೀವ ಹೆಮ್ಮೆ ಎನಿಸಿದೆ.ಹಾಗಾಗಿ ನಿಮ್ಮಲ್ಲಿ ಒಮ್ಮೆ ಮಾತನಾಡಬೇಕೆನಿಸಿ ಕರೆ ಮಾಡಿದೆ.,ತೊಂದರೆಯಾಗಿದ್ದಲ್ಲಿ ಕ್ಷಮಿಸಿ"

ನಂತರ ಅವರು ಕರೆ ಸ್ವೀಕರಿಸಿದರು.

ಎಲ್ಲರೂ ಕರೆ ಮಾಡಿ  ತಿರಸ್ಕಾರದಿಂದ ಏನೇನೋ ಹೇಳಿದರು ಲಕ್ಷ್ಮೀ.ನೀವೊಬ್ಬರೇ ನನ್ನನ್ನು ಅರ್ಥ ಮಾಡಿಕೊಂಡು ಮಾತನಾಡಿದಿರಿ ಎಂದುಬಹಳ ಪ್ರೀತಿಯಿಂದ ಮಾತನಾಡಿದರು.

ನಿದಾನಕ್ಕೆ ತಮ್ಮ ಬದುಕಿನ ದುರಂತ ಕಥೆಯನ್ನು ಬಹಳ ದುಃಖದಿಂದ ಹಂಚಿಕೊಂಡರು

ಬಹಳ ಬಡ ಕುಟುಂಬದಲ್ಲಿ ಹಿರಿಯಕ್ಕನಾಗಿ ಹುಟ್ಟಿದ್ದು ನನ್ನ ತಪ್ಪೇ ? ಎಂದು ತಮ್ಮ ಅಂತರಂಗವನ್ನು ತೆರೆದಿಟ್ಟರು

ಬಡ ಬ್ರಾಹ್ಮಣ ದಂಪತಿಯ ಮೂರನೆಯ ಮಗಳಾಗಿ ಹುಟ್ಟಿದವರು ಮಹಾಲಕ್ಷ್ಮೀ.

ಅವರಿಗಿಂತ ಮೊದಲು ಅಕ್ಕ ಅಣ್ಣ ಹುಟ್ಟಿದ್ದರೂ ಸಣ್ಣ ವಯಸ್ಸಿನಲ್ಲಿ‌ ಮರಣವನ್ನಪ್ಪಿದ್ದು ಮನೆಯಲ್ಲಿ ಇವರೇ ಹಿರಿಯರಾಗಿದ್ದರು.

ಇವರ ನಂತರ ಒಂಬತ್ತು ಜನ ತಮ್ಮ ತಂಗಿಯರು ಹುಟ್ಟಿದರು.ಇವರುಗಳು ಹುಟ್ಟಿದಾಗ ತಾಯಿಯ ಬಾಣಂತನವನ್ನು ಮಾಡುವ ಕಷ್ಟವೂ ಇವರ ಪಾಲಿಗೆ ಬಂದೊದಗಿತ್ತು.

ತಂದೆ ಇವರು ಐದನೆ ತರಗತಿಯಲ್ಲಿ ಓದುವಾಗಲೇ ಶಾಲೆ ಬಿಡಿಸಲು ಸಿದ್ದರಾಗಿದ್ದರು.ಮುಂದೆ ಗಂಡನಿಗೆ ಪತ್ರ ಬರೆವಷ್ಟು ಬಂದ ಪತ್ರ ಓದುವಷ್ಟು ಬಂದರೆ ಸಾಕು ಎಂದಿದ್ದರು.

ಅದರೆ ಇವರ ದೊಡ್ಡಮ್ಮನ ಒತ್ತಾಸೆಯಿಂದ ಜಾಣೆಯಾಗಿದ್ದ ಮಹಾ ಲಕ್ಷ್ಮೀಯವರು  ಹೇಗೋ ಹತ್ತನೆ ತರಗತಿ ತನಕ ಓದಿ ಟಿಸಿಎಚ್ / ಸಮಾನಾಂತರ ಓದು ಓದಿ ಸರ್ಕಾರಿ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದರು.


ಅದರಿಮದ ಇವರಿಗೇನೂ ಲಾಭವಾಗಲಿಲ್ಲ.ಇವರ ವೇತನ ಎಲ್ಲವೂ ತಮ್ಮ ತಂಗಿಯರನ್ನು ಬೆಳಸಲೇ ಖರ್ಚಾಗುತ್ತಿತ್ತು.

 ಇವರೂ ಸ್ವಾರ್ಥವಿಲ್ಲದೆ ತಮ್ಮ ತಂಗಿಯರನ್ನು ದೊಡ್ಡವರನ್ನಾಗಿ ಮಾಡಿ ಮದುವೆ ಮಾಡಿ ಅವರರವ ಕಾಲ ಮೇಲೆ ನಿಲ್ಲುವಂತೆ ಮಾಡಿದರು.


ಅಷ್ಟಾಗುವಾಗ ಇವರಿಗೆ ವಯಸ್ಸು ನಲುವತ್ತೆರಡು ಕಳೆಯಿತು.

ಬಹಳ ತಡವಾಗಿಯಾಗಿ ಮದುವೆಯಾಯಿತು.ಗಂಡ ಪೊಲೀಸ್ ಇಲಾಕೆಯ ವಯರ್ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.


ಇಲ್ಲೂ ಹುಟ್ಟಿನಿಂದ ಕಾಡಿದ ದುರಾದರಷ್ಟ ಇಲ್ಲೂ ಇವರ ಬಾಳಿನಲ್ಲಿ ಆಟವಾಡಿತು.ಆತನಿಗೆ ಮೊದಲೇ ಮದುವೆಯಾಗಿತ್ತು.ಸರ್ಕಾರಿ ಕೆಲಸದಲ್ಲಿದ್ದ  ಇವರ ದುಡ್ಡಿನ ಮೇಲಿನ ಆಸೆಯಿಂದ ಅತ ಮೊದಲ‌ಮದುವೆಯನ್ನು ಮುಚ್ಚಿಟ್ಟು ಇವರನ್ನು ಮದುವೆಯಾಗಿದ್ದ.ಅತನಿಗೆ ಇವರ ಮೇಲೆ ಯಾವ ಮೋಹವೂ ಇರಲಿಲ್ಲ‌.ಕೆವಲ ಇವರ ದುಡ್ಡು ಮಾತ್ರ ಬೇಕಿತ್ತು

ಹಾಗೂ ಹೀಗೂ ಅತನೊಡನೆ ಇವರು ಎರಡು ವರ್ಷ ಸಂಸಾರ ಮಾಡಿದರು.ಕೊನೆಗೂ ಆತನ ವರ್ತನೆಯಿಂದ ಬೇಸತ್ತು ಬೇರೆಯಾಗಿ ಡೈವರ್ಸ್ ಪಡೆದರು.

ಇಷ್ಟೆಲ್ಲಾ ಅಗುವಾಗ ಕಾಲ ನಿಲ್ಲಲಿಲ್ಲ.ಇವರಿಗು ವಯಸ್ಸು ಐವತ್ತಾಯಿತು.ಅಷ್ಟರಲ್ಲಿ ಬ್ರೈನ್ ಟ್ಯೂಮರ್ ಸಮಸ್ಯೆ ಕಾಡಿ  ವಾಲಂಟರಿ ರಿಟೈರ್ಮೆಂಟ್ ತಗೊಂಡರು

ದುಬಾರಿ ಚಿಕಿತ್ಸೆಯ ನಂತರ ಆರೋಗ್ಯ ಸಮಸ್ಯೆ ಸರಿ ಹೋಯಿತು

ತಮ್ಮ ತಂಗಿಯರು ಅವರವರ ಸಂಸಾರ ತಾಪತ್ರಯದಲ್ಲಿ ಮುಳುಗಿದರು.

ಇವರ ಸಾಂಗತ್ಯಕ್ಕೆ ಯಾರೂ ಇಲ್ಲ.ಒಬ್ಬರೇ ಮನೆಯಲ್ಲಿ ಮಲಗಲು ಆತಂಕ.ಒಬ್ಬರೆ ಇರಲು ಭಯ ಏಕಾಂಗಿತನ ಕಾಡತೊಡಗಿತು.


ಅಗಿನ ಕಾಲದಲ್ಲೇ ಓದಿ ಶಿಜ್ಷಕಿತಾಗಿದ್ದ ಇವರೊಂದು ದಿಟ್ಟ ನಿರ್ಧಾರಕ್ಕೆ ಬಂದರು.ತಮ್ಮ ಬದುಕಿನ ಏಕಾಂಗತನವನ್ನು ಹೋಗಲಾಡಿಸಲು, ತಮ್ಮ ಕಷ್ಟ ಸುಖವನ್ನು ಹಂಚಿಕೊಲ್ಲುವ ಜೀವ ಒಂದಿರಬೆಕೆನಿಸಿತು.


ಹಾಗಾಗಿ ತಮ್ಮಂತೆಯೇ ವಯಸ್ಸಾದ ಅರೋಗ್ಯವಂತ ವ್ಯಕ್ತಿಯನ್ನು ಬಾಳ ಸಂಗಾತಿಯನ್ನಾಗಿ ಪಡೆಯಲು ಇಚ್ಛಿಸಿ ಈ ಬಗ್ಗೆ ಪತ್ರಿಕೆಯಲ್ಲಿ ಜಾಹಿರಾತು ನೀಡಿದರು

ಅವರಿಗೆ ಗಂಡಿನ ಕುರಿತಾದ ಯಾವ ದೈಹಿಕ ಸೆಳೆತವೂ ಇಲ್ಲ.ಅವರಿಗೊಂದು ಅತ್ಮೀಯತೆಯನ್ನು ತೋರುವ ಸಂಗಾತಿ ಬೇಕಿದೆ ಅಷ್ಟೇ.

ಅಷ್ಟಕ್ಕೇ ಜನಬಾಯಿಗೆ ಬಂದ ಹಾಗೆ ಅವಹೇಳನ ಮಾಡಿದ್ದು ಅವರಿಗೆ ಬಹಳ ನೋವನ್ನುಂಟು ಮಾಡಿದೆ.ಬ್ರಾಹ್ಮಣನೇ ಆಗಬೇಕಾ ? ಬೇರೆ ಜಾತಿಯವರು ಗಂಡಸಲ್ಲವೇ ಎಂದವರೂ ಇದ್ದಾರಂತೆ

ಹುಟ್ಟನಿಂದ ಬ್ರಾಹ್ಮಣರಾಗಿ‌ ಮದು ಮಾಂಸ ತಿನ್ನದೆ ಸಸ್ಯಾಹಾರಿಯಾಗಿ ಬ್ಎಅಹ್ಮಣರ ಸಂಸ್ಕಾರ ಸಂಪ್ರದಾಯದೊಳಗೆ ಬೆಳದ ಇವರು ಬ್ರಾಹ್ಮಣ ವರನನ್ನು ಅಪೇಕ್ಷಿಸಿದ್ದರಲ್ಲಿ ತಪ್ಪೇನಿದೆ.? 

ಇಂದಿಗೂ ಹೆಚ್ಚಿನ ವಿವಾಹಗಳು ಸಜಾತಿಯರಲ್ಲೇ ನಡೆಯುತ್ತಿದೆ ಹಾಗಿರುವಾಗ ಇವರು ಕೂಡ ಸಜಾತಿಯ ಸಂಗಾತಿಯನ್ನು ಅಪೇಕ್ಷಿಸಿದ್ದರಲ್ಲಿ ನನಗೆ ಯಾವ ತಪ್ಪೂ ಕಂಡಿಲ್ಲ.


ಈ ಎಲ್ಲದರ ನಡುವೆ  ಒಂದು ನಾವೆಲ್ಲ ಸಂತಸ ಪಡುವ ವಿಚಾರ ನಡೆದಿದೆ.ಅವರಿಷ್ಟ ಪಟ್ಟಂತಹ ವ್ಯಕ್ತಿ  ಸಿಕ್ಕಿದ್ದಾರೆ‌.ಈಗ ಅವರ ಬಾಳ ಸಂಗಾತಿಯಾಗಲು ಒಪ್ಪಿದ್ದಾರೆ.

ಎಪ್ಪತ್ತರ ಹರೆಯದಲ್ಲಿ ಇವರು ತಗೊಂಡ ದಿಟ್ಟನಿರ್ಧಾರಕ್ಕೆ ,ದಿಟ್ಟ ನಿಲುವಿಗೆ ನಾನು ಶರಣಾಗಿದ್ದೇನೆ.

ಈ ಬಗ್ಗೆ ನನ್ನ ತುಂಬು ಮೆಚ್ಚುಗೆಯನ್ನು ತಿಳಿಸಿದಾಗ ತಮ್ಮನ್ನು ಅವಹೇಳನ ಮಾಡಿದವರ ಬಗ್ಗೆ ತಿಳಿಸಿತಮ್ಮ ಬೇಸರವನ್ನು ಹೊರ ಹಾಕಿದರು

ಆಗ ನಾನು ಆನೆರಾಜಮಾರ್ಗದಲ್ಲಿ ಹೋಗುವಾಗ ನಾಯಿಗಳು ಬೊಗಳುತ್ತವೆ.ಹಿಂದಿನಿಂದ ಬೊಗಳುವುದುನಾಯಿಗಳ ಸ್ವಭಾವ.ಅನೆಗೆ ಅದು ಗೊತ್ತು‌ಹಾಗಾಗಿ ಅದು ತಿರುಗಿಯೂ ನೋಡುವುದಿಲ್ಲ.ಒಂದೊಮ್ಮೆ ಅದು ಒಮ್ಮೆ ಸೊಂಡಿಲು ಬೀಸಿದರೆ ನಾಯಿಗಳ ಎಲುಬೂ ಕಾಣಲು ಸಿಗಲಾರದು

ನೀವು ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಬೇಡಿ.ನಿಮ್ಮನಿರ್ದಾರ ಸರಿಯಾಗಿದೆ.ಮುಂದುವರಿಯಿರಿ.ಮುಂದಿನ ದಿನಗಳು ಶುಭವನ್ನು ತರಲಿವೆ ಎಂದು ಶುಭಹಾರೈಸಿ ಪೋನಿಟ್ಟೆ.

ನಿಜಕ್ಕೂ ಮಹಾಲಕ್ಷ್ಮೀಯವರದು ಮಾದರಿ ನಡೆ.ಅವರ ನಿಲುವಿನ ಬಗ್ಗೆ ನನಗೆ ಅಪಾರ ಗೌರವ ಅಭಿಮಾನ ಮೂಡಿದೆ.

ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು‌

ಡಾ.ಲಕ್ಷ್ಮೀ ಜಿ‌ ಪ್ರಸಾದ್ 


(ಇವರ ಬಗ್ಗೆ ಒಂದಕ್ಷರ ಕೆಟ್ಟದಾಗಿ ಕಮೆಮಟ್ ಮಾಡಿದರೂ ಅವರು ನನಗೆ ಎಷ್ಟೇ ಸ್ನೆಹಿತರಾಗಿದ್ದರೂ ಬ್ಲಾಕ್ ಮಾಡಿ ಬಿಸಾಕುವೆ )

-

Saturday, 27 March 2021

 ವಿಶ್ವ ರಂಗಭೂಮಿ ದಿನಾಚರಣೆಯ ಶುಭಾಶಯಗಳು 


ನನ್ನ ಮೊದಲ ನಾಟಕ  ಸುಬ್ಬಿ ಇಂಗ್ಲಿಷ್ ಕಲ್ತದು.

ಇದು ಹವ್ಯಕ ಕನ್ನಡದ ಮೊದಲ ನಾಟಕಕಾರ್ತಿ ಎಂಬ ಐತಿಹಾಸಿಕ ಗರಿಮೆಯನ್ನು ಕೂಡ ನನಗೆ ತಂದು ಕೊಟ್ಟಿದೆ.

ತೀರ ಸಣ್ಣ ವಯಸ್ಸಿನಲ್ಲಿ( ಏಳನೆಯ ತರಗತಿಯಲ್ಲಿ  ರಚಿಸಿ ಎಂಟನೆಯ ತರಗತಿಯಲ್ಲಿ‌) ಅಭಿನಯಿಸಿ ಬಹುಮಾನ ಪಡೆದ ನಾಟಕವೊಂದು ಮಹಿಳೆ ರಚಿಸಿದ  ಹವ್ಯಕ ಕನ್ನಡದ ಮೊದಲ ನಾಟಕವಾಗಬಹುದೆಂಬ ಊಹೆಯನ್ನು ಕೂಡ ಮಾಡಲು ನನಗೆ  ಅಸಾಧ್ಯವಾಗಿತ್ತು .

ಗಡಿನಾಡಿನ ಕನ್ನಡತಿಯಾಗಿ ತುಸು ಹೆಚ್ಚೇ ಎನಿಸುವಷ್ಡು ಕನ್ನಡಾಭಿಮಾನದ ಜೊತೆಗೆ ಹುಡುಗಿಯರನ್ನು ಮುಂದೆ ಓದಿಸುವುದಿಲ್ಲವೆಂಬ ಆತಂಕದ ನಡುವೆ ಹುಟ್ಟಿದ ಹಾಸ್ಯಮಯ ನಾಟಕವದು.


ಮೂವತ್ತೇಳು  ವರ್ಷಗಳ ಹಿಂದೆ ನಾನು ಸಾಹಿತ್ಯ ಲೋಕಕ್ಕೆ ಪ್ರವೇಶ ಮಾಡಿದ್ದು ಸುಬ್ಬಿ ಇಂಗ್ಲಿಷ್ ಕಲ್ತದು ನಾಟಕದ ಮೂಲಕ .

ಅದು ವಾಣಿವಿಜಯ ಪ್ರೌಢಶಾಲೆಯಲ್ಲಿ ಯುವಜನೋತ್ಸದ ಸ್ಪರ್ಧೆಯಲ್ಲಿ ಮೊದಲ ಬಾರಿ ವೇದಿಕೆಗೆ ಬಂತು ಮತ್ತು ನಮಗೆ ಮೊದಲ ಬಹುಮಾನವನ್ನು ತಂದುಕೊಟ್ಟಿತು


ಎಂಬತ್ತರ ದಶಕದ ಆ ಕಾಲದಲ್ಲಿ ನಾಟಕ ಮಾಡಲು ಹುಡುಗಿಯರಿಗೆ ಅಷ್ಟೇನೂ ಪೂರಕವಾದ ವಾತಾವರಣ ಇರಲಿಲ್ಲ ನಾನು ನನ್ನ ನಾಟಕದಲ್ಲಿ ಅಭಿನಯಿಸಲು ಅನೇಕ ಹುಡುಗಿಯರಿಗೆ ದಮ್ಮಯ್ಯ ಹಾಕಬೇಕಾಗಿ ಬಂದಿತ್ತು ಸ್ಟೇಜ್ ಏರುದು ಹುಡುಗಿಯರಿಗೆ ಘನತೆಗೆ ಧಕ್ಕೆ ತರುವ ವಿಚಾರವಾಗಿತ್ತು.

ಹಾಗಾಗಿ ಸುಮಂಗಲ ಉಮಾ ,ವಿಜಯಾ ನಿಶಾ ಮೊದಲಾದ ಜಾಣ ಹುಡುಗಿಯರಾರೂ ಮುಂದೆ ನಾಟಕದಲ್ಲಿ ಭಾಗವಹಿಸಲು  ಮುಂದೆ ಬರಲಿಲ್ಲ 


ಅಂತೂ ಇಂತೂ ನನ್ನ ಹಾಗೆ ತುಸು ಗಂಡು ಬೀರಿಗಳಾಗಿದ್ದ ಶೋಭಾ ಹೇಮಾ ಮೊದಲಾದ   ಆರೇಳು ಹುಡುಗಿಯರನ್ನು ಮನವೊಲಿಸಿ ನಾಟಕ ಸ್ಪರ್ಧೆಗೆ ಹೆಸರು ಕೊಟ್ಟು ತಯಾರಾದೆವು 


ತಯಾರಾಗಲು ನಮಗೆ ಶಾಲೆಯ ಅವಧಿಯಲ್ಲಿ ಸಮಯ ಇಲ್ಲ.ತರಗತಿ ತಪ್ಪಿಸಿ ತಾಲೀಮು ನಡೆಸುವ ಕಲ್ಪನೆ ಕೂಡ ಇಲ್ಲದ ಕಾಲವದು..


ಸ್ಥಳವಾದರೂ ಇದೆಯೇ ? ಅದೂ ಇಲ್ಲ.ನಾಲ್ಕು ಗಂಟೆಗೆ ಶಾಲೆ ಮುಗಿಯುತ್ತಿತ್ತು.ನಂತರ ಎಲ್ಲ ತರಗತಿಗಳ ಬಾಗಿಲು ಮುಚ್ಚಿ ಬೀಗ ಹಾಕುತ್ತಿದ್ದರು.ನಂತರ ಶಾಲಾ ಅವರಣದಲ್ಲಿ ಇರುವಂತೆ ಇರಲಿಲ್ಲ.


ನಾನು ಹೇಗೋ ಈ ಸಹಪಾಠಿಗಳ‌ ಮನ ಒಲಿಸಿ ಶಾಲೆಯಿಂದ ನಮ್ಮ ಮನೆಗೆ ಹೋಗುವ ದಾರಿಯಲ್ಲಿದ್ದ ಬಯಲು ಪ್ರದೇಶದಲ್ಲಿ ತಾಲೀಮು ನಡೆಸುತ್ತಿದ್ದೆ.


ನಾಟಕ ಬರೆದದ್ದು ನಾನೇ ಆದಕಾರಣ ಎಲ್ಲ ಪಾತ್ರಗಳ ಸಂಭಾಷಣೆ ನನಗೆ ಬಾಯಿಗೆ ಬರುತ್ತಿತ್ತು.


ಎಲ್ಲರ ಸಂಭಾಷಣೆಯನ್ನು ಪ್ರತ್ಯ ಪ್ರತ್ಯೇಕವಾಗಿ ಬರೆದುಕೊಟ್ಟಿದ್ದೆ

ನಂತರ ಅದನ್ನು ಹೇಳುತ್ತಾ ಅಭಿನಯ ಮಾಡಿ ತೋರಿಸುತ್ತಿದ್ದೆ.

ಅದನ್ನವರು ಅನುಸರಿಸುತ್ತಿದ್ದರು.

ಈ ನಡುವೆ ಯಾರಾದರೂ ಜನರು ಅ ದಾರಿಯಲ್ಲಿ ಬಂದರೆ ಅವರು ಕಣ್ಣಿಗೆ ಕಾಣದಷ್ಟು ದೂರದವರೆಗೆ ಸುಮ್ಮನಿರುತ್ತಿದ್ದೆವು.


ಬಯಲೇ ನಮಗೆ ಅಭಿನಯ ಕಲಿಸುವ  ರಂಗ ಭೂಮಿಯಾಗಿತ್ತು.

ನಿರ್ದೇಶನ ಮಾಡುವವರು ಯಾರೂ ಇರಲಿಲ್ಲ.

ಹೋಗಲಿ..ನಾಟಕ ನೋಡಿ ಕೂಡಾ ನಮಗೆ ಗೊತ್ತಿರಲಿಲ್ಲ.

 ಆದರೆ ನಮಗೆಲ್ಲ ಯಕ್ಷಗಾನ ನೋಡಿ ಅಭಿನಯದ ಮೂಲ ಮಂತ್ರ ತಿಳಿದಿತ್ತು

ಶುದ್ಧ ಭಾಷೆಯ ಬಳಕೆ ತಿಳಿದಿತ್ತು.

ಈ ನಡುವೆ ಮನೆಗೆ ಸರಿಯಾದ ಸಮಯಕ್ಕೆ ಬಾರದೆ ಇದ್ದಾಗ ಮಗಳಂದಿರನ್ನು ಹುಡುಕಿಕೊಂಡು ಬಂದು ಶಾಲಾ ಅವರಣದಲ್ಲಿಯೂ ಕಾಣದೆ ಆತಂಕದಿಂದ ಬಂದವರಿಗೆ ಬಯಲಿನಲ್ಲಿ ನಮ್ಮನಾಟಕದ ಅಭ್ಯಾಸ ನೋಡಿ ಸಿಟ್ಟು ನೆತ್ತಿಗೇರಿ ಎರಡೆರಡು ಕೊಟ್ಟು ಹೆತ್ತವರು ಎಳಕೊಂಡು ಹೋಗಿದ್ದರು.ಅದೃಷ್ಟಕ್ಕೆ ಅವರವರ ಮಕ್ಕಳಿಗೆ ಮಾತ್ರ ಪೆಟ್ಟು ಬಿದ್ದಿತ್ತು.


ಅವರುಗಳಿಗೆ  ಎರಡೆರಡು ಬಿಟ್ಟು ಎಳೆದೊಯ್ಯುವಾಗ ಬಲಿ ಕೊಡಲು ತಗೊಂಡು ಹೋಗುವ ಕುರಿಯ ಮಾದರಿಯಲ್ಲಿ ಅವರು ಅಳುತ್ತಾ   ನಮ್ಮನ್ನು ದಯನೀಯವಾಗಿ ನೋಡುತ್ತಿದ್ದರು.

ಅವರು ನಮಗೂ ಎರಡೆರಡು ಕೊಟ್ಟರೆ ಎಂಬ ಭಯ ನಮಗೂ ಕಾಡುತ್ತಿತ್ತು.ಅಲ್ಲಿಂ ಓಡಿ ಬಿಡಬೇಕು ಅನಿಸ್ತಾ ಇತ್ತು‌.ಆದರೆ ಓಡಲೂ ಸಾಧ್ಯವಾಗದೆ ಕಾಲು ಥರಥರನೆ ನಡುಗುತ್ತಿತ್ತು.ಜೊತೆಗೆ ನನ್ನಿಂದಾಗಿ ಅನ್ಯಾಯವಾಗಿ ಅವರು ಪೆಟ್ಟು ತಿನ್ನಬೇಕಾಗಿ ಬಂತಲ್ಲ  ಎಂಬ ಅಪರಾಧಿ ಪ್ರಜ್ಞೆ ಬೇರೆ ನನ್ನನ್ನು ಕಾಡುತ್ತಿತ್ತು


ಹೀಗೆ ಎಳೆದೊಯ್ಯಲ್ಪಟ್ಟವರು ಮತ್ತೆ ನಾಟಕಾಭ್ಯಾಸಕ್ಕೆ ಬರ್ತಿರಲಿಲ್ಲ.ಸುಮಾರಾಗಿ ಸಂಭಾಷಣೆ ಬಾಯಿ ಪಾಠವಾಗಿ ಒಂದು ಹದಕ್ಕೆ ಬಂದ  ನಾಟಕದ ಅಭ್ಯಾಸಕ್ಕೆ ಮತ್ತೆ ಬೇರೆಹುಡುಗಿಯರನ್ನು ಹೇಗೋ ಪುಸಲಾಯಿಸಿ ಒಪ್ಪಿಸಬೇಕಿತ್ತು


ನನ್ನ ಮನೆ ತುಂಬಾ ದೂರದಲ್ಲಿರುವ  ಕಾರಣ ಹೆತ್ತವರು ಹುಡುಕಿಕೊಂಡು ಬಂದು ಎಳೆದೊಯ್ಯುವ ಸಾಹಸ ಮಾಡಿರಲಿಲ್ಲ

ಅಲ್ಲದೇ ಅಮ್ಮನಿಗೆ ನಮ್ಮ ನಾಟಕ ಅಭ್ಯಾಸವನ್ನು ಸಂಜೆ ಹೊತ್ತು ಮಾಡುವ ಬಗ್ಗೆ ನಾನು ತಿಳಿಸಿದ್ದೆ.

ಹಾಗಾಗಿ ನಾನು ಬಚಾವಾಗಿದ್ದೆ.


ನಾಟಕಕ್ಕೆ ಎರಡು ದಿನ ಇರುವಾಗ ಪ್ರಧಾನ ಪಾತ್ರ ಸುಬ್ಬಿಯನ್ನು ಮಾಡಲು ತಯಾರಾಗಿದ್ದ ಸಹಪಾಠಿ ಮನೆಯವರಿಗೆ ನಮ್ಮ ನಾಟಕದ ಸಂಗತಿ ಗೊತ್ತಾಗಿ ಅವಳಿಗೆ ಚೆನ್ನಾಗಿ ಎರಡು ಕೊಟ್ಟರು .ಹಾಗಾಗಿ ಮುಖ್ಯ ಪಾತ್ರ ಸುಬ್ಬಿಯ ಪಾತ್ರಕ್ಕೆ ಈಗ ಬೇರೆ ಹುಡುಗಿಯನ್ನು ಹುಡುಕಬೇಕಿತ್ತು. ಅದೃಷ್ಟವಶಾತ್ ಸ್ನೇಹಿತರ ಪಾತ್ರ ಮಾಡುತ್ತಿದ್ದ ಹೇಮಾಳಿಗೆ ಸುಬ್ಬಿಯ ಸಂಭಾಷಣೆ ಬಾಯಿ ಪಾಠ ಬರುತ್ತಿತ್ತು ಹಾಗಾಗಿ ಸ್ನೇಹಿತನ ಪಾತ್ರಕ್ಕೆ ಮಾಡಲು ಇನ್ನೊಬ್ಬ ಹುಡುಗಿ ತ್ರಿವೇಣಿ  ( ನನಗಿಂತ ಚಿಕ್ಕವಳು  ಬಹುಷ ಆರನೇ ತರಗತಿ ಇದ್ದಿರ ಬೇಕು ನಾನು ಎಂಟನೇ ತರಗತಿಯಲ್ಲಿದ್ದೆ,ಈಗ  ನಮ್ಮೂರಿನ ಸುಂಕದ ಕಟ್ಟೆ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ  ಶಿಕ್ಷಕಿಯಾಗಿದ್ದಾರೆ ) ಸಿದ್ದಳಾದಳು 

ಅಂತೂ ಸ್ಪರ್ಧೆ ಯ ದಿನ ಬಂತು ನಾಟಕ ಆರಂಭವಾಯಿತು ಒಂದು ದೃಶ್ಯದಲ್ಲಿ ಸುಬ್ಬನ ಸ್ನೇಹಿತರು ಬರ್ತಾರೆ ಆಗ ಸುಬ್ಬ ಸ್ನೇಹಿತರನ್ನು welcome my friends please be seated ಅಂತ ಕುರ್ಚಿ ತೋರಿಸುತ್ತಾನೆ. ಅಲ್ಲಿ ಒಂದೇ ಕುರ್ಚಿ ಇತ್ತು ಎರಡು ಕುರ್ಚಿ ಇಡಲು ನನಗೆ ಮರೆತು ಹೋಗಿತ್ತು. ಇಬ್ಬರು ಸ್ನೇಹಿತರು ಕೂಡ ಒಂದೇ ಕುರ್ಚಿಯಲ್ಲಿ ಕುಳಿತರು.ನಂತರ ಎದ್ದು ಮಾತನಾಡುವ ಸನ್ನಿವೇಶ ಇಬ್ಬರೂ ಒಂದೇ ಕುರ್ಚಿಯಲ್ಲಿ ಕುಳಿತು ಟೈಟ್ ಆಗಿ ಇವರಿಗೆ ಏಳಲಾಗುತ್ತಿಲ್ಲ ಸಭೆಯಲ್ಲಿ ನಗು ಈ ಸ್ನೇಹಿತ ಪಾತ್ರಧಾರಿಗಳು ನಗಾಡುತ್ತಿವೆ ನಾನೋ ಏನು ಮಾಡಬೇಕೆಂದು ತಿಳಿಯದೆ  ಕಂಗಾಲು! ತಕ್ಷಣವೇ ಎಚ್ಚತ್ತುಕೊಂಡು ಕುರ್ಚಿ ಹಿಂಭಾಗದಿಂದ ಅದನ್ನು ಗಟ್ಟಿಯಾಗಿ ಹಿಡಿದು ಒಬ್ಬಳ ಬೆನ್ನಿಗೆ ಕುಟ್ಟಿದೆ .ಈ ಗೊಂದಲದ ನಡುವೆಯೂ ಅವಳು ಉರು ಹೊಡೆದ ಸಂಭಾಷಣೆ ಯನ್ನು ಚಾಚೂ ತಪ್ಪದೆ ಹೇಳಿದ್ದಳು ಅದೂ ಅವರು ವಿದೇಶದಿಂದ ಬಂದ ಸ್ನೇಹಿತರಾಗಿದ್ದು ಸಂಭಾಷಣೆ ಇಂಗ್ಲಿಷ್ ನಲ್ಲಿ ಮಾತನಾಡಬೇಕಿತ್ತು.ಆದರೂ ಚಾಚೂ ತಪ್ಪದೆ ಒಂದಿನಿತು ತಪ್ಪಿಲ್ಲದೆ ಅಭಿನಯಿಸಿದ್ದರು.


 ನಾಟಕ ಮುಂದುವರಿಯಿತು. ಮುಗಿದಾಗ ಕೇಳಿಸಿದ ಅಬ್ಬರದ ಚಪ್ಪಾಳೆ ಸದ್ದು ಇನ್ನೂ ನನ್ನ ಕಿವಿಯಲ್ಲಿ ಅನುರಣಿಸುತ್ತಿದೆ.

ಆ ದಿನ ಕೊನೆಗೆ ಸಮಾರೋಪ ಸಮಾರಂಭಕ್ಕೆ ಅತಿಥಿಗಳಾಗಿ ವಾಣೀ ವಿಜಯ ಪ್ರೌಢ ಶಾಲೆಯನಿವೃತ್ತ ಸಿಕ್ಷಕರಾದ ಕವಿ ವಿಶ್ವೇಶ್ವರ ಭಟ್ ಬಂದಿದ್ದರು.ಬಾಷಣ ಮಾಡುತ್ತಾ ನಮ್ಮ ನಾಟಕದ ಬಗ್ಗೆ ಮೆಚ್ಚುಗೆಯನ್ನು ಸೂಸಿ ಸುಬ್ಬನ ಪಾತ್ರ ಮಾಡಿದ ಹುಡುಗಿಗೆ ಬಹಳ ಒಳ್ಳೆಯ ಭವಿಷ್ಯವಿದೆ ಎಂದು ತಮ್ಮ ದೀರ್ಘ ಅನುಭವದ ಹಿನ್ನೆಲೆಯಲ್ಲಿ ಭವಿಷ್ಯ ನುಡಿದಿದ್ದರು.


‌ಕೂಸು ಎಂತ ಓದಿದರೆಂತ ಒಲೆ ಬೂದಿ ಒಕ್ಕುದು ತಪ್ಪ ( ಹುಡುಗಿ ಏನು ಓದಿದರೇನು ? ಒಲೆಯ ಬೂದಿ ಗೋರುವುದು ತಪ್ಪದು) ಎಂಬ ಗಾದೆ ಮಾತೇ ಪ್ರಚಲಿತವಾಗಿದ್ದ ಕಾಲದ ನಾನು ಹಿರಿಯ ಶಿಕ್ಷಕರಾದ ವಿಶ್ವೇಶ್ವರ ಭಟ್ಟರ ಮಾತನ್ನು ನಂಬಿದೆ.ಹೌದು..ಸುಬ್ಬನಪಾತ್ರ ಮಾಡಿದ ನನಗೆ ಒಳ್ಳೆಯಭವಿಷ್ಯವಿದೆ." ಎಂದು ನಂಬಿದೆ.ಹೆಣ್ಣಾಗಿ ಹುಟ್ಟಿದ ನಾನು ಒಲೆ ಬೂದಿ ಗೋರುವುದಕ್ಕೆ ಮಾತ್ರ ಮೀಸಲಾಗಲಾರೆ ಎಂದು ನಿರ್ಧರಿಸಿದೆ.

‌ಅವರು ನುಡಿದಂತೆ ಬಹಳ ದೊಡ್ಡ ಭವಿಷ್ಯವೇನೂ  ನನ್ನ ಪಾಲಿಗೆ  ಸಿಗಲಿಲ್ಲ.ಆದರೂ ನಾನು ನನ್ನದೇ ಆದ ಗುರುತನ್ನು ಹೊಂದಿರುವೆ ಎಂಬ ಆತ್ಮ ತೃಪ್ತಿ ನನಗಿದೆ.

ಅದಕ್ಕೆ ‌ಮೊದಲು ನಾನು ಮೀಯಪದವು ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ದಲ್ಲಿ ಯಮ ಗರ್ವ ಭಂಗ ನಾಟಕದ ಬಲರಾಮನಾಗಿ ಅಭಿನಯಿಸಿದ್ದೆ ಆದರೆ ಅದು ಗುರುಗಳ ನಿರ್ದೇಶನದಂತೆ ಅಭಿನಯಿಸಿದ ನಾಟಕ 

ಅದರ ನಂತರದ ವರ್ಷ ವಾಣಿವಿಜಯ ಶಾಲೆಯಲ್ಲಿ ಮಾಡಿದ್ದು ನನ್ನ ಸ್ವಂತ ರಚನೆಯ ನಾಟಕ ಅಭಿನಯ ನಿರ್ದೇಶನ ರಂಗ ಸಜ್ಜಿಕೆ ? ಎಲ್ಲವೂ ನನ್ನದೇ .ಈ ನಾಟಕ ಅನೇಕ ರಂಗ ಪ್ರದರ್ಶನ ಕಂಡಿದ್ದು ನಾನೂ ಮೂರು ನಾಲ್ಕು ಬಾರಿ ಅಭಿನಯಿಸಿರುವೆ ಆದರೆ ಮೊದಲನೆಯ ಅನುಭವ ಮಾತ್ರ ಚಿರಸ್ಥಾಯಿ ಅಲ್ಲವೇ ?

Tuesday, 23 March 2021

ಹಾವಿನ ಬಾಯಿಗೆ ಬಡುದು ಹದ್ದಿಗೆ ಹಾಕುದೆಂತಕ?.

 ಹಾವಿನ ಬಾಯಿಗೆವಬಡುದು ಹದ್ದಿಂಗೆ ಹಾಕುದೆಂತಕ? 


ಹೆರಿಯೋರು ಒಟ್ಟಿಂಗೆ ಇದ್ದದೆ ಇಂತ ಗಾದೆ ಮಾತುಗಳ ಸುರಿಮಳೆ ಸುರಿತಾ ಇರ್ರು.ಹೆರ್ಕಿ ತುಂಬಿಸಿ ಮಡುಗುದು ನಮ್ಮ‌ಜವಾಬ್ದಾರಿ‌ ಅಷ್ಟೇ


ಅಮ್ಮನತ್ತರೆ ಏನೋ‌ಮಾತಾಡುವಾಗ‌ ಎಂಗಳ ಊರಿನ ಆಸ್ರಿಯ ವಿಚಾರ ಬಂತು

ಆಲ್ಲ ಮಾವನೋರಿಂಗೂ ಅವರ ಅಷ್ಷಂಗೂ ಯಾವುದೋ ಞಾಯ ಆಗಿ ಕೋರ್ಟಿಂಗೆ ಹೋ್ಇತ್ತಿದಬು.ಇದೆಲ್ಲ ಎಂಗಳ‌ಗಳ‌ಮದುವೆ ಹಿಂದಣವಿಚಾರ‌ 

ಎಲ್ಲೊರೂ ಅವರ ಕುಟುಂಬಂದ ಹೆರ ಬಹಿಷ್ಕಾರ ಹಾಕಿತ್ತಿದವು.ಅಬದರ ಕ್ಯಾರೇ ಮಾಡದ್ದೆ ಮುಂದುವರುದ್ದವು.ಅವರಲ್ಲಿ ಒಬ್ಬ ಜಡ್ಜ್ ,ಲೆಕ್ಚರ್ ಎಲ್ಲ ಆಗಿರೆಕ್ಕು.ಈಗ ರಿಟೈರ್ ಆದಿಪ್ಪಲೂ ಸಾಕು

ಆ ಸಮಯದಲ್ಲಿ‌ಮಾವನೋರ ಹೆಸರಿಲಿ ಆಸ್ತಿ ಇಪ್ಪಲಾಗ ಹೇಳಿ ಪಾಲು ಮಾಡಿದ್ದವು.ಅದರಲ್ಲಿ ಹೆಚ್ಚಿನ ಬೆಳೆ ಬೆಳವ ಭೂಮಿ‌ಬೋರ್ವೆಲ್ ಇಪ್ಪ ಜಾಗೆ ಪ್ರಸಾದ್ ಹೆಸರಿಲಿ ಇದ್ದು.

ಅವರ  ರೀತಿ ಎಂಗಳುದೆ ಮನೆಂದೆ ಹರವೇ ಇದ್ದೆಯ..ಬಹುಷ್ಕಾರ ಹೇಳಿ ಆಯಿದಿಲ್ಲೆ.ಆದರೆ ಎಂಗ ಹಪದು ಬಪ್ಪದರ ಎಂದೋ ನಿಲ್ಸಿದ್ದೆಯ.ಗೌರವ ಪ್ರೊತಿ‌ಮನ್ನಣೆ  ಇಲ್ಲದ್ದಲ್ಲಿಹೋಯಕ್ಕಾಗದ ಅವಶ್ಯಕತೆ ಎಂಗೊಗೆ ಎಂದಿಂಗೂ ಬಯಿಂದಿಲ್ಲೆ.

ಅಮ್ಮ ಬೆಂಗಳೂರು ಬಯಿಂದ


ಅಮ್ಮ ಒಂದು ಬಂತಕ್ಕೆ ಸಿರಿವಂತಿಕೆ ಪಡದಪ್ಪದ ಅಜ್ಜನ ಮನೆಯ ಆಸ್ತಿಯ ಪೂರ್ತಿ ದೊಡ್ಡಮ್ಮನ ಮಗಂಗೆ ಬಿಟ್ಟುಕೊಟ್ಟ.

ಎಂಗಳಲಿ‌ಎಂತಾತೂ ಹೇಳಿರೆ ಮನೆ ಮಕ್ಕದ ಹದಿನೈದು ಇಪ್ಪತ್ತು ಎಕರೆ ಜಾಗ ಖರೀದಿಸಿಸವು.ಅಣ್ಣಂದ ದೊಡ್ಡ ತಮ್ಮಂದೆ ಅಮೇರಿಕಕ್ಕೆ ಹೋಗಿ ಕೈ ತುಂಬ ದುಡುದು ದಮಸ್ವಂತ ಮನೆ ಮಾಡಿ ಸೆಟಲ್ಆದವು.ಅಕ್ಕನ‌ಮಗಸೊಸೆ ಮಗಳು ಅಳಿಯಂದೆ‌ಅಮೇರಿಕಲ್ಲಿ‌‌ಒಳ್ಳೆ ಕೆಲಸ ಹಿಡುದವು.ಅಕ್ಕನ ಮಗ ವಿಜ್ಞಾನಿ ಆದ.

ಎನಗೆ ಸರ್ಕಾರಿ ಕೆಲಸ ಸಿಕ್ಕಿತ್ತು.ಪ್ರಸಾದರಿಂಗೂ ಒಳ್ಳೆಯ ಕೆಲಸ


ಅಮ್ಮನ ಅಪ್ಪ ಅಜ್ಜಂಗೆ ಎನ್ನ ಅಮ್ಮಂಗೆ ದೊಸ್ಡಮ್ಮಂದೆ ಎರಡೇ ಮಕ್ಕ.ದೊಡ್ಡಮ್ಮನ ಕುಟುಂಬ ಅಜದಜನ ಒಟ್ಟಿಂಗೆ ಇತ್ತು


ಅಜ್ಜಿ ರೀರಿ ಹೋಪದ್ದದ್ದೆ ಆಸ್ತಿ ವಿವಾದ ಬಂತು

.ಅಂಬಗ ಎಂಗೊಗೆ ಬಡತನ ಎಂಗ ಐದು ಮಕ್ಕಳ ಓದುಸುಲೆ ಮದುವೆ ಮಾಡುವೆ ..ಆಸ್ತಿಯ/ ಪೈಸೆಯ ಅಗತ್ತ ಇತ್ತು

ಹಾಂಗಾಗಿ ಅರ್ಧ ಪಾಲಿಂಗಾಗಿ ಅಮ್ಮ ಕೋರ್ಟಿಗೆ ಹೋದ

ಕೋರ್ಟ್ ಕಛೇರಿ ಹೇಳಿರೆ ಗೊಂತಿದ್ದಲ್ಲ..

ಸುಮಾರು ವರ್ಷ ಮುಂದೆ ಹೋತು.ಕೊನೆಗೂ ಅಮ್ಮನ ಪರ ತೀರ್ಪು ಬಂತು.ಆ ಕಾಲಕ್ಕಪ್ಪಗ ಎಂಗ ಎಲ್ಲ ಸೆಟಲ್ ಆಯಿದೆಯ.ಇಪ್ಪ ಆಸ್ತಿಯನ್ನೇ ನೋಡಿಕೊಂಬದು ಕಷ್ಟ ಹೇಳುವ ಪರಿಸ್ಥಿತಿ‌ ಮುಟ್ಟಿತ್ತು

ದೊಡ್ಡಮ್ಮನ ಮಗಾಣ್ಣ ಅದೇ ಭೂಮಿಲಿಯೇ ಇತ್ತಿದೆ

ಹಾಂಗೆ ಅಮ್ಮಾಸ್ತಿಯ ದಾನಪತ್ರ ಮಾಡಿ ಅಕ್ಕನ/ ದೊಡ್ಡಮ್ಮನ  ಮಗಂಗೆ ಬಿಟ್ಟುಕೊಟ್ಟ.


ಇದೇ ಸಂದಿಗ್ದ ಎಂಗೊಗೂ ಈಗ ಬಯಿಂದು

ಎಂಗ ಒಳ್ಳೆಯ ಕೆಲಸ ಹಿಡುದು ಮನೆ ಕಟ್ಟಿ ಸಣ್ಣದೊಂದು  ಕಮರ್ಷಿಯಲ್ ಕಾಂಫ್ಲೆಕ್ಸ್ ದೆ ಕಟ್ಟಿಕೊಂಡೆಯ

ಇನ್ನು ಎಂಗೊಗೂ ಊರಿನ ಆಸ್ತಿ ಬೇಡ.

ಈಗ ಕಾಲ ಬದಲಾಯಿದು.ಹೊಟ್ಟೆಕಿಚ್ಚಿಂದ ಗಾಳಿ ಹಾಕುತ್ತಿದ್ದ  ದೊಡ್ಡ ಮಾವನವರ ಮಕ್ಕ ಬಾವಂದಿರು  ದೊಡ್ಡ ಮಾವನವರ ಮಗ ಮೈದುನ ಎಲ್ಲ ಅಕಾಲಿಕ‌ಮರಣಕ್ಕೆ ಈಡಾಯಿದವು.

ತುಂಅ ಚಾಡಿ ದುರ್ಬೋಧನೆ ಮಾಡಿ ಮಾಡಿ‌ಮನೆ ಕೆಡಿಸ್ತಿದ್ದ ಸೋದರ ಅತ್ತೊಗೆಯ ಮಗಂಗೆ ಅಳಯಂದೆ ಅಕಾಲಿಕವಾಗಿ ತೀರಿ ಹೋಗಿ ನೊಂದಿದವು


ಹಾಂಗಾಗಿ ಮನೆಂದಿಗೆ ಕೇಡು ಬುದ್ದಿ ಹೇಳಿಕೊಸುವವರು ಇಲ್ಲೆ.

ಈಗ ಎಂಗ ಆಸ್ತಿಯ ಅಧಿಕೃತವಾಗಿ ರಿಕಿಸ್ಟರ್ ಮಾಡಿ ದಾನಪತ್ರದ ಮೂಲಕ‌ ಬಿಟ್ಟುಕೊಡಕ್ಕು.ಇಲ್ಲವೇ ಹತ್ತರಣ ಬ್ಯಾರಿಗ ಈ ಹಿಂದೆ ಎಂಗಳತ್ರೆ ಆ ಹ

ಜಾಗ ಕೇಳಿದ್ದು ಅವು ಕೊಟ್ಟ ಪುಡಿಕಾಸಿಂಗೆ ಮಾರಕ್ಮು.

ಈ ವಿಷಯದ ಮಾತು ಬಪ್ಪಗ ಅಮ್ಮ ಹಾವಿಂಗೆ ಬಡುದು ಹದ್ದಿಗೆ ಹಾಕುದೆಂದಕೆ ಹೇಳಿದ.

ಇವನ ಕೈಯಿಂದ ಎಳದು ಆರಿಂಗೋ ತಿನ್ಸುವ  ಎಂಗ ಇದ್ದು.ಅಪ್ಪನ ವಾರಿಸುದಾರ ಅವ..ದುಡ್ಡದ್ದಂದೆ ಆ ಭೂಮಿಲಿ


ಈ ಹಿಂದೆ ಏನೇ ಅನ್ಯಾಯ ಮಾಡಿರಲಿ..ಅದರ ಅವಕ್ಕೇ ಬಿಟ್ಟುಕೊಡಿ ಅತ್ಲಗಿ ಎಂದ

ಎನಗೂ ಸರಿ ಎನಿಸಿ ಮೈದುನನ ಮಗಳಿಂಗೆ ಫೋನ್ ಮಾಡಿ‌ ಎಲ್ಲ ವ್ವಯಸ್ಥೆ ಮಾಡ್ಸು ಬಂದು ಸಹಿ ಮಾಡ್ತೆಯೆ ಹೇಳಿದೆ


ಅದಿರಲಿ‌ಮತ್ತೆ ಗಾದೆಗೆ ಬಪ್ಪ.ಹಾವಿನ ಬಡುದು ಹದ್ದಿಂಗೆ ಹಾಕುದೆಂದತಕೆ ಹೇಳಿರೆ ಹಾವು ತಿಂಬಲಾಗಿ ಕೆಪ್ಪೆಯನ್ನೋ ಇನ್ನೆನನ್ನೋ ಬೇಟಯಾಡಿ ಹಿಡುದಿರುತ್ತು.ಹಾವಿಂಗೆ ಬಡುದು ಅದರ ಬಿಡಿಸಿ ಅಪ್ಪಗ ಅಲ್ಲಿ ಕಾದುಕೂದುಕೊಂಡು ಇದ್ದ ಹದ್ದು ಅದರ ತೆಕ್ಕೊಂಡು ಹೋವುತ್ತು 

ಹಾವಿನ ಆಹಾರವ ಅದರ ಬಾಯಿಂ ಎಳದು ತೆಗೆದು ಹದ್ದಿಗೆ ಸಿಕ್ಕುವಾಂಗೆ ಮಾಡುದೆಂತಕರ? ಕಷ್ಟಪಟ್ಟು ಹೊಂಚುಹಾಕಿ ಬೇಟೆ ಮಾಡಿ ಹಿಡುದು ಹಾವೇ ತಿನ್ಲಿ


ಭೂಮಿಉ ವಿಚಾರಕ್ಕೆ ಬಂದರೆ ಕಷ್ಟ ಪಟ್ಟು ದುಡುದೋರೇ ತಿನ್ನಲಿ.ಆರೋ ಒಪ್ಪ ಕಮ್ಮಿಗೆ ಹೊಡದು ಲಾಭಮಾಡುವಾಂಗೆ ಮಾಡುದೆಂಥಕೆ ಅಲ್ಲಾದಾ


ಬಹಳ ಒಳ್ಳೆಯ ಸಂದೇಶವ ಈ ಗಾದೆ ಕೊಡ್ತು

ನಿಂಗಳ ಕಡೆಲಿದೆ ಇದು ಬಳಕೆಲಿ ಇದ್ದಾ ತಿಳುಸಿ ಆತಾ?

ಡಾ.ಲಕ್ಷ್ಮೀ‌ ಜಿ‌ ಪ್ರಸಾದ್